Homeಕರ್ನಾಟಕಮೀಸಲಾತಿ ಮಿತಿ ಶೇ.75ಕ್ಕೆ ಏರಿಸಲು ಕಾಂಗ್ರೆಸ್ ಬದ್ಧ: ಸಿದ್ದರಾಮಯ್ಯ ಘೋಷಣೆ

ಮೀಸಲಾತಿ ಮಿತಿ ಶೇ.75ಕ್ಕೆ ಏರಿಸಲು ಕಾಂಗ್ರೆಸ್ ಬದ್ಧ: ಸಿದ್ದರಾಮಯ್ಯ ಘೋಷಣೆ

ಜನಸಂಖ್ಯೆಯ ಆಧಾರದಲ್ಲಿ ಎಲ್ಲಾ ಜಾತಿಗಳಿಗೆ ಮೀಸಲಾತಿ ನೀಡಲಾಗುವುದು ಎಂದಿರುವ ಅವರು ಅಮಿತ್ ಶಾ ಆರೋಪಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ

- Advertisement -
- Advertisement -

ಮೀಸಲಾತಿ ಮಿತಿಯನ್ನು ಶೇ.50ರಿಂದ ಶೇ. 75ಕ್ಕೆ  ಹೆಚ್ಚಿಸಲು ಕಾಂಗ್ರೆಸ್ ಬದ್ಧವಾಗಿದೆ. ಜನಸಂಖ್ಯೆಯ ಆಧಾರದಲ್ಲಿ ಎಲ್ಲಾ ಜಾತಿಗಳಿಗೆ ಮೀಸಲಾತಿ ನೀಡಲಾಗುವುದು ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಗೊಂದಲಗಳನ್ನು ಸೃಷ್ಟಿಸಿ, ಮುಸ್ಲಿಮರಿಗಿದ್ದ 4% ಮೀಸಲಾತಿಯನ್ನು ಕಿತ್ತುಹಾಕಿ ಲಿಂಗಾಯತರು ಮತ್ತು ಒಕ್ಕಲಿಗರಿಗೆ ಹಂಚಿಕೆ ಮಾಡಿದ್ದೇವೆಂದು ರಾಜಕಾರಣ ಮಾಡುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯನವರು ಕಾಂಗ್ರೆಸ್ ಪಕ್ಷದ ಮುಂದಿನ ನಡೆಯನ್ನು ತಿಳಿಸಿದ್ದಾರೆ.

“ಒಕ್ಕಲಿಗರು, ಲಿಂಗಾಯತರು ಅಥವಾ ಇತರ ಯಾವುದೇ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವುದಕ್ಕೆ ನಮ್ಮ ವಿರೋಧ ಇಲ್ಲ. ಪ್ರತಿಯೊಬ್ಬರಿಗೂ ಅವರ ಜನಸಂಖ್ಯೆಯ ಆಧಾರದ ಮೇಲೆ ಮೀಸಲಾತಿ ಹೆಚ್ಚಿಸಬೇಕೆಂಬುದನ್ನು ನಾವು ಬೆಂಬಲಿಸುತ್ತೇವೆ” ಎಂದಿದ್ದಾರೆ.

“ಒಕ್ಕಲಿಗರು ಮತ್ತು ಲಿಂಗಾಯತರಿಗೆ ಮೀಸಲಾತಿ ಹೆಚ್ಚಿಸಲು ಮುಸ್ಲಿಮರಿಗೆ ನೀಡಲಾಗಿರುವ ಮೀಸಲಾತಿಯನ್ನು ರದ್ದುಪಡಿಸುವ ಅಗತ್ಯವಿಲ್ಲ. ಮೀಸಲಾತಿ ಮಿತಿ ಶೇ.50 ತೆಗೆದರೆ ಪ್ರತಿ ಅರ್ಹ ಸಮುದಾಯಕ್ಕೂ ಅವರ ಜನಸಂಖ್ಯೆ ಆಧರಿಸಿ ಮೀಸಲಾತಿ ನೀಡಬಹುದು” ಎಂದು ತಿಳಿಸಿದ್ದಾರೆ.

“ಬಿಜೆಪಿ ಎಂದಿಗೂ ಒಕ್ಕಲಿಗರು ಮತ್ತು ಲಿಂಗಾಯತರಿಗೆ ಮೀಸಲಾತಿ ನೀಡುವ ಉದ್ದೇಶವನ್ನು ಹೊಂದಿರಲಿಲ್ಲ, ಆದರೆ ಮುಸ್ಲಿಮರಿಗೆ ಮೀಸಲಾತಿಯನ್ನು ತೆಗೆದುಹಾಕುವಲ್ಲಿ ಮಾತ್ರ ಆಸಕ್ತಿ ಹೊಂದಿತ್ತು” ಎಂದು ಟೀಕಿಸಿದ್ದಾರೆ.

“ಮುಸ್ಲಿಮರಿಗೆ ಮೀಸಲಾತಿ ನೀಡಲು ಒಕ್ಕಲಿಗರ ಇಲ್ಲವೇ ಲಿಂಗಾಯತರ ಮೀಸಲಾತಿಯನ್ನು ಕಡಿತಗೊಳಿಸುತ್ತೀರಾ?” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಶ್ನಿಸಿರುವುದಕ್ಕೆ ಸರಣಿ ಟ್ವೀಟ್‌ಗಳ ಮೂಲಕ ಸಿದ್ದರಾಮಯ್ಯ ಕಟುವಾಗಿ ಪ್ರತಿಕ್ರಿಯಿಸಿದ್ದಾರೆ.

“ಈ ಪ್ರಶ್ನೆಯಲ್ಲಿಯೇ ಜಾತಿ-ಜಾತಿಗಳ ಮತ್ತು ಧರ್ಮ-ಧರ್ಮದ ನಡುವೆ ಜಗಳ ಹಚ್ಚುವ ದುಷ್ಟ ಆಲೋಚನೆ ಇದೆ ಎನ್ನುವುದನ್ನು ಅರ್ಥಮಾಡಿಕೊಳ್ಳದಷ್ಟು ಕರ್ನಾಟಕದ ಜನತೆ ದಡ್ಡರಲ್ಲ. ಒಕ್ಕಲಿಗರು ಮತ್ತು ಲಿಂಗಾಯತರು ಸೇರಿದಂತೆ ಈ ರಾಜ್ಯದ ಮಹಾ ಜನತೆ ‘ಕಿತ್ತು ತಿನ್ನುವ ದುಷ್ಟರಲ್ಲ’, ‘ಹಂಚಿ ತಿನ್ನುವ ಔದಾರ್ಯ ಸಜ್ಜನರು’ ಎನ್ನುವುದನ್ನು ಅಮಿತ್ ಶಾ ಅವರಿಗೆ ವಿನಮ್ರವಾಗಿ ತಿಳಿಸಬಯಸುತ್ತೇನೆ” ಎಂದಿದ್ದಾರೆ.

“ಒಕ್ಕಲಿಗ, ಲಿಂಗಾಯತ ಇಲ್ಲವೇ ಇತರ ಅರ್ಹ ಜಾತಿಗಳಿಗೆ ಮೀಸಲಾತಿ ನೀಡುವುದಕ್ಕೆ ನಮ್ಮ ಪಕ್ಷದ ವಿರೋಧ ಇಲ್ಲ. ನಮ್ಮ ಪಕ್ಷ ಮೀಸಲಾತಿ ಹೆಚ್ಚಳದ ಪರವಾಗಿದೆ. ಬಿಜೆಪಿ ಕನ್ನಡಿಯೊಳಗಿನ ಗಂಟು ತೋರಿಸಿ ಜನರನ್ನು ತಪ್ಪು ದಾರಿಗೆಳೆಯುತ್ತಿರುವುದನ್ನಷ್ಟೇ ವಿರೋಧಿಸುತ್ತಿದ್ದೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಒಟ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವುದೊಂದೇ ಈಗಿನ ಮೀಸಲಾತಿಯ ಗೊಂದಲ-ವಿವಾದವನ್ನು ಪರಿಹರಿಸಲು ಇರುವ ಸರಿಯಾದ ಮಾರ್ಗ. ಮೀಸಲಾತಿಗೆ ಈಗ ವಿಧಿಸಲಾಗಿರುವ ಶೇಕಡಾ 50ರ ಮಿತಿ ಸಂವಿಧಾನದಲ್ಲಿ ಹೇರಲಾದ ಮಿತಿ ಅಲ್ಲ, ಅದು ಇಂದಿರಾ ಸಹಾನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದ ಭಾಗ” ಎಂದು ನೆನಪಿಸಿದ್ದಾರೆ.

“ಈಗಾಗಲೇ ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಶೇಕಡಾ ಹತ್ತರಷ್ಟು ಮೀಸಲಾತಿ ನೀಡಿ ಶೇಕಡಾ 50ರ ಮಿತಿಯನ್ನು ಉಲ್ಲಂಘಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಒಟ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಅನುಕೂಲವಾಗುವಂತೆ ಸಂವಿಧಾನಕ್ಕೆ ತಿದ್ದುಪಡಿ ತರಬೇಕು” ಎಂದು ಆಗ್ರಹಿಸಿದ್ದಾರೆ.

“ಎಲ್ಲ ಜಾತಿಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಾತಿನಿಧ್ಯ ಸಿಗುವಂತೆ ಮೀಸಲಾತಿಯನ್ನು ಪರಿಷ್ಕರಿಸಿ ಜಾರಿಗೆ ತರಬೇಕು ಮತ್ತು ಈ ಮೀಸಲಾತಿಯನ್ನು ಸಂವಿಧಾನದ ಒಂಭತ್ತನೇ ಶೆಡ್ಯೂಲ್ ಗೆ ಸೇರಿಸಬೇಕು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇಕಡಾ 50ರಿಂದ ಶೇಕಡಾ 75ರ ವರೆಗೆ ಹೆಚ್ಚಿಸಿ ಎಲ್ಲ ಸಮುದಾಯಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಯನ್ನು ನೀಡುತ್ತೇವೆ” ಎಂದು ಭರವಸೆ ನೀಡಿದ್ದಾರೆ.

“ಮೀಸಲಾತಿ ಪರಿಷ್ಕರಣೆಗೆ ಕರ್ನಾಟಕ ರಾಜ್ಯಕ್ಕೆ ಹೆಚ್ಚು ಅನುಕೂಲ ಇದೆ. ಯಾಕೆಂದರೆ ನಮ್ಮಲ್ಲಿ ನ್ಯಾಯವಾದಿ ಕಾಂತರಾಜ್ ಅಧ್ಯಕ್ಷತೆಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಮನೆ ಮನೆಗೆ ತೆರಳಿ ವೈಜ್ಞಾನಿಕವಾಗಿ ಗಣತಿ ಮಾಡಿರುವ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿ ಸಿದ್ಧ ಇದೆ. ಅದರ ಆಧಾರದಲ್ಲಿ ಮೀಸಲಾತಿ ರೂಪಿಸಿದರೆ ಸುಪ್ರೀಂ ಕೋರ್ಟ್ ಕೂಡಾ ಒಪ್ಪಿಕೊಳ್ಳಬಹುದು ಎಂಬ ಭರವಸೆ ನನಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“1994ರಲ್ಲಿ ಎಂ.ವೀರಪ್ಪ ಮೊಯಿಲಿ ಸರ್ಕಾರ ರಾಜ್ಯದ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇಕಡಾ 73ಕ್ಕೆ ಹೆಚ್ಚಿಸಿ ಆದೇಶ ಮಾಡಿತ್ತು. ಅದಿನ್ನು ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿದೆ. ಅಲ್ಲಿಯೂ ರಾಜ್ಯ ಸರ್ಕಾರ ಜಾತಿಗಣತಿಯ ವರದಿಯನ್ನು ಮುಂದಿಟ್ಟು ಮೀಸಲಾತಿ ಹೆಚ್ಚಳಕ್ಕೆ ಅನುಮತಿ ಕೋರಿದರೆ ನ್ಯಾಯಾಲಯ ಖಂಡಿತ ಒಪ್ಪಿಗೆ ನೀಡಬಹುದು” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಸಾಮಾಜಿಕ ಅನ್ಯಾಯವನ್ನೇ ರಾಜಕೀಯದ ಅಸ್ತ್ರವನ್ನಾಗಿ ಮಾಡಿಕೊಂಡು ಬಂದ ಭಾರತೀಯ ಜನತಾ ಪಕ್ಷಕ್ಕಾಗಲಿ, ಅದರ ಅಧ್ಯಕ್ಷರಿಗಾಗಲಿ ಸಾಮಾಜಿಕ ನ್ಯಾಯ ಅರ್ಥವಾಗಲಾರದು. ನಮ್ಮದು ಕೋಮುವಾದವನ್ನು ಉಸಿರಾಡುವ ಗುಜರಾತ್ ಅಲ್ಲ, ಬಸವವಾದವನ್ನು ಮೈಗೂಡಿಸಿಕೊಂಡಿರುವ ಕರ್ನಾಟಕ ಎನ್ನುವುದನ್ನು ನೆನಪಿಸಬಯಸುತ್ತೇನೆ” ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

“ಸಾಧನೆಯ ಬಲದಿಂದಾಗಲಿ, ಸವಕಲುಗೊಂಡಿರುವ ಕೋಮುವಾದದಿಂದಾಗಲಿ ಚುನಾವಣೆಯನ್ನು ಎದುರಿಸಲು ಅಸಾಧ್ಯವೆಂದು ಗೊತ್ತಾದಾಗ ಅವಸರದಲ್ಲಿ ಈ ಅಡ್ಡಕಸುಬಿ ಮೀಸಲಾತಿ ನೀತಿಯನ್ನು ರಾಜ್ಯ ಸರ್ಕಾರ ಘೋಷಿಸಿತ್ತು. ಈ ಮೀಸಲಾತಿಯನ್ನು ಒಕ್ಕಲಿಗ ಇಲ್ಲವೇ ಲಿಂಗಾಯತರ ಮೇಲಿನ ಪ್ರೀತಿ ಇಲ್ಲವೇ ಕಾಳಜಿಯಿಂದ ಘೋಷಿಸಿದ್ದಲ್ಲ, ಇದರ ಹಿಂದಿನ ದುರುದ್ದೇಶ ಮುಸ್ಲಿಂ ಮತ್ತು ಒಕ್ಕಲಿಗ-ಲಿಂಗಾಯತರ ನಡುವೆ ದ್ವೇಷ ಹುಟ್ಟಿಸುವುದೇ ಆಗಿದೆ” ಎಂದು ಎಚ್ಚರಿಸಿದ್ದಾರೆ.

“ಅಮಿತ್ ಶಾ ಅವರ ಪ್ರಶ್ನೆಯಲ್ಲಿಯೇ ಬಿಜೆಪಿಯ ದುಷ್ಟ ಆಲೋಚನೆ ಸ್ಪಷ್ಟವಾಗಿದೆ. ಆದರೆ ನ್ಯಾಯಾಲಯದ ಮೇಲೆ ನಂಬಿಕೆ ಇಟ್ಟಿರುವ ಮುಸ್ಲಿಮರು ಮೀಸಲಾತಿ ರದ್ದತಿಯಿಂದ ಅಧೀರರಾಗಲಿಲ್ಲ, ಪ್ರಚೋದನೆಗೂ ಒಳಗಾಗಲಿಲ್ಲ. ಅದೇ ರೀತಿ ಇದು ಕನ್ನಡಿಯೊಳಗಿನ ಗಂಟು ಎನ್ನುವುದನ್ನು ಅರ್ಥಮಾಡಿಕೊಂಡಿರುವ ಜಾಗೃತ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳು ಕೂಡಾ ಹೊಸ ಮೀಸಲಾತಿ ಘೋಷಣೆಯಿಂದ ಸಂಭ್ರಮಗೊಳ್ಳಲಿಲ್ಲ. ಇದು ನಮ್ಮ ಕರ್ನಾಟಕ” ಎಂದು ಬಣ್ಣಿಸಿದ್ದಾರೆ.

“ಈಗ ನಿರೀಕ್ಷೆಯಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಕಪಾಳಮೋಕ್ಷ ಮಾಡಿದೆ. ಹೊಸ ಮೀಸಲಾತಿಯನ್ನು ಜಾರಿಗೆ ತರುವುದಿಲ್ಲ ಎಂದು ಸಾಲಿಸಿಟರ್ ಜನರಲ್ ಮೂಲಕ ನ್ಯಾಯಾಲಯಕ್ಕೆ ಭರವಸೆ ನೀಡಿರುವ ಕೇಂದ್ರ ಸರ್ಕಾರದ ಗೃಹಸಚಿವರು ಚುನಾವಣಾ ಭಾಷಣದಲ್ಲಿ ಅದರ ವಿರುದ್ಧವಾಗಿ ಮಾತನಾಡುತ್ತಿದ್ದಾರೆ. ಗೃಹಸಚಿವ ಅಮಿತ್ ಶಾ ಅವರೇ, ಇದು ಕರ್ನಾಟಕ, ಇಲ್ಲಿ ಹೊಡೆಯುವ, ಬಡಿಯುವ, ಮುರಿಯುವ, ಸುಡುವ ‘ಗುಜರಾತ್ ಮಾದರಿ’ ನಡೆಯುವುದಿಲ್ಲ. ಇಲ್ಲಿ ಏನಿದ್ದರೂ ಪ್ರೀತಿಸುವ, ಪೊರೆಯುವ ಮತ್ತು ಕಟ್ಟುವ ‘ಕರ್ನಾಟಕ ಮಾದರಿ’ಯೇ ನಡೆಯುವುದು” ಎಂದು ಕಿವಿಮಾತು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...