Homeಮುಖಪುಟಲೋಕಸಭೆಯಲ್ಲಿ ರಾಹುಲ್‌ಗೆ ಮಾನಹಾನಿ ಮಾಡಿದ ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ ವಿಶೇಷ ಹಕ್ಕು ಉಲ್ಲಂಘನೆ ನೋಟಿಸ್

ಲೋಕಸಭೆಯಲ್ಲಿ ರಾಹುಲ್‌ಗೆ ಮಾನಹಾನಿ ಮಾಡಿದ ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ ವಿಶೇಷ ಹಕ್ಕು ಉಲ್ಲಂಘನೆ ನೋಟಿಸ್

- Advertisement -
- Advertisement -

ರಾಹುಲ್ ಗಾಂಧಿ ಅವರ ‘ಪ್ರಜಾಪ್ರಭುತ್ವ’ ಹೇಳಿಕೆಗಳ ಕುರಿತು ಸಂಸತ್ತಿನಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವಿನ ಕಾಳಗ ಮುಂದುವರಿದಿದ್ದು, ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ವಿಶೇಷ ಹಕ್ಕು ಉಲ್ಲಂಘನೆಗೆ ನೋಟಿಸ್ ದಾಖಲಿಸಿದೆ.

ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಅವರು, ಲೋಕಸಭೆಯ ಕಾರ್ಯವೈಖರಿ ಮತ್ತು ವ್ಯವಹಾರದ ನಡವಳಿಕೆಯ ನಿಯಮಗಳ 222ರ ಅಡಿಯಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಲ್ಲಿಸಿದ ಪತ್ರದಲ್ಲಿ, ”ಮಾರ್ಚ್ 13ರಂದು ಲೋಕಸಭೆಯಲ್ಲಿ ಅವರು ಮಾಡಿದ ಭಾಷಣದಲ್ಲಿ ನಿಯಮ 352 (vii) ಮತ್ತು ನಿಯಮ 353ನ್ನು ಉಲ್ಲಂಘಿಸಿದ್ದಕ್ಕಾಗಿ ರಾಜನಾಥ್ ಸಿಂಗ್ ವಿರುದ್ಧ ಅವರು ನೋಟಿಸ್ ನೀಡುತ್ತಿರುವುದಾಗಿ ಹೇಳಿದ್ದಾರೆ.

”ಮಾರ್ಚ್ 13, 2023 ರಂದು (ಬೆಳಿಗ್ಗೆ 11 ಗಂಟೆಗೆ), ಸಂಸತ್ತಿನ ಅಧಿವೇಶನಕ್ಕೆ ಸೇರಿದಾಗ ರಾಜನಾಥ್ ಸಿಂಗ್ ಅವರು ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಿ, ಯಾವುದೇ ಮುಂಗಡ ಸೂಚನೆ ನೀಡದೆಯೇ ಸಂಸತ್ ಸದಸ್ಯ ರಾಹುಲ್ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ” ಎಂದು ಟ್ಯಾಗೋರ್ ಪತ್ರದಲ್ಲಿ ತಿಳಿಸಿದ್ದಾರೆ.

ಕೇಂದ್ರ ಸಚಿವರ ಈ ಅವಹೇಳನಕಾರಿ ಹೇಳಿಕೆಗಳನ್ನು ಆಡಳಿತ ಪಕ್ಷದ ಸದಸ್ಯರು ಆಧಾರರಹಿತ ಆರೋಪಗಳಿಂದ ಬೆಂಬಲಿಸಿದರು. ಸಂಸತ್ತಿನ ಹಲವು ಸದಸ್ಯರು ಅದನ್ನು ಮುಂದುವರೆಸಿದ್ದಾರೆ ಎಂದು ಅವರು ಗಮನಸೆಳೆದಿದ್ದಾರೆ.

ಇದನ್ನೂ ಓದಿ: ಲೋಕಸಭೆಯಲ್ಲಿ 20 ನಿಮಿಷ ಮೈಕ್ರೊಫೋನ್‌ ಮ್ಯೂಟ್: ಇದು ಪ್ರಜಾಪ್ರಭುತ್ವವೇ? ಎಂದ ಕಾಂಗ್ರೆಸ್

ಅಷ್ಟೇ ಅಲ್ಲದೇ, ಮತ್ತೊಂದು ಗಾಬರಿ ಹುಟ್ಟಿಸುವ ಸಂಗತಿಯೆಂದರೆ, ಸಂಸತ್ತಿನಲ್ಲಿ ಸದಸ್ಯರೊಬ್ಬರ ಮೇಲೆ ಈ ರೀತಿ ಚಾರಿತ್ರ್ಯ ಹರಣಕ್ಕೆ ಅವಕಾಶ ನೀಡಲಾಗುತ್ತಿರುವುದು ಮಾತ್ರವಲ್ಲ, ಅದನ್ನು ಪ್ರೋತ್ಸಾಹಿಸಲಾಗುತ್ತಿದೆ. ರಾಹುಲ್ ಗಾಂಧಿ ವಿರುದ್ಧ ಮಾಡಲಾಗುತ್ತಿರುವ ಆರೋಪಗಳ ವಿಚಾರವಾಗಿ ತಮ್ಮನ್ನು ಸಮರ್ಥಿಸಿಕೊಳ್ಳಲು ಅಥವಾ ಅವರ ವಿರುದ್ಧ ಎತ್ತಿರುವ ಆರೋಪಗಳನ್ನು ನಿರಾಕರಿಸಲು ರಾಹುಲ್‌ ಗಾಂಧಿ ಅವರಿಗೆ ಯಾವುದೇ ಅವಕಾಶವನ್ನು ನೀಡಲಾಗಿಲ್ಲ” ಎಂದು ಅವರು ಹೇಳಿದ್ದಾರೆ.

ರಾಜನಾಥ್ ಸಿಂಗ್ ಮಾಡಿದ ಭಾಷಣದ ಸಂಬಂಧಿತ ಭಾಗವನ್ನು ಕಾಂಗ್ರೆಸ್ ಸಂಸದರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಲೋಕಸಭೆಯಲ್ಲಿ ರಕ್ಷಣಾ ಸಚಿವರು, ”ಲೋಕಸಭಾ ಸದಸ್ಯ ರಾಹುಲ್ ಗಾಂಧಿ ಅವರು ಲಂಡನ್‌ಗೆ ಹೋಗಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಹೇಳುವ ಮೂಲಕ ದೇಶದ ಘನತೆಗೆ ಧಕ್ಕೆ ತಂದಿದ್ದಾರೆ. ವಿದೇಶಿ ಶಕ್ತಿಗಳು ಭಾರತದ ಪ್ರಜಾಪ್ರಭುತ್ವವನ್ನು ಉಳಿಸಬೇಕು. ರಾಹುಲ್ ಭಾರತದ ಗೌರವ ಮತ್ತು ಪ್ರತಿಷ್ಠೆಗೆ ಧಕ್ಕೆ ತರಲು ಯತ್ನಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.

”ರಾಜನಾಥ್ ಸಿಂಗ್ ಅವರ ಈ ಹೇಳಿಕೆಗಳು ಮಾನಹಾನಿಕರಕವಾಗಿವೆ. ಇಂತಹ ಸುಳ್ಳು ಹೇಳಿಕೆಗಳನ್ನು ನೀಡುವಾಗ ಅವರು ಸಾಕ್ಷಿಗಳನ್ನು ಒದಗಿಸಿಲ್ಲ ಅಥವಾ ಅವರು ರಾಹುಲ್ ಗಾಂಧಿ ವಿರುದ್ಧದ ಹಕ್ಕುಗಳನ್ನು ಬೆಂಬಲಿಸಲು ಯಾವುದೇ ವಿಡಿಯೋ ಅಥವಾ ದಾಖಲೆಗಳನ್ನು ಒದಗಿಸಿಲ್ಲ. ಆದ್ದರಿಂದ, ರಾಜನಾಥ್ ಸಿಂಗ್ ಅವರು ಲೋಕಸಭಾ ನಿಯಮಗಳ ನಿಯಮ 352 (ii) ಮತ್ತು ನಿಯಮ 353 ಅನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ ಮತ್ತು ಈ ವಿಷಯವನ್ನು ಆದ್ಯತೆಯ ಮೇರೆಗೆ ಸದರಿ ಸದಸ್ಯರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಟ್ಯಾಗೋರ್ ಆಗ್ರಹಿಸಿದ್ದಾರೆ.

ಕಳೆದ ವಾರ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ರಾಹುಲ್ ಗಾಂಧಿಯವರ  ಉಚ್ಚಾಟನೆಯನ್ನು ಪರಿಗಣಿಸಲು ವಿಶೇಷ ಸಮಿತಿಯನ್ನು ರಚಿಸುವಂತೆ ಕೋರಿದ್ದರು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು, ರಾಹುಲ್ ಮತ್ತು ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿಶೇಷ ಹಕ್ಕು ಮಂಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Idiot bjp , if they done right others done wrong what the hell bjp concept and agenda iff rss comes to india india will go back 30 yrs and we will not survive in the country again we wil go raja jithadallu system

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...