Homeಮುಖಪುಟಕೊಟ್ಟ ಮಾತು ಉಳಿಸಿಕೊಂಡ ಕಾಂಗ್ರೆಸ್: ಒಪಿಎಸ್ ಜಾರಿಗೆ ಹಿಮಾಚಲ ಕ್ಯಾಬಿನೆಟ್ ಅಸ್ತು

ಕೊಟ್ಟ ಮಾತು ಉಳಿಸಿಕೊಂಡ ಕಾಂಗ್ರೆಸ್: ಒಪಿಎಸ್ ಜಾರಿಗೆ ಹಿಮಾಚಲ ಕ್ಯಾಬಿನೆಟ್ ಅಸ್ತು

ಬಜೆಟ್ ಅಧಿವೇಶನದಲ್ಲೇ ರಾಜ್ಯ ಬಿಜೆಪಿ ಸರ್ಕಾರ ಒಪಿಎಸ್ ಜಾರಿಗೊಳಿಸುವ ಘೋಷಣೆ ಮಾಡಬೇಕು ಎಂದು ಎನ್‌ಪಿಎಸ್ ನೌಕರರ ಸಂಘ ಒತ್ತಾಯಿಸಿದೆ

- Advertisement -
- Advertisement -

ಚುನಾವಣಾ ಪೂರ್ವದ ಪ್ರಣಾಳಿಕೆಯಲ್ಲಿ ನೀಡಿದ ಬೇಡಿಕೆಯನ್ನು ಕಾಂಗ್ರೆಸ್‌ ಈಡೇರಿಸಿದ್ದು, ಹಿಮಾಚಲ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದ ನಂತರ ನಡೆದ ಮೊದಲ ಕ್ಯಾಬಿನೇಟ್‌ನಲ್ಲಿಯೇ ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಜಾರಿಗೆ ಕ್ರಮ ಜರುಗಿಸಿದೆ.

‘ವೋಟ್ ಫಾರ್‌ ಓಪಿಎಸ್‌’ (ಒಪಿಎಸ್ ಜಾರಿಗೊಳಿಸಿದವರಿಗೆ ವೋಟ್) ಎಂದು ಅಭಿಯಾನ ಮಾಡಿದ್ದ ಸರ್ಕಾರಿ ನೌಕರರು, ‘ಎನ್‌ಪಿಎಸ್’ (ನೂತನ ಪಿಂಚಣಿ ಯೋಜನೆ) ರದ್ದುಗೊಳಿಸುವಂತೆ ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಆದರೆ ಸರ್ಕಾರ ಯಾವುದೇ ಕ್ರಮ ಜರುಗಿಸದ ಕಾರಣ ದೊಡ್ಡ ಮಟ್ಟದಲ್ಲಿ ನೌಕರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ, ಅದರ ಗೆಲುವಿಗೂ ಕಾರಣವಾಗಿದ್ದರು.

ಕರ್ನಾಟಕದಲ್ಲಿಯೂ ‘ಓಟ್‌ ಫಾರ್‌ ಒಪಿಎಸ್’ ಅಭಿಯಾನವನ್ನು ಕೈಗೊಂಡಿರುವ ಸರ್ಕಾರಿ ನೌಕರರು, ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಜಾರಿಯಾಗುತ್ತಿರುವ ಒಪಿಎಸ್‌ನತ್ತ ಬೊಟ್ಟು ಮಾಡುತ್ತಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರವೂ ಇದೇ ರೀತಿಯ ಕ್ರಮ ಜರುಗಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿರಿ: NPS ಅಥವಾ OPS? ನವ ಉದಾರವಾದಿ ’ಹೊಸ ಪಿಂಚಣಿ ಯೋಜನೆ’ಯಲ್ಲಿ ನಿಜಕ್ಕೂ ಲಾಭವಿದೆಯೇ?

ಒಪಿಎಸ್‌ ಜಾರಿಗೊಳಿಸುವ ನಿರ್ಧಾರ ಪ್ರಕಟಿಸಿದ ಬಳಿಕ ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿ ಸುಖವಿಂದರ್‌ ಸಿಂಗ್ ಸುಖು ಮಾತನಾಡಿ, “ಈ ವಿಷಯಕ್ಕೆ ಸಂಬಂಧಿಸಿದಂತೆ ಆಳವಾಗಿ ಅಧ್ಯಯನ ಮಾಡಲಾಗಿದೆ. ಹಣಕಾಸು ಇಲಾಖೆಗಳ ಅಧಿಕಾರಿಗಳು ಒಪಿಎಸ್ ಮರುಸ್ಥಾಪನೆಗೆ ಸಂಬಂಧಿಸಿದಂತೆ ಹಣವನ್ನು ಎತ್ತಿಟ್ಟಿದ್ದಾರೆ. ಸಮಸ್ಯೆಯನ್ನು ಇತ್ಯರ್ಥಗೊಳಿಸಲಾಗಿದೆ. ಪ್ರಸ್ತುತ ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ಅಡಿಯಲ್ಲಿ ಇರುವ ಎಲ್ಲಾ ನೌಕರರು ಒಪಿಎಸ್‌ ವ್ಯಾಪ್ತಿಗೆ ಒಳಪಡುತ್ತಾರೆ. ಉದ್ಯೋಗಿಗಳೊಂದಿಗೆ ಸಮಾಲೋಚಿಸಿ ಕ್ರಮಗಳನ್ನು ರೂಪಿಸಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

“ನಾವು ಹಳೆಯ ಪಿಂಚಣಿ ಯೋಜನೆಯನ್ನು ವೋಟ್‌ಗಾಗಿ ಮರುಸ್ಥಾಪಿಸುತ್ತಿಲ್ಲ. ಸಾಮಾಜಿಕ ಭದ್ರತೆಯನ್ನು ನೀಡಲು ಮತ್ತು ಹಿಮಾಚಲದ ಅಭಿವೃದ್ಧಿಯ ಇತಿಹಾಸವನ್ನು ಬರೆದ ಉದ್ಯೋಗಿಗಳ ಆತ್ಮಗೌರವವನ್ನು ಕಾಪಾಡಲು ಈ ಕ್ರಮ ಜರುಗಿಸಿದ್ದೇವೆ” ಎಂದು ಹಿಮಾಚಲ ಪ್ರದೇಶ ಸಚಿವಾಲಯದಲ್ಲಿ ನೌಕರರನ್ನು ಉದ್ದೇಶಿಸಿ ಮುಖ್ಯಮಂತ್ರಿ ಸುಖು ಮಾತನಾಡಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಒಪಿಎಸ್‌ ಪ್ರಮುಖ ಚುನಾವಣಾ ವಿಷಯವಾಗಿತ್ತು. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಗೆದ್ದರೆ ಒಪಿಎಸ್‌ ಮರುಸ್ಥಾಪಿಸುವುದಾಗಿ ಭರವಸೆ ನೀಡಲಾಗಿತ್ತು.

ಹಿಮಾಚಲ ಪ್ರದೇಶ ಸರ್ಕಾರ ಮಹತ್ತರವಾದ ನಿರ್ಧಾರವನ್ನು ಕೈಗೊಂಡ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್.ದಯಾನಂದ್ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿದರು. “ಬೇರೆ ಬೇರೆ ರಾಜ್ಯಗಳಲ್ಲಿ ಒಪಿಎಸ್‌ ಮರುಸ್ಥಾಪಿಸುತ್ತಿರುವುದರಿಂದ ನಮ್ಮ ಹೋರಾಟಕ್ಕೆ ಹೆಚ್ಚಿನ ಬಲ ಬಂದಿದೆ. ಇಲ್ಲಿನ ಸರ್ಕಾರಕ್ಕೆ ನಿರಂತರ ಆಗ್ರಹ ಮಾಡಲಾಗುತ್ತಿದೆ. ಮುಖ್ಯಮಂತ್ರಿಯವರೊಂದಿಗೆ ಮಾತನಾಡಲು ನಿಯೋಗವನ್ನು ಕರೆಸಿಕೊಳ್ಳಲಾಗುತ್ತದೆ ಎಂದು ಸಚಿವ ಸುಧಾಕರ್‌ ಹೇಳಿದ್ದರು. ಆದರೆ ಈವರೆಗೂ ಮಾತುಕತೆಯ ಪ್ರಕ್ರಿಯೆ ಆರಂಭವಾಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

“ಯಾವುದೇ ಪಕ್ಷದ ಪರವಾಗಿ ನಾವು ನಿಂತಿಲ್ಲ. ಒಪಿಎಸ್‌ ಜಾರಿಗೊಳಿಸಿದವರಿಗೆ ನಮ್ಮ ಬೆಂಬಲ ಎಂಬುದು ನಮ್ಮ ಏಕೈಕ ಅಜೆಂಡಾವಾಗಿದೆ. ಸರ್ಕಾರಕ್ಕೆ ಇನ್ನೂ ಸಮಯಾವಕಾಶವಿದೆ. ಸರ್ಕಾರ ಯಾವುದೇ ಪ್ರತಿಕ್ರಿಯೆಯನ್ನು ನೀಡದಿದ್ದರೆ, ನಮ್ಮ ಬೇಡಿಕೆಗೆ ಸ್ಪಂದಿಸುವ ಯಾವುದೇ ಪಕ್ಷಕ್ಕಾದರೂ ನಾವು ಮತ ಚಲಾಯಿಸುತ್ತೇವೆ” ಎಂದು ಪುನರುಚ್ಚರಿಸಿದರು.

ಇದನ್ನೂ ಓದಿರಿ: ಏನಿದು ಎನ್‌ಪಿಎಸ್‌, ಒಪಿಎಸ್? ಲಕ್ಷಾಂತರ ನೌಕರರ ಆತಂಕವೇನು?

“ಬಿಜೆಪಿ ನೇತೃತ್ವದ ಸರ್ಕಾರ ಕೂಡ ನೌಕರರ ಪರ ಕಾಳಜಿಯನ್ನು ಹೊಂದಿದೆ ಎಂದು ನಾವು ಭಾವಿಸಿದ್ದೇವೆ. ಮಾನವೀಯ ನೆಲೆಗಟ್ಟಿನಲ್ಲಿ ನಮ್ಮ ಆಗ್ರಹವನ್ನು ಪರಿಗಣಿಸಬೇಕು. ಬಜೆಟ್‌ ಅಧಿವೇಶನದಲ್ಲಿ ಸರ್ಕಾರ ಒಂದು ನಿರ್ಧಾರಕ್ಕೆ ಬರುತ್ತದೆ ಎಂಬ ನಂಬಿಕೆ ಇದೆ. ಅದನ್ನು ಹುಸಿಗೊಳಿಸಿದರೆ ಪರಿಣಾಮ ಎದುರಿಸುತ್ತದೆ” ಎಂದು ಎಚ್ಚರಿಸಿದರು.

“ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನಡೆಯುತ್ತಿದ್ದ ಒಪಿಎಸ್ ಜಾರಿಗಾಗಿ ಹೋರಾಟ ಈಗ ತಾಲ್ಲೂಕು ಕೇಂದ್ರಗಳಿಗೆ ವರ್ಗಾವಣೆಗೊಂಡಿದೆ. ತಹಸೀಲ್ದಾರ್‌, ಡಿಸಿ ಕಚೇರಿಗಳ ಎದುರಿಗೆ ಹೋರಾಟ ಮಾಡುತ್ತಿದ್ದೇವೆ, ಮನವಿಗಳನ್ನು ಸಲ್ಲಿಸುತ್ತಿದ್ದೇವೆ. ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಪಕ್ಷಕ್ಕೂ ಮನವಿಯನ್ನು ಸಲ್ಲಿಸಿ, ತಮ್ಮ ಪ್ರಣಾಳಿಕೆಯಲ್ಲಿ ಒಪಿಎಸ್ ಜಾರಿಯ ಭರವಸೆ ನೀಡಬೇಕೆಂದು ಕೋರುತ್ತಿದ್ದೇವೆ. ಬಜೆಟ್‌ ಅಧಿವೇಶನದಲ್ಲಿ ಒಪಿಎಸ್‌ ಹೋರಾಟವನ್ನು ಪರಿಗಣಿಸದಿದ್ದರೆ ನಮ್ಮ ಹೋರಾಟ ತಾಲ್ಲೂಕು ಕೇಂದ್ರದಿಂದ ರಾಜ್ಯ ಮಟ್ಟಕ್ಕೆ ಮತ್ತೆ ವಿಸ್ತರಣೆಯಾಗಲಿದೆ” ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...