Homeಮುಖಪುಟಕೊಟ್ಟ ಮಾತು ಉಳಿಸಿಕೊಂಡ ಕಾಂಗ್ರೆಸ್: ಒಪಿಎಸ್ ಜಾರಿಗೆ ಹಿಮಾಚಲ ಕ್ಯಾಬಿನೆಟ್ ಅಸ್ತು

ಕೊಟ್ಟ ಮಾತು ಉಳಿಸಿಕೊಂಡ ಕಾಂಗ್ರೆಸ್: ಒಪಿಎಸ್ ಜಾರಿಗೆ ಹಿಮಾಚಲ ಕ್ಯಾಬಿನೆಟ್ ಅಸ್ತು

ಬಜೆಟ್ ಅಧಿವೇಶನದಲ್ಲೇ ರಾಜ್ಯ ಬಿಜೆಪಿ ಸರ್ಕಾರ ಒಪಿಎಸ್ ಜಾರಿಗೊಳಿಸುವ ಘೋಷಣೆ ಮಾಡಬೇಕು ಎಂದು ಎನ್‌ಪಿಎಸ್ ನೌಕರರ ಸಂಘ ಒತ್ತಾಯಿಸಿದೆ

- Advertisement -
- Advertisement -

ಚುನಾವಣಾ ಪೂರ್ವದ ಪ್ರಣಾಳಿಕೆಯಲ್ಲಿ ನೀಡಿದ ಬೇಡಿಕೆಯನ್ನು ಕಾಂಗ್ರೆಸ್‌ ಈಡೇರಿಸಿದ್ದು, ಹಿಮಾಚಲ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದ ನಂತರ ನಡೆದ ಮೊದಲ ಕ್ಯಾಬಿನೇಟ್‌ನಲ್ಲಿಯೇ ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಜಾರಿಗೆ ಕ್ರಮ ಜರುಗಿಸಿದೆ.

‘ವೋಟ್ ಫಾರ್‌ ಓಪಿಎಸ್‌’ (ಒಪಿಎಸ್ ಜಾರಿಗೊಳಿಸಿದವರಿಗೆ ವೋಟ್) ಎಂದು ಅಭಿಯಾನ ಮಾಡಿದ್ದ ಸರ್ಕಾರಿ ನೌಕರರು, ‘ಎನ್‌ಪಿಎಸ್’ (ನೂತನ ಪಿಂಚಣಿ ಯೋಜನೆ) ರದ್ದುಗೊಳಿಸುವಂತೆ ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಆದರೆ ಸರ್ಕಾರ ಯಾವುದೇ ಕ್ರಮ ಜರುಗಿಸದ ಕಾರಣ ದೊಡ್ಡ ಮಟ್ಟದಲ್ಲಿ ನೌಕರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ, ಅದರ ಗೆಲುವಿಗೂ ಕಾರಣವಾಗಿದ್ದರು.

ಕರ್ನಾಟಕದಲ್ಲಿಯೂ ‘ಓಟ್‌ ಫಾರ್‌ ಒಪಿಎಸ್’ ಅಭಿಯಾನವನ್ನು ಕೈಗೊಂಡಿರುವ ಸರ್ಕಾರಿ ನೌಕರರು, ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಜಾರಿಯಾಗುತ್ತಿರುವ ಒಪಿಎಸ್‌ನತ್ತ ಬೊಟ್ಟು ಮಾಡುತ್ತಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರವೂ ಇದೇ ರೀತಿಯ ಕ್ರಮ ಜರುಗಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿರಿ: NPS ಅಥವಾ OPS? ನವ ಉದಾರವಾದಿ ’ಹೊಸ ಪಿಂಚಣಿ ಯೋಜನೆ’ಯಲ್ಲಿ ನಿಜಕ್ಕೂ ಲಾಭವಿದೆಯೇ?

ಒಪಿಎಸ್‌ ಜಾರಿಗೊಳಿಸುವ ನಿರ್ಧಾರ ಪ್ರಕಟಿಸಿದ ಬಳಿಕ ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿ ಸುಖವಿಂದರ್‌ ಸಿಂಗ್ ಸುಖು ಮಾತನಾಡಿ, “ಈ ವಿಷಯಕ್ಕೆ ಸಂಬಂಧಿಸಿದಂತೆ ಆಳವಾಗಿ ಅಧ್ಯಯನ ಮಾಡಲಾಗಿದೆ. ಹಣಕಾಸು ಇಲಾಖೆಗಳ ಅಧಿಕಾರಿಗಳು ಒಪಿಎಸ್ ಮರುಸ್ಥಾಪನೆಗೆ ಸಂಬಂಧಿಸಿದಂತೆ ಹಣವನ್ನು ಎತ್ತಿಟ್ಟಿದ್ದಾರೆ. ಸಮಸ್ಯೆಯನ್ನು ಇತ್ಯರ್ಥಗೊಳಿಸಲಾಗಿದೆ. ಪ್ರಸ್ತುತ ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ಅಡಿಯಲ್ಲಿ ಇರುವ ಎಲ್ಲಾ ನೌಕರರು ಒಪಿಎಸ್‌ ವ್ಯಾಪ್ತಿಗೆ ಒಳಪಡುತ್ತಾರೆ. ಉದ್ಯೋಗಿಗಳೊಂದಿಗೆ ಸಮಾಲೋಚಿಸಿ ಕ್ರಮಗಳನ್ನು ರೂಪಿಸಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

“ನಾವು ಹಳೆಯ ಪಿಂಚಣಿ ಯೋಜನೆಯನ್ನು ವೋಟ್‌ಗಾಗಿ ಮರುಸ್ಥಾಪಿಸುತ್ತಿಲ್ಲ. ಸಾಮಾಜಿಕ ಭದ್ರತೆಯನ್ನು ನೀಡಲು ಮತ್ತು ಹಿಮಾಚಲದ ಅಭಿವೃದ್ಧಿಯ ಇತಿಹಾಸವನ್ನು ಬರೆದ ಉದ್ಯೋಗಿಗಳ ಆತ್ಮಗೌರವವನ್ನು ಕಾಪಾಡಲು ಈ ಕ್ರಮ ಜರುಗಿಸಿದ್ದೇವೆ” ಎಂದು ಹಿಮಾಚಲ ಪ್ರದೇಶ ಸಚಿವಾಲಯದಲ್ಲಿ ನೌಕರರನ್ನು ಉದ್ದೇಶಿಸಿ ಮುಖ್ಯಮಂತ್ರಿ ಸುಖು ಮಾತನಾಡಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಒಪಿಎಸ್‌ ಪ್ರಮುಖ ಚುನಾವಣಾ ವಿಷಯವಾಗಿತ್ತು. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಗೆದ್ದರೆ ಒಪಿಎಸ್‌ ಮರುಸ್ಥಾಪಿಸುವುದಾಗಿ ಭರವಸೆ ನೀಡಲಾಗಿತ್ತು.

ಹಿಮಾಚಲ ಪ್ರದೇಶ ಸರ್ಕಾರ ಮಹತ್ತರವಾದ ನಿರ್ಧಾರವನ್ನು ಕೈಗೊಂಡ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್.ದಯಾನಂದ್ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿದರು. “ಬೇರೆ ಬೇರೆ ರಾಜ್ಯಗಳಲ್ಲಿ ಒಪಿಎಸ್‌ ಮರುಸ್ಥಾಪಿಸುತ್ತಿರುವುದರಿಂದ ನಮ್ಮ ಹೋರಾಟಕ್ಕೆ ಹೆಚ್ಚಿನ ಬಲ ಬಂದಿದೆ. ಇಲ್ಲಿನ ಸರ್ಕಾರಕ್ಕೆ ನಿರಂತರ ಆಗ್ರಹ ಮಾಡಲಾಗುತ್ತಿದೆ. ಮುಖ್ಯಮಂತ್ರಿಯವರೊಂದಿಗೆ ಮಾತನಾಡಲು ನಿಯೋಗವನ್ನು ಕರೆಸಿಕೊಳ್ಳಲಾಗುತ್ತದೆ ಎಂದು ಸಚಿವ ಸುಧಾಕರ್‌ ಹೇಳಿದ್ದರು. ಆದರೆ ಈವರೆಗೂ ಮಾತುಕತೆಯ ಪ್ರಕ್ರಿಯೆ ಆರಂಭವಾಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

“ಯಾವುದೇ ಪಕ್ಷದ ಪರವಾಗಿ ನಾವು ನಿಂತಿಲ್ಲ. ಒಪಿಎಸ್‌ ಜಾರಿಗೊಳಿಸಿದವರಿಗೆ ನಮ್ಮ ಬೆಂಬಲ ಎಂಬುದು ನಮ್ಮ ಏಕೈಕ ಅಜೆಂಡಾವಾಗಿದೆ. ಸರ್ಕಾರಕ್ಕೆ ಇನ್ನೂ ಸಮಯಾವಕಾಶವಿದೆ. ಸರ್ಕಾರ ಯಾವುದೇ ಪ್ರತಿಕ್ರಿಯೆಯನ್ನು ನೀಡದಿದ್ದರೆ, ನಮ್ಮ ಬೇಡಿಕೆಗೆ ಸ್ಪಂದಿಸುವ ಯಾವುದೇ ಪಕ್ಷಕ್ಕಾದರೂ ನಾವು ಮತ ಚಲಾಯಿಸುತ್ತೇವೆ” ಎಂದು ಪುನರುಚ್ಚರಿಸಿದರು.

ಇದನ್ನೂ ಓದಿರಿ: ಏನಿದು ಎನ್‌ಪಿಎಸ್‌, ಒಪಿಎಸ್? ಲಕ್ಷಾಂತರ ನೌಕರರ ಆತಂಕವೇನು?

“ಬಿಜೆಪಿ ನೇತೃತ್ವದ ಸರ್ಕಾರ ಕೂಡ ನೌಕರರ ಪರ ಕಾಳಜಿಯನ್ನು ಹೊಂದಿದೆ ಎಂದು ನಾವು ಭಾವಿಸಿದ್ದೇವೆ. ಮಾನವೀಯ ನೆಲೆಗಟ್ಟಿನಲ್ಲಿ ನಮ್ಮ ಆಗ್ರಹವನ್ನು ಪರಿಗಣಿಸಬೇಕು. ಬಜೆಟ್‌ ಅಧಿವೇಶನದಲ್ಲಿ ಸರ್ಕಾರ ಒಂದು ನಿರ್ಧಾರಕ್ಕೆ ಬರುತ್ತದೆ ಎಂಬ ನಂಬಿಕೆ ಇದೆ. ಅದನ್ನು ಹುಸಿಗೊಳಿಸಿದರೆ ಪರಿಣಾಮ ಎದುರಿಸುತ್ತದೆ” ಎಂದು ಎಚ್ಚರಿಸಿದರು.

“ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನಡೆಯುತ್ತಿದ್ದ ಒಪಿಎಸ್ ಜಾರಿಗಾಗಿ ಹೋರಾಟ ಈಗ ತಾಲ್ಲೂಕು ಕೇಂದ್ರಗಳಿಗೆ ವರ್ಗಾವಣೆಗೊಂಡಿದೆ. ತಹಸೀಲ್ದಾರ್‌, ಡಿಸಿ ಕಚೇರಿಗಳ ಎದುರಿಗೆ ಹೋರಾಟ ಮಾಡುತ್ತಿದ್ದೇವೆ, ಮನವಿಗಳನ್ನು ಸಲ್ಲಿಸುತ್ತಿದ್ದೇವೆ. ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಪಕ್ಷಕ್ಕೂ ಮನವಿಯನ್ನು ಸಲ್ಲಿಸಿ, ತಮ್ಮ ಪ್ರಣಾಳಿಕೆಯಲ್ಲಿ ಒಪಿಎಸ್ ಜಾರಿಯ ಭರವಸೆ ನೀಡಬೇಕೆಂದು ಕೋರುತ್ತಿದ್ದೇವೆ. ಬಜೆಟ್‌ ಅಧಿವೇಶನದಲ್ಲಿ ಒಪಿಎಸ್‌ ಹೋರಾಟವನ್ನು ಪರಿಗಣಿಸದಿದ್ದರೆ ನಮ್ಮ ಹೋರಾಟ ತಾಲ್ಲೂಕು ಕೇಂದ್ರದಿಂದ ರಾಜ್ಯ ಮಟ್ಟಕ್ಕೆ ಮತ್ತೆ ವಿಸ್ತರಣೆಯಾಗಲಿದೆ” ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...