Homeಮುಖಪುಟಬಿಜೆಪಿಯೇತರ ಪಕ್ಷಗಳು UPA ಅಡಿಯಲ್ಲಿ ಒಂದಾಗಬೇಕು - ಶಿವಸೇನೆ

ಬಿಜೆಪಿಯೇತರ ಪಕ್ಷಗಳು UPA ಅಡಿಯಲ್ಲಿ ಒಂದಾಗಬೇಕು – ಶಿವಸೇನೆ

ಕೇಂದ್ರ ಸರ್ಕಾರವನ್ನು ದೂಷಿಸುವ ಬದಲು, ವಿರೋಧ ಪಕ್ಷಗಳು ತನ್ನ ನಾಯಕತ್ವದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವುದು ಮುಖ್ಯ - ಸಾಮ್ನಾ

- Advertisement -
- Advertisement -

“ಕೇಂದ್ರದಲ್ಲಿ ವಿರೋಧ ಪಕ್ಷದಲ್ಲಿರುವ ಕಾಂಗ್ರೆಸ್ ದುರ್ಬಲವಾಗಿದೆ ಮತ್ತು ವಿಘಟನೆಯಾಗಿದೆ. ಹಾಗಾಗಿ ಬಿಜೆಪಿಯೇತರ ಪಕ್ಷಗಳೆಲ್ಲವೂ UPA ಅಡಿಯಲ್ಲಿ ಒಂದಾಗಬೇಕು” ಎಂದು ಶಿವಸೇನೆಯ ಮುಖವಾಣಿ ‘ಸಾಮ್ನಾ’ದ ಸಂಪಾದಕೀಯದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

“ಕೇಂದ್ರದಲ್ಲಿ ಅಧಿಕಾರದಲ್ಲಿರುವವರು ಈ ರೈತರ ಪ್ರತಿಭಟನೆಯ ಬಗ್ಗೆ ಅಸಡ್ಡೆ ಹೊಂದಿದ್ದಾರೆ. ಸರ್ಕಾರದ ಈ ಉದಾಸೀನ ನಡವಳಿಕೆಗೆ ಪರಿಣಾಮಕಾರಿಯಾದ ವಿರೋಧವಿಲ್ಲದಿರುವುದೇ ಕಾರಣ. ಇದು ಪ್ರಜಾಪ್ರಭುತ್ವದ ವಿಘಟನೆಗೂ ಕಾರಣವಾಗಿದೆ” ಎಂದು ಸಾಮ್ನಾ ಹೇಳಿದೆ.

ಇದನ್ನೂ ಓದಿ: ಕೇರಳದಲ್ಲಿ ನವ ವಿವಾಹಿತನ ಕೊಲೆ: ಮರ್ಯಾದೆಹೀನ ಹತ್ಯೆ ಶಂಕೆಯಲ್ಲಿ ವಧುವಿನ ತಂದೆ, ಚಿಕ್ಕಪ್ಪನ ಬಂಧನ

“ಕೇಂದ್ರ ಸರ್ಕಾರವನ್ನು ದೂಷಿಸುವ ಬದಲು, ವಿರೋಧ ಪಕ್ಷಗಳು ತನ್ನ ನಾಯಕತ್ವದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವುದು ಮುಖ್ಯ. ಪ್ರತಿಪಕ್ಷಗಳ ನಾಯಕತ್ವಕ್ಕೆ ಸಾಮೂಹಿಕ ಮನವಿ ಇರಬೇಕು” ಎಂದು ಹೇಳಿದೆ.

“ರಾಹುಲ್ ಗಾಂಧಿ ಏಕಾಂಗಿಯಾಗಿ ತೀವ್ರ ಹೋರಾಟ ನಡೆಸುತ್ತಿದ್ದಾರೆ. ಆದರೂ ಏನೋ ಕೊರತೆಯಿದೆ. ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (UPA)ನ ಪ್ರಸ್ತುತ ಸ್ಥಿತಿ ಎನ್‌ಜಿಒನಂತಾಗಿದೆ. ಯುಪಿಎ ಘಟಕಗಳು ಸಹ ರೈತರ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. ಈ ಘಟಕಗಳು ನಿಖರವಾಗಿ ಏನು ಮಾಡುತ್ತವೆ ಎಂಬುದರ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ” ಎಂದು ಸಾಮ್ನಾ ಆರೋಪಿಸಿದೆ.

ಇದನ್ನೂ ಓದಿ: ತೀವ್ರಗೊಂಡ ದೆಹಲಿ ಹೋರಾಟ – ಎರಡು ಹೆದ್ದಾರಿಗಳನ್ನು ಮುಚ್ಚಿದ ರೈತರು!

“ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ರಾಷ್ಟ್ರಮಟ್ಟದಲ್ಲಿ ಸ್ವತಂತ್ರ ವ್ಯಕ್ತಿತ್ವ ಹೊಂದಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಏಕಾಂಗಿ ಯುದ್ಧ ನಡೆಸುತ್ತಿದ್ದಾರೆ. ಈ ಸಮಯದಲ್ಲಿ ದೇಶದ ವಿರೋಧ ಪಕ್ಷಗಳು ಅವರ ಪರವಾಗಿ ನಿಲ್ಲಬೇಕು. ಮಮತಾ ಬ್ಯಾನರ್ಜಿ ಪವಾರ್ ಅವರನ್ನು ಮಾತ್ರ ಸಂಪರ್ಕಿಸಿದ್ದಾರೆ. ಅವರು ಮಾತ್ರ ಬಂಗಾಳಕ್ಕೆ ಹೋಗುತ್ತಿದ್ದಾರೆ. ಆದರೆ ಇದನ್ನು ಕಾಂಗ್ರೆಸ್ ನಾಯಕತ್ವದಲ್ಲಿ ಮಾಡಬೇಕಿತ್ತು” ಎಂದು ಅದು ಹೇಳಿದೆ.

“ತೃಣಮೂಲ ಕಾಂಗ್ರೆಸ್, ಶಿವಸೇನೆ, ಅಕಾಲಿ ದಳ, ಬಹುಜನ ಸಮಾಜ ಪಕ್ಷ (ಬಿಎಸ್‌ಪಿ), ಅಖಿಲೇಶ್ ಯಾದವ್, ಜಗನ್‌ಮೋಹನ್ ರೆಡ್ಡಿಯವರ ವೈಎಸ್ಆರ್ ಕಾಂಗ್ರೆಸ್, ತೆಲಂಗಾಣದ ಕೆ ಚಂದ್ರಶೇಖರ್ ರಾವ್, ಒಡಿಶಾದ ನವೀನ್ ಪಟ್ನಾಯಕ್, ಕರ್ನಾಟಕದ ಎಚ್‌ ಡಿ ಕುಮಾರಸ್ವಾಮಿ ಸೇರಿದಂತೆ ಎಲ್ಲರೂ ಬಿಜೆಪಿಗೆ ವಿರುದ್ಧವಾಗಿದ್ದಾರೆ. ಆದರೆ ಇವರೆಲ್ಲರೂ ಕಾಂಗ್ರೆಸ್ ನೇತೃತ್ವದ UPAನ ಭಾಗವಾಗಿಲ್ಲ. ಇವರೆಲ್ಲರೂ UPAಗೆ ಸೇರದಿದ್ದರೆ, ಪ್ರತಿಪಕ್ಷಗಳು ಒಂದು ದೊಡ್ಡ ಪರ್ಯಾಯವನ್ನು ಒದಗಿಸಲು ಸಾಧ್ಯವಿಲ್ಲ” ಎಂದು ಹೇಳಿದೆ.

ಇದನ್ನೂ ಓದಿ: ಕೆಲವರು ನನಗೆ ಪ್ರಜಾಪ್ರಭುತ್ವದ ಪಾಠ ಕಲಿಸಲು ಬಯಸುತ್ತಿದ್ದಾರೆ: ತಿರುಗೇಟು ನೀಡಿದ ಪ್ರಧಾನಿ

“ಕೃಷಿ ಕಾನೂನುಗಳ ಬಗ್ಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಪ್ರಿಯಾಂಕಾ ಗಾಂಧಿಯವರನ್ನು ದೆಹಲಿಯಲ್ಲಿ ಬಂಧಿಸಲಾಯಿತು. ರಾಹುಲ್ ಗಾಂಧಿಯನ್ನು ಬಿಜೆಪಿ ಸಾರ್ವಜನಿಕವಾಗಿ ಅಪಹಾಸ್ಯ ಮಾಡಿತು. ಮಹಾರಾಷ್ಟ್ರದ ಠಾಕ್ರೆ ಸರ್ಕಾರ ಕಾರ್ಯನಿರ್ವಹಿಸಲು ಅನುಮತಿ ಇಲ್ಲ. ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ಸರ್ಕಾರವನ್ನು ಉರುಳಿಸುವಲ್ಲಿ ಪ್ರಧಾನ ಮಂತ್ರಿಯವರ ಪಾಲು ಇದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಇದೆಲ್ಲವೂ ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ” ಎಂದು ಅದು ಹೇಳಿದೆ.

“ಹಾಗಾಗಿ ಪರಿಸ್ಥಿತಿ ಮತ್ತಷ್ಟು ಹದಗೆಡದಂತೆ ನೋಡಿಕೊಳ್ಳುವ ಜವಾಬ್ದಾರಿ ಕಾಂಗ್ರೆಸ್ ಮೇಲಿದೆ. ಆದರೆ ಕಾಂಗ್ರೆಸ್ ಮತ್ತು UPAನ ನಾಯಕತ್ವ ಮತ್ತು ಭವಿಷ್ಯದ ಬಗ್ಗೆ ಸ್ಪಷ್ಟತೆ ಇಲ್ಲ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್‌ಡಿಎ)ದಲ್ಲಿ ಬಿಜೆಪಿಯನ್ನು ಹೊರತುಪಡಿಸಿ ಬೇರೆ ಪಕ್ಷಗಳಿಲ್ಲ ಎಂಬಂತೆ UPAನಲ್ಲಿಯೂ ಬೇರೆ ಯಾರೂ ಇಲ್ಲ. ಬಿಜೆಪಿಗೆ ಮೋದಿ-ಅಮಿತ್ ಶಾ ಅವರಂತೆ UPAನಲ್ಲಿ ಪ್ರಭಲ ನಾಯಕರು ಯಾರೂ ಇಲ್ಲ. ಇದರ ಬಗ್ಗೆ ಕಾಂಗ್ರೆಸ್ ಗಂಭೀರವಾಗಿ ಆಲೋಚನೆ ಮಾಡದಿದ್ದರೆ ಎಲ್ಲರಿಗೂ ಭವಿಷ್ಯ ಕಷ್ಟಕರವಾಗಿರಲಿದೆ” ಎಂದು ಎಚ್ಚರಿಕೆ ನೀಡಿದೆ.


ಇದನ್ನೂ ಓದಿ: ಜೆಡಿಎಸ್ ಕೇವಲ ದೇವೇಗೌಡ-ಕುಮಾರಸ್ವಾಮಿಯವರ ಪಕ್ಷವಲ್ಲ: ಹೆಚ್.ಡಿ ದೇವೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...