Homeಮುಖಪುಟಕೊಟ್ಟ ಮಾತು ಉಳಿಸಿಕೊಂಡ ಕಾಂಗ್ರೆಸ್: ಒಪಿಎಸ್ ಜಾರಿಗೆ ಹಿಮಾಚಲ ಕ್ಯಾಬಿನೆಟ್ ಅಸ್ತು

ಕೊಟ್ಟ ಮಾತು ಉಳಿಸಿಕೊಂಡ ಕಾಂಗ್ರೆಸ್: ಒಪಿಎಸ್ ಜಾರಿಗೆ ಹಿಮಾಚಲ ಕ್ಯಾಬಿನೆಟ್ ಅಸ್ತು

ಬಜೆಟ್ ಅಧಿವೇಶನದಲ್ಲೇ ರಾಜ್ಯ ಬಿಜೆಪಿ ಸರ್ಕಾರ ಒಪಿಎಸ್ ಜಾರಿಗೊಳಿಸುವ ಘೋಷಣೆ ಮಾಡಬೇಕು ಎಂದು ಎನ್‌ಪಿಎಸ್ ನೌಕರರ ಸಂಘ ಒತ್ತಾಯಿಸಿದೆ

- Advertisement -
- Advertisement -

ಚುನಾವಣಾ ಪೂರ್ವದ ಪ್ರಣಾಳಿಕೆಯಲ್ಲಿ ನೀಡಿದ ಬೇಡಿಕೆಯನ್ನು ಕಾಂಗ್ರೆಸ್‌ ಈಡೇರಿಸಿದ್ದು, ಹಿಮಾಚಲ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದ ನಂತರ ನಡೆದ ಮೊದಲ ಕ್ಯಾಬಿನೇಟ್‌ನಲ್ಲಿಯೇ ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಜಾರಿಗೆ ಕ್ರಮ ಜರುಗಿಸಿದೆ.

‘ವೋಟ್ ಫಾರ್‌ ಓಪಿಎಸ್‌’ (ಒಪಿಎಸ್ ಜಾರಿಗೊಳಿಸಿದವರಿಗೆ ವೋಟ್) ಎಂದು ಅಭಿಯಾನ ಮಾಡಿದ್ದ ಸರ್ಕಾರಿ ನೌಕರರು, ‘ಎನ್‌ಪಿಎಸ್’ (ನೂತನ ಪಿಂಚಣಿ ಯೋಜನೆ) ರದ್ದುಗೊಳಿಸುವಂತೆ ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಆದರೆ ಸರ್ಕಾರ ಯಾವುದೇ ಕ್ರಮ ಜರುಗಿಸದ ಕಾರಣ ದೊಡ್ಡ ಮಟ್ಟದಲ್ಲಿ ನೌಕರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ, ಅದರ ಗೆಲುವಿಗೂ ಕಾರಣವಾಗಿದ್ದರು.

ಕರ್ನಾಟಕದಲ್ಲಿಯೂ ‘ಓಟ್‌ ಫಾರ್‌ ಒಪಿಎಸ್’ ಅಭಿಯಾನವನ್ನು ಕೈಗೊಂಡಿರುವ ಸರ್ಕಾರಿ ನೌಕರರು, ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಜಾರಿಯಾಗುತ್ತಿರುವ ಒಪಿಎಸ್‌ನತ್ತ ಬೊಟ್ಟು ಮಾಡುತ್ತಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರವೂ ಇದೇ ರೀತಿಯ ಕ್ರಮ ಜರುಗಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿರಿ: NPS ಅಥವಾ OPS? ನವ ಉದಾರವಾದಿ ’ಹೊಸ ಪಿಂಚಣಿ ಯೋಜನೆ’ಯಲ್ಲಿ ನಿಜಕ್ಕೂ ಲಾಭವಿದೆಯೇ?

ಒಪಿಎಸ್‌ ಜಾರಿಗೊಳಿಸುವ ನಿರ್ಧಾರ ಪ್ರಕಟಿಸಿದ ಬಳಿಕ ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿ ಸುಖವಿಂದರ್‌ ಸಿಂಗ್ ಸುಖು ಮಾತನಾಡಿ, “ಈ ವಿಷಯಕ್ಕೆ ಸಂಬಂಧಿಸಿದಂತೆ ಆಳವಾಗಿ ಅಧ್ಯಯನ ಮಾಡಲಾಗಿದೆ. ಹಣಕಾಸು ಇಲಾಖೆಗಳ ಅಧಿಕಾರಿಗಳು ಒಪಿಎಸ್ ಮರುಸ್ಥಾಪನೆಗೆ ಸಂಬಂಧಿಸಿದಂತೆ ಹಣವನ್ನು ಎತ್ತಿಟ್ಟಿದ್ದಾರೆ. ಸಮಸ್ಯೆಯನ್ನು ಇತ್ಯರ್ಥಗೊಳಿಸಲಾಗಿದೆ. ಪ್ರಸ್ತುತ ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ಅಡಿಯಲ್ಲಿ ಇರುವ ಎಲ್ಲಾ ನೌಕರರು ಒಪಿಎಸ್‌ ವ್ಯಾಪ್ತಿಗೆ ಒಳಪಡುತ್ತಾರೆ. ಉದ್ಯೋಗಿಗಳೊಂದಿಗೆ ಸಮಾಲೋಚಿಸಿ ಕ್ರಮಗಳನ್ನು ರೂಪಿಸಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

“ನಾವು ಹಳೆಯ ಪಿಂಚಣಿ ಯೋಜನೆಯನ್ನು ವೋಟ್‌ಗಾಗಿ ಮರುಸ್ಥಾಪಿಸುತ್ತಿಲ್ಲ. ಸಾಮಾಜಿಕ ಭದ್ರತೆಯನ್ನು ನೀಡಲು ಮತ್ತು ಹಿಮಾಚಲದ ಅಭಿವೃದ್ಧಿಯ ಇತಿಹಾಸವನ್ನು ಬರೆದ ಉದ್ಯೋಗಿಗಳ ಆತ್ಮಗೌರವವನ್ನು ಕಾಪಾಡಲು ಈ ಕ್ರಮ ಜರುಗಿಸಿದ್ದೇವೆ” ಎಂದು ಹಿಮಾಚಲ ಪ್ರದೇಶ ಸಚಿವಾಲಯದಲ್ಲಿ ನೌಕರರನ್ನು ಉದ್ದೇಶಿಸಿ ಮುಖ್ಯಮಂತ್ರಿ ಸುಖು ಮಾತನಾಡಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಒಪಿಎಸ್‌ ಪ್ರಮುಖ ಚುನಾವಣಾ ವಿಷಯವಾಗಿತ್ತು. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಗೆದ್ದರೆ ಒಪಿಎಸ್‌ ಮರುಸ್ಥಾಪಿಸುವುದಾಗಿ ಭರವಸೆ ನೀಡಲಾಗಿತ್ತು.

ಹಿಮಾಚಲ ಪ್ರದೇಶ ಸರ್ಕಾರ ಮಹತ್ತರವಾದ ನಿರ್ಧಾರವನ್ನು ಕೈಗೊಂಡ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್.ದಯಾನಂದ್ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿದರು. “ಬೇರೆ ಬೇರೆ ರಾಜ್ಯಗಳಲ್ಲಿ ಒಪಿಎಸ್‌ ಮರುಸ್ಥಾಪಿಸುತ್ತಿರುವುದರಿಂದ ನಮ್ಮ ಹೋರಾಟಕ್ಕೆ ಹೆಚ್ಚಿನ ಬಲ ಬಂದಿದೆ. ಇಲ್ಲಿನ ಸರ್ಕಾರಕ್ಕೆ ನಿರಂತರ ಆಗ್ರಹ ಮಾಡಲಾಗುತ್ತಿದೆ. ಮುಖ್ಯಮಂತ್ರಿಯವರೊಂದಿಗೆ ಮಾತನಾಡಲು ನಿಯೋಗವನ್ನು ಕರೆಸಿಕೊಳ್ಳಲಾಗುತ್ತದೆ ಎಂದು ಸಚಿವ ಸುಧಾಕರ್‌ ಹೇಳಿದ್ದರು. ಆದರೆ ಈವರೆಗೂ ಮಾತುಕತೆಯ ಪ್ರಕ್ರಿಯೆ ಆರಂಭವಾಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

“ಯಾವುದೇ ಪಕ್ಷದ ಪರವಾಗಿ ನಾವು ನಿಂತಿಲ್ಲ. ಒಪಿಎಸ್‌ ಜಾರಿಗೊಳಿಸಿದವರಿಗೆ ನಮ್ಮ ಬೆಂಬಲ ಎಂಬುದು ನಮ್ಮ ಏಕೈಕ ಅಜೆಂಡಾವಾಗಿದೆ. ಸರ್ಕಾರಕ್ಕೆ ಇನ್ನೂ ಸಮಯಾವಕಾಶವಿದೆ. ಸರ್ಕಾರ ಯಾವುದೇ ಪ್ರತಿಕ್ರಿಯೆಯನ್ನು ನೀಡದಿದ್ದರೆ, ನಮ್ಮ ಬೇಡಿಕೆಗೆ ಸ್ಪಂದಿಸುವ ಯಾವುದೇ ಪಕ್ಷಕ್ಕಾದರೂ ನಾವು ಮತ ಚಲಾಯಿಸುತ್ತೇವೆ” ಎಂದು ಪುನರುಚ್ಚರಿಸಿದರು.

ಇದನ್ನೂ ಓದಿರಿ: ಏನಿದು ಎನ್‌ಪಿಎಸ್‌, ಒಪಿಎಸ್? ಲಕ್ಷಾಂತರ ನೌಕರರ ಆತಂಕವೇನು?

“ಬಿಜೆಪಿ ನೇತೃತ್ವದ ಸರ್ಕಾರ ಕೂಡ ನೌಕರರ ಪರ ಕಾಳಜಿಯನ್ನು ಹೊಂದಿದೆ ಎಂದು ನಾವು ಭಾವಿಸಿದ್ದೇವೆ. ಮಾನವೀಯ ನೆಲೆಗಟ್ಟಿನಲ್ಲಿ ನಮ್ಮ ಆಗ್ರಹವನ್ನು ಪರಿಗಣಿಸಬೇಕು. ಬಜೆಟ್‌ ಅಧಿವೇಶನದಲ್ಲಿ ಸರ್ಕಾರ ಒಂದು ನಿರ್ಧಾರಕ್ಕೆ ಬರುತ್ತದೆ ಎಂಬ ನಂಬಿಕೆ ಇದೆ. ಅದನ್ನು ಹುಸಿಗೊಳಿಸಿದರೆ ಪರಿಣಾಮ ಎದುರಿಸುತ್ತದೆ” ಎಂದು ಎಚ್ಚರಿಸಿದರು.

“ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನಡೆಯುತ್ತಿದ್ದ ಒಪಿಎಸ್ ಜಾರಿಗಾಗಿ ಹೋರಾಟ ಈಗ ತಾಲ್ಲೂಕು ಕೇಂದ್ರಗಳಿಗೆ ವರ್ಗಾವಣೆಗೊಂಡಿದೆ. ತಹಸೀಲ್ದಾರ್‌, ಡಿಸಿ ಕಚೇರಿಗಳ ಎದುರಿಗೆ ಹೋರಾಟ ಮಾಡುತ್ತಿದ್ದೇವೆ, ಮನವಿಗಳನ್ನು ಸಲ್ಲಿಸುತ್ತಿದ್ದೇವೆ. ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಪಕ್ಷಕ್ಕೂ ಮನವಿಯನ್ನು ಸಲ್ಲಿಸಿ, ತಮ್ಮ ಪ್ರಣಾಳಿಕೆಯಲ್ಲಿ ಒಪಿಎಸ್ ಜಾರಿಯ ಭರವಸೆ ನೀಡಬೇಕೆಂದು ಕೋರುತ್ತಿದ್ದೇವೆ. ಬಜೆಟ್‌ ಅಧಿವೇಶನದಲ್ಲಿ ಒಪಿಎಸ್‌ ಹೋರಾಟವನ್ನು ಪರಿಗಣಿಸದಿದ್ದರೆ ನಮ್ಮ ಹೋರಾಟ ತಾಲ್ಲೂಕು ಕೇಂದ್ರದಿಂದ ರಾಜ್ಯ ಮಟ್ಟಕ್ಕೆ ಮತ್ತೆ ವಿಸ್ತರಣೆಯಾಗಲಿದೆ” ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....