Homeಕರ್ನಾಟಕಬೆಲೆ ಏರಿಕೆಗೆ ಕಾಂಗ್ರೆಸ್ ಕಾರಣವಲ್ಲ, ಬಹಿರಂಗ ಚರ್ಚೆಗೆ ನಾವು ಸಿದ್ಧ: ಉಗ್ರಪ್ಪ ಸವಾಲು

ಬೆಲೆ ಏರಿಕೆಗೆ ಕಾಂಗ್ರೆಸ್ ಕಾರಣವಲ್ಲ, ಬಹಿರಂಗ ಚರ್ಚೆಗೆ ನಾವು ಸಿದ್ಧ: ಉಗ್ರಪ್ಪ ಸವಾಲು

ಈ ದೇಶ ಕಂಡ ಅತ್ಯಂತ ಸುಳ್ಳುಗಾರ, ಜನರ ದಾರಿ ತಪ್ಪಿಸುವ ಪ್ರಧಾನಿ ಎಂದರೆ ಅದು ಮೋದಿ. ಈ ದೇಶ ಕಂಡ ಅತ್ಯಂತ ಭ್ರಷ್ಟ ಪ್ರಧಾನಿ ಮೋದಿ- ವಿ.ಎಸ್.ಉಗ್ರಪ್ಪ

- Advertisement -
- Advertisement -

ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಗೆ ಕಾಂಗ್ರೆಸ್ ನೀಡಿದ ತೈಲ ಬಾಂಡ್ ಗಳೇ ಕಾರಣ ಎಂದು ಹೇಳುತ್ತಿದ್ದಾರೆ. ಈ ವಿಚಾರದಲ್ಲಿ ಬಹಿರಂಗ ಚರ್ಚೆ ಮಾಡಲು ಸಿದ್ಧವಿದ್ದೇವೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸವಾಲು ಹಾಕಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬ್ಯಾರೆಲ್ ಕಚ್ಚಾತೈಲ ಬೆಲೆ 120-130 ಡಾಲರ್ ಇದ್ದಾಗ ಜನರಿಗೆ ಹೊರೆ ಹೆಚ್ಚಾಗಬಾರದು ಎಂದು ಸಬ್ಸಿಡಿ ಮೂಲಕ ಹೊರೆ ಇಳಿಸಲು ಕಾಂಗ್ರೆಸ್ 1.34 ಲಕ್ಷ ಕೋಟಿಯಷ್ಟು ತೈಲ ಬಾಂಡ್ ನೀಡಿದ್ದು ನಿಜ. ನಾವು ಜನರ ಒತ್ತಡ ಕಡಿಮೆ ಮಾಡಲು ಇದನ್ನು ಜಾರಿಗೆ ತಂದಿದ್ದೆವೆಯೇ ಹೊರತು ಕಿಕ್ ಬ್ಯಾಕ್ ಪಡೆಯಲು ಇದನ್ನು ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ವರ್ಷ 10 ಸಾವಿರ ಕೋಟಿಯಷ್ಟು ಹಣವನ್ನು ಈ ತೈಲ ಬಾಂಡ್ ಗೆ ಪಾವತಿ ಮಾಡಬೇಕಾಗಿದೆ. ಆದರೆ ಈ ವರ್ಷ ಏಪ್ರಿಲ್- ಜುಲೈ ಅವಧಿಯಲ್ಲಿ ಕೇಂದ್ರ ಸರ್ಕಾರ ತೆರಿಗೆ ಮೂಲಕ 32,492 ಕೋಟಿಯಷ್ಟು ಹಣ ಸಂಗ್ರಹಿಸಿದೆ. ಬಿಜೆಪಿ ಸರ್ಕಾರ ಕಳೆದ 7 ವರ್ಷಗಳಲ್ಲಿ ಈ ಇಂಧನಗಳ ಮೇಲಿನ ತೆರಿಗೆಯಿಂದ 23 ಲಕ್ಷ ಕೋಟಿ ರೂ.ಗಳನ್ನು ಲೂಟಿ ಮಾಡಿದ್ದಾರೆ. ಕಷ್ಟದ ಸಮಯದಲ್ಲಿ ನಾವು ಬಾಂಡ್ ಮೂಲಕ ಹಣ ಸಂಗ್ರಹಿಸಿ ಜನರ ಮೇಲೆ ಹೊರೆ ಇಳಿಸಲು ಕಾಂಗ್ರೆಸ್ ಪ್ರಯತ್ನಿಸಿದರೆ, ಬಿಜೆಪಿ ಕಚ್ಚಾತೈಲ ಬೆಲೆ ಕಡಿಮೆ ಇದ್ದರೂ ಅದರ ಪ್ರಯೋಜನ ಜನರಿಗೆ ಸಿಗದಂತೆ ಮಾಡಿದೆ. ಆ ಮೂಲಕ ಪೆಟ್ರೋಲ್ ದರ 105, ಡೀಸೆಲ್ ದರ 94 ಹಾಗೂ ಅಡುಗೆ ಅನಿಲ 887 ರೂ. ಆಗಿದೆ. ಇದೇ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಣ ವ್ಯತ್ಯಾಸ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಹೇಳುವ ಅಚ್ಛೇ ದಿನ್ ಇದೇನಾ? ಜನರ ಬದುಕು ದುರ್ಬರ ಮಾಡುವುದೇ ಬಿಜೆಪಿಯ ಅಚ್ಛೇ ದಿನ. ದೇಶದ ಜನರ ಭಾವನೆಯಲ್ಲಿ ಪ್ರಧಾನಿ ಇಮೇಜ್ ಕಡಿಮೆಯಾಗಿದೆ. ಜಾಗತಿಕ ಸಂಸ್ಥೆಗಳು ಅಭಿವೃದ್ಧಿಶೀಲ ರಾಷ್ಟ್ರಗಳ ಪಟ್ಟಿಯಿಂದ ಭಾರತವನ್ನು ಕೈಬಿಟ್ಟಿವೆ. ದೇಶದ ಜಿಡಿಪಿ ಋಣಾತ್ಮಕವಾಗಿ ಸಾಗಿರುವ ಕಾರಣದಿಂದ ಈ ನಿರ್ಧಾರಕ್ಕೆ ಬಂದಿದ್ದು, ಇದು ದೇಶಕ್ಕೆ ಆಗಿರುವ ಅಪಮಾನ, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ದುರಾಡಳಿತವೇ ಕಾರಣ ಎಂದು ಆರೋಪಿಸಿದ್ದಾರೆ.

ರಾಜ್ಯದಿಂದ ಸಂಗ್ರಹಿಸಲಾಗುವ ಜಿಎಸ್‌ಟಿ 2018-19ರಲ್ಲಿ 10,754 ಕೋಟಿ ರೂ.ಗಳಿದ್ದು, 2029-20ರಲ್ಲಿ 16,620 ಕೋಟಿ ರೂ.ಗಳಷ್ಟಾಗಿದೆ. 2020-21ರಲ್ಲಿ 12 ಸಾವಿರ ಕೋಟಿ ರೂ., 2021-22ರಲ್ಲಿ 8,542.17 ಕೋಟಿ ರೂ.ಗಳಷ್ಟು ಜಿಎಸ್‌ಟಿ ಪರಿಹಾರ ಬರಬೇಕು. ಏಪ್ರಿಲ್- ಮೇ ತಿಂಗಳಲ್ಲೇ 5,500 ಕೋಟಿ ರೂ. ಪರಿಹಾರ ಬರಬೇಕು. ಆದರೆ ಕೇಂದ್ರ ಸರ್ಕಾರ ಕಳೆದ ಮಾರ್ಚ್ 27ರಂದು 2970 ಕೋಟಿ ಮಾತ್ರ. ಇನ್ನು 11 ಸಾವಿರ ಕೋಟಿಗೂ ಹೆಚ್ಚು ಹಣ ನೀಡಬೇಕಿದೆ. ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸರ್ಕಾರದ ಸ್ವಚ್ಛ ಭಾರತ, ಪಿಎಂಜಿಎಸ್, ಪಿಎಂ ಅವಾಸ್ ಯೋಜನೆ, ರಾಷ್ಟ್ರೀಯ ಸುಸ್ಥಿರ ಕೃಷಿ, ಪ್ರಧಾನಮಂತ್ರಿ ಕೃಷಿ ಸಂಚಯ್ ಯೋಜನೆ, ವಿದ್ಯಾರ್ಥಿ ವೇತನ ಸೇರಿದಂತೆ ಪ್ರಮುಖ ಯೋಜನಗೆಳಿಗೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ ನಯಾಪೈಸೆ ಅನುದಾನ ರಾಜ್ಯಕ್ಕೆ ಬಿಡುಗಡೆಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ಪ್ರಮುಖ ವಲಯಗಳಾದ ಗ್ರಾಮೀಣಾಭಿವೃದ್ಧಿ, ವಸತಿ, ಕೃಷಿ ಸೇರಿದಂತೆ ಇತರೆ ವಲಯಗಳಿಗೆ 3,890 ಕೋಟಿ ರೂ. ಅನುದಾನ ಬೇಕಾಗಿದೆ. ಅದರಲ್ಲಿ ಕೇಂದ್ರದ ಪಾಲು 2,410 ಕೋಟಿ ರೂ., ರಾಜ್ಯದ ಪಾಲು 1,479 ಕೋಟಿ ರೂ. ಇದೆ. ಇದರಲ್ಲಿ ಕೇಂದ್ರದಿಂದ ಒಂದು ಪೈಸೆಯೂ ಕೇಂದ್ರ ಸರ್ಕಾರದಿಂದ ನೀಡುತ್ತಿಲ್ಲ. ಪಿಎಂಜಿಎಸ್ ವೈ ಒಂದೇ ಯೋಜನೆಯಲ್ಲಿ 900 ಕೋಟಿ ರೂ., ಸ್ವಚ್ಛ ಭಾರತ ಯೋಜನೆಯಲ್ಲಿ 290 ಕೋಟಿ ರೂ., ಅವಾಸ್ ಯೋಜನೆಯಲ್ಲಿ 300 ಕೋಟಿ ರೂ., ಸುಸ್ಥಿರ ಯೋಜನೆಗೆ 117 ಕೋಟಿ ರೂ., ಆಹಾರ ಭದ್ರತೆಗೆ 98.3 ಕೋಟಿ ರೂ., ಕೃಷಿ ಸಂಚಯ್ ಯೋಜನೆಗೆ 270 ಕೋಟಿ ರೂ. ನೀಡಬೇಕಿದೆ. ಕೊಟ್ಟಿಲ್ಲ ಯಾಕೆ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಜನರಿಗೆ ತೆರಿಗೆ ಹೆಸರಲ್ಲಿ ಸುಲಿಗೆ ಮಾಡುತ್ತಿದ್ದಾರೆ. ಮತ್ತೊಂದೆಡೆ ನಮ್ಮ ಜಿಎಸ್ಟಿ ಪಾಲು ನೀಡುತ್ತಿಲ್ಲ. ಈ ಪ್ರಧಾನಿಯನ್ನು ಏನೆಂದು ಕರೆಯಬೇಕು? ಈ ದೇಶ ಕಂಡ ಅತ್ಯಂತ ಸುಳ್ಳುಗಾರ, ಜನರ ದಾರಿ ತಪ್ಪಿಸುವ ಪ್ರಧಾನಿ ಎಂದರೆ ಅದು ಮೋದಿ. ಈ ದೇಶ ಕಂಡ ಅತ್ಯಂತ ಭ್ರಷ್ಟ ಪ್ರಧಾನಿ ಮೋದಿ. ರಾಜೀವ್ ಗಾಂಧಿ ಅವರು ಪ್ರಧಾನಿ ಆಗಿದ್ದಾಗ ಬೋಫೋರ್ಸ್ ನಲ್ಲಿ 63 ಕೋಟಿ ರೂ., ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ 2ಜಿ, ಕಲ್ಲಿದ್ದಲಿನಲ್ಲಿ 1.74 ಲಕ್ಷ ಕೋಟಿ ಹಗರಣ ಆಗಿದೆ ಎಂದು ಆರೋಪ ಮಾಡಿದ್ದರು. ನಾವು ತಪ್ಪು ಮಾಡಿಲ್ಲ ಎಂಬ ವಿಶ್ವಾಸದಿಂದ ತನಿಖೆಗೆ ಆದೇಶ ಮಾಡಿದ್ದೆವು. ಇವರು ಅಧಿಕಾರಕ್ಕೆ ಬಂದು 7 ವರ್ಷವಾಗಿದೆ ನಾವು ಹಗರಣ ಮಾಡಿದ್ದರೆ ನಮ್ಮನ್ನು ಜೈಲಿಗೆ ಹಾಕಬೇಕಿತ್ತು. ಏಕೆ ಹಾಕಿಲ್ಲ ಎಂದರೆ ಭ್ರಷ್ಟಾಚಾರ ನಡೆದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ‘ಅಧಿಕಾರ ದುರ್ಬಳಕೆಯಿಂದ ಬಿಜೆಪಿಗೆ 114 ಸ್ಥಾನ, ಪ್ರಚಾರವಿಲ್ಲದೆಯೂ ಕಾಂಗ್ರೆಸ್‌ಗೆ 100 ಸ್ಥಾನ’

ಈ ಸರ್ಕಾರ ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ 39,600 ಕೋಟಿ ಕಿಕ್ ಬ್ಯಾಗ್ ಪಡೆದಿದೆ. ವಾಜಪೇಯಿ ಅವರು 2001ರಲ್ಲಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ದೇಶಕ್ಕೆ 126 ಫೈಟರ್ ಜೆಟ್ ಬೇಕು ಎಂದು ಸಂಪುಟದಲ್ಲಿ ನಿರ್ಧಾರ ಕೈಗೊಂಡಿದ್ದರು. ನಂತರ 2008ರಲ್ಲಿ ಅದು ಟೆಂಡರ್ ಕರೆದು 2011ರಲ್ಲಿ ಅಂತಿಮವಾಗುತ್ತದೆ. ಆಗ ಒಂದು ಯುದ್ಧ ವಿಮಾನಕ್ಕೆ 570 ಕೋಟಿ ರೂ. ದರ ನಿಗದಿ ಮಾಡಿತ್ತು. ಆದರೆ ಬಿಜೆಪಿ ಸರ್ಕಾರ 2015ರಲ್ಲಿ ಕೇವಲ 36 ಯುದ್ಧ ವಿಮಾನವನ್ನು ಪ್ರತಿ ವಿಮಾನಕ್ಕೆ 1670 ಕೋಟಿ ರೂ.ಗೆ ದರ ಏರಿಸುತ್ತಾರೆ. ಇದರ ನಿರ್ಮಾಣದ ಜವಾಬ್ದಾರಿಯನ್ನು 11 ದಿನಗಳ ಹಿಂದಷ್ಟೇ ಹುಟ್ಟುಕೊಂಡಿದ್ದ ಅನಿಲ್ ಅಂಬಾನಿ ಅವರ ಕಂಪನಿಗೆ ನೀಡುತ್ತಾರೆ. ಒಂದು ವಿಮಾನಕ್ಕೆ 1100 ಕೋಟಿ ಎಂಬಂತೆ 36 ಯುದ್ಧ ವಿಮಾನಕ್ಕೆ 39,600 ಕೋಟಿ ನೀಡಿದ್ದಾರೆ ಎಂದು ಟೀಕಿಸಿದ್ದಾರೆ.

ಯುಪಿಎ ಇದ್ದಾಗ ಪೆಟ್ರೋಲ್ ಮೇಲೆ 9 ರೂಪಾಯಿ ಡೀಸೆಲ್ ಮೇಲೆ 3 ರೂಪಾಯಿ ತೆರಿಗೆ ಹಾಕಲಾಗುತ್ತಿತ್ತು. ಆದರೆ ಇಂದು 32.90 ಹಾಗೂ 31.80 ರೂಪಾಯಿ ತೆರಿಗೆ ಹಾಕಲಾಗಿದೆ. ಮಾತೆತ್ತಿದರೆ ಬಾಂಡ್ ಸಾಲ ತೀರಿಸಬೇಕು ಎನ್ನುವ ಬಿಜೆಪಿಗರಿಗೆ ನಾಚಿಕೆಯಾಗಬೇಕು. ಅವರು ರಾಜಕಾರಣ ಮಾಡಲಿ, ಆದರೆ ಸುಳ್ಳು ಹೇಳುವುದನ್ನು ನಿಲ್ಲಿಸಲಿ. ಅವರಿಗೆ ದಮ್ಮು, ತಾಕತ್ತು ಇದ್ದರೆ ಈ ವಿಚಾರವಾಗಿ ಸಾರ್ವಜನಿಕ ಚರ್ಚೆಗೆ ಬರಲಿ. ಬಿಜೆಪಿ ಅಸಮರ್ಥ ಆಡಳಿತ, ಜನವಿರೋಧಿ ಪ್ರವೃತ್ತಿಯಿಂದ ಇಂದು ಬೆಲೆ ಏರಿಕೆ ಆಗಿದೆ. ಇದೇ ಕಾರಣಕ್ಕೆ ಪ್ರಧಾನಿ ಅವರ ಜನಪ್ರಿಯತೆ ಶೇ.64ರಿಂದ ಶೇ.24ಕ್ಕೆ ಕುಸಿದಿದೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....