Homeಮುಖಪುಟಬಿಜೆಪಿಯೇತರ ಪಕ್ಷಗಳು UPA ಅಡಿಯಲ್ಲಿ ಒಂದಾಗಬೇಕು - ಶಿವಸೇನೆ

ಬಿಜೆಪಿಯೇತರ ಪಕ್ಷಗಳು UPA ಅಡಿಯಲ್ಲಿ ಒಂದಾಗಬೇಕು – ಶಿವಸೇನೆ

ಕೇಂದ್ರ ಸರ್ಕಾರವನ್ನು ದೂಷಿಸುವ ಬದಲು, ವಿರೋಧ ಪಕ್ಷಗಳು ತನ್ನ ನಾಯಕತ್ವದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವುದು ಮುಖ್ಯ - ಸಾಮ್ನಾ

- Advertisement -
- Advertisement -

“ಕೇಂದ್ರದಲ್ಲಿ ವಿರೋಧ ಪಕ್ಷದಲ್ಲಿರುವ ಕಾಂಗ್ರೆಸ್ ದುರ್ಬಲವಾಗಿದೆ ಮತ್ತು ವಿಘಟನೆಯಾಗಿದೆ. ಹಾಗಾಗಿ ಬಿಜೆಪಿಯೇತರ ಪಕ್ಷಗಳೆಲ್ಲವೂ UPA ಅಡಿಯಲ್ಲಿ ಒಂದಾಗಬೇಕು” ಎಂದು ಶಿವಸೇನೆಯ ಮುಖವಾಣಿ ‘ಸಾಮ್ನಾ’ದ ಸಂಪಾದಕೀಯದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

“ಕೇಂದ್ರದಲ್ಲಿ ಅಧಿಕಾರದಲ್ಲಿರುವವರು ಈ ರೈತರ ಪ್ರತಿಭಟನೆಯ ಬಗ್ಗೆ ಅಸಡ್ಡೆ ಹೊಂದಿದ್ದಾರೆ. ಸರ್ಕಾರದ ಈ ಉದಾಸೀನ ನಡವಳಿಕೆಗೆ ಪರಿಣಾಮಕಾರಿಯಾದ ವಿರೋಧವಿಲ್ಲದಿರುವುದೇ ಕಾರಣ. ಇದು ಪ್ರಜಾಪ್ರಭುತ್ವದ ವಿಘಟನೆಗೂ ಕಾರಣವಾಗಿದೆ” ಎಂದು ಸಾಮ್ನಾ ಹೇಳಿದೆ.

ಇದನ್ನೂ ಓದಿ: ಕೇರಳದಲ್ಲಿ ನವ ವಿವಾಹಿತನ ಕೊಲೆ: ಮರ್ಯಾದೆಹೀನ ಹತ್ಯೆ ಶಂಕೆಯಲ್ಲಿ ವಧುವಿನ ತಂದೆ, ಚಿಕ್ಕಪ್ಪನ ಬಂಧನ

“ಕೇಂದ್ರ ಸರ್ಕಾರವನ್ನು ದೂಷಿಸುವ ಬದಲು, ವಿರೋಧ ಪಕ್ಷಗಳು ತನ್ನ ನಾಯಕತ್ವದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವುದು ಮುಖ್ಯ. ಪ್ರತಿಪಕ್ಷಗಳ ನಾಯಕತ್ವಕ್ಕೆ ಸಾಮೂಹಿಕ ಮನವಿ ಇರಬೇಕು” ಎಂದು ಹೇಳಿದೆ.

“ರಾಹುಲ್ ಗಾಂಧಿ ಏಕಾಂಗಿಯಾಗಿ ತೀವ್ರ ಹೋರಾಟ ನಡೆಸುತ್ತಿದ್ದಾರೆ. ಆದರೂ ಏನೋ ಕೊರತೆಯಿದೆ. ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (UPA)ನ ಪ್ರಸ್ತುತ ಸ್ಥಿತಿ ಎನ್‌ಜಿಒನಂತಾಗಿದೆ. ಯುಪಿಎ ಘಟಕಗಳು ಸಹ ರೈತರ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. ಈ ಘಟಕಗಳು ನಿಖರವಾಗಿ ಏನು ಮಾಡುತ್ತವೆ ಎಂಬುದರ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ” ಎಂದು ಸಾಮ್ನಾ ಆರೋಪಿಸಿದೆ.

ಇದನ್ನೂ ಓದಿ: ತೀವ್ರಗೊಂಡ ದೆಹಲಿ ಹೋರಾಟ – ಎರಡು ಹೆದ್ದಾರಿಗಳನ್ನು ಮುಚ್ಚಿದ ರೈತರು!

“ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ರಾಷ್ಟ್ರಮಟ್ಟದಲ್ಲಿ ಸ್ವತಂತ್ರ ವ್ಯಕ್ತಿತ್ವ ಹೊಂದಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಏಕಾಂಗಿ ಯುದ್ಧ ನಡೆಸುತ್ತಿದ್ದಾರೆ. ಈ ಸಮಯದಲ್ಲಿ ದೇಶದ ವಿರೋಧ ಪಕ್ಷಗಳು ಅವರ ಪರವಾಗಿ ನಿಲ್ಲಬೇಕು. ಮಮತಾ ಬ್ಯಾನರ್ಜಿ ಪವಾರ್ ಅವರನ್ನು ಮಾತ್ರ ಸಂಪರ್ಕಿಸಿದ್ದಾರೆ. ಅವರು ಮಾತ್ರ ಬಂಗಾಳಕ್ಕೆ ಹೋಗುತ್ತಿದ್ದಾರೆ. ಆದರೆ ಇದನ್ನು ಕಾಂಗ್ರೆಸ್ ನಾಯಕತ್ವದಲ್ಲಿ ಮಾಡಬೇಕಿತ್ತು” ಎಂದು ಅದು ಹೇಳಿದೆ.

“ತೃಣಮೂಲ ಕಾಂಗ್ರೆಸ್, ಶಿವಸೇನೆ, ಅಕಾಲಿ ದಳ, ಬಹುಜನ ಸಮಾಜ ಪಕ್ಷ (ಬಿಎಸ್‌ಪಿ), ಅಖಿಲೇಶ್ ಯಾದವ್, ಜಗನ್‌ಮೋಹನ್ ರೆಡ್ಡಿಯವರ ವೈಎಸ್ಆರ್ ಕಾಂಗ್ರೆಸ್, ತೆಲಂಗಾಣದ ಕೆ ಚಂದ್ರಶೇಖರ್ ರಾವ್, ಒಡಿಶಾದ ನವೀನ್ ಪಟ್ನಾಯಕ್, ಕರ್ನಾಟಕದ ಎಚ್‌ ಡಿ ಕುಮಾರಸ್ವಾಮಿ ಸೇರಿದಂತೆ ಎಲ್ಲರೂ ಬಿಜೆಪಿಗೆ ವಿರುದ್ಧವಾಗಿದ್ದಾರೆ. ಆದರೆ ಇವರೆಲ್ಲರೂ ಕಾಂಗ್ರೆಸ್ ನೇತೃತ್ವದ UPAನ ಭಾಗವಾಗಿಲ್ಲ. ಇವರೆಲ್ಲರೂ UPAಗೆ ಸೇರದಿದ್ದರೆ, ಪ್ರತಿಪಕ್ಷಗಳು ಒಂದು ದೊಡ್ಡ ಪರ್ಯಾಯವನ್ನು ಒದಗಿಸಲು ಸಾಧ್ಯವಿಲ್ಲ” ಎಂದು ಹೇಳಿದೆ.

ಇದನ್ನೂ ಓದಿ: ಕೆಲವರು ನನಗೆ ಪ್ರಜಾಪ್ರಭುತ್ವದ ಪಾಠ ಕಲಿಸಲು ಬಯಸುತ್ತಿದ್ದಾರೆ: ತಿರುಗೇಟು ನೀಡಿದ ಪ್ರಧಾನಿ

“ಕೃಷಿ ಕಾನೂನುಗಳ ಬಗ್ಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಪ್ರಿಯಾಂಕಾ ಗಾಂಧಿಯವರನ್ನು ದೆಹಲಿಯಲ್ಲಿ ಬಂಧಿಸಲಾಯಿತು. ರಾಹುಲ್ ಗಾಂಧಿಯನ್ನು ಬಿಜೆಪಿ ಸಾರ್ವಜನಿಕವಾಗಿ ಅಪಹಾಸ್ಯ ಮಾಡಿತು. ಮಹಾರಾಷ್ಟ್ರದ ಠಾಕ್ರೆ ಸರ್ಕಾರ ಕಾರ್ಯನಿರ್ವಹಿಸಲು ಅನುಮತಿ ಇಲ್ಲ. ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ಸರ್ಕಾರವನ್ನು ಉರುಳಿಸುವಲ್ಲಿ ಪ್ರಧಾನ ಮಂತ್ರಿಯವರ ಪಾಲು ಇದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಇದೆಲ್ಲವೂ ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ” ಎಂದು ಅದು ಹೇಳಿದೆ.

“ಹಾಗಾಗಿ ಪರಿಸ್ಥಿತಿ ಮತ್ತಷ್ಟು ಹದಗೆಡದಂತೆ ನೋಡಿಕೊಳ್ಳುವ ಜವಾಬ್ದಾರಿ ಕಾಂಗ್ರೆಸ್ ಮೇಲಿದೆ. ಆದರೆ ಕಾಂಗ್ರೆಸ್ ಮತ್ತು UPAನ ನಾಯಕತ್ವ ಮತ್ತು ಭವಿಷ್ಯದ ಬಗ್ಗೆ ಸ್ಪಷ್ಟತೆ ಇಲ್ಲ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್‌ಡಿಎ)ದಲ್ಲಿ ಬಿಜೆಪಿಯನ್ನು ಹೊರತುಪಡಿಸಿ ಬೇರೆ ಪಕ್ಷಗಳಿಲ್ಲ ಎಂಬಂತೆ UPAನಲ್ಲಿಯೂ ಬೇರೆ ಯಾರೂ ಇಲ್ಲ. ಬಿಜೆಪಿಗೆ ಮೋದಿ-ಅಮಿತ್ ಶಾ ಅವರಂತೆ UPAನಲ್ಲಿ ಪ್ರಭಲ ನಾಯಕರು ಯಾರೂ ಇಲ್ಲ. ಇದರ ಬಗ್ಗೆ ಕಾಂಗ್ರೆಸ್ ಗಂಭೀರವಾಗಿ ಆಲೋಚನೆ ಮಾಡದಿದ್ದರೆ ಎಲ್ಲರಿಗೂ ಭವಿಷ್ಯ ಕಷ್ಟಕರವಾಗಿರಲಿದೆ” ಎಂದು ಎಚ್ಚರಿಕೆ ನೀಡಿದೆ.


ಇದನ್ನೂ ಓದಿ: ಜೆಡಿಎಸ್ ಕೇವಲ ದೇವೇಗೌಡ-ಕುಮಾರಸ್ವಾಮಿಯವರ ಪಕ್ಷವಲ್ಲ: ಹೆಚ್.ಡಿ ದೇವೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...