Homeಮುಖಪುಟಕಾಂಗ್ರೆಸ್ ಎಂಬುದು ಕೇವಲ ಒಂದು ಪಕ್ಷವಲ್ಲ, ಅದೊಂದು ಆದರ್ಶ: ಕನ್ಹಯ್ಯ ಕುಮಾರ್

ಕಾಂಗ್ರೆಸ್ ಎಂಬುದು ಕೇವಲ ಒಂದು ಪಕ್ಷವಲ್ಲ, ಅದೊಂದು ಆದರ್ಶ: ಕನ್ಹಯ್ಯ ಕುಮಾರ್

ಸಂವಿಧಾನದ ಮೇಲೆ ಹಲ್ಲೆಯಾಗಿದೆ. ರಸ್ತೆಗಳಲ್ಲಿ ಸಂವಿಧಾನ ಸುಡಲಾಗಿದೆ. ನಮ್ಮ ವಿಚಾರಗಳ ಮೇಲೆ, ನಮ್ಮ ಪ್ರಜಾಪ್ರಭುತ್ವದ ಮೇಲೆ ಹಲ್ಲೆಯಾಗುತ್ತಿದೆ. ಇದನ್ನು ತಡೆಯಲು ಕಾಂಗ್ರೆಸ್ ಸೇರುತ್ತಿದ್ದೇನೆ - ಜಿಗ್ನೇಶ್ ಮೇವಾನಿ

- Advertisement -
- Advertisement -

ಕಾಂಗ್ರೆಸ್ ಎಂಬುದು ಕೇವಲ ಒಂದು ಪಕ್ಷವಲ್ಲ, ಅದೊಂದು ಆದರ್ಶ. ಈ ದೇಶದ ಅತಿ ಪ್ರಾಚೀನ ಮತ್ತು ಪ್ರಜಾತಾಂತ್ರಿಕ ಪಕ್ಷವಾದ ಕಾಂಗ್ರೆಸ್ ಉಳಿಯದಿದ್ದರೆ, ಈ ದೇಶ ಉಳಿಯುವುದಿಲ್ಲ. ದೊಡ್ಡ ವಿಪಕ್ಷವನ್ನು ಉಳಿಸದಿದ್ದರೇ, ಚಿಕ್ಕ ಚಿಕ್ಕ ಪಕ್ಷಗಳು ಉಳಿಯುವುದಿಲ್ಲ ಎಂದು ಕಾಂಗ್ರೆಸ್ ಪಕ್ಷ ಸೇರಿದ ನಂತರ ಕನ್ಹಯ್ಯ ಕುಮಾರ್ ತಿಳಿಸಿದ್ದಾರೆ.

ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಘೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ನಮ್ಮ ದೇಶಕ್ಕೆ ಭಗತ್‌ ಸಿಂಗ್‌ ರವರ ಸಾಹಸ, ಅಂಬೇಡ್ಕರ್‌ರವರ ಸಮಾನತೆ ಮತ್ತು ಗಾಂಧೀಜಿಯವರ ಐಕ್ಯತೆ ಬೇಕಾಗಿದೆ ಎಂದರು.

ನಾನು ಹಿಂದೆ ಇದ್ದ ಪಕ್ಷಕ್ಕೆ ಅಭಾರಿಯಾಗಿದ್ದೇನೆ. ಅದು ನನಗೆ ಓದು-ಬರಹ ಕಲಿಸಿ ಬೆಳೆಸಿದೆ. ಹೋರಾಡುವುದನ್ನು ಕಲಿಸಿದೆ. ಅದರೊಟ್ಟಿಗೆ ನನ್ನ ಜೊತೆ ನಿಂತ ಲಕ್ಷಾಂತರ ಕಾರ್ಯಕರ್ತರಿಗೂ ಅಭಾರಿಯಾಗಿದ್ದೇನೆ ಎಂದು ಕನ್ಹಯ್ಯ ತಿಳಿಸಿದರು.

ದೇಶದಲ್ಲಿ ಇಂದು ವೈಚಾರಿಕ ಸಂಘ‍ರ್ಷ ನಡೆಯುತ್ತಿದೆ. ಇದಕ್ಕೆ ಕಾಂಗ್ರೆಸ್ ನಾಯಕತ್ವ ನೀಡುತ್ತದೆ. ಆರಾಮ ಖುರ್ಚಿಯಲ್ಲಿ ಕೂತು ಮಾತಾಡುವ ಸಮಯ ಇದಲ್ಲ. ಇದು ತುರ್ತು ಸಂದರ್ಭವಾಗಿದೆ. ಹಾಗಾಗಿ ಈ ದೇಶದ ಕೋಟ್ಯಾಂತರ ಯುವಕರ ಭವಿಷ್ಯವನ್ನು ರಕ್ಷಿಸುವುದಕ್ಕಾಗಿ ನಾನು ಕಾಂಗ್ರೆಸ್ ಸೇರುತ್ತಿದ್ದೇನೆ ಎಂದಿದ್ದಾರೆ.

ನಮ್ಮ ಪರಿವಾರವನ್ನು ಬಿಟ್ಟು ದೇಶವನ್ನು ಉಳಿಸಲು ಸಾಧ್ಯವಿಲ್ಲ. ಮನೆ, ಮಠದ ಜೊತೆಗೆ ಇದ್ದು ಇಂದು ಪರಿವಾರ ಕಟ್ಟಬೇಕಿದೆ. ಪರಿವಾರವನ್ನು ಬಿಟ್ಟು ಕಟ್ಟುವ ಪರಿವಾರ ಹೇಗಾಗುತ್ತದೇ…? ಕಸ್ತೂರ ಬಾ ಬಿಟ್ಟು ಹೇಗೆ ಗಾಂಧಿ ಹೋರಾಡಲಿಲ್ಲವೋ ಹಾಗೆ. ಅಂಬೇಡ್ಕರ್ ಪರಿವಾರ ಬಿಟ್ಟು ಬರಲಿಲ್ಲ. ದೇಶದ ಮಹನೀಯರೆಲ್ಲ ಪರಿವಾರದೊಟ್ಟಿಗೆ ಇದ್ದು ಹೋರಾಡಿದ್ದಾರೆ ಎಂದರು.

ನಾನು ಕ್ರಾಂತಿಕಾರಿ ಹುತಾತ್ಮ ಭಗತ್‌ ಸಿಂಗ್‌ರವರ ಧೈರ್ಯ ಮತ್ತು ತ್ಯಾಗವನ್ನು ಇಲ್ಲಿ ಸ್ಮರಿಸುತ್ತೇನೆ. ಅದೇ ಸಂದರ್ಭದಲ್ಲಿ ಇಂದು ನಮ್ಮ ಜಿಲ್ಲೆಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಈ ಸಂದರ್ಭದಲ್ಲಿ ನಾನು ಈ ದುರ್ಘಟನೆಗೆ ಸಂತಾಪ ವ್ಯಕ್ತಪಡಿಸುತ್ತೇನೆ ಎಂದು ಕನ್ಹಯ್ಯ ಕುಮಾರ್ ತಿಳಿಸಿದ್ದಾರೆ.

ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಮಾತನಾಡಿ, ಇದು ಗುಜರಾತ್‌ನಿಂದ ಶುರುವಾದ ಕಥೆ. ನಮ್ಮ ಸಂವಿಧಾನದ ಮೇಲೆ ಹಲ್ಲೆಯಾಗಿದೆ. ರಸ್ತೆಗಳಲ್ಲಿ ಸಂವಿಧಾನ ಸುಡಲಾಗಿದೆ. ನಮ್ಮ ವಿಚಾರಗಳ ಮೇಲೆ, ನಮ್ಮ ಪ್ರಜಾಪ್ರಭುತ್ವದ ಮೇಲೆ ಹಲ್ಲೆಯಾಗುತ್ತಿದೆ. ಒಬ್ಬ ಶಾಸಕನಾಗಿ ಅಲ್ಲ, ಒಬ್ಬ ನಾಗರಿಕನಾಗಿ ಕೇಳುತ್ತೇನೆ ಈ ಸಮಯದಲ್ಲಿ ನಾನು ಏನು ಮಾಡಬೇಕು..? ಅದಕ್ಕೆ ನಾನು ನಮ್ಮ ಸಂವಿಧಾನ ಉಳಿಸುವವರ ಜೊತೆಗೆ ಬೆರೆಯಬೇಕು. ಇದಕ್ಕಾಗಿ ನಾವು ಸ್ವಾತಂತ್ರಕ್ಕಾಗಿ ಹೋರಾಡಿದ ದೇಶದ ಹಳೆಯ ಪಕ್ಷವನ್ನು ಸೇರಬೇಕು ಎಂದರು.

ಹೀಗಾಗಿ ನಾನು ನನ್ನ ಕ್ಷೇತ್ರದ ಜನ, ನನ್ನ ಪಕ್ಷದ ಹಿರಿಯ ನಾಯಕರು ಮತ್ತು ನನ್ನ ಜೊತೆಗೆ ನಾನು ಮಾತನಾಡಿದೆ. ನಾನು ಅಧಿಕೃತವಾಗಿ ಅಲ್ಲ. ನೈತಿಕವಾಗಿ ಕಾಂಗ್ರೆಸ್ ಸೇರಿದ್ದೇನೆ. ಸದಸ್ಯತ್ವವನ್ನು ನಾಳೆಯೂ ಪಡಯಬಹುದು. ಆದರೆ, ಮುಂದಿನ ಚುನಾವಣೆಯನ್ನು ಕಾಂಗ್ರೆಸ್ ಪಕ್ಷದ ಬಾವುಟ ಹಿಡಿದು ಎದುರಿಸುತ್ತೇನೆ. ಇನ್ನು ಹಾರ್ದಿಕ್ ಪಾಟೇಲ್ ಬಗ್ಗೆ ಹೇಳಬೇಕು. ನಾವು ಗುಜರಾತ್‌ನಲ್ಲಿ ಎಲ್ಲವನ್ನು ನೋಡಿದ್ದೇವೆ. 30 ಸಾವಿರ ಕೋಟಿಯ ಡ್ರಗ್ಸ್ ಬಂದ ಬಗ್ಗೆ ಯಾರು ಮಾತಾಡಿಲ್ಲ. ಗುಜರಾತ್‌ನಲ್ಲಿ ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡದೆ ನಶೆಯಲ್ಲಿ ಮುಳುಗಿಸಲಾಗ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೀಗಾಗಿ ಅಂಬೇಡ್ಕರ್ ಸಂವಿಧಾನ ಉಳಿಸಬೇಕಿದೆ. ರೈತ, ಕಾರ್ಮಿಕ, ಮಹಿಳೆ, ದಲಿತ, ಆದಿವಾಸಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತಪ್ಪಿಸಬೇಕಿದೆ. ಹೊಸ ಆಂದೋಲನ ನಡೆಯಬೇಕಿದೆ. ಅಂತಹ ಒಂದು ಸ್ಥಿತಿಯನ್ನು ನಾವು ಅದನ್ನು ಸೃಷ್ಟಿಸಬೇಕಿದೆ. ಎಲ್ಲರೂ ಈ ಮಿಷನ್‌ನಲ್ಲಿ ಸೇರಿ ಪ್ರಜಾಪ್ರಭುತ್ವ ಉಳಿಸಬೇಕಿದೆ. ಕಾಂಗ್ರೆಸ್ ಪಕ್ಷಕ್ಕೆ ಯುವಜನರು ಸೇರಬೇಕಿದೆ. ಯುವಕರನ್ನು ಸೇರಿಸಲು ನಾವು ಮೂವರು ಕಣಕ್ಕೆ ಇಳಿಯುತ್ತೇವೆ ಎಂದರು.

ಕಾಂಗ್ರೆಸ್ ಸೇರ್ಪಡೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಹಾರ್ದಿಕ್ ಪಟೇಲ್ ಸಮ್ಮುಖದಲ್ಲಿ ದೆಹಲಿಯ ಶಹೀದ್ ಅಜಮ್ ಭಗತ್ ಸಿಂಗ್ ಪಾರ್ಕ್‌ನಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಯುವ ನಾಯಕರು ಕೈಗೆ ಕೈ ಜೋಡಿಸಿ ಹೊಸ ರಾಜಕಾರಣಕ್ಕೆ ಮುಂದಾಗಿದ್ದಾರೆ.

ಕೆಂಪು ಧಿರಿಸಿನಲ್ಲಿ ಕನ್ಹಯ್ಯ ಕುಮಾರ್, ನೀಲಿ ಧಿರಿಸಿನಲ್ಲಿ ಜಿಗ್ನೇಶ್ ಮತ್ತು ಬಳಿ ಧಿರಿಸಿನಲ್ಲಿ ರಾಹುಲ್ ಗಾಂಧಿ ಕಾಣಿಸಿಕೊಂಡಿದ್ದಾರೆ. ಆ ಮೂಲಕ ತಮ್ಮ ಸಿದ್ದಾಂತಗಳನ್ನು ರೂಪಕಗಳ ಮೂಲಕ ಮುಂದಿಟ್ಟಿದ್ದಾರೆ. ಕನ್ಹಯ್ಯ ಕುಮಾರ್, ಜಿಗ್ನೇಶ್‌ ಮೇವಾನಿಯವರಿಗೆ ಅಂಬೇಡ್ಕರ್, ಗಾಂಧಿ ಮತ್ತು ಭಗತ್ ಸಿಂಗ್ ಚಿತ್ರಗಳಿರುವ ಫೋಟೊ ನೀಡಿ ಪಕ್ಷಕ್ಕೆ ಬರಮಾಡಿಕೊಳ್ಳಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಬಿಹಾರ ಕಾಂಗ್ರೆಸ್ ಅಧ್ಯಕ್ಷ ಮದನ್ ಮೋಹನ್, ಗುಜರಾತ್ ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ ಸೇರಿದಂತೆ ಇತರರು ಇದ್ದರು.


ಇದನ್ನೂ ಓದಿ: ಭಗತ್ ಸಿಂಗ್ ಜನ್ಮದಿನದಂದು ಕಾಂಗ್ರೆಸ್ ಸೇರಿದ ಕನ್ಹಯ್ಯ ಕುಮಾರ್‌, ಜಿಗ್ನೇಶ್ ಮೇವಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...