Homeಮುಖಪುಟಕೊಟ್ಟ ಮಾತು ಉಳಿಸಿಕೊಂಡ ಕಾಂಗ್ರೆಸ್: ಒಪಿಎಸ್ ಜಾರಿಗೆ ಹಿಮಾಚಲ ಕ್ಯಾಬಿನೆಟ್ ಅಸ್ತು

ಕೊಟ್ಟ ಮಾತು ಉಳಿಸಿಕೊಂಡ ಕಾಂಗ್ರೆಸ್: ಒಪಿಎಸ್ ಜಾರಿಗೆ ಹಿಮಾಚಲ ಕ್ಯಾಬಿನೆಟ್ ಅಸ್ತು

ಬಜೆಟ್ ಅಧಿವೇಶನದಲ್ಲೇ ರಾಜ್ಯ ಬಿಜೆಪಿ ಸರ್ಕಾರ ಒಪಿಎಸ್ ಜಾರಿಗೊಳಿಸುವ ಘೋಷಣೆ ಮಾಡಬೇಕು ಎಂದು ಎನ್‌ಪಿಎಸ್ ನೌಕರರ ಸಂಘ ಒತ್ತಾಯಿಸಿದೆ

- Advertisement -
- Advertisement -

ಚುನಾವಣಾ ಪೂರ್ವದ ಪ್ರಣಾಳಿಕೆಯಲ್ಲಿ ನೀಡಿದ ಬೇಡಿಕೆಯನ್ನು ಕಾಂಗ್ರೆಸ್‌ ಈಡೇರಿಸಿದ್ದು, ಹಿಮಾಚಲ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದ ನಂತರ ನಡೆದ ಮೊದಲ ಕ್ಯಾಬಿನೇಟ್‌ನಲ್ಲಿಯೇ ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಜಾರಿಗೆ ಕ್ರಮ ಜರುಗಿಸಿದೆ.

‘ವೋಟ್ ಫಾರ್‌ ಓಪಿಎಸ್‌’ (ಒಪಿಎಸ್ ಜಾರಿಗೊಳಿಸಿದವರಿಗೆ ವೋಟ್) ಎಂದು ಅಭಿಯಾನ ಮಾಡಿದ್ದ ಸರ್ಕಾರಿ ನೌಕರರು, ‘ಎನ್‌ಪಿಎಸ್’ (ನೂತನ ಪಿಂಚಣಿ ಯೋಜನೆ) ರದ್ದುಗೊಳಿಸುವಂತೆ ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಆದರೆ ಸರ್ಕಾರ ಯಾವುದೇ ಕ್ರಮ ಜರುಗಿಸದ ಕಾರಣ ದೊಡ್ಡ ಮಟ್ಟದಲ್ಲಿ ನೌಕರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ, ಅದರ ಗೆಲುವಿಗೂ ಕಾರಣವಾಗಿದ್ದರು.

ಕರ್ನಾಟಕದಲ್ಲಿಯೂ ‘ಓಟ್‌ ಫಾರ್‌ ಒಪಿಎಸ್’ ಅಭಿಯಾನವನ್ನು ಕೈಗೊಂಡಿರುವ ಸರ್ಕಾರಿ ನೌಕರರು, ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಜಾರಿಯಾಗುತ್ತಿರುವ ಒಪಿಎಸ್‌ನತ್ತ ಬೊಟ್ಟು ಮಾಡುತ್ತಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರವೂ ಇದೇ ರೀತಿಯ ಕ್ರಮ ಜರುಗಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿರಿ: NPS ಅಥವಾ OPS? ನವ ಉದಾರವಾದಿ ’ಹೊಸ ಪಿಂಚಣಿ ಯೋಜನೆ’ಯಲ್ಲಿ ನಿಜಕ್ಕೂ ಲಾಭವಿದೆಯೇ?

ಒಪಿಎಸ್‌ ಜಾರಿಗೊಳಿಸುವ ನಿರ್ಧಾರ ಪ್ರಕಟಿಸಿದ ಬಳಿಕ ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿ ಸುಖವಿಂದರ್‌ ಸಿಂಗ್ ಸುಖು ಮಾತನಾಡಿ, “ಈ ವಿಷಯಕ್ಕೆ ಸಂಬಂಧಿಸಿದಂತೆ ಆಳವಾಗಿ ಅಧ್ಯಯನ ಮಾಡಲಾಗಿದೆ. ಹಣಕಾಸು ಇಲಾಖೆಗಳ ಅಧಿಕಾರಿಗಳು ಒಪಿಎಸ್ ಮರುಸ್ಥಾಪನೆಗೆ ಸಂಬಂಧಿಸಿದಂತೆ ಹಣವನ್ನು ಎತ್ತಿಟ್ಟಿದ್ದಾರೆ. ಸಮಸ್ಯೆಯನ್ನು ಇತ್ಯರ್ಥಗೊಳಿಸಲಾಗಿದೆ. ಪ್ರಸ್ತುತ ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ಅಡಿಯಲ್ಲಿ ಇರುವ ಎಲ್ಲಾ ನೌಕರರು ಒಪಿಎಸ್‌ ವ್ಯಾಪ್ತಿಗೆ ಒಳಪಡುತ್ತಾರೆ. ಉದ್ಯೋಗಿಗಳೊಂದಿಗೆ ಸಮಾಲೋಚಿಸಿ ಕ್ರಮಗಳನ್ನು ರೂಪಿಸಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

“ನಾವು ಹಳೆಯ ಪಿಂಚಣಿ ಯೋಜನೆಯನ್ನು ವೋಟ್‌ಗಾಗಿ ಮರುಸ್ಥಾಪಿಸುತ್ತಿಲ್ಲ. ಸಾಮಾಜಿಕ ಭದ್ರತೆಯನ್ನು ನೀಡಲು ಮತ್ತು ಹಿಮಾಚಲದ ಅಭಿವೃದ್ಧಿಯ ಇತಿಹಾಸವನ್ನು ಬರೆದ ಉದ್ಯೋಗಿಗಳ ಆತ್ಮಗೌರವವನ್ನು ಕಾಪಾಡಲು ಈ ಕ್ರಮ ಜರುಗಿಸಿದ್ದೇವೆ” ಎಂದು ಹಿಮಾಚಲ ಪ್ರದೇಶ ಸಚಿವಾಲಯದಲ್ಲಿ ನೌಕರರನ್ನು ಉದ್ದೇಶಿಸಿ ಮುಖ್ಯಮಂತ್ರಿ ಸುಖು ಮಾತನಾಡಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಒಪಿಎಸ್‌ ಪ್ರಮುಖ ಚುನಾವಣಾ ವಿಷಯವಾಗಿತ್ತು. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಗೆದ್ದರೆ ಒಪಿಎಸ್‌ ಮರುಸ್ಥಾಪಿಸುವುದಾಗಿ ಭರವಸೆ ನೀಡಲಾಗಿತ್ತು.

ಹಿಮಾಚಲ ಪ್ರದೇಶ ಸರ್ಕಾರ ಮಹತ್ತರವಾದ ನಿರ್ಧಾರವನ್ನು ಕೈಗೊಂಡ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್.ದಯಾನಂದ್ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿದರು. “ಬೇರೆ ಬೇರೆ ರಾಜ್ಯಗಳಲ್ಲಿ ಒಪಿಎಸ್‌ ಮರುಸ್ಥಾಪಿಸುತ್ತಿರುವುದರಿಂದ ನಮ್ಮ ಹೋರಾಟಕ್ಕೆ ಹೆಚ್ಚಿನ ಬಲ ಬಂದಿದೆ. ಇಲ್ಲಿನ ಸರ್ಕಾರಕ್ಕೆ ನಿರಂತರ ಆಗ್ರಹ ಮಾಡಲಾಗುತ್ತಿದೆ. ಮುಖ್ಯಮಂತ್ರಿಯವರೊಂದಿಗೆ ಮಾತನಾಡಲು ನಿಯೋಗವನ್ನು ಕರೆಸಿಕೊಳ್ಳಲಾಗುತ್ತದೆ ಎಂದು ಸಚಿವ ಸುಧಾಕರ್‌ ಹೇಳಿದ್ದರು. ಆದರೆ ಈವರೆಗೂ ಮಾತುಕತೆಯ ಪ್ರಕ್ರಿಯೆ ಆರಂಭವಾಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

“ಯಾವುದೇ ಪಕ್ಷದ ಪರವಾಗಿ ನಾವು ನಿಂತಿಲ್ಲ. ಒಪಿಎಸ್‌ ಜಾರಿಗೊಳಿಸಿದವರಿಗೆ ನಮ್ಮ ಬೆಂಬಲ ಎಂಬುದು ನಮ್ಮ ಏಕೈಕ ಅಜೆಂಡಾವಾಗಿದೆ. ಸರ್ಕಾರಕ್ಕೆ ಇನ್ನೂ ಸಮಯಾವಕಾಶವಿದೆ. ಸರ್ಕಾರ ಯಾವುದೇ ಪ್ರತಿಕ್ರಿಯೆಯನ್ನು ನೀಡದಿದ್ದರೆ, ನಮ್ಮ ಬೇಡಿಕೆಗೆ ಸ್ಪಂದಿಸುವ ಯಾವುದೇ ಪಕ್ಷಕ್ಕಾದರೂ ನಾವು ಮತ ಚಲಾಯಿಸುತ್ತೇವೆ” ಎಂದು ಪುನರುಚ್ಚರಿಸಿದರು.

ಇದನ್ನೂ ಓದಿರಿ: ಏನಿದು ಎನ್‌ಪಿಎಸ್‌, ಒಪಿಎಸ್? ಲಕ್ಷಾಂತರ ನೌಕರರ ಆತಂಕವೇನು?

“ಬಿಜೆಪಿ ನೇತೃತ್ವದ ಸರ್ಕಾರ ಕೂಡ ನೌಕರರ ಪರ ಕಾಳಜಿಯನ್ನು ಹೊಂದಿದೆ ಎಂದು ನಾವು ಭಾವಿಸಿದ್ದೇವೆ. ಮಾನವೀಯ ನೆಲೆಗಟ್ಟಿನಲ್ಲಿ ನಮ್ಮ ಆಗ್ರಹವನ್ನು ಪರಿಗಣಿಸಬೇಕು. ಬಜೆಟ್‌ ಅಧಿವೇಶನದಲ್ಲಿ ಸರ್ಕಾರ ಒಂದು ನಿರ್ಧಾರಕ್ಕೆ ಬರುತ್ತದೆ ಎಂಬ ನಂಬಿಕೆ ಇದೆ. ಅದನ್ನು ಹುಸಿಗೊಳಿಸಿದರೆ ಪರಿಣಾಮ ಎದುರಿಸುತ್ತದೆ” ಎಂದು ಎಚ್ಚರಿಸಿದರು.

“ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನಡೆಯುತ್ತಿದ್ದ ಒಪಿಎಸ್ ಜಾರಿಗಾಗಿ ಹೋರಾಟ ಈಗ ತಾಲ್ಲೂಕು ಕೇಂದ್ರಗಳಿಗೆ ವರ್ಗಾವಣೆಗೊಂಡಿದೆ. ತಹಸೀಲ್ದಾರ್‌, ಡಿಸಿ ಕಚೇರಿಗಳ ಎದುರಿಗೆ ಹೋರಾಟ ಮಾಡುತ್ತಿದ್ದೇವೆ, ಮನವಿಗಳನ್ನು ಸಲ್ಲಿಸುತ್ತಿದ್ದೇವೆ. ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಪಕ್ಷಕ್ಕೂ ಮನವಿಯನ್ನು ಸಲ್ಲಿಸಿ, ತಮ್ಮ ಪ್ರಣಾಳಿಕೆಯಲ್ಲಿ ಒಪಿಎಸ್ ಜಾರಿಯ ಭರವಸೆ ನೀಡಬೇಕೆಂದು ಕೋರುತ್ತಿದ್ದೇವೆ. ಬಜೆಟ್‌ ಅಧಿವೇಶನದಲ್ಲಿ ಒಪಿಎಸ್‌ ಹೋರಾಟವನ್ನು ಪರಿಗಣಿಸದಿದ್ದರೆ ನಮ್ಮ ಹೋರಾಟ ತಾಲ್ಲೂಕು ಕೇಂದ್ರದಿಂದ ರಾಜ್ಯ ಮಟ್ಟಕ್ಕೆ ಮತ್ತೆ ವಿಸ್ತರಣೆಯಾಗಲಿದೆ” ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...