Homeಮುಖಪುಟಬಿಜೆಪಿಯೇತರ ಪಕ್ಷಗಳು UPA ಅಡಿಯಲ್ಲಿ ಒಂದಾಗಬೇಕು - ಶಿವಸೇನೆ

ಬಿಜೆಪಿಯೇತರ ಪಕ್ಷಗಳು UPA ಅಡಿಯಲ್ಲಿ ಒಂದಾಗಬೇಕು – ಶಿವಸೇನೆ

ಕೇಂದ್ರ ಸರ್ಕಾರವನ್ನು ದೂಷಿಸುವ ಬದಲು, ವಿರೋಧ ಪಕ್ಷಗಳು ತನ್ನ ನಾಯಕತ್ವದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವುದು ಮುಖ್ಯ - ಸಾಮ್ನಾ

- Advertisement -
- Advertisement -

“ಕೇಂದ್ರದಲ್ಲಿ ವಿರೋಧ ಪಕ್ಷದಲ್ಲಿರುವ ಕಾಂಗ್ರೆಸ್ ದುರ್ಬಲವಾಗಿದೆ ಮತ್ತು ವಿಘಟನೆಯಾಗಿದೆ. ಹಾಗಾಗಿ ಬಿಜೆಪಿಯೇತರ ಪಕ್ಷಗಳೆಲ್ಲವೂ UPA ಅಡಿಯಲ್ಲಿ ಒಂದಾಗಬೇಕು” ಎಂದು ಶಿವಸೇನೆಯ ಮುಖವಾಣಿ ‘ಸಾಮ್ನಾ’ದ ಸಂಪಾದಕೀಯದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

“ಕೇಂದ್ರದಲ್ಲಿ ಅಧಿಕಾರದಲ್ಲಿರುವವರು ಈ ರೈತರ ಪ್ರತಿಭಟನೆಯ ಬಗ್ಗೆ ಅಸಡ್ಡೆ ಹೊಂದಿದ್ದಾರೆ. ಸರ್ಕಾರದ ಈ ಉದಾಸೀನ ನಡವಳಿಕೆಗೆ ಪರಿಣಾಮಕಾರಿಯಾದ ವಿರೋಧವಿಲ್ಲದಿರುವುದೇ ಕಾರಣ. ಇದು ಪ್ರಜಾಪ್ರಭುತ್ವದ ವಿಘಟನೆಗೂ ಕಾರಣವಾಗಿದೆ” ಎಂದು ಸಾಮ್ನಾ ಹೇಳಿದೆ.

ಇದನ್ನೂ ಓದಿ: ಕೇರಳದಲ್ಲಿ ನವ ವಿವಾಹಿತನ ಕೊಲೆ: ಮರ್ಯಾದೆಹೀನ ಹತ್ಯೆ ಶಂಕೆಯಲ್ಲಿ ವಧುವಿನ ತಂದೆ, ಚಿಕ್ಕಪ್ಪನ ಬಂಧನ

“ಕೇಂದ್ರ ಸರ್ಕಾರವನ್ನು ದೂಷಿಸುವ ಬದಲು, ವಿರೋಧ ಪಕ್ಷಗಳು ತನ್ನ ನಾಯಕತ್ವದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವುದು ಮುಖ್ಯ. ಪ್ರತಿಪಕ್ಷಗಳ ನಾಯಕತ್ವಕ್ಕೆ ಸಾಮೂಹಿಕ ಮನವಿ ಇರಬೇಕು” ಎಂದು ಹೇಳಿದೆ.

“ರಾಹುಲ್ ಗಾಂಧಿ ಏಕಾಂಗಿಯಾಗಿ ತೀವ್ರ ಹೋರಾಟ ನಡೆಸುತ್ತಿದ್ದಾರೆ. ಆದರೂ ಏನೋ ಕೊರತೆಯಿದೆ. ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (UPA)ನ ಪ್ರಸ್ತುತ ಸ್ಥಿತಿ ಎನ್‌ಜಿಒನಂತಾಗಿದೆ. ಯುಪಿಎ ಘಟಕಗಳು ಸಹ ರೈತರ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. ಈ ಘಟಕಗಳು ನಿಖರವಾಗಿ ಏನು ಮಾಡುತ್ತವೆ ಎಂಬುದರ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ” ಎಂದು ಸಾಮ್ನಾ ಆರೋಪಿಸಿದೆ.

ಇದನ್ನೂ ಓದಿ: ತೀವ್ರಗೊಂಡ ದೆಹಲಿ ಹೋರಾಟ – ಎರಡು ಹೆದ್ದಾರಿಗಳನ್ನು ಮುಚ್ಚಿದ ರೈತರು!

“ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ರಾಷ್ಟ್ರಮಟ್ಟದಲ್ಲಿ ಸ್ವತಂತ್ರ ವ್ಯಕ್ತಿತ್ವ ಹೊಂದಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಏಕಾಂಗಿ ಯುದ್ಧ ನಡೆಸುತ್ತಿದ್ದಾರೆ. ಈ ಸಮಯದಲ್ಲಿ ದೇಶದ ವಿರೋಧ ಪಕ್ಷಗಳು ಅವರ ಪರವಾಗಿ ನಿಲ್ಲಬೇಕು. ಮಮತಾ ಬ್ಯಾನರ್ಜಿ ಪವಾರ್ ಅವರನ್ನು ಮಾತ್ರ ಸಂಪರ್ಕಿಸಿದ್ದಾರೆ. ಅವರು ಮಾತ್ರ ಬಂಗಾಳಕ್ಕೆ ಹೋಗುತ್ತಿದ್ದಾರೆ. ಆದರೆ ಇದನ್ನು ಕಾಂಗ್ರೆಸ್ ನಾಯಕತ್ವದಲ್ಲಿ ಮಾಡಬೇಕಿತ್ತು” ಎಂದು ಅದು ಹೇಳಿದೆ.

“ತೃಣಮೂಲ ಕಾಂಗ್ರೆಸ್, ಶಿವಸೇನೆ, ಅಕಾಲಿ ದಳ, ಬಹುಜನ ಸಮಾಜ ಪಕ್ಷ (ಬಿಎಸ್‌ಪಿ), ಅಖಿಲೇಶ್ ಯಾದವ್, ಜಗನ್‌ಮೋಹನ್ ರೆಡ್ಡಿಯವರ ವೈಎಸ್ಆರ್ ಕಾಂಗ್ರೆಸ್, ತೆಲಂಗಾಣದ ಕೆ ಚಂದ್ರಶೇಖರ್ ರಾವ್, ಒಡಿಶಾದ ನವೀನ್ ಪಟ್ನಾಯಕ್, ಕರ್ನಾಟಕದ ಎಚ್‌ ಡಿ ಕುಮಾರಸ್ವಾಮಿ ಸೇರಿದಂತೆ ಎಲ್ಲರೂ ಬಿಜೆಪಿಗೆ ವಿರುದ್ಧವಾಗಿದ್ದಾರೆ. ಆದರೆ ಇವರೆಲ್ಲರೂ ಕಾಂಗ್ರೆಸ್ ನೇತೃತ್ವದ UPAನ ಭಾಗವಾಗಿಲ್ಲ. ಇವರೆಲ್ಲರೂ UPAಗೆ ಸೇರದಿದ್ದರೆ, ಪ್ರತಿಪಕ್ಷಗಳು ಒಂದು ದೊಡ್ಡ ಪರ್ಯಾಯವನ್ನು ಒದಗಿಸಲು ಸಾಧ್ಯವಿಲ್ಲ” ಎಂದು ಹೇಳಿದೆ.

ಇದನ್ನೂ ಓದಿ: ಕೆಲವರು ನನಗೆ ಪ್ರಜಾಪ್ರಭುತ್ವದ ಪಾಠ ಕಲಿಸಲು ಬಯಸುತ್ತಿದ್ದಾರೆ: ತಿರುಗೇಟು ನೀಡಿದ ಪ್ರಧಾನಿ

“ಕೃಷಿ ಕಾನೂನುಗಳ ಬಗ್ಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಪ್ರಿಯಾಂಕಾ ಗಾಂಧಿಯವರನ್ನು ದೆಹಲಿಯಲ್ಲಿ ಬಂಧಿಸಲಾಯಿತು. ರಾಹುಲ್ ಗಾಂಧಿಯನ್ನು ಬಿಜೆಪಿ ಸಾರ್ವಜನಿಕವಾಗಿ ಅಪಹಾಸ್ಯ ಮಾಡಿತು. ಮಹಾರಾಷ್ಟ್ರದ ಠಾಕ್ರೆ ಸರ್ಕಾರ ಕಾರ್ಯನಿರ್ವಹಿಸಲು ಅನುಮತಿ ಇಲ್ಲ. ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ಸರ್ಕಾರವನ್ನು ಉರುಳಿಸುವಲ್ಲಿ ಪ್ರಧಾನ ಮಂತ್ರಿಯವರ ಪಾಲು ಇದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಇದೆಲ್ಲವೂ ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ” ಎಂದು ಅದು ಹೇಳಿದೆ.

“ಹಾಗಾಗಿ ಪರಿಸ್ಥಿತಿ ಮತ್ತಷ್ಟು ಹದಗೆಡದಂತೆ ನೋಡಿಕೊಳ್ಳುವ ಜವಾಬ್ದಾರಿ ಕಾಂಗ್ರೆಸ್ ಮೇಲಿದೆ. ಆದರೆ ಕಾಂಗ್ರೆಸ್ ಮತ್ತು UPAನ ನಾಯಕತ್ವ ಮತ್ತು ಭವಿಷ್ಯದ ಬಗ್ಗೆ ಸ್ಪಷ್ಟತೆ ಇಲ್ಲ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್‌ಡಿಎ)ದಲ್ಲಿ ಬಿಜೆಪಿಯನ್ನು ಹೊರತುಪಡಿಸಿ ಬೇರೆ ಪಕ್ಷಗಳಿಲ್ಲ ಎಂಬಂತೆ UPAನಲ್ಲಿಯೂ ಬೇರೆ ಯಾರೂ ಇಲ್ಲ. ಬಿಜೆಪಿಗೆ ಮೋದಿ-ಅಮಿತ್ ಶಾ ಅವರಂತೆ UPAನಲ್ಲಿ ಪ್ರಭಲ ನಾಯಕರು ಯಾರೂ ಇಲ್ಲ. ಇದರ ಬಗ್ಗೆ ಕಾಂಗ್ರೆಸ್ ಗಂಭೀರವಾಗಿ ಆಲೋಚನೆ ಮಾಡದಿದ್ದರೆ ಎಲ್ಲರಿಗೂ ಭವಿಷ್ಯ ಕಷ್ಟಕರವಾಗಿರಲಿದೆ” ಎಂದು ಎಚ್ಚರಿಕೆ ನೀಡಿದೆ.


ಇದನ್ನೂ ಓದಿ: ಜೆಡಿಎಸ್ ಕೇವಲ ದೇವೇಗೌಡ-ಕುಮಾರಸ್ವಾಮಿಯವರ ಪಕ್ಷವಲ್ಲ: ಹೆಚ್.ಡಿ ದೇವೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...