Homeಕರ್ನಾಟಕಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ: ಎಚ್.‌ಡಿ ಕುಮಾರಸ್ವಾಮಿ ವಾಗ್ದಾಳಿ

ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ: ಎಚ್.‌ಡಿ ಕುಮಾರಸ್ವಾಮಿ ವಾಗ್ದಾಳಿ

ರಾಜ್ಯದಲ್ಲಿ ಶಿರಾ ಮತ್ತು ಆರ್‌.ಆರ್‌.ನಗರ ಕ್ಷೇತ್ರಗಳಿಗೆ ಉಪ ಚುನಾವಣೆ ಎದುರಾಗಿದ್ದು, ಈ ಎರಡೂ ಕ್ಷೇತ್ರಗಳಲ್ಲೂ ಜೆಡಿಎಸ್‌ ಜೊತೆ ಮೈತ್ರಿ ಇಲ್ಲದೇ ಸ್ಪರ್ಧಿಸುವುದಾಗಿ ಕಾಂಗ್ರೆಸ್‌ ನಾಯಕರ ಹೇಳಿಕೆಗೆ ಎಚ್‌ಡಿಕೆ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

ಕಾಂಗ್ರೆಸ್ ಪಕ್ಷ ಮೈತ್ರಿಗೆ ಯೋಗ್ಯ ಪಕ್ಷವಲ್ಲ. ರಾಜ್ಯದಲ್ಲಿ ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಿದ ಕಾಂಗ್ರೆಸ್ ಜೊತೆ ಎಂದೂ ಮೈತ್ರಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಶಿರಾ ಮತ್ತು ಆರ್‌.ಆರ್‌.ನಗರ ಕ್ಷೇತ್ರಗಳಿಗೆ ಉಪ ಚುನಾವಣೆ ಎದುರಾಗಿದ್ದು, ಈ ಎರಡೂ ಕ್ಷೇತ್ರಗಳಲ್ಲೂ ಜೆಡಿಎಸ್‌ ಜೊತೆ ಮೈತ್ರಿ ಇಲ್ಲದೇ ಸ್ಪರ್ಧಿಸುವುದಾಗಿ ಕಾಂಗ್ರೆಸ್‌ ನಾಯಕರ ಹೇಳಿಕೆಗೆ ಎಚ್‌ಡಿಕೆ ಪ್ರತಿಕ್ರಿಯೆ ನೀಡಿದ್ದಾರೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಜೊತೆ ಮೈತ್ರಿ ಇಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿರುವ ಪತ್ರಿಕೆ, ವಾಹಿನಿಗಳ ವರದಿಯನ್ನು ಗಮನಿಸಿದೆ. ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವವನ್ನು ಜೆಡಿಎಸ್‌ನಿಂದ ಮುಂದಿಟ್ಟಿರುವುದಾದರೂ ಯಾರು? 2018ರ ಫಲಿತಾಂಶದ ಬಳಿಕ ದೇವೇಗೌಡರ ಮನೆ ಬಾಗಿಲಿಗೆ ಕಾಂಗ್ರೆಸ್ ಬಂದಂತೆ ನಾವ್ಯಾರೂ ಕಾಂಗ್ರೆಸ್ ಬಾಗಿಲಿಗೆ ಹೋಗಿಲ್ಲ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಅಭ್ಯರ್ಥಿ ಆಯ್ಕೆಗೆ ಜೆಡಿಎಸ್ ವರಿಷ್ಠರ ಗಡುವು

ಇನ್ನೊಂದು ಟ್ವೀಟ್‌ನಲ್ಲಿ ’ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ. ರಾಜ್ಯದಲ್ಲಿ ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಿದ, ರಾಜಸ್ಥಾನದಲ್ಲಿ ಬೆಂಬಲ ನೀಡಿದ್ದ BSP ಶಾಸಕರನ್ನೇ ಸೆಳೆದ, ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ದಿನವೂ ಅಲುಗಾಡಿಸುತ್ತಿರುವ ಅದರ ವರ್ತನೆಯು, ಮೈತ್ರಿಗೆ ತಾನು ಯೋಗ್ಯವಲ್ಲ ಎಂಬುದರ ಸಂದೇಶ. ಅಷ್ಟಕ್ಕೂ ಕಾಂಗ್ರೆಸ್ ಮಿತ್ರ ಪಕ್ಷಗಳು ಬೇರೆಯೇ ಇವೆ’ ಎಂದು ಹೇಳಿದ್ದಾರೆ.

’ಮೈತ್ರಿಧರ್ಮವನ್ನೂ ಧರ್ಮವೆಂದು ಒಪ್ಪದ ಕಾಂಗ್ರೆಸ್ ಜೊತೆ ಎಂದೂ ಮೈತ್ರಿ ಇಲ್ಲ. ಮೈತ್ರಿ ವಿಷಯವಾಗಿ ಕಾಂಗ್ರೆಸ್ ಎದುರು ಜೆಡಿಎಸ್‌ನ ಅವಕಾಶವನ್ನು ಯಾರೂ ಮುಂದಿಡುವುದೂ ಬೇಡ. ರಾಜ್ಯದಲ್ಲಿ ಮೈತ್ರಿ ಎಂದರೆ ಕಾಂಗ್ರೆಸ್-ಜೆಡಿಎಸ್ ಎಂಬ ಭಾವನೆಯೂ ಬೇಡ. ಹಾಗೇ, ಜೆಡಿಎಸ್, ದೇವೇಗೌಡರ ಹೆಸರು ಬಳಸಿ ಆ ಪಕ್ಷದ ‘ನಾಯಕ’ರು ಲಾಭ ಮಾಡಿಕೊಳ್ಳುವುದೂ ಬೇಡ‌ ಎಂದು ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದ್ದಾರೆ.

ಉಪ ಚುನಾವಣೆಯಲ್ಲಿ ಎರಡು ಪಕ್ಷಗಳು ಮೈತ್ರಿ ಮಾಡಿಕೊಳ್ಳುವ ಸಂಬಂಧ ಕಾಂಗ್ರೆಸ್ ನಾವು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಸ್ವತಂತ್ರವಾಗಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತೇವೆ ಎಂದಿತ್ತು. ಜೆಡಿಎಸ್ ಹೆಸರು ಪ್ರಸ್ತಾಪ ಮಾಡಿದ ಕಾರಣ ಮಾಜಿ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ.


ಇದನ್ನೂ ಓದಿ:  ಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...