Homeಮುಖಪುಟಕೊಟ್ಟ ಮಾತು ಉಳಿಸಿಕೊಂಡ ಕಾಂಗ್ರೆಸ್: ಒಪಿಎಸ್ ಜಾರಿಗೆ ಹಿಮಾಚಲ ಕ್ಯಾಬಿನೆಟ್ ಅಸ್ತು

ಕೊಟ್ಟ ಮಾತು ಉಳಿಸಿಕೊಂಡ ಕಾಂಗ್ರೆಸ್: ಒಪಿಎಸ್ ಜಾರಿಗೆ ಹಿಮಾಚಲ ಕ್ಯಾಬಿನೆಟ್ ಅಸ್ತು

ಬಜೆಟ್ ಅಧಿವೇಶನದಲ್ಲೇ ರಾಜ್ಯ ಬಿಜೆಪಿ ಸರ್ಕಾರ ಒಪಿಎಸ್ ಜಾರಿಗೊಳಿಸುವ ಘೋಷಣೆ ಮಾಡಬೇಕು ಎಂದು ಎನ್‌ಪಿಎಸ್ ನೌಕರರ ಸಂಘ ಒತ್ತಾಯಿಸಿದೆ

- Advertisement -
- Advertisement -

ಚುನಾವಣಾ ಪೂರ್ವದ ಪ್ರಣಾಳಿಕೆಯಲ್ಲಿ ನೀಡಿದ ಬೇಡಿಕೆಯನ್ನು ಕಾಂಗ್ರೆಸ್‌ ಈಡೇರಿಸಿದ್ದು, ಹಿಮಾಚಲ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದ ನಂತರ ನಡೆದ ಮೊದಲ ಕ್ಯಾಬಿನೇಟ್‌ನಲ್ಲಿಯೇ ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಜಾರಿಗೆ ಕ್ರಮ ಜರುಗಿಸಿದೆ.

‘ವೋಟ್ ಫಾರ್‌ ಓಪಿಎಸ್‌’ (ಒಪಿಎಸ್ ಜಾರಿಗೊಳಿಸಿದವರಿಗೆ ವೋಟ್) ಎಂದು ಅಭಿಯಾನ ಮಾಡಿದ್ದ ಸರ್ಕಾರಿ ನೌಕರರು, ‘ಎನ್‌ಪಿಎಸ್’ (ನೂತನ ಪಿಂಚಣಿ ಯೋಜನೆ) ರದ್ದುಗೊಳಿಸುವಂತೆ ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಆದರೆ ಸರ್ಕಾರ ಯಾವುದೇ ಕ್ರಮ ಜರುಗಿಸದ ಕಾರಣ ದೊಡ್ಡ ಮಟ್ಟದಲ್ಲಿ ನೌಕರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ, ಅದರ ಗೆಲುವಿಗೂ ಕಾರಣವಾಗಿದ್ದರು.

ಕರ್ನಾಟಕದಲ್ಲಿಯೂ ‘ಓಟ್‌ ಫಾರ್‌ ಒಪಿಎಸ್’ ಅಭಿಯಾನವನ್ನು ಕೈಗೊಂಡಿರುವ ಸರ್ಕಾರಿ ನೌಕರರು, ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಜಾರಿಯಾಗುತ್ತಿರುವ ಒಪಿಎಸ್‌ನತ್ತ ಬೊಟ್ಟು ಮಾಡುತ್ತಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರವೂ ಇದೇ ರೀತಿಯ ಕ್ರಮ ಜರುಗಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿರಿ: NPS ಅಥವಾ OPS? ನವ ಉದಾರವಾದಿ ’ಹೊಸ ಪಿಂಚಣಿ ಯೋಜನೆ’ಯಲ್ಲಿ ನಿಜಕ್ಕೂ ಲಾಭವಿದೆಯೇ?

ಒಪಿಎಸ್‌ ಜಾರಿಗೊಳಿಸುವ ನಿರ್ಧಾರ ಪ್ರಕಟಿಸಿದ ಬಳಿಕ ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿ ಸುಖವಿಂದರ್‌ ಸಿಂಗ್ ಸುಖು ಮಾತನಾಡಿ, “ಈ ವಿಷಯಕ್ಕೆ ಸಂಬಂಧಿಸಿದಂತೆ ಆಳವಾಗಿ ಅಧ್ಯಯನ ಮಾಡಲಾಗಿದೆ. ಹಣಕಾಸು ಇಲಾಖೆಗಳ ಅಧಿಕಾರಿಗಳು ಒಪಿಎಸ್ ಮರುಸ್ಥಾಪನೆಗೆ ಸಂಬಂಧಿಸಿದಂತೆ ಹಣವನ್ನು ಎತ್ತಿಟ್ಟಿದ್ದಾರೆ. ಸಮಸ್ಯೆಯನ್ನು ಇತ್ಯರ್ಥಗೊಳಿಸಲಾಗಿದೆ. ಪ್ರಸ್ತುತ ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ಅಡಿಯಲ್ಲಿ ಇರುವ ಎಲ್ಲಾ ನೌಕರರು ಒಪಿಎಸ್‌ ವ್ಯಾಪ್ತಿಗೆ ಒಳಪಡುತ್ತಾರೆ. ಉದ್ಯೋಗಿಗಳೊಂದಿಗೆ ಸಮಾಲೋಚಿಸಿ ಕ್ರಮಗಳನ್ನು ರೂಪಿಸಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

“ನಾವು ಹಳೆಯ ಪಿಂಚಣಿ ಯೋಜನೆಯನ್ನು ವೋಟ್‌ಗಾಗಿ ಮರುಸ್ಥಾಪಿಸುತ್ತಿಲ್ಲ. ಸಾಮಾಜಿಕ ಭದ್ರತೆಯನ್ನು ನೀಡಲು ಮತ್ತು ಹಿಮಾಚಲದ ಅಭಿವೃದ್ಧಿಯ ಇತಿಹಾಸವನ್ನು ಬರೆದ ಉದ್ಯೋಗಿಗಳ ಆತ್ಮಗೌರವವನ್ನು ಕಾಪಾಡಲು ಈ ಕ್ರಮ ಜರುಗಿಸಿದ್ದೇವೆ” ಎಂದು ಹಿಮಾಚಲ ಪ್ರದೇಶ ಸಚಿವಾಲಯದಲ್ಲಿ ನೌಕರರನ್ನು ಉದ್ದೇಶಿಸಿ ಮುಖ್ಯಮಂತ್ರಿ ಸುಖು ಮಾತನಾಡಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಒಪಿಎಸ್‌ ಪ್ರಮುಖ ಚುನಾವಣಾ ವಿಷಯವಾಗಿತ್ತು. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಗೆದ್ದರೆ ಒಪಿಎಸ್‌ ಮರುಸ್ಥಾಪಿಸುವುದಾಗಿ ಭರವಸೆ ನೀಡಲಾಗಿತ್ತು.

ಹಿಮಾಚಲ ಪ್ರದೇಶ ಸರ್ಕಾರ ಮಹತ್ತರವಾದ ನಿರ್ಧಾರವನ್ನು ಕೈಗೊಂಡ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್.ದಯಾನಂದ್ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿದರು. “ಬೇರೆ ಬೇರೆ ರಾಜ್ಯಗಳಲ್ಲಿ ಒಪಿಎಸ್‌ ಮರುಸ್ಥಾಪಿಸುತ್ತಿರುವುದರಿಂದ ನಮ್ಮ ಹೋರಾಟಕ್ಕೆ ಹೆಚ್ಚಿನ ಬಲ ಬಂದಿದೆ. ಇಲ್ಲಿನ ಸರ್ಕಾರಕ್ಕೆ ನಿರಂತರ ಆಗ್ರಹ ಮಾಡಲಾಗುತ್ತಿದೆ. ಮುಖ್ಯಮಂತ್ರಿಯವರೊಂದಿಗೆ ಮಾತನಾಡಲು ನಿಯೋಗವನ್ನು ಕರೆಸಿಕೊಳ್ಳಲಾಗುತ್ತದೆ ಎಂದು ಸಚಿವ ಸುಧಾಕರ್‌ ಹೇಳಿದ್ದರು. ಆದರೆ ಈವರೆಗೂ ಮಾತುಕತೆಯ ಪ್ರಕ್ರಿಯೆ ಆರಂಭವಾಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

“ಯಾವುದೇ ಪಕ್ಷದ ಪರವಾಗಿ ನಾವು ನಿಂತಿಲ್ಲ. ಒಪಿಎಸ್‌ ಜಾರಿಗೊಳಿಸಿದವರಿಗೆ ನಮ್ಮ ಬೆಂಬಲ ಎಂಬುದು ನಮ್ಮ ಏಕೈಕ ಅಜೆಂಡಾವಾಗಿದೆ. ಸರ್ಕಾರಕ್ಕೆ ಇನ್ನೂ ಸಮಯಾವಕಾಶವಿದೆ. ಸರ್ಕಾರ ಯಾವುದೇ ಪ್ರತಿಕ್ರಿಯೆಯನ್ನು ನೀಡದಿದ್ದರೆ, ನಮ್ಮ ಬೇಡಿಕೆಗೆ ಸ್ಪಂದಿಸುವ ಯಾವುದೇ ಪಕ್ಷಕ್ಕಾದರೂ ನಾವು ಮತ ಚಲಾಯಿಸುತ್ತೇವೆ” ಎಂದು ಪುನರುಚ್ಚರಿಸಿದರು.

ಇದನ್ನೂ ಓದಿರಿ: ಏನಿದು ಎನ್‌ಪಿಎಸ್‌, ಒಪಿಎಸ್? ಲಕ್ಷಾಂತರ ನೌಕರರ ಆತಂಕವೇನು?

“ಬಿಜೆಪಿ ನೇತೃತ್ವದ ಸರ್ಕಾರ ಕೂಡ ನೌಕರರ ಪರ ಕಾಳಜಿಯನ್ನು ಹೊಂದಿದೆ ಎಂದು ನಾವು ಭಾವಿಸಿದ್ದೇವೆ. ಮಾನವೀಯ ನೆಲೆಗಟ್ಟಿನಲ್ಲಿ ನಮ್ಮ ಆಗ್ರಹವನ್ನು ಪರಿಗಣಿಸಬೇಕು. ಬಜೆಟ್‌ ಅಧಿವೇಶನದಲ್ಲಿ ಸರ್ಕಾರ ಒಂದು ನಿರ್ಧಾರಕ್ಕೆ ಬರುತ್ತದೆ ಎಂಬ ನಂಬಿಕೆ ಇದೆ. ಅದನ್ನು ಹುಸಿಗೊಳಿಸಿದರೆ ಪರಿಣಾಮ ಎದುರಿಸುತ್ತದೆ” ಎಂದು ಎಚ್ಚರಿಸಿದರು.

“ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನಡೆಯುತ್ತಿದ್ದ ಒಪಿಎಸ್ ಜಾರಿಗಾಗಿ ಹೋರಾಟ ಈಗ ತಾಲ್ಲೂಕು ಕೇಂದ್ರಗಳಿಗೆ ವರ್ಗಾವಣೆಗೊಂಡಿದೆ. ತಹಸೀಲ್ದಾರ್‌, ಡಿಸಿ ಕಚೇರಿಗಳ ಎದುರಿಗೆ ಹೋರಾಟ ಮಾಡುತ್ತಿದ್ದೇವೆ, ಮನವಿಗಳನ್ನು ಸಲ್ಲಿಸುತ್ತಿದ್ದೇವೆ. ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಪಕ್ಷಕ್ಕೂ ಮನವಿಯನ್ನು ಸಲ್ಲಿಸಿ, ತಮ್ಮ ಪ್ರಣಾಳಿಕೆಯಲ್ಲಿ ಒಪಿಎಸ್ ಜಾರಿಯ ಭರವಸೆ ನೀಡಬೇಕೆಂದು ಕೋರುತ್ತಿದ್ದೇವೆ. ಬಜೆಟ್‌ ಅಧಿವೇಶನದಲ್ಲಿ ಒಪಿಎಸ್‌ ಹೋರಾಟವನ್ನು ಪರಿಗಣಿಸದಿದ್ದರೆ ನಮ್ಮ ಹೋರಾಟ ತಾಲ್ಲೂಕು ಕೇಂದ್ರದಿಂದ ರಾಜ್ಯ ಮಟ್ಟಕ್ಕೆ ಮತ್ತೆ ವಿಸ್ತರಣೆಯಾಗಲಿದೆ” ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...