Homeಮುಖಪುಟ‘ಕಾಂಗ್ರೆಸ್ ಇನ್ನೂ ದೊಡ್ಡ ಪಕ್ಷ’: ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌

‘ಕಾಂಗ್ರೆಸ್ ಇನ್ನೂ ದೊಡ್ಡ ಪಕ್ಷ’: ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌

- Advertisement -
- Advertisement -

ಹಲವು ರಾಜ್ಯಗಳಲ್ಲಿ ಕಾಂಗ್ರೆಸ್‌ ಹಿನ್ನಡೆ ಅನುಭವಿಸುತ್ತಿದೆ ಎಂದು ಹೇಳುತ್ತಿರುವ ಪ್ರಾದೇಶಿಕ ಪಕ್ಷಗಳಿಗಿಂತ ಭಿನ್ನವಾಗಿ ಆರ್‌ಜೆಡಿ ನಾಯಕ, ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌‌ ಅವರು, “ವಿಪಕ್ಷಗಳ ಬಣದಲ್ಲಿ ಕಾಂಗ್ರೆಸ್ ಇನ್ನೂ ಅತೀ ದೊಡ್ಡ ಪಕ್ಷವಾಗಿದೆ” ಎಂದು  ಪ್ರತಿಪಾದಿಸಿದ್ದಾರೆ. ಇತರ ಪಕ್ಷಗಳು ಕಾಂಗ್ರೆಸ್‌ ಪ್ರಸ್ತುತತೆಯನ್ನು ಪ್ರಯೋಗಿಕವಾಗಿ ಯೋಚಿಸಬೇಕು ಎಂದು ಅವರು ಹೇಳಿದ್ದಾರೆ.

ಇಂಡಿಯನ್‌ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ತೇಜಸ್ವಿ ಯಾದವ್‌, “2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ವಿರೋಧ ಪಕ್ಷಗಳ ನಡುವೆ ಒಗ್ಗಟ್ಟು ಮೂಡಿಸುವ ಪ್ರಯತ್ನಗಳ ಭಾಗವಾಗಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿದೇಶದಿಂದ ಹಿಂದಿರುಗಿದ ನಂತರ ಅವರನ್ನು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಭೇಟಿಯಾಗಲಿದ್ದಾರೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿಯನ್ನು ಸೋಲಿಸುವುದು ವಿರೋಧ ಪಕ್ಷದ ನಾಯಕರ ಏಕೈಕ “ವೈಯಕ್ತಿಕ ಮಹತ್ವಾಕಾಂಕ್ಷೆ” ಆಗಿರಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದೇಶದ ಎಲ್ಲಾ ಪ್ರಮುಖ ವಿಪಕ್ಷಗಳ ನಾಯಕರ ಭೇಟಿಯಾದ ಬಿಹಾರ ಸಿಎಂ ನಿತೀಶ್ ಕುಮಾರ್‌‌

“ಒಳ್ಳೆಯ ಆರಂಭವನ್ನು ಮಾಡಲಾಗಿದೆ. ಬಿಹಾರ ಉತ್ತಮ ಮಾದರಿಯನ್ನು ಒದಗಿಸಿದ್ದು, ಅದನ್ನು ಬೇರೆಡೆ ಪುನರಾವರ್ತಿಸಬೇಕು. ನಿತೀಶ್ ಅವರು ಅನೇಕ ನಾಯಕರನ್ನು ಭೇಟಿ ಮಾಡಿದ್ದಾರೆ, ಲಾಲೂ ಅವರು ಕೂಡ ಮಾತನಾಡಿದ್ದಾರೆ, ನಾನು ಕೂಡ ಭೇಟಿಯಾಗುತ್ತೇನೆ” ಎಂದು ತೇಜಸ್ವಿ ಹೇಳಿದ್ದಾರೆ.

“ಸೋನಿಯಾ ಗಾಂಧಿ ಹಿಂತಿರುಗಿದ ನಂತರ, ನಿತೀಶ್‌ ಮತ್ತು ಲಾಲೂ ಅವರು ಮುಂದಿನ ಮಾರ್ಗವನ್ನು ಚರ್ಚಿಸಲು ಅವರನ್ನು ಭೇಟಿ ಮಾಡುತ್ತಾರೆ. ಮುಂದಿನ ಲೋಕಸಭಾ ಚುನಾವಣೆಯ ಕುರಿತು ಸಂವಾದ ಕೊನೆಗೂ ಆರಂಭವಾಗಿದೆ. ಬಿಹಾರದ ಇತ್ತಿಚೆಗಿನ ಬೆಳವಣಿಗೆಗಳ ಮೊದಲು ಈ ವಿಚಾರ ಇರಲಿಲ್ಲ” ಎಂದು ಅವರು ಹೇಳಿದ್ದಾರೆ.

ಕಳೆದ ತಿಂಗಳು ಬಿಹಾರದಲ್ಲಿ ಬಿಜೆಪಿಯೊಂದಿಗಿನ ಜೆಡಿಯು ಮೈತ್ರಿಯನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್‌ ಕೊನೆಗೊಳಿಸಿದ್ದು, ಹೊಸ ಸಮ್ಮಿಶ್ರ ಸರ್ಕಾರಕ್ಕಾಗಿ ಆರ್‌ಜೆಡಿ, ಕಾಂಗ್ರೆಸ್ ಮತ್ತು ಎಡ ಪಕ್ಷಗಳೊಂದಿಗೆ ಕೈಜೋಡಿಸಿದ್ದಾರೆ. ಈ ಬೆಳವಣಿಗೆಯು ಪ್ರತಿಪಕ್ಷಗಲ್ಲಿ ‘ಭರವಸೆ’ ಮೂಡಿಸಿದ್ದು, ಮುಂದಿನ ದಿನಗಳಲ್ಲಿ ರಾಷ್ಟ್ರವ್ಯಾಪಿ ಇದೆ ಭಾವನೆ ಮೂಡಿಸುವ ಮಂಥನವನ್ನು ಹುಟ್ಟುಹಾಕಿದೆ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

ಇದನ್ನೂ ಓದಿ: ಲಾಲು ಯಾದವ್‌ ಹಾಗೂ ರಾಹುಲ್ ಗಾಂಧಿ ಭೇಟಿ ಮಾಡಿದ ಬಿಹಾರ ಸಿಎಂ ನಿತೀಶ್‌ ಕುಮಾರ್‌‌

“ಈ ಬೆಳವಣಿಗೆ ಖಂಡಿತವಾಗಿಯೂ ವ್ಯತ್ಯಾಸವನ್ನುಂಟು ಮಾಡುತ್ತದೆ. ಜೆಡಿಯು ನಿರ್ಗಮನದ ನಂತರ ಬಿಜೆಪಿ ಬಲವು ಈಗಾಗಲೇ ಕುಸಿದಿದೆ. ಅಂಕಿ ಅಂಶದ ಪ್ರಕಾರ ಕಾಂಗ್ರೆಸ್, ಆರ್‌ಜೆಡಿ, ಜೆಡಿಯು, ಎಡಪಕ್ಷಗಳ ಒಟ್ಟು ಮತಗಳ ಪ್ರಮಾಣ 50% ಮೀರಿದೆ. ಬಿಹಾರದಲ್ಲಿ 40 ಸ್ಥಾನಗಳ ಪೈಕಿ 39 ಸ್ಥಾನಗಳಲ್ಲಿ ಗೆಲುವು ಸಾಧಿಸಿದ ಸಾಧನೆಯನ್ನು ಬಿಜೆಪಿ ಪುನರಾವರ್ತಿಸಲು ಸಾಧ್ಯವಿಲ್ಲ. ನಾವು ಕೈಜೋಡಿಸಿ ತಂತ್ರದೊಂದಿಗೆ ಹೋರಾಡಿದರೆ, ಬಿಜೆಪಿ ಖಂಡಿತವಾಗಿಯೂ ಅರ್ಧದಾರಿಯಲ್ಲೇ ನಿಲ್ಲುತ್ತದೆ” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಅನ್ನು ಲೆಕ್ಕಾಚಾರದಿಂದ ಹೊರಗಿಡಲು ಸಾಧ್ಯವಿಲ್ಲ ಎಂದು ಹೇಳಿದ ಅವರು, “ಸಂಸತ್ತಿನಲ್ಲಿ ಅವರ ಸಂಖ್ಯೆ ನಮಗಿಂತ ಹೆಚ್ಚಿದೆ ಎಂಬ ನಿಜವನ್ನು ಒಪ್ಪದೆ ಇರಲು ಸಾಧ್ಯವಿಲ್ಲ. ಅಂತಿಮವಾಗಿ ಸಂಖ್ಯೆಗಳು ನಿರ್ಧಾರಕ ಅಂಶವಾಗಿರುತ್ತದೆ ಹೊರತು ಹೇಳಿಕೆಗಳಲ್ಲ. ಇತರ ಪಕ್ಷಗಳು ಹೆಚ್ಚಾಗಿ ತಮ್ಮ ಸ್ವಂತ ರಾಜ್ಯಗಳಿಗೆ ಸೀಮಿತವಾಗಿವೆ. ಆದ್ದರಿಂದ ಜನರು ಪ್ರಾಯೋಗಿಕವಾಗಿ ಯೋಚಿಸಬೇಕು ಮತ್ತು ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರಕ್ಕೆ ಭೇಟಿ ನೀಡಿದ ತೆಲಂಗಾಣ ಸಿಎಂ ಕೆಸಿಆರ್‌‌: ‘ಬಿಜೆಪಿ ಮುಕ್ತ ಭಾರತ’ಕ್ಕೆ ಕರೆ

ಬಿಹಾರದ ಬದಲಾವಣೆಯ ನಂತರ ಬಿಜೆಪಿ ಬಿಸಿ ಅನುಭವಿಸುತ್ತಿದೆ ಎಂಬುದು ಅದರ ಸಾರ್ವಜನಿಕ ನಿಲುವುಗಳಲ್ಲಿಯೂ ಪ್ರತಿಫಲಿಸುತ್ತದೆ ಎಂದು ತೇಜಸ್ವಿ ಯಾದವ್ ಹೇಳಿದ್ದು, “ಬಿಹಾರದ ಬೆಳವಣಿಗೆ ಬಿಜೆಪಿಯನ್ನು ಅಭದ್ರಗೊಳಿಸಿದೆ. ತಮ್ಮ ಕಾರ್ಯಕರ್ತರ ನೈತಿಕತೆಯನ್ನು ಹೆಚ್ಚಿಸಲು, ಅವರು ಈಗ 350 ಸೀಟುಗಳ ಗುರಿಯ ಬಗ್ಗೆ ಮಾತನಾಡಲು ಪ್ರಾರಂಭಿಸಿದ್ದಾರೆ. ಅವರು ಸಮಾಜವಾದಿ ರಾಜಕೀಯವನ್ನು ನಾಶಮಾಡಲು ಬಯಸಿದ್ದರು” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...

‘ಆಳವಾದ ಅಪನಂಬಿಕೆ ರಾತ್ರೋರಾತ್ರಿ ಬಗೆಹರಿಯುವುದಿಲ್ಲ..’; ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ ಭರವಸೆ ವ್ಯಕ್ತಪಡಿಸಿದ ಜೆಡಿ ವ್ಯಾನ್ಸ್

ಅಮೆರಿಕ ಮತ್ತು ಇರಾನ್ ನಡುವೆ ಸಾಕಷ್ಟು ಅಪನಂಬಿಕೆ ಇದೆ, ಅದನ್ನು ರಾತ್ರೋರಾತ್ರಿ ಪರಿಹರಿಸಲು ಸಾಧ್ಯವಿಲ್ಲ ಎಂದು ಟೆಹ್ರಾನ್ ಜೊತೆಗಿನ ಕದನ ವಿರಾಮ ಮಾತುಕತೆಗಳ ಕುರಿತು ನಿಯೋಗದ ನೇತೃತ್ವ ವಹಿಸಿದ್ದ ಉಪಾಧ್ಯಕ್ಷ ಜೆಡಿ ವ್ಯಾನ್ಸ್...