Homeಕರ್ನಾಟಕಮೀಸಲಾತಿ ಮಿತಿ ಶೇ.75ಕ್ಕೆ ಏರಿಸಲು ಕಾಂಗ್ರೆಸ್ ಬದ್ಧ: ಸಿದ್ದರಾಮಯ್ಯ ಘೋಷಣೆ

ಮೀಸಲಾತಿ ಮಿತಿ ಶೇ.75ಕ್ಕೆ ಏರಿಸಲು ಕಾಂಗ್ರೆಸ್ ಬದ್ಧ: ಸಿದ್ದರಾಮಯ್ಯ ಘೋಷಣೆ

ಜನಸಂಖ್ಯೆಯ ಆಧಾರದಲ್ಲಿ ಎಲ್ಲಾ ಜಾತಿಗಳಿಗೆ ಮೀಸಲಾತಿ ನೀಡಲಾಗುವುದು ಎಂದಿರುವ ಅವರು ಅಮಿತ್ ಶಾ ಆರೋಪಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ

- Advertisement -
- Advertisement -

ಮೀಸಲಾತಿ ಮಿತಿಯನ್ನು ಶೇ.50ರಿಂದ ಶೇ. 75ಕ್ಕೆ  ಹೆಚ್ಚಿಸಲು ಕಾಂಗ್ರೆಸ್ ಬದ್ಧವಾಗಿದೆ. ಜನಸಂಖ್ಯೆಯ ಆಧಾರದಲ್ಲಿ ಎಲ್ಲಾ ಜಾತಿಗಳಿಗೆ ಮೀಸಲಾತಿ ನೀಡಲಾಗುವುದು ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಗೊಂದಲಗಳನ್ನು ಸೃಷ್ಟಿಸಿ, ಮುಸ್ಲಿಮರಿಗಿದ್ದ 4% ಮೀಸಲಾತಿಯನ್ನು ಕಿತ್ತುಹಾಕಿ ಲಿಂಗಾಯತರು ಮತ್ತು ಒಕ್ಕಲಿಗರಿಗೆ ಹಂಚಿಕೆ ಮಾಡಿದ್ದೇವೆಂದು ರಾಜಕಾರಣ ಮಾಡುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯನವರು ಕಾಂಗ್ರೆಸ್ ಪಕ್ಷದ ಮುಂದಿನ ನಡೆಯನ್ನು ತಿಳಿಸಿದ್ದಾರೆ.

“ಒಕ್ಕಲಿಗರು, ಲಿಂಗಾಯತರು ಅಥವಾ ಇತರ ಯಾವುದೇ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವುದಕ್ಕೆ ನಮ್ಮ ವಿರೋಧ ಇಲ್ಲ. ಪ್ರತಿಯೊಬ್ಬರಿಗೂ ಅವರ ಜನಸಂಖ್ಯೆಯ ಆಧಾರದ ಮೇಲೆ ಮೀಸಲಾತಿ ಹೆಚ್ಚಿಸಬೇಕೆಂಬುದನ್ನು ನಾವು ಬೆಂಬಲಿಸುತ್ತೇವೆ” ಎಂದಿದ್ದಾರೆ.

“ಒಕ್ಕಲಿಗರು ಮತ್ತು ಲಿಂಗಾಯತರಿಗೆ ಮೀಸಲಾತಿ ಹೆಚ್ಚಿಸಲು ಮುಸ್ಲಿಮರಿಗೆ ನೀಡಲಾಗಿರುವ ಮೀಸಲಾತಿಯನ್ನು ರದ್ದುಪಡಿಸುವ ಅಗತ್ಯವಿಲ್ಲ. ಮೀಸಲಾತಿ ಮಿತಿ ಶೇ.50 ತೆಗೆದರೆ ಪ್ರತಿ ಅರ್ಹ ಸಮುದಾಯಕ್ಕೂ ಅವರ ಜನಸಂಖ್ಯೆ ಆಧರಿಸಿ ಮೀಸಲಾತಿ ನೀಡಬಹುದು” ಎಂದು ತಿಳಿಸಿದ್ದಾರೆ.

“ಬಿಜೆಪಿ ಎಂದಿಗೂ ಒಕ್ಕಲಿಗರು ಮತ್ತು ಲಿಂಗಾಯತರಿಗೆ ಮೀಸಲಾತಿ ನೀಡುವ ಉದ್ದೇಶವನ್ನು ಹೊಂದಿರಲಿಲ್ಲ, ಆದರೆ ಮುಸ್ಲಿಮರಿಗೆ ಮೀಸಲಾತಿಯನ್ನು ತೆಗೆದುಹಾಕುವಲ್ಲಿ ಮಾತ್ರ ಆಸಕ್ತಿ ಹೊಂದಿತ್ತು” ಎಂದು ಟೀಕಿಸಿದ್ದಾರೆ.

“ಮುಸ್ಲಿಮರಿಗೆ ಮೀಸಲಾತಿ ನೀಡಲು ಒಕ್ಕಲಿಗರ ಇಲ್ಲವೇ ಲಿಂಗಾಯತರ ಮೀಸಲಾತಿಯನ್ನು ಕಡಿತಗೊಳಿಸುತ್ತೀರಾ?” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಶ್ನಿಸಿರುವುದಕ್ಕೆ ಸರಣಿ ಟ್ವೀಟ್‌ಗಳ ಮೂಲಕ ಸಿದ್ದರಾಮಯ್ಯ ಕಟುವಾಗಿ ಪ್ರತಿಕ್ರಿಯಿಸಿದ್ದಾರೆ.

“ಈ ಪ್ರಶ್ನೆಯಲ್ಲಿಯೇ ಜಾತಿ-ಜಾತಿಗಳ ಮತ್ತು ಧರ್ಮ-ಧರ್ಮದ ನಡುವೆ ಜಗಳ ಹಚ್ಚುವ ದುಷ್ಟ ಆಲೋಚನೆ ಇದೆ ಎನ್ನುವುದನ್ನು ಅರ್ಥಮಾಡಿಕೊಳ್ಳದಷ್ಟು ಕರ್ನಾಟಕದ ಜನತೆ ದಡ್ಡರಲ್ಲ. ಒಕ್ಕಲಿಗರು ಮತ್ತು ಲಿಂಗಾಯತರು ಸೇರಿದಂತೆ ಈ ರಾಜ್ಯದ ಮಹಾ ಜನತೆ ‘ಕಿತ್ತು ತಿನ್ನುವ ದುಷ್ಟರಲ್ಲ’, ‘ಹಂಚಿ ತಿನ್ನುವ ಔದಾರ್ಯ ಸಜ್ಜನರು’ ಎನ್ನುವುದನ್ನು ಅಮಿತ್ ಶಾ ಅವರಿಗೆ ವಿನಮ್ರವಾಗಿ ತಿಳಿಸಬಯಸುತ್ತೇನೆ” ಎಂದಿದ್ದಾರೆ.

“ಒಕ್ಕಲಿಗ, ಲಿಂಗಾಯತ ಇಲ್ಲವೇ ಇತರ ಅರ್ಹ ಜಾತಿಗಳಿಗೆ ಮೀಸಲಾತಿ ನೀಡುವುದಕ್ಕೆ ನಮ್ಮ ಪಕ್ಷದ ವಿರೋಧ ಇಲ್ಲ. ನಮ್ಮ ಪಕ್ಷ ಮೀಸಲಾತಿ ಹೆಚ್ಚಳದ ಪರವಾಗಿದೆ. ಬಿಜೆಪಿ ಕನ್ನಡಿಯೊಳಗಿನ ಗಂಟು ತೋರಿಸಿ ಜನರನ್ನು ತಪ್ಪು ದಾರಿಗೆಳೆಯುತ್ತಿರುವುದನ್ನಷ್ಟೇ ವಿರೋಧಿಸುತ್ತಿದ್ದೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಒಟ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವುದೊಂದೇ ಈಗಿನ ಮೀಸಲಾತಿಯ ಗೊಂದಲ-ವಿವಾದವನ್ನು ಪರಿಹರಿಸಲು ಇರುವ ಸರಿಯಾದ ಮಾರ್ಗ. ಮೀಸಲಾತಿಗೆ ಈಗ ವಿಧಿಸಲಾಗಿರುವ ಶೇಕಡಾ 50ರ ಮಿತಿ ಸಂವಿಧಾನದಲ್ಲಿ ಹೇರಲಾದ ಮಿತಿ ಅಲ್ಲ, ಅದು ಇಂದಿರಾ ಸಹಾನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದ ಭಾಗ” ಎಂದು ನೆನಪಿಸಿದ್ದಾರೆ.

“ಈಗಾಗಲೇ ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಶೇಕಡಾ ಹತ್ತರಷ್ಟು ಮೀಸಲಾತಿ ನೀಡಿ ಶೇಕಡಾ 50ರ ಮಿತಿಯನ್ನು ಉಲ್ಲಂಘಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಒಟ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಅನುಕೂಲವಾಗುವಂತೆ ಸಂವಿಧಾನಕ್ಕೆ ತಿದ್ದುಪಡಿ ತರಬೇಕು” ಎಂದು ಆಗ್ರಹಿಸಿದ್ದಾರೆ.

“ಎಲ್ಲ ಜಾತಿಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಾತಿನಿಧ್ಯ ಸಿಗುವಂತೆ ಮೀಸಲಾತಿಯನ್ನು ಪರಿಷ್ಕರಿಸಿ ಜಾರಿಗೆ ತರಬೇಕು ಮತ್ತು ಈ ಮೀಸಲಾತಿಯನ್ನು ಸಂವಿಧಾನದ ಒಂಭತ್ತನೇ ಶೆಡ್ಯೂಲ್ ಗೆ ಸೇರಿಸಬೇಕು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇಕಡಾ 50ರಿಂದ ಶೇಕಡಾ 75ರ ವರೆಗೆ ಹೆಚ್ಚಿಸಿ ಎಲ್ಲ ಸಮುದಾಯಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಯನ್ನು ನೀಡುತ್ತೇವೆ” ಎಂದು ಭರವಸೆ ನೀಡಿದ್ದಾರೆ.

“ಮೀಸಲಾತಿ ಪರಿಷ್ಕರಣೆಗೆ ಕರ್ನಾಟಕ ರಾಜ್ಯಕ್ಕೆ ಹೆಚ್ಚು ಅನುಕೂಲ ಇದೆ. ಯಾಕೆಂದರೆ ನಮ್ಮಲ್ಲಿ ನ್ಯಾಯವಾದಿ ಕಾಂತರಾಜ್ ಅಧ್ಯಕ್ಷತೆಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಮನೆ ಮನೆಗೆ ತೆರಳಿ ವೈಜ್ಞಾನಿಕವಾಗಿ ಗಣತಿ ಮಾಡಿರುವ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿ ಸಿದ್ಧ ಇದೆ. ಅದರ ಆಧಾರದಲ್ಲಿ ಮೀಸಲಾತಿ ರೂಪಿಸಿದರೆ ಸುಪ್ರೀಂ ಕೋರ್ಟ್ ಕೂಡಾ ಒಪ್ಪಿಕೊಳ್ಳಬಹುದು ಎಂಬ ಭರವಸೆ ನನಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“1994ರಲ್ಲಿ ಎಂ.ವೀರಪ್ಪ ಮೊಯಿಲಿ ಸರ್ಕಾರ ರಾಜ್ಯದ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇಕಡಾ 73ಕ್ಕೆ ಹೆಚ್ಚಿಸಿ ಆದೇಶ ಮಾಡಿತ್ತು. ಅದಿನ್ನು ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿದೆ. ಅಲ್ಲಿಯೂ ರಾಜ್ಯ ಸರ್ಕಾರ ಜಾತಿಗಣತಿಯ ವರದಿಯನ್ನು ಮುಂದಿಟ್ಟು ಮೀಸಲಾತಿ ಹೆಚ್ಚಳಕ್ಕೆ ಅನುಮತಿ ಕೋರಿದರೆ ನ್ಯಾಯಾಲಯ ಖಂಡಿತ ಒಪ್ಪಿಗೆ ನೀಡಬಹುದು” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಸಾಮಾಜಿಕ ಅನ್ಯಾಯವನ್ನೇ ರಾಜಕೀಯದ ಅಸ್ತ್ರವನ್ನಾಗಿ ಮಾಡಿಕೊಂಡು ಬಂದ ಭಾರತೀಯ ಜನತಾ ಪಕ್ಷಕ್ಕಾಗಲಿ, ಅದರ ಅಧ್ಯಕ್ಷರಿಗಾಗಲಿ ಸಾಮಾಜಿಕ ನ್ಯಾಯ ಅರ್ಥವಾಗಲಾರದು. ನಮ್ಮದು ಕೋಮುವಾದವನ್ನು ಉಸಿರಾಡುವ ಗುಜರಾತ್ ಅಲ್ಲ, ಬಸವವಾದವನ್ನು ಮೈಗೂಡಿಸಿಕೊಂಡಿರುವ ಕರ್ನಾಟಕ ಎನ್ನುವುದನ್ನು ನೆನಪಿಸಬಯಸುತ್ತೇನೆ” ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

“ಸಾಧನೆಯ ಬಲದಿಂದಾಗಲಿ, ಸವಕಲುಗೊಂಡಿರುವ ಕೋಮುವಾದದಿಂದಾಗಲಿ ಚುನಾವಣೆಯನ್ನು ಎದುರಿಸಲು ಅಸಾಧ್ಯವೆಂದು ಗೊತ್ತಾದಾಗ ಅವಸರದಲ್ಲಿ ಈ ಅಡ್ಡಕಸುಬಿ ಮೀಸಲಾತಿ ನೀತಿಯನ್ನು ರಾಜ್ಯ ಸರ್ಕಾರ ಘೋಷಿಸಿತ್ತು. ಈ ಮೀಸಲಾತಿಯನ್ನು ಒಕ್ಕಲಿಗ ಇಲ್ಲವೇ ಲಿಂಗಾಯತರ ಮೇಲಿನ ಪ್ರೀತಿ ಇಲ್ಲವೇ ಕಾಳಜಿಯಿಂದ ಘೋಷಿಸಿದ್ದಲ್ಲ, ಇದರ ಹಿಂದಿನ ದುರುದ್ದೇಶ ಮುಸ್ಲಿಂ ಮತ್ತು ಒಕ್ಕಲಿಗ-ಲಿಂಗಾಯತರ ನಡುವೆ ದ್ವೇಷ ಹುಟ್ಟಿಸುವುದೇ ಆಗಿದೆ” ಎಂದು ಎಚ್ಚರಿಸಿದ್ದಾರೆ.

“ಅಮಿತ್ ಶಾ ಅವರ ಪ್ರಶ್ನೆಯಲ್ಲಿಯೇ ಬಿಜೆಪಿಯ ದುಷ್ಟ ಆಲೋಚನೆ ಸ್ಪಷ್ಟವಾಗಿದೆ. ಆದರೆ ನ್ಯಾಯಾಲಯದ ಮೇಲೆ ನಂಬಿಕೆ ಇಟ್ಟಿರುವ ಮುಸ್ಲಿಮರು ಮೀಸಲಾತಿ ರದ್ದತಿಯಿಂದ ಅಧೀರರಾಗಲಿಲ್ಲ, ಪ್ರಚೋದನೆಗೂ ಒಳಗಾಗಲಿಲ್ಲ. ಅದೇ ರೀತಿ ಇದು ಕನ್ನಡಿಯೊಳಗಿನ ಗಂಟು ಎನ್ನುವುದನ್ನು ಅರ್ಥಮಾಡಿಕೊಂಡಿರುವ ಜಾಗೃತ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳು ಕೂಡಾ ಹೊಸ ಮೀಸಲಾತಿ ಘೋಷಣೆಯಿಂದ ಸಂಭ್ರಮಗೊಳ್ಳಲಿಲ್ಲ. ಇದು ನಮ್ಮ ಕರ್ನಾಟಕ” ಎಂದು ಬಣ್ಣಿಸಿದ್ದಾರೆ.

“ಈಗ ನಿರೀಕ್ಷೆಯಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಕಪಾಳಮೋಕ್ಷ ಮಾಡಿದೆ. ಹೊಸ ಮೀಸಲಾತಿಯನ್ನು ಜಾರಿಗೆ ತರುವುದಿಲ್ಲ ಎಂದು ಸಾಲಿಸಿಟರ್ ಜನರಲ್ ಮೂಲಕ ನ್ಯಾಯಾಲಯಕ್ಕೆ ಭರವಸೆ ನೀಡಿರುವ ಕೇಂದ್ರ ಸರ್ಕಾರದ ಗೃಹಸಚಿವರು ಚುನಾವಣಾ ಭಾಷಣದಲ್ಲಿ ಅದರ ವಿರುದ್ಧವಾಗಿ ಮಾತನಾಡುತ್ತಿದ್ದಾರೆ. ಗೃಹಸಚಿವ ಅಮಿತ್ ಶಾ ಅವರೇ, ಇದು ಕರ್ನಾಟಕ, ಇಲ್ಲಿ ಹೊಡೆಯುವ, ಬಡಿಯುವ, ಮುರಿಯುವ, ಸುಡುವ ‘ಗುಜರಾತ್ ಮಾದರಿ’ ನಡೆಯುವುದಿಲ್ಲ. ಇಲ್ಲಿ ಏನಿದ್ದರೂ ಪ್ರೀತಿಸುವ, ಪೊರೆಯುವ ಮತ್ತು ಕಟ್ಟುವ ‘ಕರ್ನಾಟಕ ಮಾದರಿ’ಯೇ ನಡೆಯುವುದು” ಎಂದು ಕಿವಿಮಾತು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...

‘ಒಂದು ಲೀಟರ್ ತೈಲವನ್ನೂ ರಫ್ತು ಮಾಡುವುದಿಲ್ಲ’: ಟ್ರಂಪ್ ‘ಹಾರ್ಮುಜ್ ಜಲಸಂಧಿ ಸ್ವಾಧೀನ’ ಹೇಳಿಕೆಯ ನಂತರ ಕಠಿಣ ಎಚ್ಚರಿಕೆ ನೀಡಿದ ಇರಾನ್

ಟೆಹ್ರಾನ್: ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ, ತನ್ನ ವಿರುದ್ಧ ದಾಳಿಗಳು ಮುಂದುವರಿದರೆ, ಈ ಪ್ರದೇಶದಿಂದ ಒಂದು ಲೀಟರ್ ತೈಲವನ್ನು ರಫ್ತು ಮಾಡಲು ಸಹ ಇರಾನ್ ಅನುಮತಿಸುವುದಿಲ್ಲ ಎಂದು ಇರಾನ್...

ನ್ಯಾಯಾಂಗದ ಕುರಿತ ಅಧ್ಯಾಯ ವಿವಾದ: ಬೇಷರತ್ ಕ್ಷಮೆಯಾಚಿಸಿದ ಎನ್‌ಸಿಇಆರ್‌ಟಿ

ಇತ್ತೀಚೆಗೆ ಪ್ರಕಟವಾದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ಭ್ರಷ್ಟಾಚಾರದ ಅಧ್ಯಾಯವನ್ನು ಸೇರಿಸಿದ್ದಕ್ಕಾಗಿ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಮಂಗಳವಾರ (ಮಾ.10) ಬೇಷರತ್ತಾಗಿ ಸಾರ್ವಜನಿಕ ಕ್ಷಮೆಯಾಚಿಸಿದೆ ಮತ್ತು...

ಟ್ರಕ್ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣ : ಇಬ್ಬರು ಸ್ವಘೋಷಿತ ಗೋರಕ್ಷಕರ ಬಂಧನ

ಎಮ್ಮೆಗಳನ್ನು ಸಾಗಿಸುತ್ತಿದ್ದ ಟ್ರಕ್‌ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸ್ವಘೋಷಿತ ಗೋರಕ್ಷಕರನ್ನು ಮಹಾರಾಷ್ಟ್ರದ ಪುಣೆ ನಗರ ಪೊಲೀಸರು ಬಂಧಿಸಿದ್ದಾರೆ. ಬಿಪಾಶಾ ಅಲಿಯಾಸ್ ಆಕಾಶ್ ಮಾಣಿಕಂ ಮತ್ತು ಹೇಮಂತ್ ಗಾಯಕ್ವಾಡ್ ಬಂಧಿತರು....

ದೆಹಲಿ ಗಲಭೆ ಪ್ರಕರಣ : ಶಾರ್ಜೀಲ್ ಇಮಾಮ್‌ಗೆ 10 ದಿನಗಳ ಮಧ್ಯಂತರ ಜಾಮೀನು

ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಸಂಶೋಧನಾ ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಅವರಿಗೆ ನ್ಯಾಯಾಲಯ ಸೋಮವಾರ (ಮಾ.9) 10 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ತನ್ನ ಸಹೋದರನ...

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...