Homeಮುಖಪುಟಇಂಡಿಯಾ ಬ್ಲಾಕ್‌ ಸೇರುವಂತೆ ಮಾಯಾವತಿ ನೇತೃತ್ವದ ಬಿಎಸ್‌ಪಿಗೆ ಕಾಂಗ್ರೆಸ್ ಆಹ್ವಾನ

ಇಂಡಿಯಾ ಬ್ಲಾಕ್‌ ಸೇರುವಂತೆ ಮಾಯಾವತಿ ನೇತೃತ್ವದ ಬಿಎಸ್‌ಪಿಗೆ ಕಾಂಗ್ರೆಸ್ ಆಹ್ವಾನ

- Advertisement -
- Advertisement -

‘ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಹೋರಾಡಲು ರಚನೆಯಾಗಿರುವ ಐಕ್ಯ ಹೋರಾಟಕ್ಕೆ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸೇರಬೇಕು, ಅವರಿಗೆ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಮೈತ್ರಿಕೂಟ (ಇಂಡಿಯಾ) ಬಣದ ಬಾಗಿಲು ತೆರೆದಿದೆ’ ಎಂದು ಉತ್ತರ ಪ್ರದೇಶ ಕಾಂಗ್ರೆಸ್‌ ಉಸ್ತುವಾರಿ ಅವಿನಾಶ್ ಪಾಂಡೆ ಭಾನುವಾರ ಹೇಳಿದ್ದಾರೆ.

ಆದರೆ, ಬಿಎಸ್‌ಪಿಯ ಮಾಯಾವತಿ ಏಕಾಂಗಿಯಾಗಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್-ಎಸ್‌ಪಿ ಒಕ್ಕೂಟವು ಉತ್ತರ ಪ್ರದೇಶದ ಸಣ್ಣ ಪಕ್ಷಗಳೊಂದಿಗೆ ಇಂಡಿಯಾ ಬ್ಲಾಕ್‌ಗೆ ಸೇರುವ ಕುರಿತು ಮಾತುಕತೆ ನಡೆಸುತ್ತಿದೆ.

‘ಅವರಲ್ಲಿ ಕೆಲವರು ಬೇಷರತ್ತಾಗಿ ಸೇರುತ್ತಿದ್ದಾರೆ ಮತ್ತು ಕೆಲವರು ನಿರೀಕ್ಷೆಗಳನ್ನು ಹೊಂದಿದ್ದಾರೆ; ಆದ್ದರಿಂದ ಸ್ವಲ್ಪ ಸಮಯ ತೆಗೆದುಕೊಳ್ಳುತ್ತಿದೆ. ಆದರೆ, ಈ ತಿಂಗಳ ಅಂತ್ಯದ ವೇಳೆಗೆ ಎಲ್ಲವೂ ಬಗೆಹರಿಯುತ್ತದೆ’ ಎಂದು ಪಾಂಡೆ ಹೇಳಿದ್ದಾರೆ.

ಈ ತಿಂಗಳ ಅಂತ್ಯದೊಳಗೆ ಎಲ್ಲವೂ ಬಗೆಹರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಪಾಂಡೆ, ಇಂಡಿಯಾ ಬ್ಲಾಕ್‌ನಿಂದ ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ನಿರ್ಗಮಿಸಿದರೂ, ಪಶ್ಚಿಮ ಉತ್ತರ ಪ್ರದೇಶದಿಂದ ವಿರೋಧ ಪಕ್ಷದ ಬೆಂಬಲವನ್ನು ಸೆಳೆಯುವ ಬಗ್ಗೆ ಪಾಂಡೆ ಭರವಸೆಯಲ್ಲಿದ್ದಾರೆ.

ಪಾಂಡೆ ಅವರು ಇಂಡಿಯಾ ಬಣದಿಂದ ಆರ್‌ಎಲ್‌ಡಿ ನಿರ್ಗಮಿಸುವುದನ್ನು “ಅತ್ಯಂತ ದುರದೃಷ್ಟಕರ” ಎಂದು ಕರೆದರು. ಆದರೆ, ಈ ತಿಂಗಳ ಕೊನೆಯಲ್ಲಿ ರಾಹುಲ್ ಗಾಂಧಿ ಯಾತ್ರೆಯು ಪಶ್ಚಿಮ ಯುಪಿಯ ಮೂಲಕವೂ ಹೋಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ನಾವು ಇಲ್ಲಿಯವರೆಗೆ ಯಾವುದೇ ಚರ್ಚೆ ನಡೆಸಿದ್ದರೂ, ಸಂಪೂರ್ಣ ವಿಷಯವನ್ನು ಮರುಹೊಂದಿಸಲು ಖಂಡಿತವಾಗಿಯೂ ಕೆಲವು ಬದಲಾವಣೆಗಳಿವೆ ಮತ್ತು ಅದಕ್ಕಾಗಿಯೇ ಸ್ವಲ್ಪ ಸಮಯ ತೆಗೆದುಕೊಳ್ಳುತ್ತಿದೆ. ಆದರೆ, ಶೀಘ್ರದಲ್ಲೇ ನಾವು ಅಭ್ಯರ್ಥಿಗಳ ಪಟ್ಟಿಯೊಂದಿಗೆ ಜಂಟಿಯಾಗಿ ಹೊರಬರುತ್ತೇವೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರುವ ಸೋನಿಯಾ ಗಾಂಧಿ ಅವರ ನಿರ್ಧಾರವು ಪಕ್ಷದ ಆಧಾರಸ್ತಂಭದ ಪಾತ್ರವನ್ನು ಬದಲಾಯಿಸಿಲ್ಲ ಎಂದು ಅವರು ಹೇಳಿದರು. ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ (ಎಸ್‌ಪಿ) ಜೊತೆ ಸೀಟು ಹಂಚಿಕೆ ಮಾತುಕತೆ ಪ್ರಗತಿಯಲ್ಲಿದೆ ಎಂದು ಹೇಳಿದರು.

‘ನೀವು ಸಮ್ಮಿಶ್ರಕ್ಕೆ ಹೋದಾಗ, ಬಿಜೆಪಿಗೆ ಸರಿಯಾದ ಹೋರಾಟ ನೀಡುವ ಅತ್ಯುತ್ತಮ ಅಭ್ಯರ್ಥಿ ಯಾರು ಎಂದು ನೀವು ಮಾತುಕತೆ ನಡೆಸಬೇಕು; ತರ್ಕಬದ್ಧಗೊಳಿಸಬೇಕು. ಆದ್ದರಿಂದ, ನಾವು ಅದನ್ನು ವಿಶ್ಲೇಷಿಸುತ್ತಿದ್ದೇವೆ ಮತ್ತು ಶೀಘ್ರದಲ್ಲೇ ಸೀಟು ಹಂಚಿಕೆ ಸೂತ್ರ ಬಗೆಹರಿಯಲಿದೆ’ ಎಂದರು.

ಅಮೇಥಿ ಮತ್ತು ರಾಯ್‌ಬರೇಲಿಯಿಂದ ಗಾಂಧಿ ಕುಟುಂಬದ ಒಬ್ಬರು ಸ್ಪರ್ಧಿಸಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಬಯಸುತ್ತಾರೆ ಎಂದು ಪಾಂಡೆ ಹೇಳಿದ್ದಾರೆ. ಇಂಡಿಯಾ ಬ್ಲಾಕ್ ಪಾಲುದಾರರು ಉತ್ತರ ಪ್ರದೇಶದಲ್ಲಿ ವಿವಿಧ ಸ್ಥಳಗಳಲ್ಲಿ ಯಾತ್ರೆಯಲ್ಲಿ ಸೇರಲು ಇಚ್ಛೆ ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದರು.

ಎಸ್‌ಪಿ ನಾಯಕರು ಕಾಂಗ್ರೆಸ್‌ಗೆ 11 ಸ್ಥಾನಗಳನ್ನು ನೀಡಲಿದೆ ಎಂದು ಯಾದವ್ ಈ ಹಿಂದೆ ಹೇಳಿದ್ದಕ್ಕೆ, ‘ಇಲ್ಲಿಯವರೆಗೆ, ಯಾವುದೇ ಅಂಕಿಅಂಶಗಳನ್ನು ಅಂತಿಮಗೊಳಿಸಲಾಗಿಲ್ಲ, ನಾವು ಎಸ್‌ಪಿ ಮತ್ತು ಅಖಿಲೇಶ್ ಜಿಯನ್ನು ಪೂರ್ಣ ಹೃದಯದಿಂದ ಬೆಂಬಲಿಸುತ್ತೇವೆ… ಕಾಂಗ್ರೆಸ್ ವಿಶ್ವಾಸದಿಂದ ಉತ್ತಮ ಹೋರಾಟವನ್ನು ನೀಡಿ ಗೆಲ್ಲಬಹುದು ಎಂದು ಭಾವಿಸುತ್ತದೆ. ಕೆಲವು ಕ್ಷೇತ್ರಗಳಲ್ಲಿ ಮಾತ್ರ ಕೆಲವು ಗೊಂದಲಗಳಿದ್ದು ಅದನ್ನು ತೆರವುಗೊಳಿಸಲಾಗುವುದು’ ಎಂದರು.

ಕಾಂಗ್ರೆಸ್ ಯಾತ್ರೆ ಶುಕ್ರವಾರ ಉತ್ತರ ಪ್ರದೇಶವನ್ನು ಪ್ರವೇಶಿಸಿದ್ದು, ರಾಜಸ್ಥಾನ ಪ್ರವೇಶಿಸುವ ಮೊದಲು ರಾಜ್ಯದ ಮೂಲಕ ಸಂಚರಿಸಲಿದೆ. ಫೆಬ್ರವರಿ 25 ರ ರಾತ್ರಿ ಉತ್ತರ ಪ್ರದೇಶದಿಂದ ಯಾತ್ರೆ ಹೊರಡುವ ನಿರೀಕ್ಷೆಯಿದೆ.

ಇದನ್ನೂ ಓದಿ;

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...