Homeಕರ್ನಾಟಕಬೆಲೆ ಏರಿಕೆಗೆ ಕಾಂಗ್ರೆಸ್ ಕಾರಣವಲ್ಲ, ಬಹಿರಂಗ ಚರ್ಚೆಗೆ ನಾವು ಸಿದ್ಧ: ಉಗ್ರಪ್ಪ ಸವಾಲು

ಬೆಲೆ ಏರಿಕೆಗೆ ಕಾಂಗ್ರೆಸ್ ಕಾರಣವಲ್ಲ, ಬಹಿರಂಗ ಚರ್ಚೆಗೆ ನಾವು ಸಿದ್ಧ: ಉಗ್ರಪ್ಪ ಸವಾಲು

ಈ ದೇಶ ಕಂಡ ಅತ್ಯಂತ ಸುಳ್ಳುಗಾರ, ಜನರ ದಾರಿ ತಪ್ಪಿಸುವ ಪ್ರಧಾನಿ ಎಂದರೆ ಅದು ಮೋದಿ. ಈ ದೇಶ ಕಂಡ ಅತ್ಯಂತ ಭ್ರಷ್ಟ ಪ್ರಧಾನಿ ಮೋದಿ- ವಿ.ಎಸ್.ಉಗ್ರಪ್ಪ

- Advertisement -
- Advertisement -

ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಗೆ ಕಾಂಗ್ರೆಸ್ ನೀಡಿದ ತೈಲ ಬಾಂಡ್ ಗಳೇ ಕಾರಣ ಎಂದು ಹೇಳುತ್ತಿದ್ದಾರೆ. ಈ ವಿಚಾರದಲ್ಲಿ ಬಹಿರಂಗ ಚರ್ಚೆ ಮಾಡಲು ಸಿದ್ಧವಿದ್ದೇವೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸವಾಲು ಹಾಕಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬ್ಯಾರೆಲ್ ಕಚ್ಚಾತೈಲ ಬೆಲೆ 120-130 ಡಾಲರ್ ಇದ್ದಾಗ ಜನರಿಗೆ ಹೊರೆ ಹೆಚ್ಚಾಗಬಾರದು ಎಂದು ಸಬ್ಸಿಡಿ ಮೂಲಕ ಹೊರೆ ಇಳಿಸಲು ಕಾಂಗ್ರೆಸ್ 1.34 ಲಕ್ಷ ಕೋಟಿಯಷ್ಟು ತೈಲ ಬಾಂಡ್ ನೀಡಿದ್ದು ನಿಜ. ನಾವು ಜನರ ಒತ್ತಡ ಕಡಿಮೆ ಮಾಡಲು ಇದನ್ನು ಜಾರಿಗೆ ತಂದಿದ್ದೆವೆಯೇ ಹೊರತು ಕಿಕ್ ಬ್ಯಾಕ್ ಪಡೆಯಲು ಇದನ್ನು ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ವರ್ಷ 10 ಸಾವಿರ ಕೋಟಿಯಷ್ಟು ಹಣವನ್ನು ಈ ತೈಲ ಬಾಂಡ್ ಗೆ ಪಾವತಿ ಮಾಡಬೇಕಾಗಿದೆ. ಆದರೆ ಈ ವರ್ಷ ಏಪ್ರಿಲ್- ಜುಲೈ ಅವಧಿಯಲ್ಲಿ ಕೇಂದ್ರ ಸರ್ಕಾರ ತೆರಿಗೆ ಮೂಲಕ 32,492 ಕೋಟಿಯಷ್ಟು ಹಣ ಸಂಗ್ರಹಿಸಿದೆ. ಬಿಜೆಪಿ ಸರ್ಕಾರ ಕಳೆದ 7 ವರ್ಷಗಳಲ್ಲಿ ಈ ಇಂಧನಗಳ ಮೇಲಿನ ತೆರಿಗೆಯಿಂದ 23 ಲಕ್ಷ ಕೋಟಿ ರೂ.ಗಳನ್ನು ಲೂಟಿ ಮಾಡಿದ್ದಾರೆ. ಕಷ್ಟದ ಸಮಯದಲ್ಲಿ ನಾವು ಬಾಂಡ್ ಮೂಲಕ ಹಣ ಸಂಗ್ರಹಿಸಿ ಜನರ ಮೇಲೆ ಹೊರೆ ಇಳಿಸಲು ಕಾಂಗ್ರೆಸ್ ಪ್ರಯತ್ನಿಸಿದರೆ, ಬಿಜೆಪಿ ಕಚ್ಚಾತೈಲ ಬೆಲೆ ಕಡಿಮೆ ಇದ್ದರೂ ಅದರ ಪ್ರಯೋಜನ ಜನರಿಗೆ ಸಿಗದಂತೆ ಮಾಡಿದೆ. ಆ ಮೂಲಕ ಪೆಟ್ರೋಲ್ ದರ 105, ಡೀಸೆಲ್ ದರ 94 ಹಾಗೂ ಅಡುಗೆ ಅನಿಲ 887 ರೂ. ಆಗಿದೆ. ಇದೇ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಣ ವ್ಯತ್ಯಾಸ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಹೇಳುವ ಅಚ್ಛೇ ದಿನ್ ಇದೇನಾ? ಜನರ ಬದುಕು ದುರ್ಬರ ಮಾಡುವುದೇ ಬಿಜೆಪಿಯ ಅಚ್ಛೇ ದಿನ. ದೇಶದ ಜನರ ಭಾವನೆಯಲ್ಲಿ ಪ್ರಧಾನಿ ಇಮೇಜ್ ಕಡಿಮೆಯಾಗಿದೆ. ಜಾಗತಿಕ ಸಂಸ್ಥೆಗಳು ಅಭಿವೃದ್ಧಿಶೀಲ ರಾಷ್ಟ್ರಗಳ ಪಟ್ಟಿಯಿಂದ ಭಾರತವನ್ನು ಕೈಬಿಟ್ಟಿವೆ. ದೇಶದ ಜಿಡಿಪಿ ಋಣಾತ್ಮಕವಾಗಿ ಸಾಗಿರುವ ಕಾರಣದಿಂದ ಈ ನಿರ್ಧಾರಕ್ಕೆ ಬಂದಿದ್ದು, ಇದು ದೇಶಕ್ಕೆ ಆಗಿರುವ ಅಪಮಾನ, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ದುರಾಡಳಿತವೇ ಕಾರಣ ಎಂದು ಆರೋಪಿಸಿದ್ದಾರೆ.

ರಾಜ್ಯದಿಂದ ಸಂಗ್ರಹಿಸಲಾಗುವ ಜಿಎಸ್‌ಟಿ 2018-19ರಲ್ಲಿ 10,754 ಕೋಟಿ ರೂ.ಗಳಿದ್ದು, 2029-20ರಲ್ಲಿ 16,620 ಕೋಟಿ ರೂ.ಗಳಷ್ಟಾಗಿದೆ. 2020-21ರಲ್ಲಿ 12 ಸಾವಿರ ಕೋಟಿ ರೂ., 2021-22ರಲ್ಲಿ 8,542.17 ಕೋಟಿ ರೂ.ಗಳಷ್ಟು ಜಿಎಸ್‌ಟಿ ಪರಿಹಾರ ಬರಬೇಕು. ಏಪ್ರಿಲ್- ಮೇ ತಿಂಗಳಲ್ಲೇ 5,500 ಕೋಟಿ ರೂ. ಪರಿಹಾರ ಬರಬೇಕು. ಆದರೆ ಕೇಂದ್ರ ಸರ್ಕಾರ ಕಳೆದ ಮಾರ್ಚ್ 27ರಂದು 2970 ಕೋಟಿ ಮಾತ್ರ. ಇನ್ನು 11 ಸಾವಿರ ಕೋಟಿಗೂ ಹೆಚ್ಚು ಹಣ ನೀಡಬೇಕಿದೆ. ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸರ್ಕಾರದ ಸ್ವಚ್ಛ ಭಾರತ, ಪಿಎಂಜಿಎಸ್, ಪಿಎಂ ಅವಾಸ್ ಯೋಜನೆ, ರಾಷ್ಟ್ರೀಯ ಸುಸ್ಥಿರ ಕೃಷಿ, ಪ್ರಧಾನಮಂತ್ರಿ ಕೃಷಿ ಸಂಚಯ್ ಯೋಜನೆ, ವಿದ್ಯಾರ್ಥಿ ವೇತನ ಸೇರಿದಂತೆ ಪ್ರಮುಖ ಯೋಜನಗೆಳಿಗೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ ನಯಾಪೈಸೆ ಅನುದಾನ ರಾಜ್ಯಕ್ಕೆ ಬಿಡುಗಡೆಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ಪ್ರಮುಖ ವಲಯಗಳಾದ ಗ್ರಾಮೀಣಾಭಿವೃದ್ಧಿ, ವಸತಿ, ಕೃಷಿ ಸೇರಿದಂತೆ ಇತರೆ ವಲಯಗಳಿಗೆ 3,890 ಕೋಟಿ ರೂ. ಅನುದಾನ ಬೇಕಾಗಿದೆ. ಅದರಲ್ಲಿ ಕೇಂದ್ರದ ಪಾಲು 2,410 ಕೋಟಿ ರೂ., ರಾಜ್ಯದ ಪಾಲು 1,479 ಕೋಟಿ ರೂ. ಇದೆ. ಇದರಲ್ಲಿ ಕೇಂದ್ರದಿಂದ ಒಂದು ಪೈಸೆಯೂ ಕೇಂದ್ರ ಸರ್ಕಾರದಿಂದ ನೀಡುತ್ತಿಲ್ಲ. ಪಿಎಂಜಿಎಸ್ ವೈ ಒಂದೇ ಯೋಜನೆಯಲ್ಲಿ 900 ಕೋಟಿ ರೂ., ಸ್ವಚ್ಛ ಭಾರತ ಯೋಜನೆಯಲ್ಲಿ 290 ಕೋಟಿ ರೂ., ಅವಾಸ್ ಯೋಜನೆಯಲ್ಲಿ 300 ಕೋಟಿ ರೂ., ಸುಸ್ಥಿರ ಯೋಜನೆಗೆ 117 ಕೋಟಿ ರೂ., ಆಹಾರ ಭದ್ರತೆಗೆ 98.3 ಕೋಟಿ ರೂ., ಕೃಷಿ ಸಂಚಯ್ ಯೋಜನೆಗೆ 270 ಕೋಟಿ ರೂ. ನೀಡಬೇಕಿದೆ. ಕೊಟ್ಟಿಲ್ಲ ಯಾಕೆ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಜನರಿಗೆ ತೆರಿಗೆ ಹೆಸರಲ್ಲಿ ಸುಲಿಗೆ ಮಾಡುತ್ತಿದ್ದಾರೆ. ಮತ್ತೊಂದೆಡೆ ನಮ್ಮ ಜಿಎಸ್ಟಿ ಪಾಲು ನೀಡುತ್ತಿಲ್ಲ. ಈ ಪ್ರಧಾನಿಯನ್ನು ಏನೆಂದು ಕರೆಯಬೇಕು? ಈ ದೇಶ ಕಂಡ ಅತ್ಯಂತ ಸುಳ್ಳುಗಾರ, ಜನರ ದಾರಿ ತಪ್ಪಿಸುವ ಪ್ರಧಾನಿ ಎಂದರೆ ಅದು ಮೋದಿ. ಈ ದೇಶ ಕಂಡ ಅತ್ಯಂತ ಭ್ರಷ್ಟ ಪ್ರಧಾನಿ ಮೋದಿ. ರಾಜೀವ್ ಗಾಂಧಿ ಅವರು ಪ್ರಧಾನಿ ಆಗಿದ್ದಾಗ ಬೋಫೋರ್ಸ್ ನಲ್ಲಿ 63 ಕೋಟಿ ರೂ., ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ 2ಜಿ, ಕಲ್ಲಿದ್ದಲಿನಲ್ಲಿ 1.74 ಲಕ್ಷ ಕೋಟಿ ಹಗರಣ ಆಗಿದೆ ಎಂದು ಆರೋಪ ಮಾಡಿದ್ದರು. ನಾವು ತಪ್ಪು ಮಾಡಿಲ್ಲ ಎಂಬ ವಿಶ್ವಾಸದಿಂದ ತನಿಖೆಗೆ ಆದೇಶ ಮಾಡಿದ್ದೆವು. ಇವರು ಅಧಿಕಾರಕ್ಕೆ ಬಂದು 7 ವರ್ಷವಾಗಿದೆ ನಾವು ಹಗರಣ ಮಾಡಿದ್ದರೆ ನಮ್ಮನ್ನು ಜೈಲಿಗೆ ಹಾಕಬೇಕಿತ್ತು. ಏಕೆ ಹಾಕಿಲ್ಲ ಎಂದರೆ ಭ್ರಷ್ಟಾಚಾರ ನಡೆದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ‘ಅಧಿಕಾರ ದುರ್ಬಳಕೆಯಿಂದ ಬಿಜೆಪಿಗೆ 114 ಸ್ಥಾನ, ಪ್ರಚಾರವಿಲ್ಲದೆಯೂ ಕಾಂಗ್ರೆಸ್‌ಗೆ 100 ಸ್ಥಾನ’

ಈ ಸರ್ಕಾರ ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ 39,600 ಕೋಟಿ ಕಿಕ್ ಬ್ಯಾಗ್ ಪಡೆದಿದೆ. ವಾಜಪೇಯಿ ಅವರು 2001ರಲ್ಲಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ದೇಶಕ್ಕೆ 126 ಫೈಟರ್ ಜೆಟ್ ಬೇಕು ಎಂದು ಸಂಪುಟದಲ್ಲಿ ನಿರ್ಧಾರ ಕೈಗೊಂಡಿದ್ದರು. ನಂತರ 2008ರಲ್ಲಿ ಅದು ಟೆಂಡರ್ ಕರೆದು 2011ರಲ್ಲಿ ಅಂತಿಮವಾಗುತ್ತದೆ. ಆಗ ಒಂದು ಯುದ್ಧ ವಿಮಾನಕ್ಕೆ 570 ಕೋಟಿ ರೂ. ದರ ನಿಗದಿ ಮಾಡಿತ್ತು. ಆದರೆ ಬಿಜೆಪಿ ಸರ್ಕಾರ 2015ರಲ್ಲಿ ಕೇವಲ 36 ಯುದ್ಧ ವಿಮಾನವನ್ನು ಪ್ರತಿ ವಿಮಾನಕ್ಕೆ 1670 ಕೋಟಿ ರೂ.ಗೆ ದರ ಏರಿಸುತ್ತಾರೆ. ಇದರ ನಿರ್ಮಾಣದ ಜವಾಬ್ದಾರಿಯನ್ನು 11 ದಿನಗಳ ಹಿಂದಷ್ಟೇ ಹುಟ್ಟುಕೊಂಡಿದ್ದ ಅನಿಲ್ ಅಂಬಾನಿ ಅವರ ಕಂಪನಿಗೆ ನೀಡುತ್ತಾರೆ. ಒಂದು ವಿಮಾನಕ್ಕೆ 1100 ಕೋಟಿ ಎಂಬಂತೆ 36 ಯುದ್ಧ ವಿಮಾನಕ್ಕೆ 39,600 ಕೋಟಿ ನೀಡಿದ್ದಾರೆ ಎಂದು ಟೀಕಿಸಿದ್ದಾರೆ.

ಯುಪಿಎ ಇದ್ದಾಗ ಪೆಟ್ರೋಲ್ ಮೇಲೆ 9 ರೂಪಾಯಿ ಡೀಸೆಲ್ ಮೇಲೆ 3 ರೂಪಾಯಿ ತೆರಿಗೆ ಹಾಕಲಾಗುತ್ತಿತ್ತು. ಆದರೆ ಇಂದು 32.90 ಹಾಗೂ 31.80 ರೂಪಾಯಿ ತೆರಿಗೆ ಹಾಕಲಾಗಿದೆ. ಮಾತೆತ್ತಿದರೆ ಬಾಂಡ್ ಸಾಲ ತೀರಿಸಬೇಕು ಎನ್ನುವ ಬಿಜೆಪಿಗರಿಗೆ ನಾಚಿಕೆಯಾಗಬೇಕು. ಅವರು ರಾಜಕಾರಣ ಮಾಡಲಿ, ಆದರೆ ಸುಳ್ಳು ಹೇಳುವುದನ್ನು ನಿಲ್ಲಿಸಲಿ. ಅವರಿಗೆ ದಮ್ಮು, ತಾಕತ್ತು ಇದ್ದರೆ ಈ ವಿಚಾರವಾಗಿ ಸಾರ್ವಜನಿಕ ಚರ್ಚೆಗೆ ಬರಲಿ. ಬಿಜೆಪಿ ಅಸಮರ್ಥ ಆಡಳಿತ, ಜನವಿರೋಧಿ ಪ್ರವೃತ್ತಿಯಿಂದ ಇಂದು ಬೆಲೆ ಏರಿಕೆ ಆಗಿದೆ. ಇದೇ ಕಾರಣಕ್ಕೆ ಪ್ರಧಾನಿ ಅವರ ಜನಪ್ರಿಯತೆ ಶೇ.64ರಿಂದ ಶೇ.24ಕ್ಕೆ ಕುಸಿದಿದೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...