Homeಮುಖಪುಟಕಾಂಗ್ರೆಸ್ ಎಂಬುದು ಕೇವಲ ಒಂದು ಪಕ್ಷವಲ್ಲ, ಅದೊಂದು ಆದರ್ಶ: ಕನ್ಹಯ್ಯ ಕುಮಾರ್

ಕಾಂಗ್ರೆಸ್ ಎಂಬುದು ಕೇವಲ ಒಂದು ಪಕ್ಷವಲ್ಲ, ಅದೊಂದು ಆದರ್ಶ: ಕನ್ಹಯ್ಯ ಕುಮಾರ್

ಸಂವಿಧಾನದ ಮೇಲೆ ಹಲ್ಲೆಯಾಗಿದೆ. ರಸ್ತೆಗಳಲ್ಲಿ ಸಂವಿಧಾನ ಸುಡಲಾಗಿದೆ. ನಮ್ಮ ವಿಚಾರಗಳ ಮೇಲೆ, ನಮ್ಮ ಪ್ರಜಾಪ್ರಭುತ್ವದ ಮೇಲೆ ಹಲ್ಲೆಯಾಗುತ್ತಿದೆ. ಇದನ್ನು ತಡೆಯಲು ಕಾಂಗ್ರೆಸ್ ಸೇರುತ್ತಿದ್ದೇನೆ - ಜಿಗ್ನೇಶ್ ಮೇವಾನಿ

- Advertisement -
- Advertisement -

ಕಾಂಗ್ರೆಸ್ ಎಂಬುದು ಕೇವಲ ಒಂದು ಪಕ್ಷವಲ್ಲ, ಅದೊಂದು ಆದರ್ಶ. ಈ ದೇಶದ ಅತಿ ಪ್ರಾಚೀನ ಮತ್ತು ಪ್ರಜಾತಾಂತ್ರಿಕ ಪಕ್ಷವಾದ ಕಾಂಗ್ರೆಸ್ ಉಳಿಯದಿದ್ದರೆ, ಈ ದೇಶ ಉಳಿಯುವುದಿಲ್ಲ. ದೊಡ್ಡ ವಿಪಕ್ಷವನ್ನು ಉಳಿಸದಿದ್ದರೇ, ಚಿಕ್ಕ ಚಿಕ್ಕ ಪಕ್ಷಗಳು ಉಳಿಯುವುದಿಲ್ಲ ಎಂದು ಕಾಂಗ್ರೆಸ್ ಪಕ್ಷ ಸೇರಿದ ನಂತರ ಕನ್ಹಯ್ಯ ಕುಮಾರ್ ತಿಳಿಸಿದ್ದಾರೆ.

ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಘೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ನಮ್ಮ ದೇಶಕ್ಕೆ ಭಗತ್‌ ಸಿಂಗ್‌ ರವರ ಸಾಹಸ, ಅಂಬೇಡ್ಕರ್‌ರವರ ಸಮಾನತೆ ಮತ್ತು ಗಾಂಧೀಜಿಯವರ ಐಕ್ಯತೆ ಬೇಕಾಗಿದೆ ಎಂದರು.

ನಾನು ಹಿಂದೆ ಇದ್ದ ಪಕ್ಷಕ್ಕೆ ಅಭಾರಿಯಾಗಿದ್ದೇನೆ. ಅದು ನನಗೆ ಓದು-ಬರಹ ಕಲಿಸಿ ಬೆಳೆಸಿದೆ. ಹೋರಾಡುವುದನ್ನು ಕಲಿಸಿದೆ. ಅದರೊಟ್ಟಿಗೆ ನನ್ನ ಜೊತೆ ನಿಂತ ಲಕ್ಷಾಂತರ ಕಾರ್ಯಕರ್ತರಿಗೂ ಅಭಾರಿಯಾಗಿದ್ದೇನೆ ಎಂದು ಕನ್ಹಯ್ಯ ತಿಳಿಸಿದರು.

ದೇಶದಲ್ಲಿ ಇಂದು ವೈಚಾರಿಕ ಸಂಘ‍ರ್ಷ ನಡೆಯುತ್ತಿದೆ. ಇದಕ್ಕೆ ಕಾಂಗ್ರೆಸ್ ನಾಯಕತ್ವ ನೀಡುತ್ತದೆ. ಆರಾಮ ಖುರ್ಚಿಯಲ್ಲಿ ಕೂತು ಮಾತಾಡುವ ಸಮಯ ಇದಲ್ಲ. ಇದು ತುರ್ತು ಸಂದರ್ಭವಾಗಿದೆ. ಹಾಗಾಗಿ ಈ ದೇಶದ ಕೋಟ್ಯಾಂತರ ಯುವಕರ ಭವಿಷ್ಯವನ್ನು ರಕ್ಷಿಸುವುದಕ್ಕಾಗಿ ನಾನು ಕಾಂಗ್ರೆಸ್ ಸೇರುತ್ತಿದ್ದೇನೆ ಎಂದಿದ್ದಾರೆ.

ನಮ್ಮ ಪರಿವಾರವನ್ನು ಬಿಟ್ಟು ದೇಶವನ್ನು ಉಳಿಸಲು ಸಾಧ್ಯವಿಲ್ಲ. ಮನೆ, ಮಠದ ಜೊತೆಗೆ ಇದ್ದು ಇಂದು ಪರಿವಾರ ಕಟ್ಟಬೇಕಿದೆ. ಪರಿವಾರವನ್ನು ಬಿಟ್ಟು ಕಟ್ಟುವ ಪರಿವಾರ ಹೇಗಾಗುತ್ತದೇ…? ಕಸ್ತೂರ ಬಾ ಬಿಟ್ಟು ಹೇಗೆ ಗಾಂಧಿ ಹೋರಾಡಲಿಲ್ಲವೋ ಹಾಗೆ. ಅಂಬೇಡ್ಕರ್ ಪರಿವಾರ ಬಿಟ್ಟು ಬರಲಿಲ್ಲ. ದೇಶದ ಮಹನೀಯರೆಲ್ಲ ಪರಿವಾರದೊಟ್ಟಿಗೆ ಇದ್ದು ಹೋರಾಡಿದ್ದಾರೆ ಎಂದರು.

ನಾನು ಕ್ರಾಂತಿಕಾರಿ ಹುತಾತ್ಮ ಭಗತ್‌ ಸಿಂಗ್‌ರವರ ಧೈರ್ಯ ಮತ್ತು ತ್ಯಾಗವನ್ನು ಇಲ್ಲಿ ಸ್ಮರಿಸುತ್ತೇನೆ. ಅದೇ ಸಂದರ್ಭದಲ್ಲಿ ಇಂದು ನಮ್ಮ ಜಿಲ್ಲೆಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಈ ಸಂದರ್ಭದಲ್ಲಿ ನಾನು ಈ ದುರ್ಘಟನೆಗೆ ಸಂತಾಪ ವ್ಯಕ್ತಪಡಿಸುತ್ತೇನೆ ಎಂದು ಕನ್ಹಯ್ಯ ಕುಮಾರ್ ತಿಳಿಸಿದ್ದಾರೆ.

ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಮಾತನಾಡಿ, ಇದು ಗುಜರಾತ್‌ನಿಂದ ಶುರುವಾದ ಕಥೆ. ನಮ್ಮ ಸಂವಿಧಾನದ ಮೇಲೆ ಹಲ್ಲೆಯಾಗಿದೆ. ರಸ್ತೆಗಳಲ್ಲಿ ಸಂವಿಧಾನ ಸುಡಲಾಗಿದೆ. ನಮ್ಮ ವಿಚಾರಗಳ ಮೇಲೆ, ನಮ್ಮ ಪ್ರಜಾಪ್ರಭುತ್ವದ ಮೇಲೆ ಹಲ್ಲೆಯಾಗುತ್ತಿದೆ. ಒಬ್ಬ ಶಾಸಕನಾಗಿ ಅಲ್ಲ, ಒಬ್ಬ ನಾಗರಿಕನಾಗಿ ಕೇಳುತ್ತೇನೆ ಈ ಸಮಯದಲ್ಲಿ ನಾನು ಏನು ಮಾಡಬೇಕು..? ಅದಕ್ಕೆ ನಾನು ನಮ್ಮ ಸಂವಿಧಾನ ಉಳಿಸುವವರ ಜೊತೆಗೆ ಬೆರೆಯಬೇಕು. ಇದಕ್ಕಾಗಿ ನಾವು ಸ್ವಾತಂತ್ರಕ್ಕಾಗಿ ಹೋರಾಡಿದ ದೇಶದ ಹಳೆಯ ಪಕ್ಷವನ್ನು ಸೇರಬೇಕು ಎಂದರು.

ಹೀಗಾಗಿ ನಾನು ನನ್ನ ಕ್ಷೇತ್ರದ ಜನ, ನನ್ನ ಪಕ್ಷದ ಹಿರಿಯ ನಾಯಕರು ಮತ್ತು ನನ್ನ ಜೊತೆಗೆ ನಾನು ಮಾತನಾಡಿದೆ. ನಾನು ಅಧಿಕೃತವಾಗಿ ಅಲ್ಲ. ನೈತಿಕವಾಗಿ ಕಾಂಗ್ರೆಸ್ ಸೇರಿದ್ದೇನೆ. ಸದಸ್ಯತ್ವವನ್ನು ನಾಳೆಯೂ ಪಡಯಬಹುದು. ಆದರೆ, ಮುಂದಿನ ಚುನಾವಣೆಯನ್ನು ಕಾಂಗ್ರೆಸ್ ಪಕ್ಷದ ಬಾವುಟ ಹಿಡಿದು ಎದುರಿಸುತ್ತೇನೆ. ಇನ್ನು ಹಾರ್ದಿಕ್ ಪಾಟೇಲ್ ಬಗ್ಗೆ ಹೇಳಬೇಕು. ನಾವು ಗುಜರಾತ್‌ನಲ್ಲಿ ಎಲ್ಲವನ್ನು ನೋಡಿದ್ದೇವೆ. 30 ಸಾವಿರ ಕೋಟಿಯ ಡ್ರಗ್ಸ್ ಬಂದ ಬಗ್ಗೆ ಯಾರು ಮಾತಾಡಿಲ್ಲ. ಗುಜರಾತ್‌ನಲ್ಲಿ ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡದೆ ನಶೆಯಲ್ಲಿ ಮುಳುಗಿಸಲಾಗ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೀಗಾಗಿ ಅಂಬೇಡ್ಕರ್ ಸಂವಿಧಾನ ಉಳಿಸಬೇಕಿದೆ. ರೈತ, ಕಾರ್ಮಿಕ, ಮಹಿಳೆ, ದಲಿತ, ಆದಿವಾಸಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತಪ್ಪಿಸಬೇಕಿದೆ. ಹೊಸ ಆಂದೋಲನ ನಡೆಯಬೇಕಿದೆ. ಅಂತಹ ಒಂದು ಸ್ಥಿತಿಯನ್ನು ನಾವು ಅದನ್ನು ಸೃಷ್ಟಿಸಬೇಕಿದೆ. ಎಲ್ಲರೂ ಈ ಮಿಷನ್‌ನಲ್ಲಿ ಸೇರಿ ಪ್ರಜಾಪ್ರಭುತ್ವ ಉಳಿಸಬೇಕಿದೆ. ಕಾಂಗ್ರೆಸ್ ಪಕ್ಷಕ್ಕೆ ಯುವಜನರು ಸೇರಬೇಕಿದೆ. ಯುವಕರನ್ನು ಸೇರಿಸಲು ನಾವು ಮೂವರು ಕಣಕ್ಕೆ ಇಳಿಯುತ್ತೇವೆ ಎಂದರು.

ಕಾಂಗ್ರೆಸ್ ಸೇರ್ಪಡೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಹಾರ್ದಿಕ್ ಪಟೇಲ್ ಸಮ್ಮುಖದಲ್ಲಿ ದೆಹಲಿಯ ಶಹೀದ್ ಅಜಮ್ ಭಗತ್ ಸಿಂಗ್ ಪಾರ್ಕ್‌ನಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಯುವ ನಾಯಕರು ಕೈಗೆ ಕೈ ಜೋಡಿಸಿ ಹೊಸ ರಾಜಕಾರಣಕ್ಕೆ ಮುಂದಾಗಿದ್ದಾರೆ.

ಕೆಂಪು ಧಿರಿಸಿನಲ್ಲಿ ಕನ್ಹಯ್ಯ ಕುಮಾರ್, ನೀಲಿ ಧಿರಿಸಿನಲ್ಲಿ ಜಿಗ್ನೇಶ್ ಮತ್ತು ಬಳಿ ಧಿರಿಸಿನಲ್ಲಿ ರಾಹುಲ್ ಗಾಂಧಿ ಕಾಣಿಸಿಕೊಂಡಿದ್ದಾರೆ. ಆ ಮೂಲಕ ತಮ್ಮ ಸಿದ್ದಾಂತಗಳನ್ನು ರೂಪಕಗಳ ಮೂಲಕ ಮುಂದಿಟ್ಟಿದ್ದಾರೆ. ಕನ್ಹಯ್ಯ ಕುಮಾರ್, ಜಿಗ್ನೇಶ್‌ ಮೇವಾನಿಯವರಿಗೆ ಅಂಬೇಡ್ಕರ್, ಗಾಂಧಿ ಮತ್ತು ಭಗತ್ ಸಿಂಗ್ ಚಿತ್ರಗಳಿರುವ ಫೋಟೊ ನೀಡಿ ಪಕ್ಷಕ್ಕೆ ಬರಮಾಡಿಕೊಳ್ಳಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಬಿಹಾರ ಕಾಂಗ್ರೆಸ್ ಅಧ್ಯಕ್ಷ ಮದನ್ ಮೋಹನ್, ಗುಜರಾತ್ ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ ಸೇರಿದಂತೆ ಇತರರು ಇದ್ದರು.


ಇದನ್ನೂ ಓದಿ: ಭಗತ್ ಸಿಂಗ್ ಜನ್ಮದಿನದಂದು ಕಾಂಗ್ರೆಸ್ ಸೇರಿದ ಕನ್ಹಯ್ಯ ಕುಮಾರ್‌, ಜಿಗ್ನೇಶ್ ಮೇವಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...