Homeಕರ್ನಾಟಕಬೆಲೆ ಏರಿಕೆಗೆ ಕಾಂಗ್ರೆಸ್ ಕಾರಣವಲ್ಲ, ಬಹಿರಂಗ ಚರ್ಚೆಗೆ ನಾವು ಸಿದ್ಧ: ಉಗ್ರಪ್ಪ ಸವಾಲು

ಬೆಲೆ ಏರಿಕೆಗೆ ಕಾಂಗ್ರೆಸ್ ಕಾರಣವಲ್ಲ, ಬಹಿರಂಗ ಚರ್ಚೆಗೆ ನಾವು ಸಿದ್ಧ: ಉಗ್ರಪ್ಪ ಸವಾಲು

ಈ ದೇಶ ಕಂಡ ಅತ್ಯಂತ ಸುಳ್ಳುಗಾರ, ಜನರ ದಾರಿ ತಪ್ಪಿಸುವ ಪ್ರಧಾನಿ ಎಂದರೆ ಅದು ಮೋದಿ. ಈ ದೇಶ ಕಂಡ ಅತ್ಯಂತ ಭ್ರಷ್ಟ ಪ್ರಧಾನಿ ಮೋದಿ- ವಿ.ಎಸ್.ಉಗ್ರಪ್ಪ

- Advertisement -
- Advertisement -

ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಗೆ ಕಾಂಗ್ರೆಸ್ ನೀಡಿದ ತೈಲ ಬಾಂಡ್ ಗಳೇ ಕಾರಣ ಎಂದು ಹೇಳುತ್ತಿದ್ದಾರೆ. ಈ ವಿಚಾರದಲ್ಲಿ ಬಹಿರಂಗ ಚರ್ಚೆ ಮಾಡಲು ಸಿದ್ಧವಿದ್ದೇವೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸವಾಲು ಹಾಕಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬ್ಯಾರೆಲ್ ಕಚ್ಚಾತೈಲ ಬೆಲೆ 120-130 ಡಾಲರ್ ಇದ್ದಾಗ ಜನರಿಗೆ ಹೊರೆ ಹೆಚ್ಚಾಗಬಾರದು ಎಂದು ಸಬ್ಸಿಡಿ ಮೂಲಕ ಹೊರೆ ಇಳಿಸಲು ಕಾಂಗ್ರೆಸ್ 1.34 ಲಕ್ಷ ಕೋಟಿಯಷ್ಟು ತೈಲ ಬಾಂಡ್ ನೀಡಿದ್ದು ನಿಜ. ನಾವು ಜನರ ಒತ್ತಡ ಕಡಿಮೆ ಮಾಡಲು ಇದನ್ನು ಜಾರಿಗೆ ತಂದಿದ್ದೆವೆಯೇ ಹೊರತು ಕಿಕ್ ಬ್ಯಾಕ್ ಪಡೆಯಲು ಇದನ್ನು ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ವರ್ಷ 10 ಸಾವಿರ ಕೋಟಿಯಷ್ಟು ಹಣವನ್ನು ಈ ತೈಲ ಬಾಂಡ್ ಗೆ ಪಾವತಿ ಮಾಡಬೇಕಾಗಿದೆ. ಆದರೆ ಈ ವರ್ಷ ಏಪ್ರಿಲ್- ಜುಲೈ ಅವಧಿಯಲ್ಲಿ ಕೇಂದ್ರ ಸರ್ಕಾರ ತೆರಿಗೆ ಮೂಲಕ 32,492 ಕೋಟಿಯಷ್ಟು ಹಣ ಸಂಗ್ರಹಿಸಿದೆ. ಬಿಜೆಪಿ ಸರ್ಕಾರ ಕಳೆದ 7 ವರ್ಷಗಳಲ್ಲಿ ಈ ಇಂಧನಗಳ ಮೇಲಿನ ತೆರಿಗೆಯಿಂದ 23 ಲಕ್ಷ ಕೋಟಿ ರೂ.ಗಳನ್ನು ಲೂಟಿ ಮಾಡಿದ್ದಾರೆ. ಕಷ್ಟದ ಸಮಯದಲ್ಲಿ ನಾವು ಬಾಂಡ್ ಮೂಲಕ ಹಣ ಸಂಗ್ರಹಿಸಿ ಜನರ ಮೇಲೆ ಹೊರೆ ಇಳಿಸಲು ಕಾಂಗ್ರೆಸ್ ಪ್ರಯತ್ನಿಸಿದರೆ, ಬಿಜೆಪಿ ಕಚ್ಚಾತೈಲ ಬೆಲೆ ಕಡಿಮೆ ಇದ್ದರೂ ಅದರ ಪ್ರಯೋಜನ ಜನರಿಗೆ ಸಿಗದಂತೆ ಮಾಡಿದೆ. ಆ ಮೂಲಕ ಪೆಟ್ರೋಲ್ ದರ 105, ಡೀಸೆಲ್ ದರ 94 ಹಾಗೂ ಅಡುಗೆ ಅನಿಲ 887 ರೂ. ಆಗಿದೆ. ಇದೇ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಣ ವ್ಯತ್ಯಾಸ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಹೇಳುವ ಅಚ್ಛೇ ದಿನ್ ಇದೇನಾ? ಜನರ ಬದುಕು ದುರ್ಬರ ಮಾಡುವುದೇ ಬಿಜೆಪಿಯ ಅಚ್ಛೇ ದಿನ. ದೇಶದ ಜನರ ಭಾವನೆಯಲ್ಲಿ ಪ್ರಧಾನಿ ಇಮೇಜ್ ಕಡಿಮೆಯಾಗಿದೆ. ಜಾಗತಿಕ ಸಂಸ್ಥೆಗಳು ಅಭಿವೃದ್ಧಿಶೀಲ ರಾಷ್ಟ್ರಗಳ ಪಟ್ಟಿಯಿಂದ ಭಾರತವನ್ನು ಕೈಬಿಟ್ಟಿವೆ. ದೇಶದ ಜಿಡಿಪಿ ಋಣಾತ್ಮಕವಾಗಿ ಸಾಗಿರುವ ಕಾರಣದಿಂದ ಈ ನಿರ್ಧಾರಕ್ಕೆ ಬಂದಿದ್ದು, ಇದು ದೇಶಕ್ಕೆ ಆಗಿರುವ ಅಪಮಾನ, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ದುರಾಡಳಿತವೇ ಕಾರಣ ಎಂದು ಆರೋಪಿಸಿದ್ದಾರೆ.

ರಾಜ್ಯದಿಂದ ಸಂಗ್ರಹಿಸಲಾಗುವ ಜಿಎಸ್‌ಟಿ 2018-19ರಲ್ಲಿ 10,754 ಕೋಟಿ ರೂ.ಗಳಿದ್ದು, 2029-20ರಲ್ಲಿ 16,620 ಕೋಟಿ ರೂ.ಗಳಷ್ಟಾಗಿದೆ. 2020-21ರಲ್ಲಿ 12 ಸಾವಿರ ಕೋಟಿ ರೂ., 2021-22ರಲ್ಲಿ 8,542.17 ಕೋಟಿ ರೂ.ಗಳಷ್ಟು ಜಿಎಸ್‌ಟಿ ಪರಿಹಾರ ಬರಬೇಕು. ಏಪ್ರಿಲ್- ಮೇ ತಿಂಗಳಲ್ಲೇ 5,500 ಕೋಟಿ ರೂ. ಪರಿಹಾರ ಬರಬೇಕು. ಆದರೆ ಕೇಂದ್ರ ಸರ್ಕಾರ ಕಳೆದ ಮಾರ್ಚ್ 27ರಂದು 2970 ಕೋಟಿ ಮಾತ್ರ. ಇನ್ನು 11 ಸಾವಿರ ಕೋಟಿಗೂ ಹೆಚ್ಚು ಹಣ ನೀಡಬೇಕಿದೆ. ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸರ್ಕಾರದ ಸ್ವಚ್ಛ ಭಾರತ, ಪಿಎಂಜಿಎಸ್, ಪಿಎಂ ಅವಾಸ್ ಯೋಜನೆ, ರಾಷ್ಟ್ರೀಯ ಸುಸ್ಥಿರ ಕೃಷಿ, ಪ್ರಧಾನಮಂತ್ರಿ ಕೃಷಿ ಸಂಚಯ್ ಯೋಜನೆ, ವಿದ್ಯಾರ್ಥಿ ವೇತನ ಸೇರಿದಂತೆ ಪ್ರಮುಖ ಯೋಜನಗೆಳಿಗೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ ನಯಾಪೈಸೆ ಅನುದಾನ ರಾಜ್ಯಕ್ಕೆ ಬಿಡುಗಡೆಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ಪ್ರಮುಖ ವಲಯಗಳಾದ ಗ್ರಾಮೀಣಾಭಿವೃದ್ಧಿ, ವಸತಿ, ಕೃಷಿ ಸೇರಿದಂತೆ ಇತರೆ ವಲಯಗಳಿಗೆ 3,890 ಕೋಟಿ ರೂ. ಅನುದಾನ ಬೇಕಾಗಿದೆ. ಅದರಲ್ಲಿ ಕೇಂದ್ರದ ಪಾಲು 2,410 ಕೋಟಿ ರೂ., ರಾಜ್ಯದ ಪಾಲು 1,479 ಕೋಟಿ ರೂ. ಇದೆ. ಇದರಲ್ಲಿ ಕೇಂದ್ರದಿಂದ ಒಂದು ಪೈಸೆಯೂ ಕೇಂದ್ರ ಸರ್ಕಾರದಿಂದ ನೀಡುತ್ತಿಲ್ಲ. ಪಿಎಂಜಿಎಸ್ ವೈ ಒಂದೇ ಯೋಜನೆಯಲ್ಲಿ 900 ಕೋಟಿ ರೂ., ಸ್ವಚ್ಛ ಭಾರತ ಯೋಜನೆಯಲ್ಲಿ 290 ಕೋಟಿ ರೂ., ಅವಾಸ್ ಯೋಜನೆಯಲ್ಲಿ 300 ಕೋಟಿ ರೂ., ಸುಸ್ಥಿರ ಯೋಜನೆಗೆ 117 ಕೋಟಿ ರೂ., ಆಹಾರ ಭದ್ರತೆಗೆ 98.3 ಕೋಟಿ ರೂ., ಕೃಷಿ ಸಂಚಯ್ ಯೋಜನೆಗೆ 270 ಕೋಟಿ ರೂ. ನೀಡಬೇಕಿದೆ. ಕೊಟ್ಟಿಲ್ಲ ಯಾಕೆ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಜನರಿಗೆ ತೆರಿಗೆ ಹೆಸರಲ್ಲಿ ಸುಲಿಗೆ ಮಾಡುತ್ತಿದ್ದಾರೆ. ಮತ್ತೊಂದೆಡೆ ನಮ್ಮ ಜಿಎಸ್ಟಿ ಪಾಲು ನೀಡುತ್ತಿಲ್ಲ. ಈ ಪ್ರಧಾನಿಯನ್ನು ಏನೆಂದು ಕರೆಯಬೇಕು? ಈ ದೇಶ ಕಂಡ ಅತ್ಯಂತ ಸುಳ್ಳುಗಾರ, ಜನರ ದಾರಿ ತಪ್ಪಿಸುವ ಪ್ರಧಾನಿ ಎಂದರೆ ಅದು ಮೋದಿ. ಈ ದೇಶ ಕಂಡ ಅತ್ಯಂತ ಭ್ರಷ್ಟ ಪ್ರಧಾನಿ ಮೋದಿ. ರಾಜೀವ್ ಗಾಂಧಿ ಅವರು ಪ್ರಧಾನಿ ಆಗಿದ್ದಾಗ ಬೋಫೋರ್ಸ್ ನಲ್ಲಿ 63 ಕೋಟಿ ರೂ., ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ 2ಜಿ, ಕಲ್ಲಿದ್ದಲಿನಲ್ಲಿ 1.74 ಲಕ್ಷ ಕೋಟಿ ಹಗರಣ ಆಗಿದೆ ಎಂದು ಆರೋಪ ಮಾಡಿದ್ದರು. ನಾವು ತಪ್ಪು ಮಾಡಿಲ್ಲ ಎಂಬ ವಿಶ್ವಾಸದಿಂದ ತನಿಖೆಗೆ ಆದೇಶ ಮಾಡಿದ್ದೆವು. ಇವರು ಅಧಿಕಾರಕ್ಕೆ ಬಂದು 7 ವರ್ಷವಾಗಿದೆ ನಾವು ಹಗರಣ ಮಾಡಿದ್ದರೆ ನಮ್ಮನ್ನು ಜೈಲಿಗೆ ಹಾಕಬೇಕಿತ್ತು. ಏಕೆ ಹಾಕಿಲ್ಲ ಎಂದರೆ ಭ್ರಷ್ಟಾಚಾರ ನಡೆದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ‘ಅಧಿಕಾರ ದುರ್ಬಳಕೆಯಿಂದ ಬಿಜೆಪಿಗೆ 114 ಸ್ಥಾನ, ಪ್ರಚಾರವಿಲ್ಲದೆಯೂ ಕಾಂಗ್ರೆಸ್‌ಗೆ 100 ಸ್ಥಾನ’

ಈ ಸರ್ಕಾರ ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ 39,600 ಕೋಟಿ ಕಿಕ್ ಬ್ಯಾಗ್ ಪಡೆದಿದೆ. ವಾಜಪೇಯಿ ಅವರು 2001ರಲ್ಲಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ದೇಶಕ್ಕೆ 126 ಫೈಟರ್ ಜೆಟ್ ಬೇಕು ಎಂದು ಸಂಪುಟದಲ್ಲಿ ನಿರ್ಧಾರ ಕೈಗೊಂಡಿದ್ದರು. ನಂತರ 2008ರಲ್ಲಿ ಅದು ಟೆಂಡರ್ ಕರೆದು 2011ರಲ್ಲಿ ಅಂತಿಮವಾಗುತ್ತದೆ. ಆಗ ಒಂದು ಯುದ್ಧ ವಿಮಾನಕ್ಕೆ 570 ಕೋಟಿ ರೂ. ದರ ನಿಗದಿ ಮಾಡಿತ್ತು. ಆದರೆ ಬಿಜೆಪಿ ಸರ್ಕಾರ 2015ರಲ್ಲಿ ಕೇವಲ 36 ಯುದ್ಧ ವಿಮಾನವನ್ನು ಪ್ರತಿ ವಿಮಾನಕ್ಕೆ 1670 ಕೋಟಿ ರೂ.ಗೆ ದರ ಏರಿಸುತ್ತಾರೆ. ಇದರ ನಿರ್ಮಾಣದ ಜವಾಬ್ದಾರಿಯನ್ನು 11 ದಿನಗಳ ಹಿಂದಷ್ಟೇ ಹುಟ್ಟುಕೊಂಡಿದ್ದ ಅನಿಲ್ ಅಂಬಾನಿ ಅವರ ಕಂಪನಿಗೆ ನೀಡುತ್ತಾರೆ. ಒಂದು ವಿಮಾನಕ್ಕೆ 1100 ಕೋಟಿ ಎಂಬಂತೆ 36 ಯುದ್ಧ ವಿಮಾನಕ್ಕೆ 39,600 ಕೋಟಿ ನೀಡಿದ್ದಾರೆ ಎಂದು ಟೀಕಿಸಿದ್ದಾರೆ.

ಯುಪಿಎ ಇದ್ದಾಗ ಪೆಟ್ರೋಲ್ ಮೇಲೆ 9 ರೂಪಾಯಿ ಡೀಸೆಲ್ ಮೇಲೆ 3 ರೂಪಾಯಿ ತೆರಿಗೆ ಹಾಕಲಾಗುತ್ತಿತ್ತು. ಆದರೆ ಇಂದು 32.90 ಹಾಗೂ 31.80 ರೂಪಾಯಿ ತೆರಿಗೆ ಹಾಕಲಾಗಿದೆ. ಮಾತೆತ್ತಿದರೆ ಬಾಂಡ್ ಸಾಲ ತೀರಿಸಬೇಕು ಎನ್ನುವ ಬಿಜೆಪಿಗರಿಗೆ ನಾಚಿಕೆಯಾಗಬೇಕು. ಅವರು ರಾಜಕಾರಣ ಮಾಡಲಿ, ಆದರೆ ಸುಳ್ಳು ಹೇಳುವುದನ್ನು ನಿಲ್ಲಿಸಲಿ. ಅವರಿಗೆ ದಮ್ಮು, ತಾಕತ್ತು ಇದ್ದರೆ ಈ ವಿಚಾರವಾಗಿ ಸಾರ್ವಜನಿಕ ಚರ್ಚೆಗೆ ಬರಲಿ. ಬಿಜೆಪಿ ಅಸಮರ್ಥ ಆಡಳಿತ, ಜನವಿರೋಧಿ ಪ್ರವೃತ್ತಿಯಿಂದ ಇಂದು ಬೆಲೆ ಏರಿಕೆ ಆಗಿದೆ. ಇದೇ ಕಾರಣಕ್ಕೆ ಪ್ರಧಾನಿ ಅವರ ಜನಪ್ರಿಯತೆ ಶೇ.64ರಿಂದ ಶೇ.24ಕ್ಕೆ ಕುಸಿದಿದೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...