Homeಕರ್ನಾಟಕಬೆಲೆ ಏರಿಕೆಗೆ ಕಾಂಗ್ರೆಸ್ ಕಾರಣವಲ್ಲ, ಬಹಿರಂಗ ಚರ್ಚೆಗೆ ನಾವು ಸಿದ್ಧ: ಉಗ್ರಪ್ಪ ಸವಾಲು

ಬೆಲೆ ಏರಿಕೆಗೆ ಕಾಂಗ್ರೆಸ್ ಕಾರಣವಲ್ಲ, ಬಹಿರಂಗ ಚರ್ಚೆಗೆ ನಾವು ಸಿದ್ಧ: ಉಗ್ರಪ್ಪ ಸವಾಲು

ಈ ದೇಶ ಕಂಡ ಅತ್ಯಂತ ಸುಳ್ಳುಗಾರ, ಜನರ ದಾರಿ ತಪ್ಪಿಸುವ ಪ್ರಧಾನಿ ಎಂದರೆ ಅದು ಮೋದಿ. ಈ ದೇಶ ಕಂಡ ಅತ್ಯಂತ ಭ್ರಷ್ಟ ಪ್ರಧಾನಿ ಮೋದಿ- ವಿ.ಎಸ್.ಉಗ್ರಪ್ಪ

- Advertisement -
- Advertisement -

ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಗೆ ಕಾಂಗ್ರೆಸ್ ನೀಡಿದ ತೈಲ ಬಾಂಡ್ ಗಳೇ ಕಾರಣ ಎಂದು ಹೇಳುತ್ತಿದ್ದಾರೆ. ಈ ವಿಚಾರದಲ್ಲಿ ಬಹಿರಂಗ ಚರ್ಚೆ ಮಾಡಲು ಸಿದ್ಧವಿದ್ದೇವೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸವಾಲು ಹಾಕಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬ್ಯಾರೆಲ್ ಕಚ್ಚಾತೈಲ ಬೆಲೆ 120-130 ಡಾಲರ್ ಇದ್ದಾಗ ಜನರಿಗೆ ಹೊರೆ ಹೆಚ್ಚಾಗಬಾರದು ಎಂದು ಸಬ್ಸಿಡಿ ಮೂಲಕ ಹೊರೆ ಇಳಿಸಲು ಕಾಂಗ್ರೆಸ್ 1.34 ಲಕ್ಷ ಕೋಟಿಯಷ್ಟು ತೈಲ ಬಾಂಡ್ ನೀಡಿದ್ದು ನಿಜ. ನಾವು ಜನರ ಒತ್ತಡ ಕಡಿಮೆ ಮಾಡಲು ಇದನ್ನು ಜಾರಿಗೆ ತಂದಿದ್ದೆವೆಯೇ ಹೊರತು ಕಿಕ್ ಬ್ಯಾಕ್ ಪಡೆಯಲು ಇದನ್ನು ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ವರ್ಷ 10 ಸಾವಿರ ಕೋಟಿಯಷ್ಟು ಹಣವನ್ನು ಈ ತೈಲ ಬಾಂಡ್ ಗೆ ಪಾವತಿ ಮಾಡಬೇಕಾಗಿದೆ. ಆದರೆ ಈ ವರ್ಷ ಏಪ್ರಿಲ್- ಜುಲೈ ಅವಧಿಯಲ್ಲಿ ಕೇಂದ್ರ ಸರ್ಕಾರ ತೆರಿಗೆ ಮೂಲಕ 32,492 ಕೋಟಿಯಷ್ಟು ಹಣ ಸಂಗ್ರಹಿಸಿದೆ. ಬಿಜೆಪಿ ಸರ್ಕಾರ ಕಳೆದ 7 ವರ್ಷಗಳಲ್ಲಿ ಈ ಇಂಧನಗಳ ಮೇಲಿನ ತೆರಿಗೆಯಿಂದ 23 ಲಕ್ಷ ಕೋಟಿ ರೂ.ಗಳನ್ನು ಲೂಟಿ ಮಾಡಿದ್ದಾರೆ. ಕಷ್ಟದ ಸಮಯದಲ್ಲಿ ನಾವು ಬಾಂಡ್ ಮೂಲಕ ಹಣ ಸಂಗ್ರಹಿಸಿ ಜನರ ಮೇಲೆ ಹೊರೆ ಇಳಿಸಲು ಕಾಂಗ್ರೆಸ್ ಪ್ರಯತ್ನಿಸಿದರೆ, ಬಿಜೆಪಿ ಕಚ್ಚಾತೈಲ ಬೆಲೆ ಕಡಿಮೆ ಇದ್ದರೂ ಅದರ ಪ್ರಯೋಜನ ಜನರಿಗೆ ಸಿಗದಂತೆ ಮಾಡಿದೆ. ಆ ಮೂಲಕ ಪೆಟ್ರೋಲ್ ದರ 105, ಡೀಸೆಲ್ ದರ 94 ಹಾಗೂ ಅಡುಗೆ ಅನಿಲ 887 ರೂ. ಆಗಿದೆ. ಇದೇ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಣ ವ್ಯತ್ಯಾಸ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಹೇಳುವ ಅಚ್ಛೇ ದಿನ್ ಇದೇನಾ? ಜನರ ಬದುಕು ದುರ್ಬರ ಮಾಡುವುದೇ ಬಿಜೆಪಿಯ ಅಚ್ಛೇ ದಿನ. ದೇಶದ ಜನರ ಭಾವನೆಯಲ್ಲಿ ಪ್ರಧಾನಿ ಇಮೇಜ್ ಕಡಿಮೆಯಾಗಿದೆ. ಜಾಗತಿಕ ಸಂಸ್ಥೆಗಳು ಅಭಿವೃದ್ಧಿಶೀಲ ರಾಷ್ಟ್ರಗಳ ಪಟ್ಟಿಯಿಂದ ಭಾರತವನ್ನು ಕೈಬಿಟ್ಟಿವೆ. ದೇಶದ ಜಿಡಿಪಿ ಋಣಾತ್ಮಕವಾಗಿ ಸಾಗಿರುವ ಕಾರಣದಿಂದ ಈ ನಿರ್ಧಾರಕ್ಕೆ ಬಂದಿದ್ದು, ಇದು ದೇಶಕ್ಕೆ ಆಗಿರುವ ಅಪಮಾನ, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ದುರಾಡಳಿತವೇ ಕಾರಣ ಎಂದು ಆರೋಪಿಸಿದ್ದಾರೆ.

ರಾಜ್ಯದಿಂದ ಸಂಗ್ರಹಿಸಲಾಗುವ ಜಿಎಸ್‌ಟಿ 2018-19ರಲ್ಲಿ 10,754 ಕೋಟಿ ರೂ.ಗಳಿದ್ದು, 2029-20ರಲ್ಲಿ 16,620 ಕೋಟಿ ರೂ.ಗಳಷ್ಟಾಗಿದೆ. 2020-21ರಲ್ಲಿ 12 ಸಾವಿರ ಕೋಟಿ ರೂ., 2021-22ರಲ್ಲಿ 8,542.17 ಕೋಟಿ ರೂ.ಗಳಷ್ಟು ಜಿಎಸ್‌ಟಿ ಪರಿಹಾರ ಬರಬೇಕು. ಏಪ್ರಿಲ್- ಮೇ ತಿಂಗಳಲ್ಲೇ 5,500 ಕೋಟಿ ರೂ. ಪರಿಹಾರ ಬರಬೇಕು. ಆದರೆ ಕೇಂದ್ರ ಸರ್ಕಾರ ಕಳೆದ ಮಾರ್ಚ್ 27ರಂದು 2970 ಕೋಟಿ ಮಾತ್ರ. ಇನ್ನು 11 ಸಾವಿರ ಕೋಟಿಗೂ ಹೆಚ್ಚು ಹಣ ನೀಡಬೇಕಿದೆ. ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸರ್ಕಾರದ ಸ್ವಚ್ಛ ಭಾರತ, ಪಿಎಂಜಿಎಸ್, ಪಿಎಂ ಅವಾಸ್ ಯೋಜನೆ, ರಾಷ್ಟ್ರೀಯ ಸುಸ್ಥಿರ ಕೃಷಿ, ಪ್ರಧಾನಮಂತ್ರಿ ಕೃಷಿ ಸಂಚಯ್ ಯೋಜನೆ, ವಿದ್ಯಾರ್ಥಿ ವೇತನ ಸೇರಿದಂತೆ ಪ್ರಮುಖ ಯೋಜನಗೆಳಿಗೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ ನಯಾಪೈಸೆ ಅನುದಾನ ರಾಜ್ಯಕ್ಕೆ ಬಿಡುಗಡೆಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ಪ್ರಮುಖ ವಲಯಗಳಾದ ಗ್ರಾಮೀಣಾಭಿವೃದ್ಧಿ, ವಸತಿ, ಕೃಷಿ ಸೇರಿದಂತೆ ಇತರೆ ವಲಯಗಳಿಗೆ 3,890 ಕೋಟಿ ರೂ. ಅನುದಾನ ಬೇಕಾಗಿದೆ. ಅದರಲ್ಲಿ ಕೇಂದ್ರದ ಪಾಲು 2,410 ಕೋಟಿ ರೂ., ರಾಜ್ಯದ ಪಾಲು 1,479 ಕೋಟಿ ರೂ. ಇದೆ. ಇದರಲ್ಲಿ ಕೇಂದ್ರದಿಂದ ಒಂದು ಪೈಸೆಯೂ ಕೇಂದ್ರ ಸರ್ಕಾರದಿಂದ ನೀಡುತ್ತಿಲ್ಲ. ಪಿಎಂಜಿಎಸ್ ವೈ ಒಂದೇ ಯೋಜನೆಯಲ್ಲಿ 900 ಕೋಟಿ ರೂ., ಸ್ವಚ್ಛ ಭಾರತ ಯೋಜನೆಯಲ್ಲಿ 290 ಕೋಟಿ ರೂ., ಅವಾಸ್ ಯೋಜನೆಯಲ್ಲಿ 300 ಕೋಟಿ ರೂ., ಸುಸ್ಥಿರ ಯೋಜನೆಗೆ 117 ಕೋಟಿ ರೂ., ಆಹಾರ ಭದ್ರತೆಗೆ 98.3 ಕೋಟಿ ರೂ., ಕೃಷಿ ಸಂಚಯ್ ಯೋಜನೆಗೆ 270 ಕೋಟಿ ರೂ. ನೀಡಬೇಕಿದೆ. ಕೊಟ್ಟಿಲ್ಲ ಯಾಕೆ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಜನರಿಗೆ ತೆರಿಗೆ ಹೆಸರಲ್ಲಿ ಸುಲಿಗೆ ಮಾಡುತ್ತಿದ್ದಾರೆ. ಮತ್ತೊಂದೆಡೆ ನಮ್ಮ ಜಿಎಸ್ಟಿ ಪಾಲು ನೀಡುತ್ತಿಲ್ಲ. ಈ ಪ್ರಧಾನಿಯನ್ನು ಏನೆಂದು ಕರೆಯಬೇಕು? ಈ ದೇಶ ಕಂಡ ಅತ್ಯಂತ ಸುಳ್ಳುಗಾರ, ಜನರ ದಾರಿ ತಪ್ಪಿಸುವ ಪ್ರಧಾನಿ ಎಂದರೆ ಅದು ಮೋದಿ. ಈ ದೇಶ ಕಂಡ ಅತ್ಯಂತ ಭ್ರಷ್ಟ ಪ್ರಧಾನಿ ಮೋದಿ. ರಾಜೀವ್ ಗಾಂಧಿ ಅವರು ಪ್ರಧಾನಿ ಆಗಿದ್ದಾಗ ಬೋಫೋರ್ಸ್ ನಲ್ಲಿ 63 ಕೋಟಿ ರೂ., ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ 2ಜಿ, ಕಲ್ಲಿದ್ದಲಿನಲ್ಲಿ 1.74 ಲಕ್ಷ ಕೋಟಿ ಹಗರಣ ಆಗಿದೆ ಎಂದು ಆರೋಪ ಮಾಡಿದ್ದರು. ನಾವು ತಪ್ಪು ಮಾಡಿಲ್ಲ ಎಂಬ ವಿಶ್ವಾಸದಿಂದ ತನಿಖೆಗೆ ಆದೇಶ ಮಾಡಿದ್ದೆವು. ಇವರು ಅಧಿಕಾರಕ್ಕೆ ಬಂದು 7 ವರ್ಷವಾಗಿದೆ ನಾವು ಹಗರಣ ಮಾಡಿದ್ದರೆ ನಮ್ಮನ್ನು ಜೈಲಿಗೆ ಹಾಕಬೇಕಿತ್ತು. ಏಕೆ ಹಾಕಿಲ್ಲ ಎಂದರೆ ಭ್ರಷ್ಟಾಚಾರ ನಡೆದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ‘ಅಧಿಕಾರ ದುರ್ಬಳಕೆಯಿಂದ ಬಿಜೆಪಿಗೆ 114 ಸ್ಥಾನ, ಪ್ರಚಾರವಿಲ್ಲದೆಯೂ ಕಾಂಗ್ರೆಸ್‌ಗೆ 100 ಸ್ಥಾನ’

ಈ ಸರ್ಕಾರ ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ 39,600 ಕೋಟಿ ಕಿಕ್ ಬ್ಯಾಗ್ ಪಡೆದಿದೆ. ವಾಜಪೇಯಿ ಅವರು 2001ರಲ್ಲಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ದೇಶಕ್ಕೆ 126 ಫೈಟರ್ ಜೆಟ್ ಬೇಕು ಎಂದು ಸಂಪುಟದಲ್ಲಿ ನಿರ್ಧಾರ ಕೈಗೊಂಡಿದ್ದರು. ನಂತರ 2008ರಲ್ಲಿ ಅದು ಟೆಂಡರ್ ಕರೆದು 2011ರಲ್ಲಿ ಅಂತಿಮವಾಗುತ್ತದೆ. ಆಗ ಒಂದು ಯುದ್ಧ ವಿಮಾನಕ್ಕೆ 570 ಕೋಟಿ ರೂ. ದರ ನಿಗದಿ ಮಾಡಿತ್ತು. ಆದರೆ ಬಿಜೆಪಿ ಸರ್ಕಾರ 2015ರಲ್ಲಿ ಕೇವಲ 36 ಯುದ್ಧ ವಿಮಾನವನ್ನು ಪ್ರತಿ ವಿಮಾನಕ್ಕೆ 1670 ಕೋಟಿ ರೂ.ಗೆ ದರ ಏರಿಸುತ್ತಾರೆ. ಇದರ ನಿರ್ಮಾಣದ ಜವಾಬ್ದಾರಿಯನ್ನು 11 ದಿನಗಳ ಹಿಂದಷ್ಟೇ ಹುಟ್ಟುಕೊಂಡಿದ್ದ ಅನಿಲ್ ಅಂಬಾನಿ ಅವರ ಕಂಪನಿಗೆ ನೀಡುತ್ತಾರೆ. ಒಂದು ವಿಮಾನಕ್ಕೆ 1100 ಕೋಟಿ ಎಂಬಂತೆ 36 ಯುದ್ಧ ವಿಮಾನಕ್ಕೆ 39,600 ಕೋಟಿ ನೀಡಿದ್ದಾರೆ ಎಂದು ಟೀಕಿಸಿದ್ದಾರೆ.

ಯುಪಿಎ ಇದ್ದಾಗ ಪೆಟ್ರೋಲ್ ಮೇಲೆ 9 ರೂಪಾಯಿ ಡೀಸೆಲ್ ಮೇಲೆ 3 ರೂಪಾಯಿ ತೆರಿಗೆ ಹಾಕಲಾಗುತ್ತಿತ್ತು. ಆದರೆ ಇಂದು 32.90 ಹಾಗೂ 31.80 ರೂಪಾಯಿ ತೆರಿಗೆ ಹಾಕಲಾಗಿದೆ. ಮಾತೆತ್ತಿದರೆ ಬಾಂಡ್ ಸಾಲ ತೀರಿಸಬೇಕು ಎನ್ನುವ ಬಿಜೆಪಿಗರಿಗೆ ನಾಚಿಕೆಯಾಗಬೇಕು. ಅವರು ರಾಜಕಾರಣ ಮಾಡಲಿ, ಆದರೆ ಸುಳ್ಳು ಹೇಳುವುದನ್ನು ನಿಲ್ಲಿಸಲಿ. ಅವರಿಗೆ ದಮ್ಮು, ತಾಕತ್ತು ಇದ್ದರೆ ಈ ವಿಚಾರವಾಗಿ ಸಾರ್ವಜನಿಕ ಚರ್ಚೆಗೆ ಬರಲಿ. ಬಿಜೆಪಿ ಅಸಮರ್ಥ ಆಡಳಿತ, ಜನವಿರೋಧಿ ಪ್ರವೃತ್ತಿಯಿಂದ ಇಂದು ಬೆಲೆ ಏರಿಕೆ ಆಗಿದೆ. ಇದೇ ಕಾರಣಕ್ಕೆ ಪ್ರಧಾನಿ ಅವರ ಜನಪ್ರಿಯತೆ ಶೇ.64ರಿಂದ ಶೇ.24ಕ್ಕೆ ಕುಸಿದಿದೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...