Homeಮುಖಪುಟಬಿಜೆಪಿಯೇತರ ಪಕ್ಷಗಳು UPA ಅಡಿಯಲ್ಲಿ ಒಂದಾಗಬೇಕು - ಶಿವಸೇನೆ

ಬಿಜೆಪಿಯೇತರ ಪಕ್ಷಗಳು UPA ಅಡಿಯಲ್ಲಿ ಒಂದಾಗಬೇಕು – ಶಿವಸೇನೆ

ಕೇಂದ್ರ ಸರ್ಕಾರವನ್ನು ದೂಷಿಸುವ ಬದಲು, ವಿರೋಧ ಪಕ್ಷಗಳು ತನ್ನ ನಾಯಕತ್ವದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವುದು ಮುಖ್ಯ - ಸಾಮ್ನಾ

- Advertisement -
- Advertisement -

“ಕೇಂದ್ರದಲ್ಲಿ ವಿರೋಧ ಪಕ್ಷದಲ್ಲಿರುವ ಕಾಂಗ್ರೆಸ್ ದುರ್ಬಲವಾಗಿದೆ ಮತ್ತು ವಿಘಟನೆಯಾಗಿದೆ. ಹಾಗಾಗಿ ಬಿಜೆಪಿಯೇತರ ಪಕ್ಷಗಳೆಲ್ಲವೂ UPA ಅಡಿಯಲ್ಲಿ ಒಂದಾಗಬೇಕು” ಎಂದು ಶಿವಸೇನೆಯ ಮುಖವಾಣಿ ‘ಸಾಮ್ನಾ’ದ ಸಂಪಾದಕೀಯದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

“ಕೇಂದ್ರದಲ್ಲಿ ಅಧಿಕಾರದಲ್ಲಿರುವವರು ಈ ರೈತರ ಪ್ರತಿಭಟನೆಯ ಬಗ್ಗೆ ಅಸಡ್ಡೆ ಹೊಂದಿದ್ದಾರೆ. ಸರ್ಕಾರದ ಈ ಉದಾಸೀನ ನಡವಳಿಕೆಗೆ ಪರಿಣಾಮಕಾರಿಯಾದ ವಿರೋಧವಿಲ್ಲದಿರುವುದೇ ಕಾರಣ. ಇದು ಪ್ರಜಾಪ್ರಭುತ್ವದ ವಿಘಟನೆಗೂ ಕಾರಣವಾಗಿದೆ” ಎಂದು ಸಾಮ್ನಾ ಹೇಳಿದೆ.

ಇದನ್ನೂ ಓದಿ: ಕೇರಳದಲ್ಲಿ ನವ ವಿವಾಹಿತನ ಕೊಲೆ: ಮರ್ಯಾದೆಹೀನ ಹತ್ಯೆ ಶಂಕೆಯಲ್ಲಿ ವಧುವಿನ ತಂದೆ, ಚಿಕ್ಕಪ್ಪನ ಬಂಧನ

“ಕೇಂದ್ರ ಸರ್ಕಾರವನ್ನು ದೂಷಿಸುವ ಬದಲು, ವಿರೋಧ ಪಕ್ಷಗಳು ತನ್ನ ನಾಯಕತ್ವದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವುದು ಮುಖ್ಯ. ಪ್ರತಿಪಕ್ಷಗಳ ನಾಯಕತ್ವಕ್ಕೆ ಸಾಮೂಹಿಕ ಮನವಿ ಇರಬೇಕು” ಎಂದು ಹೇಳಿದೆ.

“ರಾಹುಲ್ ಗಾಂಧಿ ಏಕಾಂಗಿಯಾಗಿ ತೀವ್ರ ಹೋರಾಟ ನಡೆಸುತ್ತಿದ್ದಾರೆ. ಆದರೂ ಏನೋ ಕೊರತೆಯಿದೆ. ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (UPA)ನ ಪ್ರಸ್ತುತ ಸ್ಥಿತಿ ಎನ್‌ಜಿಒನಂತಾಗಿದೆ. ಯುಪಿಎ ಘಟಕಗಳು ಸಹ ರೈತರ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. ಈ ಘಟಕಗಳು ನಿಖರವಾಗಿ ಏನು ಮಾಡುತ್ತವೆ ಎಂಬುದರ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ” ಎಂದು ಸಾಮ್ನಾ ಆರೋಪಿಸಿದೆ.

ಇದನ್ನೂ ಓದಿ: ತೀವ್ರಗೊಂಡ ದೆಹಲಿ ಹೋರಾಟ – ಎರಡು ಹೆದ್ದಾರಿಗಳನ್ನು ಮುಚ್ಚಿದ ರೈತರು!

“ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ರಾಷ್ಟ್ರಮಟ್ಟದಲ್ಲಿ ಸ್ವತಂತ್ರ ವ್ಯಕ್ತಿತ್ವ ಹೊಂದಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಏಕಾಂಗಿ ಯುದ್ಧ ನಡೆಸುತ್ತಿದ್ದಾರೆ. ಈ ಸಮಯದಲ್ಲಿ ದೇಶದ ವಿರೋಧ ಪಕ್ಷಗಳು ಅವರ ಪರವಾಗಿ ನಿಲ್ಲಬೇಕು. ಮಮತಾ ಬ್ಯಾನರ್ಜಿ ಪವಾರ್ ಅವರನ್ನು ಮಾತ್ರ ಸಂಪರ್ಕಿಸಿದ್ದಾರೆ. ಅವರು ಮಾತ್ರ ಬಂಗಾಳಕ್ಕೆ ಹೋಗುತ್ತಿದ್ದಾರೆ. ಆದರೆ ಇದನ್ನು ಕಾಂಗ್ರೆಸ್ ನಾಯಕತ್ವದಲ್ಲಿ ಮಾಡಬೇಕಿತ್ತು” ಎಂದು ಅದು ಹೇಳಿದೆ.

“ತೃಣಮೂಲ ಕಾಂಗ್ರೆಸ್, ಶಿವಸೇನೆ, ಅಕಾಲಿ ದಳ, ಬಹುಜನ ಸಮಾಜ ಪಕ್ಷ (ಬಿಎಸ್‌ಪಿ), ಅಖಿಲೇಶ್ ಯಾದವ್, ಜಗನ್‌ಮೋಹನ್ ರೆಡ್ಡಿಯವರ ವೈಎಸ್ಆರ್ ಕಾಂಗ್ರೆಸ್, ತೆಲಂಗಾಣದ ಕೆ ಚಂದ್ರಶೇಖರ್ ರಾವ್, ಒಡಿಶಾದ ನವೀನ್ ಪಟ್ನಾಯಕ್, ಕರ್ನಾಟಕದ ಎಚ್‌ ಡಿ ಕುಮಾರಸ್ವಾಮಿ ಸೇರಿದಂತೆ ಎಲ್ಲರೂ ಬಿಜೆಪಿಗೆ ವಿರುದ್ಧವಾಗಿದ್ದಾರೆ. ಆದರೆ ಇವರೆಲ್ಲರೂ ಕಾಂಗ್ರೆಸ್ ನೇತೃತ್ವದ UPAನ ಭಾಗವಾಗಿಲ್ಲ. ಇವರೆಲ್ಲರೂ UPAಗೆ ಸೇರದಿದ್ದರೆ, ಪ್ರತಿಪಕ್ಷಗಳು ಒಂದು ದೊಡ್ಡ ಪರ್ಯಾಯವನ್ನು ಒದಗಿಸಲು ಸಾಧ್ಯವಿಲ್ಲ” ಎಂದು ಹೇಳಿದೆ.

ಇದನ್ನೂ ಓದಿ: ಕೆಲವರು ನನಗೆ ಪ್ರಜಾಪ್ರಭುತ್ವದ ಪಾಠ ಕಲಿಸಲು ಬಯಸುತ್ತಿದ್ದಾರೆ: ತಿರುಗೇಟು ನೀಡಿದ ಪ್ರಧಾನಿ

“ಕೃಷಿ ಕಾನೂನುಗಳ ಬಗ್ಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಪ್ರಿಯಾಂಕಾ ಗಾಂಧಿಯವರನ್ನು ದೆಹಲಿಯಲ್ಲಿ ಬಂಧಿಸಲಾಯಿತು. ರಾಹುಲ್ ಗಾಂಧಿಯನ್ನು ಬಿಜೆಪಿ ಸಾರ್ವಜನಿಕವಾಗಿ ಅಪಹಾಸ್ಯ ಮಾಡಿತು. ಮಹಾರಾಷ್ಟ್ರದ ಠಾಕ್ರೆ ಸರ್ಕಾರ ಕಾರ್ಯನಿರ್ವಹಿಸಲು ಅನುಮತಿ ಇಲ್ಲ. ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ಸರ್ಕಾರವನ್ನು ಉರುಳಿಸುವಲ್ಲಿ ಪ್ರಧಾನ ಮಂತ್ರಿಯವರ ಪಾಲು ಇದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಇದೆಲ್ಲವೂ ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ” ಎಂದು ಅದು ಹೇಳಿದೆ.

“ಹಾಗಾಗಿ ಪರಿಸ್ಥಿತಿ ಮತ್ತಷ್ಟು ಹದಗೆಡದಂತೆ ನೋಡಿಕೊಳ್ಳುವ ಜವಾಬ್ದಾರಿ ಕಾಂಗ್ರೆಸ್ ಮೇಲಿದೆ. ಆದರೆ ಕಾಂಗ್ರೆಸ್ ಮತ್ತು UPAನ ನಾಯಕತ್ವ ಮತ್ತು ಭವಿಷ್ಯದ ಬಗ್ಗೆ ಸ್ಪಷ್ಟತೆ ಇಲ್ಲ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್‌ಡಿಎ)ದಲ್ಲಿ ಬಿಜೆಪಿಯನ್ನು ಹೊರತುಪಡಿಸಿ ಬೇರೆ ಪಕ್ಷಗಳಿಲ್ಲ ಎಂಬಂತೆ UPAನಲ್ಲಿಯೂ ಬೇರೆ ಯಾರೂ ಇಲ್ಲ. ಬಿಜೆಪಿಗೆ ಮೋದಿ-ಅಮಿತ್ ಶಾ ಅವರಂತೆ UPAನಲ್ಲಿ ಪ್ರಭಲ ನಾಯಕರು ಯಾರೂ ಇಲ್ಲ. ಇದರ ಬಗ್ಗೆ ಕಾಂಗ್ರೆಸ್ ಗಂಭೀರವಾಗಿ ಆಲೋಚನೆ ಮಾಡದಿದ್ದರೆ ಎಲ್ಲರಿಗೂ ಭವಿಷ್ಯ ಕಷ್ಟಕರವಾಗಿರಲಿದೆ” ಎಂದು ಎಚ್ಚರಿಕೆ ನೀಡಿದೆ.


ಇದನ್ನೂ ಓದಿ: ಜೆಡಿಎಸ್ ಕೇವಲ ದೇವೇಗೌಡ-ಕುಮಾರಸ್ವಾಮಿಯವರ ಪಕ್ಷವಲ್ಲ: ಹೆಚ್.ಡಿ ದೇವೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...