Homeಮುಖಪುಟ‘ಕಾಂಗ್ರೆಸ್ ಇನ್ನೂ ದೊಡ್ಡ ಪಕ್ಷ’: ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌

‘ಕಾಂಗ್ರೆಸ್ ಇನ್ನೂ ದೊಡ್ಡ ಪಕ್ಷ’: ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌

- Advertisement -
- Advertisement -

ಹಲವು ರಾಜ್ಯಗಳಲ್ಲಿ ಕಾಂಗ್ರೆಸ್‌ ಹಿನ್ನಡೆ ಅನುಭವಿಸುತ್ತಿದೆ ಎಂದು ಹೇಳುತ್ತಿರುವ ಪ್ರಾದೇಶಿಕ ಪಕ್ಷಗಳಿಗಿಂತ ಭಿನ್ನವಾಗಿ ಆರ್‌ಜೆಡಿ ನಾಯಕ, ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌‌ ಅವರು, “ವಿಪಕ್ಷಗಳ ಬಣದಲ್ಲಿ ಕಾಂಗ್ರೆಸ್ ಇನ್ನೂ ಅತೀ ದೊಡ್ಡ ಪಕ್ಷವಾಗಿದೆ” ಎಂದು  ಪ್ರತಿಪಾದಿಸಿದ್ದಾರೆ. ಇತರ ಪಕ್ಷಗಳು ಕಾಂಗ್ರೆಸ್‌ ಪ್ರಸ್ತುತತೆಯನ್ನು ಪ್ರಯೋಗಿಕವಾಗಿ ಯೋಚಿಸಬೇಕು ಎಂದು ಅವರು ಹೇಳಿದ್ದಾರೆ.

ಇಂಡಿಯನ್‌ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ತೇಜಸ್ವಿ ಯಾದವ್‌, “2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ವಿರೋಧ ಪಕ್ಷಗಳ ನಡುವೆ ಒಗ್ಗಟ್ಟು ಮೂಡಿಸುವ ಪ್ರಯತ್ನಗಳ ಭಾಗವಾಗಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿದೇಶದಿಂದ ಹಿಂದಿರುಗಿದ ನಂತರ ಅವರನ್ನು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಭೇಟಿಯಾಗಲಿದ್ದಾರೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಜೆಪಿಯನ್ನು ಸೋಲಿಸುವುದು ವಿರೋಧ ಪಕ್ಷದ ನಾಯಕರ ಏಕೈಕ “ವೈಯಕ್ತಿಕ ಮಹತ್ವಾಕಾಂಕ್ಷೆ” ಆಗಿರಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದೇಶದ ಎಲ್ಲಾ ಪ್ರಮುಖ ವಿಪಕ್ಷಗಳ ನಾಯಕರ ಭೇಟಿಯಾದ ಬಿಹಾರ ಸಿಎಂ ನಿತೀಶ್ ಕುಮಾರ್‌‌

“ಒಳ್ಳೆಯ ಆರಂಭವನ್ನು ಮಾಡಲಾಗಿದೆ. ಬಿಹಾರ ಉತ್ತಮ ಮಾದರಿಯನ್ನು ಒದಗಿಸಿದ್ದು, ಅದನ್ನು ಬೇರೆಡೆ ಪುನರಾವರ್ತಿಸಬೇಕು. ನಿತೀಶ್ ಅವರು ಅನೇಕ ನಾಯಕರನ್ನು ಭೇಟಿ ಮಾಡಿದ್ದಾರೆ, ಲಾಲೂ ಅವರು ಕೂಡ ಮಾತನಾಡಿದ್ದಾರೆ, ನಾನು ಕೂಡ ಭೇಟಿಯಾಗುತ್ತೇನೆ” ಎಂದು ತೇಜಸ್ವಿ ಹೇಳಿದ್ದಾರೆ.

“ಸೋನಿಯಾ ಗಾಂಧಿ ಹಿಂತಿರುಗಿದ ನಂತರ, ನಿತೀಶ್‌ ಮತ್ತು ಲಾಲೂ ಅವರು ಮುಂದಿನ ಮಾರ್ಗವನ್ನು ಚರ್ಚಿಸಲು ಅವರನ್ನು ಭೇಟಿ ಮಾಡುತ್ತಾರೆ. ಮುಂದಿನ ಲೋಕಸಭಾ ಚುನಾವಣೆಯ ಕುರಿತು ಸಂವಾದ ಕೊನೆಗೂ ಆರಂಭವಾಗಿದೆ. ಬಿಹಾರದ ಇತ್ತಿಚೆಗಿನ ಬೆಳವಣಿಗೆಗಳ ಮೊದಲು ಈ ವಿಚಾರ ಇರಲಿಲ್ಲ” ಎಂದು ಅವರು ಹೇಳಿದ್ದಾರೆ.

ಕಳೆದ ತಿಂಗಳು ಬಿಹಾರದಲ್ಲಿ ಬಿಜೆಪಿಯೊಂದಿಗಿನ ಜೆಡಿಯು ಮೈತ್ರಿಯನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್‌ ಕೊನೆಗೊಳಿಸಿದ್ದು, ಹೊಸ ಸಮ್ಮಿಶ್ರ ಸರ್ಕಾರಕ್ಕಾಗಿ ಆರ್‌ಜೆಡಿ, ಕಾಂಗ್ರೆಸ್ ಮತ್ತು ಎಡ ಪಕ್ಷಗಳೊಂದಿಗೆ ಕೈಜೋಡಿಸಿದ್ದಾರೆ. ಈ ಬೆಳವಣಿಗೆಯು ಪ್ರತಿಪಕ್ಷಗಲ್ಲಿ ‘ಭರವಸೆ’ ಮೂಡಿಸಿದ್ದು, ಮುಂದಿನ ದಿನಗಳಲ್ಲಿ ರಾಷ್ಟ್ರವ್ಯಾಪಿ ಇದೆ ಭಾವನೆ ಮೂಡಿಸುವ ಮಂಥನವನ್ನು ಹುಟ್ಟುಹಾಕಿದೆ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

ಇದನ್ನೂ ಓದಿ: ಲಾಲು ಯಾದವ್‌ ಹಾಗೂ ರಾಹುಲ್ ಗಾಂಧಿ ಭೇಟಿ ಮಾಡಿದ ಬಿಹಾರ ಸಿಎಂ ನಿತೀಶ್‌ ಕುಮಾರ್‌‌

“ಈ ಬೆಳವಣಿಗೆ ಖಂಡಿತವಾಗಿಯೂ ವ್ಯತ್ಯಾಸವನ್ನುಂಟು ಮಾಡುತ್ತದೆ. ಜೆಡಿಯು ನಿರ್ಗಮನದ ನಂತರ ಬಿಜೆಪಿ ಬಲವು ಈಗಾಗಲೇ ಕುಸಿದಿದೆ. ಅಂಕಿ ಅಂಶದ ಪ್ರಕಾರ ಕಾಂಗ್ರೆಸ್, ಆರ್‌ಜೆಡಿ, ಜೆಡಿಯು, ಎಡಪಕ್ಷಗಳ ಒಟ್ಟು ಮತಗಳ ಪ್ರಮಾಣ 50% ಮೀರಿದೆ. ಬಿಹಾರದಲ್ಲಿ 40 ಸ್ಥಾನಗಳ ಪೈಕಿ 39 ಸ್ಥಾನಗಳಲ್ಲಿ ಗೆಲುವು ಸಾಧಿಸಿದ ಸಾಧನೆಯನ್ನು ಬಿಜೆಪಿ ಪುನರಾವರ್ತಿಸಲು ಸಾಧ್ಯವಿಲ್ಲ. ನಾವು ಕೈಜೋಡಿಸಿ ತಂತ್ರದೊಂದಿಗೆ ಹೋರಾಡಿದರೆ, ಬಿಜೆಪಿ ಖಂಡಿತವಾಗಿಯೂ ಅರ್ಧದಾರಿಯಲ್ಲೇ ನಿಲ್ಲುತ್ತದೆ” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಅನ್ನು ಲೆಕ್ಕಾಚಾರದಿಂದ ಹೊರಗಿಡಲು ಸಾಧ್ಯವಿಲ್ಲ ಎಂದು ಹೇಳಿದ ಅವರು, “ಸಂಸತ್ತಿನಲ್ಲಿ ಅವರ ಸಂಖ್ಯೆ ನಮಗಿಂತ ಹೆಚ್ಚಿದೆ ಎಂಬ ನಿಜವನ್ನು ಒಪ್ಪದೆ ಇರಲು ಸಾಧ್ಯವಿಲ್ಲ. ಅಂತಿಮವಾಗಿ ಸಂಖ್ಯೆಗಳು ನಿರ್ಧಾರಕ ಅಂಶವಾಗಿರುತ್ತದೆ ಹೊರತು ಹೇಳಿಕೆಗಳಲ್ಲ. ಇತರ ಪಕ್ಷಗಳು ಹೆಚ್ಚಾಗಿ ತಮ್ಮ ಸ್ವಂತ ರಾಜ್ಯಗಳಿಗೆ ಸೀಮಿತವಾಗಿವೆ. ಆದ್ದರಿಂದ ಜನರು ಪ್ರಾಯೋಗಿಕವಾಗಿ ಯೋಚಿಸಬೇಕು ಮತ್ತು ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರಕ್ಕೆ ಭೇಟಿ ನೀಡಿದ ತೆಲಂಗಾಣ ಸಿಎಂ ಕೆಸಿಆರ್‌‌: ‘ಬಿಜೆಪಿ ಮುಕ್ತ ಭಾರತ’ಕ್ಕೆ ಕರೆ

ಬಿಹಾರದ ಬದಲಾವಣೆಯ ನಂತರ ಬಿಜೆಪಿ ಬಿಸಿ ಅನುಭವಿಸುತ್ತಿದೆ ಎಂಬುದು ಅದರ ಸಾರ್ವಜನಿಕ ನಿಲುವುಗಳಲ್ಲಿಯೂ ಪ್ರತಿಫಲಿಸುತ್ತದೆ ಎಂದು ತೇಜಸ್ವಿ ಯಾದವ್ ಹೇಳಿದ್ದು, “ಬಿಹಾರದ ಬೆಳವಣಿಗೆ ಬಿಜೆಪಿಯನ್ನು ಅಭದ್ರಗೊಳಿಸಿದೆ. ತಮ್ಮ ಕಾರ್ಯಕರ್ತರ ನೈತಿಕತೆಯನ್ನು ಹೆಚ್ಚಿಸಲು, ಅವರು ಈಗ 350 ಸೀಟುಗಳ ಗುರಿಯ ಬಗ್ಗೆ ಮಾತನಾಡಲು ಪ್ರಾರಂಭಿಸಿದ್ದಾರೆ. ಅವರು ಸಮಾಜವಾದಿ ರಾಜಕೀಯವನ್ನು ನಾಶಮಾಡಲು ಬಯಸಿದ್ದರು” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...