Homeರಾಜಕೀಯಕಾಂಗ್ರೆಸ್ಸುವೆ, ಜೇಡಿಯೆಸ್ಸುವೆ ಸೇರಿ ಮಾಡ್ಕ್ಯಂಡಿರೋ ಸಮ್ಮಿಸ್ರ ಸರ್ಕಾರ

ಕಾಂಗ್ರೆಸ್ಸುವೆ, ಜೇಡಿಯೆಸ್ಸುವೆ ಸೇರಿ ಮಾಡ್ಕ್ಯಂಡಿರೋ ಸಮ್ಮಿಸ್ರ ಸರ್ಕಾರ

- Advertisement -
- Advertisement -

`ಕಾಂಗ್ರೆಸ್ಸುವೆ, ಜೇಡಿಯೆಸ್ಸುವೆ ಸೇರಿ ಮಾಡ್ಕ್ಯಂಡಿರೋ ಸಮ್ಮಿಸ್ರ ಸರ್ಕಾರುದೊಳಗೆ ಶ್ಯಾನೆ ನ್ಯೆಲಬಾಂಬುಗಳು ಅವೆ. ಅವು ಯಾವಾಗ ಬೇಕಾದ್ರು ಢಮೀಲ್ ಅನಬೈದು. ಅವು ಢಂ ಅಂದೇಟಿಗೆ ಈ ಸರ್ಕಾರ ಬಿದ್ದೋಯ್ತದೆ ನೋಡ್ಕಂಡಿರಿ. ನಾ ದಿಟವುನೇ ಹ್ಯೇಳ್ತೀನಿ, ಸುಳ್ಳು ಪಳ್ಳು ನಂಗೆ ಬರಾಕಿಲ್ಲ. ನಾವು ಈ ಎಲ್ಡೂ ಪಕ್ಸುದ ಯಾರ್ನೂವೆ ಸಂಪರ್ಕಿಸಿಲ್ಲ. ಆದ್ರುವೇ, ಲೋಕ್ಸಭೆ ಎಲೆಕ್ಷನ್ ಒಳೀಕೆ ಈ ಗೋರ್ಮೆಂಟ್ ಬಿದ್ದೋಗದ್ರಲ್ಲಿ ಡೌಟೇ ಇಲ್ಲಾ ಕಣ್ರ. ಯಾಕಂದ್ರೆ ನ್ಯೆಲಬಾಂಬುಗಳು ಅಷ್ಟು ಸ್ಟ್ರಾಂಗಾಗವೆ’

– ಯೆಮ್ಪಿ ರೇಣುಕಾಚಾರ್ಯ, ನರ್ಸ್ ವೃತ್ತಿಗೆ ಅಪಾರ ಗೌರವ ಕೊಡೊ ಬಿಎಸ್‍ವೈ ಮಾನಸಪುತ್ರ

*****

`
ನೋಡಿ, ನಾವು ಈರಸೈವ ಲಿಂಗಾಯುತ್ರು ರಾಜಕೀಯುದಾಗೆ ಶ್ಯಾನೆ ವೀಕ್ ಆಗ್ತಾ ಇದೀವಿ. ನಾವ್ಯೆಲ್ರುವೆ ಒಗ್ಗಟ್ಟಾಗಬ್ಯೇಕಿದೆ. ಬ್ಯಾರೆಬ್ಯಾರೆ ಸಮುದಾಯುದವ್ರು, ಅವುರ ರಾಜಕೀಯ ನಾಯುಕ್ರ ಬಗ್ಗೆ `ನಮ್ಮವೃ’ ಅಂತ ಎದೆಯ ತಟಿಗಂಡು ಹ್ಯೇಳ್ಕಬೇಕಾರೆ, ನಾವ್ಯಾಕೆ ಯಡ್ಯೋರಪ್ನೋರನ್ನ ನಂ ಸಮಾಜುದ ಧ್ಯೀಮಂತ ನಾಯುಕ ಅಂತ ಹ್ಯೇಳ್ಕಬಾರುದು. ಅದ್ರಲ್ಲಿ ಏನೂ ತ್ಯೆಪ್ಪಿಲ್ಲ. ಕಳುದ ಯೆಲೆಕ್ಸೆನ್ನಾಗೆ ವರುಣಾ ಕ್ಸೇತ್ರುದಿಂದ ಯಡ್ಯೋರಪ್ನೋರ ಮಗ ಇಜಯೇಂದ್ರ ಕಂಟೆಸ್ಟ್ ಮಾಡಿದ್ದ್ರೆ, ಆ ಭಾಗುದ ಐದಾರು ಕ್ಸೇತೃಗುಳಲ್ಲಿ ಬೀಜೇಪಿ ಗ್ಯೆಲ್ತಿತ್ತು, ಸುಲುಬವಾಗಿ ಸರ್ಕಾರನೂ ಮಾಡ್ತಿತ್ತು. ಈ ಮಾತ್ನ ನಾನು ಹ್ಯೇಳ್ತಿಲ್ಲ, ಜ್ಯನ ನನ್ನತ್ರ ಹ್ಯೇಳ್ತಾ ಅವುರೆ..’
– ಸ್ರೀ ಸ್ರೀ ಸಿದ್ದಲಿಂಗ ಸ್ವಾಮಿಗಳು, ನಡೆದಾಡೊ ದೇವರಿರುವ ತುಮಕೂರು ಮಠದ ಅಧ್ಯಕ್ಷರು

*****

`ದೇಖೋ ಬಾಯಿಸಾಬ್, ಈ ಅತ್ಯಾಚಾರ ಅನ್ನೋದು ಏನದೆ, ಅದು ನಂ ಸಮಾಜುದ ಸಹಜ ಸೋಸಿಯಲ್ ಪ್ರದೂಷಣೆ ಅದೆ. ಅದುನ್ನ ತಡಿಯೋಕೆ ಯಾರಿಂದ್ಲೂ ಸಾದ್ಯ ಇಲ್ರ. ನಮ್ಮಂತ ನರಮನುಸ್ಯರ ಕಥೆಯ ಬ್ಯಿಡಿ. ಸಾಕ್ಸಾತ್ ಸ್ರೀ ರಾಮಚಂದ್ರ ಪ್ರಭುವೇ ಮತ್ತೆ ಹ್ವುಟ್ಟಿ ಬಂದ್ರೂ, ಆತುನಿಗೂ ಇದುನ್ನ ತಡಿಯೋಕೆ ಆಗಕ್ಕಿಲ್ಲ ಅಂತೀನಿ’
– ಸುರೇಂದ್ರ ಸಿಂಗ್, ರಾಮರಾಜ್ಯದ ಅಂಬಾಸಿಡರ್ರು ಯೋಗಿ ಆದಿತ್ಯನಾಥರ ಬೆಟಾಲಿಯನ್‍ನ ಬಿಜೆಪಿ ಶಾಸಕ

*****

`ರೈತೃ ಆತುಮಹತ್ಯೆಯ ಮಾಡ್ಕ್ಯಂತಿರೋದು ನಿಜ. ಆದುರೆ, ಹಿಂಗೆ ರೈತೃ ಸಾಯ್ತಾ ಇರೋದು ಇದೇ ಮೊದುಲುನೇ ಕಿತಾ ಏನು ಅಲ್ವಲ್ಲಾ. ಅದು ಹಳೇ ಸಮಸ್ಯೆ. ಶ್ಯಾನೆ ವರ್ಸುಗಳಿಂದ ಅವುರು ಆತುಮಹತ್ಯೆಯ ಮಾಡ್ಕ್ಯಂತಲೇ ಬಂದವುರೆ. ಅದುಕ್ಕೆ ನಮ್ಮುನ್ನ್ಯಾಕೆ ದೂರುತೀರಿ. ಆಕ್ಚುಲೀ, ನಂ ಮ್ವೋದಿಯವುರ ಸರ್ಕಾರ ಬಂದ ಮ್ಯಾಲೆ ರೈತುರ ಉದ್ದಾರಕ್ಕೆ ಅಂತ ಬೆಂಬುಲ ಬೆಲೆಯ ಜ್ಯಾಸ್ತಿ ಮಾಡ್ಯವುರೆ, ಕೃಷಿ ಸಾಲ ಮನ್ನಾ ಮಾಡ್ಯವುರೆ (?), ಬೆಳೆ ಇಮೆಯ ಮಾಡಿಕೊಟ್ಟವುರೆ. ಆದ್ರೂ ರೈತೃ ಸಾಯ್ತಾಲೆ ಅವುರೆ ಅಂದ್ರೆ, ಅದುಕ್ಕೆ ಬ್ಯಾರೇದೆ ಕಾರುಣ ಇರ್ಬೇಕು..’
– ಸುರೇಶ್ ಪ್ರಭು, ಹೊಲದಿಂದ ಹೊಲಕ್ಕೆ ಟ್ರಿಪ್ ಮಾಡುತ್ತಿರುವ ರೈತಬಂಧು ಮೋದಿಯವರ ಸಂಪುಟದ ಕಾಮರ್ಸ್ ಮಂತ್ರಿ

*****

`ಈ ಬೀಜೇಪಿಯವುರು ಅಮಾಯುಕ ಹುಡುಗ್ರನ್ನ ಬಲಿಕ್ವೊಟ್ಟು, ಬಾಬುರಿ ಮಸೀದಿಯ ಕ್ಯೆಡುವಿ ಹಾಕಿದ್ರು. ಭಗುವಂತ ರಾಮುನ ಹೆಸುರಲ್ಲಿ ರಾಜಕೀಯವ ಮಾಡಿ, ಅಧಿಕಾರುವ ಪಡಕಂಡ್ರು. ಆದ್ರುವೆ ರಾಮಮಂದಿರುವ ಕಟ್ಟುಲೇ ಇಲ್ಲ. ಪರ್ದಾನಿ ಮ್ವೋದಿ ಸಾಹೇಬರು ಅಂಡ್ ಎಗುಸ್ಟ್ರಾ ಬೀಜೇಪಿ ಲೀಡ್ರುಗಳಿಗೆ ದಿಟವಾಗುಲೂ ಧಂ ಇದ್ದ್ರೆ, ಅಯೋಧ್ಯನಾಗೆ ಮೊದಲು ರಾಮಮಂದಿರುಕ್ಕೆ ಅಡಿಪಾಯುವ ಹಾಕಿ, ಆಮ್ಯಾಕೆ ಎಂಪಿ ಯೆಲೆಕ್ಸನ್ ಪ್ರಚಾರುಕ್ಕೆ ಇಳೀಲಿ. ಈ ಬೀಜೇಪಿನೋರು ಮ್ವೋದಿ ಹೆಸುರಲ್ಲಿ ಕತ್ತೆಯ ನಿಲ್ಲಿಸಿದ್ರೂ, ಗ್ಯೆಲ್ಲುತ್ತೆ ಅನ್ಕೊಂಡು, ಟಿಕೇಟುಗಳ ಮಾರಾಟ ಮಾಡ್ತಾ ಅವುರೆ. ನಾಚ್ಯಿಕೆ ಆಗ್ಬೇಕು…’
– ಎಸ್ಕೆ ಬೆಳ್ಳುಬ್ಬಿ, ಜೆಡಿಎಸ್ ನಿರಾಶ್ರಿತ ಶಿಬಿರದಲ್ಲಿ ನಿಟ್ಟುಸಿರು ಬಿಡುತ್ತಿರುವ ಮಾಜಿ ಬಿಜೆಪಿಗ

*****

`ದ್ಯೇವರು ಇದಾನೆ ಅನ್ನೋದಕ್ಕೆ ಯಾವನಾರ ಒಂದ್ ಸಾಕ್ಷಿಯ ನೀಡ್ಲಪ್ಪಾ, ಆ ಕೂಡ್ಲೇ ನಾನು ನನ್ನ ಸ್ಥಾನುಕ್ಕೆ ರಾಜೀನಾಮೆಯ ಕೊಟ್ಟುಬುಡ್ತೀನಿ. ದ್ಯೇವುರ ಪಾಸ್‍ಪೋರ್ಟ್ ಸೈಜಿನ ಲೈವ್‍ಫೋಟೊ, ಅಥುವಾ ಮನುಸ್ಯರ ಜ್ವತೆ ಆತ ತ್ಯೆಗಿಸಿಕೊಂಡಿರೊ ಸೆಲ್ಫಿ, ಅಥುವಾ ನಾನು ದ್ಯೇವುರ ಕೂಟೆ ಮಾತಾಡಿದೀನಿ ಅನ್ನೋದುಕ್ಕೆ ಯಾರಾದ್ರು ಪುರಾವೆ ತಂದ್ರೆ ನನ್ನ ರಾಜೀನಾಮೆ ಫಿಕ್ಸು…’
– ರೊಡ್ರಿಗೊ ಡುಟೆರ್ಟಾ, ವಿಲಕ್ಷಣ ವ್ಯಕ್ತಿತ್ವದ ಕ್ರೂರ ಸ್ವಭಾವದ ಫಿಲಿಫೈನ್ಸ್ ಅಧ್ಯಕ್ಷ

*****

`ದ್ಯಾವೇಗೋಡ್ರು ಜಾತುಕವ ಶ್ಯಾನೆ ನಂಬುತಾರೆ. ಅವುರದು ಮತ್ತು ರೇವಣ್ಣುಂದೂ ಜ್ಯಾತುಕ ಹ್ವೊಂದಾಣಿಕೆ ಆಯ್ತವೆ. ಆದ್ರೆ ಕುಮಾರ್ಸೋಮಿಗಳುದ್ದೇ ಒಸಿ ಇಂಡಿಪೆಂಡೆಂಟು. ಅಟ್ಟು ದಿ ಸೇಮ್ ಠೇಮ್, ದ್ಯಾವೇಗೋಡ್ರು ಜಾತುಕವೂ ಸಿದ್ರಾಮಯ್ಯುನ ಜ್ಯಾತುಕವೂ ತಾಳೆ ಆಗ್ತವೆ. ಅದುಕ್ಕೆ ಅವುರಿಬ್ರು ಒಂದಾದಾಗ ಅಧಿಕಾರ ಸಿಕ್ತದೆ, ದೂರದೂರ ಆದ ಕೂಡ್ಲೆ ಅಧಿಕಾರುವೂ ಕೈಬಿಟ್ಟು ಹೋಯ್ತದೆ. ಈ ಜ್ಯಾತುಕ ಹ್ಯೇಳೋರ್ದೂ ಒಂದ್ ದ್ವೊಡ್ಡ್ ಲಾಬಿ ಐತಿ ನೋಡ್ರಿ ಮತಾ….. ಬೈದುಬೈ ಜ್ಯಾತುಕವ ನೋಡಿಯೇ ನಾವು ಟಿಕೇಟ್ ಕೊಟ್ಟಿದ್ದು ಬ್ಯಾರೇ ಮಾತು ಬಿಡ್ರಿ…’
– ಬಸವರಾಜ ಬೊಮ್ಮಾಯಿ, ಯಡ್ಯೂರಪ್ಪ ಸಿಎಂಗಿರಿಯಲ್ಲಿ ನೀರಾವರಿ ಮಂತ್ರಿಯಾಗೊ ಕನವರಿಕೆಯಲ್ಲಿರುವ ಕನಸುಗಾರ

*****

`ರೈತೃ ತಮ್ಮತಮ್ಮ ಹೊಲಗುಳು, ಗೆದ್ದೆಗುಳಲ್ಲಿ ವೇದ ಮಂತೃಗುಳನ್ನ ಹ್ಯೇಳಿಕಂಡು, `ಬ್ರಹ್ಮಾಂಡ ಬ್ಯಾಸಾಯ’ವ ಅಳುವಡಿಸಿಕೊಂಡ್ರೆ, ಭತ್ತದ ಫಸಲು ವೈನಾಗಿ ಬತ್ತದೆ. ಆದಾಯುವೂ ಹೆಚ್ಚಾಯ್ತದೆ. ಬೈದುಬೈ, ರೈತುರ ಇಳುವರಿಗೆ ಜ್ಯಾಸ್ತಿ ಮಾಡೊ ಸಲುವಾಗೇ ನಂ ಬೀಜೇಪಿ ಸರ್ಕಾರ ಗೋವಾದಗೆ `ಶಿವಯೋಗ್ ಬ್ರಹ್ಮಾಂಡ ಬ್ಯಾಸಾಯ’ ಅನ್ನೋ ಯೋಜುನೆಯ ಜ್ಯಾರಿಗೆ ತಂದದೆ. ನೋಡ್ತಾ ಇರಿ, ಇನ್ನು ಮ್ಯಾಲೆ ರೈತೃ ಹ್ಯೆಂಗೆ ಉದ್ದಾರ ಆಯ್ತಾರೆ ಅಂತ’
– ವಿಜಯ್ ಸರ್ದೇಸಾಯಿ, ಟೂರಿಸಂ ಆದಾಯವಿರುವ ಗೋವಾ ರಾಜ್ಯದ ಬಿಜೆಪಿ ಕೃಷಿ ಮಂತ್ರಿ

*****

`ಬರಾಕಿಲ್ಲ, ಬರಾಕಿಲ್ಲ, ಬರಾಕಿಲ್ಲ.. ನಾನು ಸತ್ರುವೇ ಇಂಡಿಯಾಕ್ಕೆ ಬರಾಕಿಲ್ಲ. ನನಿಗೊತ್ತು ನನ್ನ ಕರ್ಕಂಡ್ಹೋಗಿ, ನೋಡಿ ಮಲ್ಯನ್ನ ಹಿಡ್ಕ್ಯಂಬಂದೀವಿ ಅಂತ ಜನುಕ್ಕೆ ತೋರ್ಸಿ ವೋಟು ಹಾಕಿಸಿಗಣಕ್ಕೆ ಪ್ಲ್ಯಾನು ಮಾಡ್ಯವುರೆ. ಬೇಕಾರೆ ಲಂಡನ್ನಾಗಿರೊ ನನ್ನ ಆಸ್ತಿಗುಳ ವಸ ಪಡಿಸ್ಕ್ಯಣಲಿ. ನನ್ನ ಅಭ್ಯಂತುರುವೆ ಇಲ್ಲ. ಆದ್ರೆ ಅವ್ಯಾವು ನನ್ನ ಹೆಸುರಿನ್ಯಾಗೆ ಇಲ್ಲ… ಕಿಲಕಿಲಾ…
– ವಿಜಯ್ ಮಲ್ಯ, ಹೆಂಡದ ದೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...