Homeಕರ್ನಾಟಕಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ: ಎಚ್.‌ಡಿ ಕುಮಾರಸ್ವಾಮಿ ವಾಗ್ದಾಳಿ

ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ: ಎಚ್.‌ಡಿ ಕುಮಾರಸ್ವಾಮಿ ವಾಗ್ದಾಳಿ

ರಾಜ್ಯದಲ್ಲಿ ಶಿರಾ ಮತ್ತು ಆರ್‌.ಆರ್‌.ನಗರ ಕ್ಷೇತ್ರಗಳಿಗೆ ಉಪ ಚುನಾವಣೆ ಎದುರಾಗಿದ್ದು, ಈ ಎರಡೂ ಕ್ಷೇತ್ರಗಳಲ್ಲೂ ಜೆಡಿಎಸ್‌ ಜೊತೆ ಮೈತ್ರಿ ಇಲ್ಲದೇ ಸ್ಪರ್ಧಿಸುವುದಾಗಿ ಕಾಂಗ್ರೆಸ್‌ ನಾಯಕರ ಹೇಳಿಕೆಗೆ ಎಚ್‌ಡಿಕೆ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

ಕಾಂಗ್ರೆಸ್ ಪಕ್ಷ ಮೈತ್ರಿಗೆ ಯೋಗ್ಯ ಪಕ್ಷವಲ್ಲ. ರಾಜ್ಯದಲ್ಲಿ ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಿದ ಕಾಂಗ್ರೆಸ್ ಜೊತೆ ಎಂದೂ ಮೈತ್ರಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಶಿರಾ ಮತ್ತು ಆರ್‌.ಆರ್‌.ನಗರ ಕ್ಷೇತ್ರಗಳಿಗೆ ಉಪ ಚುನಾವಣೆ ಎದುರಾಗಿದ್ದು, ಈ ಎರಡೂ ಕ್ಷೇತ್ರಗಳಲ್ಲೂ ಜೆಡಿಎಸ್‌ ಜೊತೆ ಮೈತ್ರಿ ಇಲ್ಲದೇ ಸ್ಪರ್ಧಿಸುವುದಾಗಿ ಕಾಂಗ್ರೆಸ್‌ ನಾಯಕರ ಹೇಳಿಕೆಗೆ ಎಚ್‌ಡಿಕೆ ಪ್ರತಿಕ್ರಿಯೆ ನೀಡಿದ್ದಾರೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಜೊತೆ ಮೈತ್ರಿ ಇಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿರುವ ಪತ್ರಿಕೆ, ವಾಹಿನಿಗಳ ವರದಿಯನ್ನು ಗಮನಿಸಿದೆ. ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವವನ್ನು ಜೆಡಿಎಸ್‌ನಿಂದ ಮುಂದಿಟ್ಟಿರುವುದಾದರೂ ಯಾರು? 2018ರ ಫಲಿತಾಂಶದ ಬಳಿಕ ದೇವೇಗೌಡರ ಮನೆ ಬಾಗಿಲಿಗೆ ಕಾಂಗ್ರೆಸ್ ಬಂದಂತೆ ನಾವ್ಯಾರೂ ಕಾಂಗ್ರೆಸ್ ಬಾಗಿಲಿಗೆ ಹೋಗಿಲ್ಲ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಅಭ್ಯರ್ಥಿ ಆಯ್ಕೆಗೆ ಜೆಡಿಎಸ್ ವರಿಷ್ಠರ ಗಡುವು

ಇನ್ನೊಂದು ಟ್ವೀಟ್‌ನಲ್ಲಿ ’ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ. ರಾಜ್ಯದಲ್ಲಿ ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಿದ, ರಾಜಸ್ಥಾನದಲ್ಲಿ ಬೆಂಬಲ ನೀಡಿದ್ದ BSP ಶಾಸಕರನ್ನೇ ಸೆಳೆದ, ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ದಿನವೂ ಅಲುಗಾಡಿಸುತ್ತಿರುವ ಅದರ ವರ್ತನೆಯು, ಮೈತ್ರಿಗೆ ತಾನು ಯೋಗ್ಯವಲ್ಲ ಎಂಬುದರ ಸಂದೇಶ. ಅಷ್ಟಕ್ಕೂ ಕಾಂಗ್ರೆಸ್ ಮಿತ್ರ ಪಕ್ಷಗಳು ಬೇರೆಯೇ ಇವೆ’ ಎಂದು ಹೇಳಿದ್ದಾರೆ.

’ಮೈತ್ರಿಧರ್ಮವನ್ನೂ ಧರ್ಮವೆಂದು ಒಪ್ಪದ ಕಾಂಗ್ರೆಸ್ ಜೊತೆ ಎಂದೂ ಮೈತ್ರಿ ಇಲ್ಲ. ಮೈತ್ರಿ ವಿಷಯವಾಗಿ ಕಾಂಗ್ರೆಸ್ ಎದುರು ಜೆಡಿಎಸ್‌ನ ಅವಕಾಶವನ್ನು ಯಾರೂ ಮುಂದಿಡುವುದೂ ಬೇಡ. ರಾಜ್ಯದಲ್ಲಿ ಮೈತ್ರಿ ಎಂದರೆ ಕಾಂಗ್ರೆಸ್-ಜೆಡಿಎಸ್ ಎಂಬ ಭಾವನೆಯೂ ಬೇಡ. ಹಾಗೇ, ಜೆಡಿಎಸ್, ದೇವೇಗೌಡರ ಹೆಸರು ಬಳಸಿ ಆ ಪಕ್ಷದ ‘ನಾಯಕ’ರು ಲಾಭ ಮಾಡಿಕೊಳ್ಳುವುದೂ ಬೇಡ‌ ಎಂದು ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದ್ದಾರೆ.

ಉಪ ಚುನಾವಣೆಯಲ್ಲಿ ಎರಡು ಪಕ್ಷಗಳು ಮೈತ್ರಿ ಮಾಡಿಕೊಳ್ಳುವ ಸಂಬಂಧ ಕಾಂಗ್ರೆಸ್ ನಾವು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಸ್ವತಂತ್ರವಾಗಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತೇವೆ ಎಂದಿತ್ತು. ಜೆಡಿಎಸ್ ಹೆಸರು ಪ್ರಸ್ತಾಪ ಮಾಡಿದ ಕಾರಣ ಮಾಜಿ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ.


ಇದನ್ನೂ ಓದಿ:  ಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...