Homeಕರ್ನಾಟಕಮೀಸಲಾತಿ ಮಿತಿ ಶೇ.75ಕ್ಕೆ ಏರಿಸಲು ಕಾಂಗ್ರೆಸ್ ಬದ್ಧ: ಸಿದ್ದರಾಮಯ್ಯ ಘೋಷಣೆ

ಮೀಸಲಾತಿ ಮಿತಿ ಶೇ.75ಕ್ಕೆ ಏರಿಸಲು ಕಾಂಗ್ರೆಸ್ ಬದ್ಧ: ಸಿದ್ದರಾಮಯ್ಯ ಘೋಷಣೆ

ಜನಸಂಖ್ಯೆಯ ಆಧಾರದಲ್ಲಿ ಎಲ್ಲಾ ಜಾತಿಗಳಿಗೆ ಮೀಸಲಾತಿ ನೀಡಲಾಗುವುದು ಎಂದಿರುವ ಅವರು ಅಮಿತ್ ಶಾ ಆರೋಪಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ

- Advertisement -
- Advertisement -

ಮೀಸಲಾತಿ ಮಿತಿಯನ್ನು ಶೇ.50ರಿಂದ ಶೇ. 75ಕ್ಕೆ  ಹೆಚ್ಚಿಸಲು ಕಾಂಗ್ರೆಸ್ ಬದ್ಧವಾಗಿದೆ. ಜನಸಂಖ್ಯೆಯ ಆಧಾರದಲ್ಲಿ ಎಲ್ಲಾ ಜಾತಿಗಳಿಗೆ ಮೀಸಲಾತಿ ನೀಡಲಾಗುವುದು ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಗೊಂದಲಗಳನ್ನು ಸೃಷ್ಟಿಸಿ, ಮುಸ್ಲಿಮರಿಗಿದ್ದ 4% ಮೀಸಲಾತಿಯನ್ನು ಕಿತ್ತುಹಾಕಿ ಲಿಂಗಾಯತರು ಮತ್ತು ಒಕ್ಕಲಿಗರಿಗೆ ಹಂಚಿಕೆ ಮಾಡಿದ್ದೇವೆಂದು ರಾಜಕಾರಣ ಮಾಡುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯನವರು ಕಾಂಗ್ರೆಸ್ ಪಕ್ಷದ ಮುಂದಿನ ನಡೆಯನ್ನು ತಿಳಿಸಿದ್ದಾರೆ.

“ಒಕ್ಕಲಿಗರು, ಲಿಂಗಾಯತರು ಅಥವಾ ಇತರ ಯಾವುದೇ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವುದಕ್ಕೆ ನಮ್ಮ ವಿರೋಧ ಇಲ್ಲ. ಪ್ರತಿಯೊಬ್ಬರಿಗೂ ಅವರ ಜನಸಂಖ್ಯೆಯ ಆಧಾರದ ಮೇಲೆ ಮೀಸಲಾತಿ ಹೆಚ್ಚಿಸಬೇಕೆಂಬುದನ್ನು ನಾವು ಬೆಂಬಲಿಸುತ್ತೇವೆ” ಎಂದಿದ್ದಾರೆ.

“ಒಕ್ಕಲಿಗರು ಮತ್ತು ಲಿಂಗಾಯತರಿಗೆ ಮೀಸಲಾತಿ ಹೆಚ್ಚಿಸಲು ಮುಸ್ಲಿಮರಿಗೆ ನೀಡಲಾಗಿರುವ ಮೀಸಲಾತಿಯನ್ನು ರದ್ದುಪಡಿಸುವ ಅಗತ್ಯವಿಲ್ಲ. ಮೀಸಲಾತಿ ಮಿತಿ ಶೇ.50 ತೆಗೆದರೆ ಪ್ರತಿ ಅರ್ಹ ಸಮುದಾಯಕ್ಕೂ ಅವರ ಜನಸಂಖ್ಯೆ ಆಧರಿಸಿ ಮೀಸಲಾತಿ ನೀಡಬಹುದು” ಎಂದು ತಿಳಿಸಿದ್ದಾರೆ.

“ಬಿಜೆಪಿ ಎಂದಿಗೂ ಒಕ್ಕಲಿಗರು ಮತ್ತು ಲಿಂಗಾಯತರಿಗೆ ಮೀಸಲಾತಿ ನೀಡುವ ಉದ್ದೇಶವನ್ನು ಹೊಂದಿರಲಿಲ್ಲ, ಆದರೆ ಮುಸ್ಲಿಮರಿಗೆ ಮೀಸಲಾತಿಯನ್ನು ತೆಗೆದುಹಾಕುವಲ್ಲಿ ಮಾತ್ರ ಆಸಕ್ತಿ ಹೊಂದಿತ್ತು” ಎಂದು ಟೀಕಿಸಿದ್ದಾರೆ.

“ಮುಸ್ಲಿಮರಿಗೆ ಮೀಸಲಾತಿ ನೀಡಲು ಒಕ್ಕಲಿಗರ ಇಲ್ಲವೇ ಲಿಂಗಾಯತರ ಮೀಸಲಾತಿಯನ್ನು ಕಡಿತಗೊಳಿಸುತ್ತೀರಾ?” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಶ್ನಿಸಿರುವುದಕ್ಕೆ ಸರಣಿ ಟ್ವೀಟ್‌ಗಳ ಮೂಲಕ ಸಿದ್ದರಾಮಯ್ಯ ಕಟುವಾಗಿ ಪ್ರತಿಕ್ರಿಯಿಸಿದ್ದಾರೆ.

“ಈ ಪ್ರಶ್ನೆಯಲ್ಲಿಯೇ ಜಾತಿ-ಜಾತಿಗಳ ಮತ್ತು ಧರ್ಮ-ಧರ್ಮದ ನಡುವೆ ಜಗಳ ಹಚ್ಚುವ ದುಷ್ಟ ಆಲೋಚನೆ ಇದೆ ಎನ್ನುವುದನ್ನು ಅರ್ಥಮಾಡಿಕೊಳ್ಳದಷ್ಟು ಕರ್ನಾಟಕದ ಜನತೆ ದಡ್ಡರಲ್ಲ. ಒಕ್ಕಲಿಗರು ಮತ್ತು ಲಿಂಗಾಯತರು ಸೇರಿದಂತೆ ಈ ರಾಜ್ಯದ ಮಹಾ ಜನತೆ ‘ಕಿತ್ತು ತಿನ್ನುವ ದುಷ್ಟರಲ್ಲ’, ‘ಹಂಚಿ ತಿನ್ನುವ ಔದಾರ್ಯ ಸಜ್ಜನರು’ ಎನ್ನುವುದನ್ನು ಅಮಿತ್ ಶಾ ಅವರಿಗೆ ವಿನಮ್ರವಾಗಿ ತಿಳಿಸಬಯಸುತ್ತೇನೆ” ಎಂದಿದ್ದಾರೆ.

“ಒಕ್ಕಲಿಗ, ಲಿಂಗಾಯತ ಇಲ್ಲವೇ ಇತರ ಅರ್ಹ ಜಾತಿಗಳಿಗೆ ಮೀಸಲಾತಿ ನೀಡುವುದಕ್ಕೆ ನಮ್ಮ ಪಕ್ಷದ ವಿರೋಧ ಇಲ್ಲ. ನಮ್ಮ ಪಕ್ಷ ಮೀಸಲಾತಿ ಹೆಚ್ಚಳದ ಪರವಾಗಿದೆ. ಬಿಜೆಪಿ ಕನ್ನಡಿಯೊಳಗಿನ ಗಂಟು ತೋರಿಸಿ ಜನರನ್ನು ತಪ್ಪು ದಾರಿಗೆಳೆಯುತ್ತಿರುವುದನ್ನಷ್ಟೇ ವಿರೋಧಿಸುತ್ತಿದ್ದೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಒಟ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವುದೊಂದೇ ಈಗಿನ ಮೀಸಲಾತಿಯ ಗೊಂದಲ-ವಿವಾದವನ್ನು ಪರಿಹರಿಸಲು ಇರುವ ಸರಿಯಾದ ಮಾರ್ಗ. ಮೀಸಲಾತಿಗೆ ಈಗ ವಿಧಿಸಲಾಗಿರುವ ಶೇಕಡಾ 50ರ ಮಿತಿ ಸಂವಿಧಾನದಲ್ಲಿ ಹೇರಲಾದ ಮಿತಿ ಅಲ್ಲ, ಅದು ಇಂದಿರಾ ಸಹಾನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದ ಭಾಗ” ಎಂದು ನೆನಪಿಸಿದ್ದಾರೆ.

“ಈಗಾಗಲೇ ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಶೇಕಡಾ ಹತ್ತರಷ್ಟು ಮೀಸಲಾತಿ ನೀಡಿ ಶೇಕಡಾ 50ರ ಮಿತಿಯನ್ನು ಉಲ್ಲಂಘಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಒಟ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಅನುಕೂಲವಾಗುವಂತೆ ಸಂವಿಧಾನಕ್ಕೆ ತಿದ್ದುಪಡಿ ತರಬೇಕು” ಎಂದು ಆಗ್ರಹಿಸಿದ್ದಾರೆ.

“ಎಲ್ಲ ಜಾತಿಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಾತಿನಿಧ್ಯ ಸಿಗುವಂತೆ ಮೀಸಲಾತಿಯನ್ನು ಪರಿಷ್ಕರಿಸಿ ಜಾರಿಗೆ ತರಬೇಕು ಮತ್ತು ಈ ಮೀಸಲಾತಿಯನ್ನು ಸಂವಿಧಾನದ ಒಂಭತ್ತನೇ ಶೆಡ್ಯೂಲ್ ಗೆ ಸೇರಿಸಬೇಕು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇಕಡಾ 50ರಿಂದ ಶೇಕಡಾ 75ರ ವರೆಗೆ ಹೆಚ್ಚಿಸಿ ಎಲ್ಲ ಸಮುದಾಯಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಯನ್ನು ನೀಡುತ್ತೇವೆ” ಎಂದು ಭರವಸೆ ನೀಡಿದ್ದಾರೆ.

“ಮೀಸಲಾತಿ ಪರಿಷ್ಕರಣೆಗೆ ಕರ್ನಾಟಕ ರಾಜ್ಯಕ್ಕೆ ಹೆಚ್ಚು ಅನುಕೂಲ ಇದೆ. ಯಾಕೆಂದರೆ ನಮ್ಮಲ್ಲಿ ನ್ಯಾಯವಾದಿ ಕಾಂತರಾಜ್ ಅಧ್ಯಕ್ಷತೆಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಮನೆ ಮನೆಗೆ ತೆರಳಿ ವೈಜ್ಞಾನಿಕವಾಗಿ ಗಣತಿ ಮಾಡಿರುವ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿ ಸಿದ್ಧ ಇದೆ. ಅದರ ಆಧಾರದಲ್ಲಿ ಮೀಸಲಾತಿ ರೂಪಿಸಿದರೆ ಸುಪ್ರೀಂ ಕೋರ್ಟ್ ಕೂಡಾ ಒಪ್ಪಿಕೊಳ್ಳಬಹುದು ಎಂಬ ಭರವಸೆ ನನಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“1994ರಲ್ಲಿ ಎಂ.ವೀರಪ್ಪ ಮೊಯಿಲಿ ಸರ್ಕಾರ ರಾಜ್ಯದ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇಕಡಾ 73ಕ್ಕೆ ಹೆಚ್ಚಿಸಿ ಆದೇಶ ಮಾಡಿತ್ತು. ಅದಿನ್ನು ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿದೆ. ಅಲ್ಲಿಯೂ ರಾಜ್ಯ ಸರ್ಕಾರ ಜಾತಿಗಣತಿಯ ವರದಿಯನ್ನು ಮುಂದಿಟ್ಟು ಮೀಸಲಾತಿ ಹೆಚ್ಚಳಕ್ಕೆ ಅನುಮತಿ ಕೋರಿದರೆ ನ್ಯಾಯಾಲಯ ಖಂಡಿತ ಒಪ್ಪಿಗೆ ನೀಡಬಹುದು” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಸಾಮಾಜಿಕ ಅನ್ಯಾಯವನ್ನೇ ರಾಜಕೀಯದ ಅಸ್ತ್ರವನ್ನಾಗಿ ಮಾಡಿಕೊಂಡು ಬಂದ ಭಾರತೀಯ ಜನತಾ ಪಕ್ಷಕ್ಕಾಗಲಿ, ಅದರ ಅಧ್ಯಕ್ಷರಿಗಾಗಲಿ ಸಾಮಾಜಿಕ ನ್ಯಾಯ ಅರ್ಥವಾಗಲಾರದು. ನಮ್ಮದು ಕೋಮುವಾದವನ್ನು ಉಸಿರಾಡುವ ಗುಜರಾತ್ ಅಲ್ಲ, ಬಸವವಾದವನ್ನು ಮೈಗೂಡಿಸಿಕೊಂಡಿರುವ ಕರ್ನಾಟಕ ಎನ್ನುವುದನ್ನು ನೆನಪಿಸಬಯಸುತ್ತೇನೆ” ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

“ಸಾಧನೆಯ ಬಲದಿಂದಾಗಲಿ, ಸವಕಲುಗೊಂಡಿರುವ ಕೋಮುವಾದದಿಂದಾಗಲಿ ಚುನಾವಣೆಯನ್ನು ಎದುರಿಸಲು ಅಸಾಧ್ಯವೆಂದು ಗೊತ್ತಾದಾಗ ಅವಸರದಲ್ಲಿ ಈ ಅಡ್ಡಕಸುಬಿ ಮೀಸಲಾತಿ ನೀತಿಯನ್ನು ರಾಜ್ಯ ಸರ್ಕಾರ ಘೋಷಿಸಿತ್ತು. ಈ ಮೀಸಲಾತಿಯನ್ನು ಒಕ್ಕಲಿಗ ಇಲ್ಲವೇ ಲಿಂಗಾಯತರ ಮೇಲಿನ ಪ್ರೀತಿ ಇಲ್ಲವೇ ಕಾಳಜಿಯಿಂದ ಘೋಷಿಸಿದ್ದಲ್ಲ, ಇದರ ಹಿಂದಿನ ದುರುದ್ದೇಶ ಮುಸ್ಲಿಂ ಮತ್ತು ಒಕ್ಕಲಿಗ-ಲಿಂಗಾಯತರ ನಡುವೆ ದ್ವೇಷ ಹುಟ್ಟಿಸುವುದೇ ಆಗಿದೆ” ಎಂದು ಎಚ್ಚರಿಸಿದ್ದಾರೆ.

“ಅಮಿತ್ ಶಾ ಅವರ ಪ್ರಶ್ನೆಯಲ್ಲಿಯೇ ಬಿಜೆಪಿಯ ದುಷ್ಟ ಆಲೋಚನೆ ಸ್ಪಷ್ಟವಾಗಿದೆ. ಆದರೆ ನ್ಯಾಯಾಲಯದ ಮೇಲೆ ನಂಬಿಕೆ ಇಟ್ಟಿರುವ ಮುಸ್ಲಿಮರು ಮೀಸಲಾತಿ ರದ್ದತಿಯಿಂದ ಅಧೀರರಾಗಲಿಲ್ಲ, ಪ್ರಚೋದನೆಗೂ ಒಳಗಾಗಲಿಲ್ಲ. ಅದೇ ರೀತಿ ಇದು ಕನ್ನಡಿಯೊಳಗಿನ ಗಂಟು ಎನ್ನುವುದನ್ನು ಅರ್ಥಮಾಡಿಕೊಂಡಿರುವ ಜಾಗೃತ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳು ಕೂಡಾ ಹೊಸ ಮೀಸಲಾತಿ ಘೋಷಣೆಯಿಂದ ಸಂಭ್ರಮಗೊಳ್ಳಲಿಲ್ಲ. ಇದು ನಮ್ಮ ಕರ್ನಾಟಕ” ಎಂದು ಬಣ್ಣಿಸಿದ್ದಾರೆ.

“ಈಗ ನಿರೀಕ್ಷೆಯಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಕಪಾಳಮೋಕ್ಷ ಮಾಡಿದೆ. ಹೊಸ ಮೀಸಲಾತಿಯನ್ನು ಜಾರಿಗೆ ತರುವುದಿಲ್ಲ ಎಂದು ಸಾಲಿಸಿಟರ್ ಜನರಲ್ ಮೂಲಕ ನ್ಯಾಯಾಲಯಕ್ಕೆ ಭರವಸೆ ನೀಡಿರುವ ಕೇಂದ್ರ ಸರ್ಕಾರದ ಗೃಹಸಚಿವರು ಚುನಾವಣಾ ಭಾಷಣದಲ್ಲಿ ಅದರ ವಿರುದ್ಧವಾಗಿ ಮಾತನಾಡುತ್ತಿದ್ದಾರೆ. ಗೃಹಸಚಿವ ಅಮಿತ್ ಶಾ ಅವರೇ, ಇದು ಕರ್ನಾಟಕ, ಇಲ್ಲಿ ಹೊಡೆಯುವ, ಬಡಿಯುವ, ಮುರಿಯುವ, ಸುಡುವ ‘ಗುಜರಾತ್ ಮಾದರಿ’ ನಡೆಯುವುದಿಲ್ಲ. ಇಲ್ಲಿ ಏನಿದ್ದರೂ ಪ್ರೀತಿಸುವ, ಪೊರೆಯುವ ಮತ್ತು ಕಟ್ಟುವ ‘ಕರ್ನಾಟಕ ಮಾದರಿ’ಯೇ ನಡೆಯುವುದು” ಎಂದು ಕಿವಿಮಾತು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...