Homeಕರ್ನಾಟಕಬೆಲೆ ಏರಿಕೆಗೆ ಕಾಂಗ್ರೆಸ್ ಕಾರಣವಲ್ಲ, ಬಹಿರಂಗ ಚರ್ಚೆಗೆ ನಾವು ಸಿದ್ಧ: ಉಗ್ರಪ್ಪ ಸವಾಲು

ಬೆಲೆ ಏರಿಕೆಗೆ ಕಾಂಗ್ರೆಸ್ ಕಾರಣವಲ್ಲ, ಬಹಿರಂಗ ಚರ್ಚೆಗೆ ನಾವು ಸಿದ್ಧ: ಉಗ್ರಪ್ಪ ಸವಾಲು

ಈ ದೇಶ ಕಂಡ ಅತ್ಯಂತ ಸುಳ್ಳುಗಾರ, ಜನರ ದಾರಿ ತಪ್ಪಿಸುವ ಪ್ರಧಾನಿ ಎಂದರೆ ಅದು ಮೋದಿ. ಈ ದೇಶ ಕಂಡ ಅತ್ಯಂತ ಭ್ರಷ್ಟ ಪ್ರಧಾನಿ ಮೋದಿ- ವಿ.ಎಸ್.ಉಗ್ರಪ್ಪ

- Advertisement -
- Advertisement -

ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಗೆ ಕಾಂಗ್ರೆಸ್ ನೀಡಿದ ತೈಲ ಬಾಂಡ್ ಗಳೇ ಕಾರಣ ಎಂದು ಹೇಳುತ್ತಿದ್ದಾರೆ. ಈ ವಿಚಾರದಲ್ಲಿ ಬಹಿರಂಗ ಚರ್ಚೆ ಮಾಡಲು ಸಿದ್ಧವಿದ್ದೇವೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸವಾಲು ಹಾಕಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬ್ಯಾರೆಲ್ ಕಚ್ಚಾತೈಲ ಬೆಲೆ 120-130 ಡಾಲರ್ ಇದ್ದಾಗ ಜನರಿಗೆ ಹೊರೆ ಹೆಚ್ಚಾಗಬಾರದು ಎಂದು ಸಬ್ಸಿಡಿ ಮೂಲಕ ಹೊರೆ ಇಳಿಸಲು ಕಾಂಗ್ರೆಸ್ 1.34 ಲಕ್ಷ ಕೋಟಿಯಷ್ಟು ತೈಲ ಬಾಂಡ್ ನೀಡಿದ್ದು ನಿಜ. ನಾವು ಜನರ ಒತ್ತಡ ಕಡಿಮೆ ಮಾಡಲು ಇದನ್ನು ಜಾರಿಗೆ ತಂದಿದ್ದೆವೆಯೇ ಹೊರತು ಕಿಕ್ ಬ್ಯಾಕ್ ಪಡೆಯಲು ಇದನ್ನು ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ವರ್ಷ 10 ಸಾವಿರ ಕೋಟಿಯಷ್ಟು ಹಣವನ್ನು ಈ ತೈಲ ಬಾಂಡ್ ಗೆ ಪಾವತಿ ಮಾಡಬೇಕಾಗಿದೆ. ಆದರೆ ಈ ವರ್ಷ ಏಪ್ರಿಲ್- ಜುಲೈ ಅವಧಿಯಲ್ಲಿ ಕೇಂದ್ರ ಸರ್ಕಾರ ತೆರಿಗೆ ಮೂಲಕ 32,492 ಕೋಟಿಯಷ್ಟು ಹಣ ಸಂಗ್ರಹಿಸಿದೆ. ಬಿಜೆಪಿ ಸರ್ಕಾರ ಕಳೆದ 7 ವರ್ಷಗಳಲ್ಲಿ ಈ ಇಂಧನಗಳ ಮೇಲಿನ ತೆರಿಗೆಯಿಂದ 23 ಲಕ್ಷ ಕೋಟಿ ರೂ.ಗಳನ್ನು ಲೂಟಿ ಮಾಡಿದ್ದಾರೆ. ಕಷ್ಟದ ಸಮಯದಲ್ಲಿ ನಾವು ಬಾಂಡ್ ಮೂಲಕ ಹಣ ಸಂಗ್ರಹಿಸಿ ಜನರ ಮೇಲೆ ಹೊರೆ ಇಳಿಸಲು ಕಾಂಗ್ರೆಸ್ ಪ್ರಯತ್ನಿಸಿದರೆ, ಬಿಜೆಪಿ ಕಚ್ಚಾತೈಲ ಬೆಲೆ ಕಡಿಮೆ ಇದ್ದರೂ ಅದರ ಪ್ರಯೋಜನ ಜನರಿಗೆ ಸಿಗದಂತೆ ಮಾಡಿದೆ. ಆ ಮೂಲಕ ಪೆಟ್ರೋಲ್ ದರ 105, ಡೀಸೆಲ್ ದರ 94 ಹಾಗೂ ಅಡುಗೆ ಅನಿಲ 887 ರೂ. ಆಗಿದೆ. ಇದೇ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಣ ವ್ಯತ್ಯಾಸ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಹೇಳುವ ಅಚ್ಛೇ ದಿನ್ ಇದೇನಾ? ಜನರ ಬದುಕು ದುರ್ಬರ ಮಾಡುವುದೇ ಬಿಜೆಪಿಯ ಅಚ್ಛೇ ದಿನ. ದೇಶದ ಜನರ ಭಾವನೆಯಲ್ಲಿ ಪ್ರಧಾನಿ ಇಮೇಜ್ ಕಡಿಮೆಯಾಗಿದೆ. ಜಾಗತಿಕ ಸಂಸ್ಥೆಗಳು ಅಭಿವೃದ್ಧಿಶೀಲ ರಾಷ್ಟ್ರಗಳ ಪಟ್ಟಿಯಿಂದ ಭಾರತವನ್ನು ಕೈಬಿಟ್ಟಿವೆ. ದೇಶದ ಜಿಡಿಪಿ ಋಣಾತ್ಮಕವಾಗಿ ಸಾಗಿರುವ ಕಾರಣದಿಂದ ಈ ನಿರ್ಧಾರಕ್ಕೆ ಬಂದಿದ್ದು, ಇದು ದೇಶಕ್ಕೆ ಆಗಿರುವ ಅಪಮಾನ, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ದುರಾಡಳಿತವೇ ಕಾರಣ ಎಂದು ಆರೋಪಿಸಿದ್ದಾರೆ.

ರಾಜ್ಯದಿಂದ ಸಂಗ್ರಹಿಸಲಾಗುವ ಜಿಎಸ್‌ಟಿ 2018-19ರಲ್ಲಿ 10,754 ಕೋಟಿ ರೂ.ಗಳಿದ್ದು, 2029-20ರಲ್ಲಿ 16,620 ಕೋಟಿ ರೂ.ಗಳಷ್ಟಾಗಿದೆ. 2020-21ರಲ್ಲಿ 12 ಸಾವಿರ ಕೋಟಿ ರೂ., 2021-22ರಲ್ಲಿ 8,542.17 ಕೋಟಿ ರೂ.ಗಳಷ್ಟು ಜಿಎಸ್‌ಟಿ ಪರಿಹಾರ ಬರಬೇಕು. ಏಪ್ರಿಲ್- ಮೇ ತಿಂಗಳಲ್ಲೇ 5,500 ಕೋಟಿ ರೂ. ಪರಿಹಾರ ಬರಬೇಕು. ಆದರೆ ಕೇಂದ್ರ ಸರ್ಕಾರ ಕಳೆದ ಮಾರ್ಚ್ 27ರಂದು 2970 ಕೋಟಿ ಮಾತ್ರ. ಇನ್ನು 11 ಸಾವಿರ ಕೋಟಿಗೂ ಹೆಚ್ಚು ಹಣ ನೀಡಬೇಕಿದೆ. ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸರ್ಕಾರದ ಸ್ವಚ್ಛ ಭಾರತ, ಪಿಎಂಜಿಎಸ್, ಪಿಎಂ ಅವಾಸ್ ಯೋಜನೆ, ರಾಷ್ಟ್ರೀಯ ಸುಸ್ಥಿರ ಕೃಷಿ, ಪ್ರಧಾನಮಂತ್ರಿ ಕೃಷಿ ಸಂಚಯ್ ಯೋಜನೆ, ವಿದ್ಯಾರ್ಥಿ ವೇತನ ಸೇರಿದಂತೆ ಪ್ರಮುಖ ಯೋಜನಗೆಳಿಗೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ ನಯಾಪೈಸೆ ಅನುದಾನ ರಾಜ್ಯಕ್ಕೆ ಬಿಡುಗಡೆಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ಪ್ರಮುಖ ವಲಯಗಳಾದ ಗ್ರಾಮೀಣಾಭಿವೃದ್ಧಿ, ವಸತಿ, ಕೃಷಿ ಸೇರಿದಂತೆ ಇತರೆ ವಲಯಗಳಿಗೆ 3,890 ಕೋಟಿ ರೂ. ಅನುದಾನ ಬೇಕಾಗಿದೆ. ಅದರಲ್ಲಿ ಕೇಂದ್ರದ ಪಾಲು 2,410 ಕೋಟಿ ರೂ., ರಾಜ್ಯದ ಪಾಲು 1,479 ಕೋಟಿ ರೂ. ಇದೆ. ಇದರಲ್ಲಿ ಕೇಂದ್ರದಿಂದ ಒಂದು ಪೈಸೆಯೂ ಕೇಂದ್ರ ಸರ್ಕಾರದಿಂದ ನೀಡುತ್ತಿಲ್ಲ. ಪಿಎಂಜಿಎಸ್ ವೈ ಒಂದೇ ಯೋಜನೆಯಲ್ಲಿ 900 ಕೋಟಿ ರೂ., ಸ್ವಚ್ಛ ಭಾರತ ಯೋಜನೆಯಲ್ಲಿ 290 ಕೋಟಿ ರೂ., ಅವಾಸ್ ಯೋಜನೆಯಲ್ಲಿ 300 ಕೋಟಿ ರೂ., ಸುಸ್ಥಿರ ಯೋಜನೆಗೆ 117 ಕೋಟಿ ರೂ., ಆಹಾರ ಭದ್ರತೆಗೆ 98.3 ಕೋಟಿ ರೂ., ಕೃಷಿ ಸಂಚಯ್ ಯೋಜನೆಗೆ 270 ಕೋಟಿ ರೂ. ನೀಡಬೇಕಿದೆ. ಕೊಟ್ಟಿಲ್ಲ ಯಾಕೆ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಜನರಿಗೆ ತೆರಿಗೆ ಹೆಸರಲ್ಲಿ ಸುಲಿಗೆ ಮಾಡುತ್ತಿದ್ದಾರೆ. ಮತ್ತೊಂದೆಡೆ ನಮ್ಮ ಜಿಎಸ್ಟಿ ಪಾಲು ನೀಡುತ್ತಿಲ್ಲ. ಈ ಪ್ರಧಾನಿಯನ್ನು ಏನೆಂದು ಕರೆಯಬೇಕು? ಈ ದೇಶ ಕಂಡ ಅತ್ಯಂತ ಸುಳ್ಳುಗಾರ, ಜನರ ದಾರಿ ತಪ್ಪಿಸುವ ಪ್ರಧಾನಿ ಎಂದರೆ ಅದು ಮೋದಿ. ಈ ದೇಶ ಕಂಡ ಅತ್ಯಂತ ಭ್ರಷ್ಟ ಪ್ರಧಾನಿ ಮೋದಿ. ರಾಜೀವ್ ಗಾಂಧಿ ಅವರು ಪ್ರಧಾನಿ ಆಗಿದ್ದಾಗ ಬೋಫೋರ್ಸ್ ನಲ್ಲಿ 63 ಕೋಟಿ ರೂ., ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ 2ಜಿ, ಕಲ್ಲಿದ್ದಲಿನಲ್ಲಿ 1.74 ಲಕ್ಷ ಕೋಟಿ ಹಗರಣ ಆಗಿದೆ ಎಂದು ಆರೋಪ ಮಾಡಿದ್ದರು. ನಾವು ತಪ್ಪು ಮಾಡಿಲ್ಲ ಎಂಬ ವಿಶ್ವಾಸದಿಂದ ತನಿಖೆಗೆ ಆದೇಶ ಮಾಡಿದ್ದೆವು. ಇವರು ಅಧಿಕಾರಕ್ಕೆ ಬಂದು 7 ವರ್ಷವಾಗಿದೆ ನಾವು ಹಗರಣ ಮಾಡಿದ್ದರೆ ನಮ್ಮನ್ನು ಜೈಲಿಗೆ ಹಾಕಬೇಕಿತ್ತು. ಏಕೆ ಹಾಕಿಲ್ಲ ಎಂದರೆ ಭ್ರಷ್ಟಾಚಾರ ನಡೆದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ‘ಅಧಿಕಾರ ದುರ್ಬಳಕೆಯಿಂದ ಬಿಜೆಪಿಗೆ 114 ಸ್ಥಾನ, ಪ್ರಚಾರವಿಲ್ಲದೆಯೂ ಕಾಂಗ್ರೆಸ್‌ಗೆ 100 ಸ್ಥಾನ’

ಈ ಸರ್ಕಾರ ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ 39,600 ಕೋಟಿ ಕಿಕ್ ಬ್ಯಾಗ್ ಪಡೆದಿದೆ. ವಾಜಪೇಯಿ ಅವರು 2001ರಲ್ಲಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ದೇಶಕ್ಕೆ 126 ಫೈಟರ್ ಜೆಟ್ ಬೇಕು ಎಂದು ಸಂಪುಟದಲ್ಲಿ ನಿರ್ಧಾರ ಕೈಗೊಂಡಿದ್ದರು. ನಂತರ 2008ರಲ್ಲಿ ಅದು ಟೆಂಡರ್ ಕರೆದು 2011ರಲ್ಲಿ ಅಂತಿಮವಾಗುತ್ತದೆ. ಆಗ ಒಂದು ಯುದ್ಧ ವಿಮಾನಕ್ಕೆ 570 ಕೋಟಿ ರೂ. ದರ ನಿಗದಿ ಮಾಡಿತ್ತು. ಆದರೆ ಬಿಜೆಪಿ ಸರ್ಕಾರ 2015ರಲ್ಲಿ ಕೇವಲ 36 ಯುದ್ಧ ವಿಮಾನವನ್ನು ಪ್ರತಿ ವಿಮಾನಕ್ಕೆ 1670 ಕೋಟಿ ರೂ.ಗೆ ದರ ಏರಿಸುತ್ತಾರೆ. ಇದರ ನಿರ್ಮಾಣದ ಜವಾಬ್ದಾರಿಯನ್ನು 11 ದಿನಗಳ ಹಿಂದಷ್ಟೇ ಹುಟ್ಟುಕೊಂಡಿದ್ದ ಅನಿಲ್ ಅಂಬಾನಿ ಅವರ ಕಂಪನಿಗೆ ನೀಡುತ್ತಾರೆ. ಒಂದು ವಿಮಾನಕ್ಕೆ 1100 ಕೋಟಿ ಎಂಬಂತೆ 36 ಯುದ್ಧ ವಿಮಾನಕ್ಕೆ 39,600 ಕೋಟಿ ನೀಡಿದ್ದಾರೆ ಎಂದು ಟೀಕಿಸಿದ್ದಾರೆ.

ಯುಪಿಎ ಇದ್ದಾಗ ಪೆಟ್ರೋಲ್ ಮೇಲೆ 9 ರೂಪಾಯಿ ಡೀಸೆಲ್ ಮೇಲೆ 3 ರೂಪಾಯಿ ತೆರಿಗೆ ಹಾಕಲಾಗುತ್ತಿತ್ತು. ಆದರೆ ಇಂದು 32.90 ಹಾಗೂ 31.80 ರೂಪಾಯಿ ತೆರಿಗೆ ಹಾಕಲಾಗಿದೆ. ಮಾತೆತ್ತಿದರೆ ಬಾಂಡ್ ಸಾಲ ತೀರಿಸಬೇಕು ಎನ್ನುವ ಬಿಜೆಪಿಗರಿಗೆ ನಾಚಿಕೆಯಾಗಬೇಕು. ಅವರು ರಾಜಕಾರಣ ಮಾಡಲಿ, ಆದರೆ ಸುಳ್ಳು ಹೇಳುವುದನ್ನು ನಿಲ್ಲಿಸಲಿ. ಅವರಿಗೆ ದಮ್ಮು, ತಾಕತ್ತು ಇದ್ದರೆ ಈ ವಿಚಾರವಾಗಿ ಸಾರ್ವಜನಿಕ ಚರ್ಚೆಗೆ ಬರಲಿ. ಬಿಜೆಪಿ ಅಸಮರ್ಥ ಆಡಳಿತ, ಜನವಿರೋಧಿ ಪ್ರವೃತ್ತಿಯಿಂದ ಇಂದು ಬೆಲೆ ಏರಿಕೆ ಆಗಿದೆ. ಇದೇ ಕಾರಣಕ್ಕೆ ಪ್ರಧಾನಿ ಅವರ ಜನಪ್ರಿಯತೆ ಶೇ.64ರಿಂದ ಶೇ.24ಕ್ಕೆ ಕುಸಿದಿದೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...