Homeಮುಖಪುಟ‘ಕಾಂಗ್ರೆಸ್ ಇನ್ನೂ ದೊಡ್ಡ ಪಕ್ಷ’: ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌

‘ಕಾಂಗ್ರೆಸ್ ಇನ್ನೂ ದೊಡ್ಡ ಪಕ್ಷ’: ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌

- Advertisement -
- Advertisement -

ಹಲವು ರಾಜ್ಯಗಳಲ್ಲಿ ಕಾಂಗ್ರೆಸ್‌ ಹಿನ್ನಡೆ ಅನುಭವಿಸುತ್ತಿದೆ ಎಂದು ಹೇಳುತ್ತಿರುವ ಪ್ರಾದೇಶಿಕ ಪಕ್ಷಗಳಿಗಿಂತ ಭಿನ್ನವಾಗಿ ಆರ್‌ಜೆಡಿ ನಾಯಕ, ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌‌ ಅವರು, “ವಿಪಕ್ಷಗಳ ಬಣದಲ್ಲಿ ಕಾಂಗ್ರೆಸ್ ಇನ್ನೂ ಅತೀ ದೊಡ್ಡ ಪಕ್ಷವಾಗಿದೆ” ಎಂದು  ಪ್ರತಿಪಾದಿಸಿದ್ದಾರೆ. ಇತರ ಪಕ್ಷಗಳು ಕಾಂಗ್ರೆಸ್‌ ಪ್ರಸ್ತುತತೆಯನ್ನು ಪ್ರಯೋಗಿಕವಾಗಿ ಯೋಚಿಸಬೇಕು ಎಂದು ಅವರು ಹೇಳಿದ್ದಾರೆ.

ಇಂಡಿಯನ್‌ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ತೇಜಸ್ವಿ ಯಾದವ್‌, “2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ವಿರೋಧ ಪಕ್ಷಗಳ ನಡುವೆ ಒಗ್ಗಟ್ಟು ಮೂಡಿಸುವ ಪ್ರಯತ್ನಗಳ ಭಾಗವಾಗಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿದೇಶದಿಂದ ಹಿಂದಿರುಗಿದ ನಂತರ ಅವರನ್ನು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಭೇಟಿಯಾಗಲಿದ್ದಾರೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿಯನ್ನು ಸೋಲಿಸುವುದು ವಿರೋಧ ಪಕ್ಷದ ನಾಯಕರ ಏಕೈಕ “ವೈಯಕ್ತಿಕ ಮಹತ್ವಾಕಾಂಕ್ಷೆ” ಆಗಿರಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದೇಶದ ಎಲ್ಲಾ ಪ್ರಮುಖ ವಿಪಕ್ಷಗಳ ನಾಯಕರ ಭೇಟಿಯಾದ ಬಿಹಾರ ಸಿಎಂ ನಿತೀಶ್ ಕುಮಾರ್‌‌

“ಒಳ್ಳೆಯ ಆರಂಭವನ್ನು ಮಾಡಲಾಗಿದೆ. ಬಿಹಾರ ಉತ್ತಮ ಮಾದರಿಯನ್ನು ಒದಗಿಸಿದ್ದು, ಅದನ್ನು ಬೇರೆಡೆ ಪುನರಾವರ್ತಿಸಬೇಕು. ನಿತೀಶ್ ಅವರು ಅನೇಕ ನಾಯಕರನ್ನು ಭೇಟಿ ಮಾಡಿದ್ದಾರೆ, ಲಾಲೂ ಅವರು ಕೂಡ ಮಾತನಾಡಿದ್ದಾರೆ, ನಾನು ಕೂಡ ಭೇಟಿಯಾಗುತ್ತೇನೆ” ಎಂದು ತೇಜಸ್ವಿ ಹೇಳಿದ್ದಾರೆ.

“ಸೋನಿಯಾ ಗಾಂಧಿ ಹಿಂತಿರುಗಿದ ನಂತರ, ನಿತೀಶ್‌ ಮತ್ತು ಲಾಲೂ ಅವರು ಮುಂದಿನ ಮಾರ್ಗವನ್ನು ಚರ್ಚಿಸಲು ಅವರನ್ನು ಭೇಟಿ ಮಾಡುತ್ತಾರೆ. ಮುಂದಿನ ಲೋಕಸಭಾ ಚುನಾವಣೆಯ ಕುರಿತು ಸಂವಾದ ಕೊನೆಗೂ ಆರಂಭವಾಗಿದೆ. ಬಿಹಾರದ ಇತ್ತಿಚೆಗಿನ ಬೆಳವಣಿಗೆಗಳ ಮೊದಲು ಈ ವಿಚಾರ ಇರಲಿಲ್ಲ” ಎಂದು ಅವರು ಹೇಳಿದ್ದಾರೆ.

ಕಳೆದ ತಿಂಗಳು ಬಿಹಾರದಲ್ಲಿ ಬಿಜೆಪಿಯೊಂದಿಗಿನ ಜೆಡಿಯು ಮೈತ್ರಿಯನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್‌ ಕೊನೆಗೊಳಿಸಿದ್ದು, ಹೊಸ ಸಮ್ಮಿಶ್ರ ಸರ್ಕಾರಕ್ಕಾಗಿ ಆರ್‌ಜೆಡಿ, ಕಾಂಗ್ರೆಸ್ ಮತ್ತು ಎಡ ಪಕ್ಷಗಳೊಂದಿಗೆ ಕೈಜೋಡಿಸಿದ್ದಾರೆ. ಈ ಬೆಳವಣಿಗೆಯು ಪ್ರತಿಪಕ್ಷಗಲ್ಲಿ ‘ಭರವಸೆ’ ಮೂಡಿಸಿದ್ದು, ಮುಂದಿನ ದಿನಗಳಲ್ಲಿ ರಾಷ್ಟ್ರವ್ಯಾಪಿ ಇದೆ ಭಾವನೆ ಮೂಡಿಸುವ ಮಂಥನವನ್ನು ಹುಟ್ಟುಹಾಕಿದೆ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

ಇದನ್ನೂ ಓದಿ: ಲಾಲು ಯಾದವ್‌ ಹಾಗೂ ರಾಹುಲ್ ಗಾಂಧಿ ಭೇಟಿ ಮಾಡಿದ ಬಿಹಾರ ಸಿಎಂ ನಿತೀಶ್‌ ಕುಮಾರ್‌‌

“ಈ ಬೆಳವಣಿಗೆ ಖಂಡಿತವಾಗಿಯೂ ವ್ಯತ್ಯಾಸವನ್ನುಂಟು ಮಾಡುತ್ತದೆ. ಜೆಡಿಯು ನಿರ್ಗಮನದ ನಂತರ ಬಿಜೆಪಿ ಬಲವು ಈಗಾಗಲೇ ಕುಸಿದಿದೆ. ಅಂಕಿ ಅಂಶದ ಪ್ರಕಾರ ಕಾಂಗ್ರೆಸ್, ಆರ್‌ಜೆಡಿ, ಜೆಡಿಯು, ಎಡಪಕ್ಷಗಳ ಒಟ್ಟು ಮತಗಳ ಪ್ರಮಾಣ 50% ಮೀರಿದೆ. ಬಿಹಾರದಲ್ಲಿ 40 ಸ್ಥಾನಗಳ ಪೈಕಿ 39 ಸ್ಥಾನಗಳಲ್ಲಿ ಗೆಲುವು ಸಾಧಿಸಿದ ಸಾಧನೆಯನ್ನು ಬಿಜೆಪಿ ಪುನರಾವರ್ತಿಸಲು ಸಾಧ್ಯವಿಲ್ಲ. ನಾವು ಕೈಜೋಡಿಸಿ ತಂತ್ರದೊಂದಿಗೆ ಹೋರಾಡಿದರೆ, ಬಿಜೆಪಿ ಖಂಡಿತವಾಗಿಯೂ ಅರ್ಧದಾರಿಯಲ್ಲೇ ನಿಲ್ಲುತ್ತದೆ” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಅನ್ನು ಲೆಕ್ಕಾಚಾರದಿಂದ ಹೊರಗಿಡಲು ಸಾಧ್ಯವಿಲ್ಲ ಎಂದು ಹೇಳಿದ ಅವರು, “ಸಂಸತ್ತಿನಲ್ಲಿ ಅವರ ಸಂಖ್ಯೆ ನಮಗಿಂತ ಹೆಚ್ಚಿದೆ ಎಂಬ ನಿಜವನ್ನು ಒಪ್ಪದೆ ಇರಲು ಸಾಧ್ಯವಿಲ್ಲ. ಅಂತಿಮವಾಗಿ ಸಂಖ್ಯೆಗಳು ನಿರ್ಧಾರಕ ಅಂಶವಾಗಿರುತ್ತದೆ ಹೊರತು ಹೇಳಿಕೆಗಳಲ್ಲ. ಇತರ ಪಕ್ಷಗಳು ಹೆಚ್ಚಾಗಿ ತಮ್ಮ ಸ್ವಂತ ರಾಜ್ಯಗಳಿಗೆ ಸೀಮಿತವಾಗಿವೆ. ಆದ್ದರಿಂದ ಜನರು ಪ್ರಾಯೋಗಿಕವಾಗಿ ಯೋಚಿಸಬೇಕು ಮತ್ತು ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರಕ್ಕೆ ಭೇಟಿ ನೀಡಿದ ತೆಲಂಗಾಣ ಸಿಎಂ ಕೆಸಿಆರ್‌‌: ‘ಬಿಜೆಪಿ ಮುಕ್ತ ಭಾರತ’ಕ್ಕೆ ಕರೆ

ಬಿಹಾರದ ಬದಲಾವಣೆಯ ನಂತರ ಬಿಜೆಪಿ ಬಿಸಿ ಅನುಭವಿಸುತ್ತಿದೆ ಎಂಬುದು ಅದರ ಸಾರ್ವಜನಿಕ ನಿಲುವುಗಳಲ್ಲಿಯೂ ಪ್ರತಿಫಲಿಸುತ್ತದೆ ಎಂದು ತೇಜಸ್ವಿ ಯಾದವ್ ಹೇಳಿದ್ದು, “ಬಿಹಾರದ ಬೆಳವಣಿಗೆ ಬಿಜೆಪಿಯನ್ನು ಅಭದ್ರಗೊಳಿಸಿದೆ. ತಮ್ಮ ಕಾರ್ಯಕರ್ತರ ನೈತಿಕತೆಯನ್ನು ಹೆಚ್ಚಿಸಲು, ಅವರು ಈಗ 350 ಸೀಟುಗಳ ಗುರಿಯ ಬಗ್ಗೆ ಮಾತನಾಡಲು ಪ್ರಾರಂಭಿಸಿದ್ದಾರೆ. ಅವರು ಸಮಾಜವಾದಿ ರಾಜಕೀಯವನ್ನು ನಾಶಮಾಡಲು ಬಯಸಿದ್ದರು” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...