Homeಮುಖಪುಟಕಾಂಗ್ರೆಸ್ ಎಂಬುದು ಕೇವಲ ಒಂದು ಪಕ್ಷವಲ್ಲ, ಅದೊಂದು ಆದರ್ಶ: ಕನ್ಹಯ್ಯ ಕುಮಾರ್

ಕಾಂಗ್ರೆಸ್ ಎಂಬುದು ಕೇವಲ ಒಂದು ಪಕ್ಷವಲ್ಲ, ಅದೊಂದು ಆದರ್ಶ: ಕನ್ಹಯ್ಯ ಕುಮಾರ್

ಸಂವಿಧಾನದ ಮೇಲೆ ಹಲ್ಲೆಯಾಗಿದೆ. ರಸ್ತೆಗಳಲ್ಲಿ ಸಂವಿಧಾನ ಸುಡಲಾಗಿದೆ. ನಮ್ಮ ವಿಚಾರಗಳ ಮೇಲೆ, ನಮ್ಮ ಪ್ರಜಾಪ್ರಭುತ್ವದ ಮೇಲೆ ಹಲ್ಲೆಯಾಗುತ್ತಿದೆ. ಇದನ್ನು ತಡೆಯಲು ಕಾಂಗ್ರೆಸ್ ಸೇರುತ್ತಿದ್ದೇನೆ - ಜಿಗ್ನೇಶ್ ಮೇವಾನಿ

- Advertisement -
- Advertisement -

ಕಾಂಗ್ರೆಸ್ ಎಂಬುದು ಕೇವಲ ಒಂದು ಪಕ್ಷವಲ್ಲ, ಅದೊಂದು ಆದರ್ಶ. ಈ ದೇಶದ ಅತಿ ಪ್ರಾಚೀನ ಮತ್ತು ಪ್ರಜಾತಾಂತ್ರಿಕ ಪಕ್ಷವಾದ ಕಾಂಗ್ರೆಸ್ ಉಳಿಯದಿದ್ದರೆ, ಈ ದೇಶ ಉಳಿಯುವುದಿಲ್ಲ. ದೊಡ್ಡ ವಿಪಕ್ಷವನ್ನು ಉಳಿಸದಿದ್ದರೇ, ಚಿಕ್ಕ ಚಿಕ್ಕ ಪಕ್ಷಗಳು ಉಳಿಯುವುದಿಲ್ಲ ಎಂದು ಕಾಂಗ್ರೆಸ್ ಪಕ್ಷ ಸೇರಿದ ನಂತರ ಕನ್ಹಯ್ಯ ಕುಮಾರ್ ತಿಳಿಸಿದ್ದಾರೆ.

ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಘೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ನಮ್ಮ ದೇಶಕ್ಕೆ ಭಗತ್‌ ಸಿಂಗ್‌ ರವರ ಸಾಹಸ, ಅಂಬೇಡ್ಕರ್‌ರವರ ಸಮಾನತೆ ಮತ್ತು ಗಾಂಧೀಜಿಯವರ ಐಕ್ಯತೆ ಬೇಕಾಗಿದೆ ಎಂದರು.

ನಾನು ಹಿಂದೆ ಇದ್ದ ಪಕ್ಷಕ್ಕೆ ಅಭಾರಿಯಾಗಿದ್ದೇನೆ. ಅದು ನನಗೆ ಓದು-ಬರಹ ಕಲಿಸಿ ಬೆಳೆಸಿದೆ. ಹೋರಾಡುವುದನ್ನು ಕಲಿಸಿದೆ. ಅದರೊಟ್ಟಿಗೆ ನನ್ನ ಜೊತೆ ನಿಂತ ಲಕ್ಷಾಂತರ ಕಾರ್ಯಕರ್ತರಿಗೂ ಅಭಾರಿಯಾಗಿದ್ದೇನೆ ಎಂದು ಕನ್ಹಯ್ಯ ತಿಳಿಸಿದರು.

ದೇಶದಲ್ಲಿ ಇಂದು ವೈಚಾರಿಕ ಸಂಘ‍ರ್ಷ ನಡೆಯುತ್ತಿದೆ. ಇದಕ್ಕೆ ಕಾಂಗ್ರೆಸ್ ನಾಯಕತ್ವ ನೀಡುತ್ತದೆ. ಆರಾಮ ಖುರ್ಚಿಯಲ್ಲಿ ಕೂತು ಮಾತಾಡುವ ಸಮಯ ಇದಲ್ಲ. ಇದು ತುರ್ತು ಸಂದರ್ಭವಾಗಿದೆ. ಹಾಗಾಗಿ ಈ ದೇಶದ ಕೋಟ್ಯಾಂತರ ಯುವಕರ ಭವಿಷ್ಯವನ್ನು ರಕ್ಷಿಸುವುದಕ್ಕಾಗಿ ನಾನು ಕಾಂಗ್ರೆಸ್ ಸೇರುತ್ತಿದ್ದೇನೆ ಎಂದಿದ್ದಾರೆ.

ನಮ್ಮ ಪರಿವಾರವನ್ನು ಬಿಟ್ಟು ದೇಶವನ್ನು ಉಳಿಸಲು ಸಾಧ್ಯವಿಲ್ಲ. ಮನೆ, ಮಠದ ಜೊತೆಗೆ ಇದ್ದು ಇಂದು ಪರಿವಾರ ಕಟ್ಟಬೇಕಿದೆ. ಪರಿವಾರವನ್ನು ಬಿಟ್ಟು ಕಟ್ಟುವ ಪರಿವಾರ ಹೇಗಾಗುತ್ತದೇ…? ಕಸ್ತೂರ ಬಾ ಬಿಟ್ಟು ಹೇಗೆ ಗಾಂಧಿ ಹೋರಾಡಲಿಲ್ಲವೋ ಹಾಗೆ. ಅಂಬೇಡ್ಕರ್ ಪರಿವಾರ ಬಿಟ್ಟು ಬರಲಿಲ್ಲ. ದೇಶದ ಮಹನೀಯರೆಲ್ಲ ಪರಿವಾರದೊಟ್ಟಿಗೆ ಇದ್ದು ಹೋರಾಡಿದ್ದಾರೆ ಎಂದರು.

ನಾನು ಕ್ರಾಂತಿಕಾರಿ ಹುತಾತ್ಮ ಭಗತ್‌ ಸಿಂಗ್‌ರವರ ಧೈರ್ಯ ಮತ್ತು ತ್ಯಾಗವನ್ನು ಇಲ್ಲಿ ಸ್ಮರಿಸುತ್ತೇನೆ. ಅದೇ ಸಂದರ್ಭದಲ್ಲಿ ಇಂದು ನಮ್ಮ ಜಿಲ್ಲೆಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಈ ಸಂದರ್ಭದಲ್ಲಿ ನಾನು ಈ ದುರ್ಘಟನೆಗೆ ಸಂತಾಪ ವ್ಯಕ್ತಪಡಿಸುತ್ತೇನೆ ಎಂದು ಕನ್ಹಯ್ಯ ಕುಮಾರ್ ತಿಳಿಸಿದ್ದಾರೆ.

ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಮಾತನಾಡಿ, ಇದು ಗುಜರಾತ್‌ನಿಂದ ಶುರುವಾದ ಕಥೆ. ನಮ್ಮ ಸಂವಿಧಾನದ ಮೇಲೆ ಹಲ್ಲೆಯಾಗಿದೆ. ರಸ್ತೆಗಳಲ್ಲಿ ಸಂವಿಧಾನ ಸುಡಲಾಗಿದೆ. ನಮ್ಮ ವಿಚಾರಗಳ ಮೇಲೆ, ನಮ್ಮ ಪ್ರಜಾಪ್ರಭುತ್ವದ ಮೇಲೆ ಹಲ್ಲೆಯಾಗುತ್ತಿದೆ. ಒಬ್ಬ ಶಾಸಕನಾಗಿ ಅಲ್ಲ, ಒಬ್ಬ ನಾಗರಿಕನಾಗಿ ಕೇಳುತ್ತೇನೆ ಈ ಸಮಯದಲ್ಲಿ ನಾನು ಏನು ಮಾಡಬೇಕು..? ಅದಕ್ಕೆ ನಾನು ನಮ್ಮ ಸಂವಿಧಾನ ಉಳಿಸುವವರ ಜೊತೆಗೆ ಬೆರೆಯಬೇಕು. ಇದಕ್ಕಾಗಿ ನಾವು ಸ್ವಾತಂತ್ರಕ್ಕಾಗಿ ಹೋರಾಡಿದ ದೇಶದ ಹಳೆಯ ಪಕ್ಷವನ್ನು ಸೇರಬೇಕು ಎಂದರು.

ಹೀಗಾಗಿ ನಾನು ನನ್ನ ಕ್ಷೇತ್ರದ ಜನ, ನನ್ನ ಪಕ್ಷದ ಹಿರಿಯ ನಾಯಕರು ಮತ್ತು ನನ್ನ ಜೊತೆಗೆ ನಾನು ಮಾತನಾಡಿದೆ. ನಾನು ಅಧಿಕೃತವಾಗಿ ಅಲ್ಲ. ನೈತಿಕವಾಗಿ ಕಾಂಗ್ರೆಸ್ ಸೇರಿದ್ದೇನೆ. ಸದಸ್ಯತ್ವವನ್ನು ನಾಳೆಯೂ ಪಡಯಬಹುದು. ಆದರೆ, ಮುಂದಿನ ಚುನಾವಣೆಯನ್ನು ಕಾಂಗ್ರೆಸ್ ಪಕ್ಷದ ಬಾವುಟ ಹಿಡಿದು ಎದುರಿಸುತ್ತೇನೆ. ಇನ್ನು ಹಾರ್ದಿಕ್ ಪಾಟೇಲ್ ಬಗ್ಗೆ ಹೇಳಬೇಕು. ನಾವು ಗುಜರಾತ್‌ನಲ್ಲಿ ಎಲ್ಲವನ್ನು ನೋಡಿದ್ದೇವೆ. 30 ಸಾವಿರ ಕೋಟಿಯ ಡ್ರಗ್ಸ್ ಬಂದ ಬಗ್ಗೆ ಯಾರು ಮಾತಾಡಿಲ್ಲ. ಗುಜರಾತ್‌ನಲ್ಲಿ ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡದೆ ನಶೆಯಲ್ಲಿ ಮುಳುಗಿಸಲಾಗ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೀಗಾಗಿ ಅಂಬೇಡ್ಕರ್ ಸಂವಿಧಾನ ಉಳಿಸಬೇಕಿದೆ. ರೈತ, ಕಾರ್ಮಿಕ, ಮಹಿಳೆ, ದಲಿತ, ಆದಿವಾಸಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತಪ್ಪಿಸಬೇಕಿದೆ. ಹೊಸ ಆಂದೋಲನ ನಡೆಯಬೇಕಿದೆ. ಅಂತಹ ಒಂದು ಸ್ಥಿತಿಯನ್ನು ನಾವು ಅದನ್ನು ಸೃಷ್ಟಿಸಬೇಕಿದೆ. ಎಲ್ಲರೂ ಈ ಮಿಷನ್‌ನಲ್ಲಿ ಸೇರಿ ಪ್ರಜಾಪ್ರಭುತ್ವ ಉಳಿಸಬೇಕಿದೆ. ಕಾಂಗ್ರೆಸ್ ಪಕ್ಷಕ್ಕೆ ಯುವಜನರು ಸೇರಬೇಕಿದೆ. ಯುವಕರನ್ನು ಸೇರಿಸಲು ನಾವು ಮೂವರು ಕಣಕ್ಕೆ ಇಳಿಯುತ್ತೇವೆ ಎಂದರು.

ಕಾಂಗ್ರೆಸ್ ಸೇರ್ಪಡೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಹಾರ್ದಿಕ್ ಪಟೇಲ್ ಸಮ್ಮುಖದಲ್ಲಿ ದೆಹಲಿಯ ಶಹೀದ್ ಅಜಮ್ ಭಗತ್ ಸಿಂಗ್ ಪಾರ್ಕ್‌ನಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಯುವ ನಾಯಕರು ಕೈಗೆ ಕೈ ಜೋಡಿಸಿ ಹೊಸ ರಾಜಕಾರಣಕ್ಕೆ ಮುಂದಾಗಿದ್ದಾರೆ.

ಕೆಂಪು ಧಿರಿಸಿನಲ್ಲಿ ಕನ್ಹಯ್ಯ ಕುಮಾರ್, ನೀಲಿ ಧಿರಿಸಿನಲ್ಲಿ ಜಿಗ್ನೇಶ್ ಮತ್ತು ಬಳಿ ಧಿರಿಸಿನಲ್ಲಿ ರಾಹುಲ್ ಗಾಂಧಿ ಕಾಣಿಸಿಕೊಂಡಿದ್ದಾರೆ. ಆ ಮೂಲಕ ತಮ್ಮ ಸಿದ್ದಾಂತಗಳನ್ನು ರೂಪಕಗಳ ಮೂಲಕ ಮುಂದಿಟ್ಟಿದ್ದಾರೆ. ಕನ್ಹಯ್ಯ ಕುಮಾರ್, ಜಿಗ್ನೇಶ್‌ ಮೇವಾನಿಯವರಿಗೆ ಅಂಬೇಡ್ಕರ್, ಗಾಂಧಿ ಮತ್ತು ಭಗತ್ ಸಿಂಗ್ ಚಿತ್ರಗಳಿರುವ ಫೋಟೊ ನೀಡಿ ಪಕ್ಷಕ್ಕೆ ಬರಮಾಡಿಕೊಳ್ಳಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಬಿಹಾರ ಕಾಂಗ್ರೆಸ್ ಅಧ್ಯಕ್ಷ ಮದನ್ ಮೋಹನ್, ಗುಜರಾತ್ ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ ಸೇರಿದಂತೆ ಇತರರು ಇದ್ದರು.


ಇದನ್ನೂ ಓದಿ: ಭಗತ್ ಸಿಂಗ್ ಜನ್ಮದಿನದಂದು ಕಾಂಗ್ರೆಸ್ ಸೇರಿದ ಕನ್ಹಯ್ಯ ಕುಮಾರ್‌, ಜಿಗ್ನೇಶ್ ಮೇವಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...