Homeಮುಖಪುಟಬಿಜೆಪಿಯೇತರ ಪಕ್ಷಗಳು UPA ಅಡಿಯಲ್ಲಿ ಒಂದಾಗಬೇಕು - ಶಿವಸೇನೆ

ಬಿಜೆಪಿಯೇತರ ಪಕ್ಷಗಳು UPA ಅಡಿಯಲ್ಲಿ ಒಂದಾಗಬೇಕು – ಶಿವಸೇನೆ

ಕೇಂದ್ರ ಸರ್ಕಾರವನ್ನು ದೂಷಿಸುವ ಬದಲು, ವಿರೋಧ ಪಕ್ಷಗಳು ತನ್ನ ನಾಯಕತ್ವದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವುದು ಮುಖ್ಯ - ಸಾಮ್ನಾ

- Advertisement -
- Advertisement -

“ಕೇಂದ್ರದಲ್ಲಿ ವಿರೋಧ ಪಕ್ಷದಲ್ಲಿರುವ ಕಾಂಗ್ರೆಸ್ ದುರ್ಬಲವಾಗಿದೆ ಮತ್ತು ವಿಘಟನೆಯಾಗಿದೆ. ಹಾಗಾಗಿ ಬಿಜೆಪಿಯೇತರ ಪಕ್ಷಗಳೆಲ್ಲವೂ UPA ಅಡಿಯಲ್ಲಿ ಒಂದಾಗಬೇಕು” ಎಂದು ಶಿವಸೇನೆಯ ಮುಖವಾಣಿ ‘ಸಾಮ್ನಾ’ದ ಸಂಪಾದಕೀಯದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

“ಕೇಂದ್ರದಲ್ಲಿ ಅಧಿಕಾರದಲ್ಲಿರುವವರು ಈ ರೈತರ ಪ್ರತಿಭಟನೆಯ ಬಗ್ಗೆ ಅಸಡ್ಡೆ ಹೊಂದಿದ್ದಾರೆ. ಸರ್ಕಾರದ ಈ ಉದಾಸೀನ ನಡವಳಿಕೆಗೆ ಪರಿಣಾಮಕಾರಿಯಾದ ವಿರೋಧವಿಲ್ಲದಿರುವುದೇ ಕಾರಣ. ಇದು ಪ್ರಜಾಪ್ರಭುತ್ವದ ವಿಘಟನೆಗೂ ಕಾರಣವಾಗಿದೆ” ಎಂದು ಸಾಮ್ನಾ ಹೇಳಿದೆ.

ಇದನ್ನೂ ಓದಿ: ಕೇರಳದಲ್ಲಿ ನವ ವಿವಾಹಿತನ ಕೊಲೆ: ಮರ್ಯಾದೆಹೀನ ಹತ್ಯೆ ಶಂಕೆಯಲ್ಲಿ ವಧುವಿನ ತಂದೆ, ಚಿಕ್ಕಪ್ಪನ ಬಂಧನ

“ಕೇಂದ್ರ ಸರ್ಕಾರವನ್ನು ದೂಷಿಸುವ ಬದಲು, ವಿರೋಧ ಪಕ್ಷಗಳು ತನ್ನ ನಾಯಕತ್ವದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವುದು ಮುಖ್ಯ. ಪ್ರತಿಪಕ್ಷಗಳ ನಾಯಕತ್ವಕ್ಕೆ ಸಾಮೂಹಿಕ ಮನವಿ ಇರಬೇಕು” ಎಂದು ಹೇಳಿದೆ.

“ರಾಹುಲ್ ಗಾಂಧಿ ಏಕಾಂಗಿಯಾಗಿ ತೀವ್ರ ಹೋರಾಟ ನಡೆಸುತ್ತಿದ್ದಾರೆ. ಆದರೂ ಏನೋ ಕೊರತೆಯಿದೆ. ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (UPA)ನ ಪ್ರಸ್ತುತ ಸ್ಥಿತಿ ಎನ್‌ಜಿಒನಂತಾಗಿದೆ. ಯುಪಿಎ ಘಟಕಗಳು ಸಹ ರೈತರ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. ಈ ಘಟಕಗಳು ನಿಖರವಾಗಿ ಏನು ಮಾಡುತ್ತವೆ ಎಂಬುದರ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ” ಎಂದು ಸಾಮ್ನಾ ಆರೋಪಿಸಿದೆ.

ಇದನ್ನೂ ಓದಿ: ತೀವ್ರಗೊಂಡ ದೆಹಲಿ ಹೋರಾಟ – ಎರಡು ಹೆದ್ದಾರಿಗಳನ್ನು ಮುಚ್ಚಿದ ರೈತರು!

“ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ರಾಷ್ಟ್ರಮಟ್ಟದಲ್ಲಿ ಸ್ವತಂತ್ರ ವ್ಯಕ್ತಿತ್ವ ಹೊಂದಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಏಕಾಂಗಿ ಯುದ್ಧ ನಡೆಸುತ್ತಿದ್ದಾರೆ. ಈ ಸಮಯದಲ್ಲಿ ದೇಶದ ವಿರೋಧ ಪಕ್ಷಗಳು ಅವರ ಪರವಾಗಿ ನಿಲ್ಲಬೇಕು. ಮಮತಾ ಬ್ಯಾನರ್ಜಿ ಪವಾರ್ ಅವರನ್ನು ಮಾತ್ರ ಸಂಪರ್ಕಿಸಿದ್ದಾರೆ. ಅವರು ಮಾತ್ರ ಬಂಗಾಳಕ್ಕೆ ಹೋಗುತ್ತಿದ್ದಾರೆ. ಆದರೆ ಇದನ್ನು ಕಾಂಗ್ರೆಸ್ ನಾಯಕತ್ವದಲ್ಲಿ ಮಾಡಬೇಕಿತ್ತು” ಎಂದು ಅದು ಹೇಳಿದೆ.

“ತೃಣಮೂಲ ಕಾಂಗ್ರೆಸ್, ಶಿವಸೇನೆ, ಅಕಾಲಿ ದಳ, ಬಹುಜನ ಸಮಾಜ ಪಕ್ಷ (ಬಿಎಸ್‌ಪಿ), ಅಖಿಲೇಶ್ ಯಾದವ್, ಜಗನ್‌ಮೋಹನ್ ರೆಡ್ಡಿಯವರ ವೈಎಸ್ಆರ್ ಕಾಂಗ್ರೆಸ್, ತೆಲಂಗಾಣದ ಕೆ ಚಂದ್ರಶೇಖರ್ ರಾವ್, ಒಡಿಶಾದ ನವೀನ್ ಪಟ್ನಾಯಕ್, ಕರ್ನಾಟಕದ ಎಚ್‌ ಡಿ ಕುಮಾರಸ್ವಾಮಿ ಸೇರಿದಂತೆ ಎಲ್ಲರೂ ಬಿಜೆಪಿಗೆ ವಿರುದ್ಧವಾಗಿದ್ದಾರೆ. ಆದರೆ ಇವರೆಲ್ಲರೂ ಕಾಂಗ್ರೆಸ್ ನೇತೃತ್ವದ UPAನ ಭಾಗವಾಗಿಲ್ಲ. ಇವರೆಲ್ಲರೂ UPAಗೆ ಸೇರದಿದ್ದರೆ, ಪ್ರತಿಪಕ್ಷಗಳು ಒಂದು ದೊಡ್ಡ ಪರ್ಯಾಯವನ್ನು ಒದಗಿಸಲು ಸಾಧ್ಯವಿಲ್ಲ” ಎಂದು ಹೇಳಿದೆ.

ಇದನ್ನೂ ಓದಿ: ಕೆಲವರು ನನಗೆ ಪ್ರಜಾಪ್ರಭುತ್ವದ ಪಾಠ ಕಲಿಸಲು ಬಯಸುತ್ತಿದ್ದಾರೆ: ತಿರುಗೇಟು ನೀಡಿದ ಪ್ರಧಾನಿ

“ಕೃಷಿ ಕಾನೂನುಗಳ ಬಗ್ಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಪ್ರಿಯಾಂಕಾ ಗಾಂಧಿಯವರನ್ನು ದೆಹಲಿಯಲ್ಲಿ ಬಂಧಿಸಲಾಯಿತು. ರಾಹುಲ್ ಗಾಂಧಿಯನ್ನು ಬಿಜೆಪಿ ಸಾರ್ವಜನಿಕವಾಗಿ ಅಪಹಾಸ್ಯ ಮಾಡಿತು. ಮಹಾರಾಷ್ಟ್ರದ ಠಾಕ್ರೆ ಸರ್ಕಾರ ಕಾರ್ಯನಿರ್ವಹಿಸಲು ಅನುಮತಿ ಇಲ್ಲ. ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ಸರ್ಕಾರವನ್ನು ಉರುಳಿಸುವಲ್ಲಿ ಪ್ರಧಾನ ಮಂತ್ರಿಯವರ ಪಾಲು ಇದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಇದೆಲ್ಲವೂ ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ” ಎಂದು ಅದು ಹೇಳಿದೆ.

“ಹಾಗಾಗಿ ಪರಿಸ್ಥಿತಿ ಮತ್ತಷ್ಟು ಹದಗೆಡದಂತೆ ನೋಡಿಕೊಳ್ಳುವ ಜವಾಬ್ದಾರಿ ಕಾಂಗ್ರೆಸ್ ಮೇಲಿದೆ. ಆದರೆ ಕಾಂಗ್ರೆಸ್ ಮತ್ತು UPAನ ನಾಯಕತ್ವ ಮತ್ತು ಭವಿಷ್ಯದ ಬಗ್ಗೆ ಸ್ಪಷ್ಟತೆ ಇಲ್ಲ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್‌ಡಿಎ)ದಲ್ಲಿ ಬಿಜೆಪಿಯನ್ನು ಹೊರತುಪಡಿಸಿ ಬೇರೆ ಪಕ್ಷಗಳಿಲ್ಲ ಎಂಬಂತೆ UPAನಲ್ಲಿಯೂ ಬೇರೆ ಯಾರೂ ಇಲ್ಲ. ಬಿಜೆಪಿಗೆ ಮೋದಿ-ಅಮಿತ್ ಶಾ ಅವರಂತೆ UPAನಲ್ಲಿ ಪ್ರಭಲ ನಾಯಕರು ಯಾರೂ ಇಲ್ಲ. ಇದರ ಬಗ್ಗೆ ಕಾಂಗ್ರೆಸ್ ಗಂಭೀರವಾಗಿ ಆಲೋಚನೆ ಮಾಡದಿದ್ದರೆ ಎಲ್ಲರಿಗೂ ಭವಿಷ್ಯ ಕಷ್ಟಕರವಾಗಿರಲಿದೆ” ಎಂದು ಎಚ್ಚರಿಕೆ ನೀಡಿದೆ.


ಇದನ್ನೂ ಓದಿ: ಜೆಡಿಎಸ್ ಕೇವಲ ದೇವೇಗೌಡ-ಕುಮಾರಸ್ವಾಮಿಯವರ ಪಕ್ಷವಲ್ಲ: ಹೆಚ್.ಡಿ ದೇವೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...