Homeಮುಖಪುಟಕೊಟ್ಟ ಮಾತು ಉಳಿಸಿಕೊಂಡ ಕಾಂಗ್ರೆಸ್: ಒಪಿಎಸ್ ಜಾರಿಗೆ ಹಿಮಾಚಲ ಕ್ಯಾಬಿನೆಟ್ ಅಸ್ತು

ಕೊಟ್ಟ ಮಾತು ಉಳಿಸಿಕೊಂಡ ಕಾಂಗ್ರೆಸ್: ಒಪಿಎಸ್ ಜಾರಿಗೆ ಹಿಮಾಚಲ ಕ್ಯಾಬಿನೆಟ್ ಅಸ್ತು

ಬಜೆಟ್ ಅಧಿವೇಶನದಲ್ಲೇ ರಾಜ್ಯ ಬಿಜೆಪಿ ಸರ್ಕಾರ ಒಪಿಎಸ್ ಜಾರಿಗೊಳಿಸುವ ಘೋಷಣೆ ಮಾಡಬೇಕು ಎಂದು ಎನ್‌ಪಿಎಸ್ ನೌಕರರ ಸಂಘ ಒತ್ತಾಯಿಸಿದೆ

- Advertisement -
- Advertisement -

ಚುನಾವಣಾ ಪೂರ್ವದ ಪ್ರಣಾಳಿಕೆಯಲ್ಲಿ ನೀಡಿದ ಬೇಡಿಕೆಯನ್ನು ಕಾಂಗ್ರೆಸ್‌ ಈಡೇರಿಸಿದ್ದು, ಹಿಮಾಚಲ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದ ನಂತರ ನಡೆದ ಮೊದಲ ಕ್ಯಾಬಿನೇಟ್‌ನಲ್ಲಿಯೇ ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಜಾರಿಗೆ ಕ್ರಮ ಜರುಗಿಸಿದೆ.

‘ವೋಟ್ ಫಾರ್‌ ಓಪಿಎಸ್‌’ (ಒಪಿಎಸ್ ಜಾರಿಗೊಳಿಸಿದವರಿಗೆ ವೋಟ್) ಎಂದು ಅಭಿಯಾನ ಮಾಡಿದ್ದ ಸರ್ಕಾರಿ ನೌಕರರು, ‘ಎನ್‌ಪಿಎಸ್’ (ನೂತನ ಪಿಂಚಣಿ ಯೋಜನೆ) ರದ್ದುಗೊಳಿಸುವಂತೆ ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಆದರೆ ಸರ್ಕಾರ ಯಾವುದೇ ಕ್ರಮ ಜರುಗಿಸದ ಕಾರಣ ದೊಡ್ಡ ಮಟ್ಟದಲ್ಲಿ ನೌಕರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ, ಅದರ ಗೆಲುವಿಗೂ ಕಾರಣವಾಗಿದ್ದರು.

ಕರ್ನಾಟಕದಲ್ಲಿಯೂ ‘ಓಟ್‌ ಫಾರ್‌ ಒಪಿಎಸ್’ ಅಭಿಯಾನವನ್ನು ಕೈಗೊಂಡಿರುವ ಸರ್ಕಾರಿ ನೌಕರರು, ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಜಾರಿಯಾಗುತ್ತಿರುವ ಒಪಿಎಸ್‌ನತ್ತ ಬೊಟ್ಟು ಮಾಡುತ್ತಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರವೂ ಇದೇ ರೀತಿಯ ಕ್ರಮ ಜರುಗಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿರಿ: NPS ಅಥವಾ OPS? ನವ ಉದಾರವಾದಿ ’ಹೊಸ ಪಿಂಚಣಿ ಯೋಜನೆ’ಯಲ್ಲಿ ನಿಜಕ್ಕೂ ಲಾಭವಿದೆಯೇ?

ಒಪಿಎಸ್‌ ಜಾರಿಗೊಳಿಸುವ ನಿರ್ಧಾರ ಪ್ರಕಟಿಸಿದ ಬಳಿಕ ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿ ಸುಖವಿಂದರ್‌ ಸಿಂಗ್ ಸುಖು ಮಾತನಾಡಿ, “ಈ ವಿಷಯಕ್ಕೆ ಸಂಬಂಧಿಸಿದಂತೆ ಆಳವಾಗಿ ಅಧ್ಯಯನ ಮಾಡಲಾಗಿದೆ. ಹಣಕಾಸು ಇಲಾಖೆಗಳ ಅಧಿಕಾರಿಗಳು ಒಪಿಎಸ್ ಮರುಸ್ಥಾಪನೆಗೆ ಸಂಬಂಧಿಸಿದಂತೆ ಹಣವನ್ನು ಎತ್ತಿಟ್ಟಿದ್ದಾರೆ. ಸಮಸ್ಯೆಯನ್ನು ಇತ್ಯರ್ಥಗೊಳಿಸಲಾಗಿದೆ. ಪ್ರಸ್ತುತ ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ಅಡಿಯಲ್ಲಿ ಇರುವ ಎಲ್ಲಾ ನೌಕರರು ಒಪಿಎಸ್‌ ವ್ಯಾಪ್ತಿಗೆ ಒಳಪಡುತ್ತಾರೆ. ಉದ್ಯೋಗಿಗಳೊಂದಿಗೆ ಸಮಾಲೋಚಿಸಿ ಕ್ರಮಗಳನ್ನು ರೂಪಿಸಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

“ನಾವು ಹಳೆಯ ಪಿಂಚಣಿ ಯೋಜನೆಯನ್ನು ವೋಟ್‌ಗಾಗಿ ಮರುಸ್ಥಾಪಿಸುತ್ತಿಲ್ಲ. ಸಾಮಾಜಿಕ ಭದ್ರತೆಯನ್ನು ನೀಡಲು ಮತ್ತು ಹಿಮಾಚಲದ ಅಭಿವೃದ್ಧಿಯ ಇತಿಹಾಸವನ್ನು ಬರೆದ ಉದ್ಯೋಗಿಗಳ ಆತ್ಮಗೌರವವನ್ನು ಕಾಪಾಡಲು ಈ ಕ್ರಮ ಜರುಗಿಸಿದ್ದೇವೆ” ಎಂದು ಹಿಮಾಚಲ ಪ್ರದೇಶ ಸಚಿವಾಲಯದಲ್ಲಿ ನೌಕರರನ್ನು ಉದ್ದೇಶಿಸಿ ಮುಖ್ಯಮಂತ್ರಿ ಸುಖು ಮಾತನಾಡಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಒಪಿಎಸ್‌ ಪ್ರಮುಖ ಚುನಾವಣಾ ವಿಷಯವಾಗಿತ್ತು. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಗೆದ್ದರೆ ಒಪಿಎಸ್‌ ಮರುಸ್ಥಾಪಿಸುವುದಾಗಿ ಭರವಸೆ ನೀಡಲಾಗಿತ್ತು.

ಹಿಮಾಚಲ ಪ್ರದೇಶ ಸರ್ಕಾರ ಮಹತ್ತರವಾದ ನಿರ್ಧಾರವನ್ನು ಕೈಗೊಂಡ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್.ದಯಾನಂದ್ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿದರು. “ಬೇರೆ ಬೇರೆ ರಾಜ್ಯಗಳಲ್ಲಿ ಒಪಿಎಸ್‌ ಮರುಸ್ಥಾಪಿಸುತ್ತಿರುವುದರಿಂದ ನಮ್ಮ ಹೋರಾಟಕ್ಕೆ ಹೆಚ್ಚಿನ ಬಲ ಬಂದಿದೆ. ಇಲ್ಲಿನ ಸರ್ಕಾರಕ್ಕೆ ನಿರಂತರ ಆಗ್ರಹ ಮಾಡಲಾಗುತ್ತಿದೆ. ಮುಖ್ಯಮಂತ್ರಿಯವರೊಂದಿಗೆ ಮಾತನಾಡಲು ನಿಯೋಗವನ್ನು ಕರೆಸಿಕೊಳ್ಳಲಾಗುತ್ತದೆ ಎಂದು ಸಚಿವ ಸುಧಾಕರ್‌ ಹೇಳಿದ್ದರು. ಆದರೆ ಈವರೆಗೂ ಮಾತುಕತೆಯ ಪ್ರಕ್ರಿಯೆ ಆರಂಭವಾಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

“ಯಾವುದೇ ಪಕ್ಷದ ಪರವಾಗಿ ನಾವು ನಿಂತಿಲ್ಲ. ಒಪಿಎಸ್‌ ಜಾರಿಗೊಳಿಸಿದವರಿಗೆ ನಮ್ಮ ಬೆಂಬಲ ಎಂಬುದು ನಮ್ಮ ಏಕೈಕ ಅಜೆಂಡಾವಾಗಿದೆ. ಸರ್ಕಾರಕ್ಕೆ ಇನ್ನೂ ಸಮಯಾವಕಾಶವಿದೆ. ಸರ್ಕಾರ ಯಾವುದೇ ಪ್ರತಿಕ್ರಿಯೆಯನ್ನು ನೀಡದಿದ್ದರೆ, ನಮ್ಮ ಬೇಡಿಕೆಗೆ ಸ್ಪಂದಿಸುವ ಯಾವುದೇ ಪಕ್ಷಕ್ಕಾದರೂ ನಾವು ಮತ ಚಲಾಯಿಸುತ್ತೇವೆ” ಎಂದು ಪುನರುಚ್ಚರಿಸಿದರು.

ಇದನ್ನೂ ಓದಿರಿ: ಏನಿದು ಎನ್‌ಪಿಎಸ್‌, ಒಪಿಎಸ್? ಲಕ್ಷಾಂತರ ನೌಕರರ ಆತಂಕವೇನು?

“ಬಿಜೆಪಿ ನೇತೃತ್ವದ ಸರ್ಕಾರ ಕೂಡ ನೌಕರರ ಪರ ಕಾಳಜಿಯನ್ನು ಹೊಂದಿದೆ ಎಂದು ನಾವು ಭಾವಿಸಿದ್ದೇವೆ. ಮಾನವೀಯ ನೆಲೆಗಟ್ಟಿನಲ್ಲಿ ನಮ್ಮ ಆಗ್ರಹವನ್ನು ಪರಿಗಣಿಸಬೇಕು. ಬಜೆಟ್‌ ಅಧಿವೇಶನದಲ್ಲಿ ಸರ್ಕಾರ ಒಂದು ನಿರ್ಧಾರಕ್ಕೆ ಬರುತ್ತದೆ ಎಂಬ ನಂಬಿಕೆ ಇದೆ. ಅದನ್ನು ಹುಸಿಗೊಳಿಸಿದರೆ ಪರಿಣಾಮ ಎದುರಿಸುತ್ತದೆ” ಎಂದು ಎಚ್ಚರಿಸಿದರು.

“ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನಡೆಯುತ್ತಿದ್ದ ಒಪಿಎಸ್ ಜಾರಿಗಾಗಿ ಹೋರಾಟ ಈಗ ತಾಲ್ಲೂಕು ಕೇಂದ್ರಗಳಿಗೆ ವರ್ಗಾವಣೆಗೊಂಡಿದೆ. ತಹಸೀಲ್ದಾರ್‌, ಡಿಸಿ ಕಚೇರಿಗಳ ಎದುರಿಗೆ ಹೋರಾಟ ಮಾಡುತ್ತಿದ್ದೇವೆ, ಮನವಿಗಳನ್ನು ಸಲ್ಲಿಸುತ್ತಿದ್ದೇವೆ. ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಪಕ್ಷಕ್ಕೂ ಮನವಿಯನ್ನು ಸಲ್ಲಿಸಿ, ತಮ್ಮ ಪ್ರಣಾಳಿಕೆಯಲ್ಲಿ ಒಪಿಎಸ್ ಜಾರಿಯ ಭರವಸೆ ನೀಡಬೇಕೆಂದು ಕೋರುತ್ತಿದ್ದೇವೆ. ಬಜೆಟ್‌ ಅಧಿವೇಶನದಲ್ಲಿ ಒಪಿಎಸ್‌ ಹೋರಾಟವನ್ನು ಪರಿಗಣಿಸದಿದ್ದರೆ ನಮ್ಮ ಹೋರಾಟ ತಾಲ್ಲೂಕು ಕೇಂದ್ರದಿಂದ ರಾಜ್ಯ ಮಟ್ಟಕ್ಕೆ ಮತ್ತೆ ವಿಸ್ತರಣೆಯಾಗಲಿದೆ” ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...