Homeಮುಖಪುಟಕೊಟ್ಟ ಮಾತು ಉಳಿಸಿಕೊಂಡ ಕಾಂಗ್ರೆಸ್: ಒಪಿಎಸ್ ಜಾರಿಗೆ ಹಿಮಾಚಲ ಕ್ಯಾಬಿನೆಟ್ ಅಸ್ತು

ಕೊಟ್ಟ ಮಾತು ಉಳಿಸಿಕೊಂಡ ಕಾಂಗ್ರೆಸ್: ಒಪಿಎಸ್ ಜಾರಿಗೆ ಹಿಮಾಚಲ ಕ್ಯಾಬಿನೆಟ್ ಅಸ್ತು

ಬಜೆಟ್ ಅಧಿವೇಶನದಲ್ಲೇ ರಾಜ್ಯ ಬಿಜೆಪಿ ಸರ್ಕಾರ ಒಪಿಎಸ್ ಜಾರಿಗೊಳಿಸುವ ಘೋಷಣೆ ಮಾಡಬೇಕು ಎಂದು ಎನ್‌ಪಿಎಸ್ ನೌಕರರ ಸಂಘ ಒತ್ತಾಯಿಸಿದೆ

- Advertisement -
- Advertisement -

ಚುನಾವಣಾ ಪೂರ್ವದ ಪ್ರಣಾಳಿಕೆಯಲ್ಲಿ ನೀಡಿದ ಬೇಡಿಕೆಯನ್ನು ಕಾಂಗ್ರೆಸ್‌ ಈಡೇರಿಸಿದ್ದು, ಹಿಮಾಚಲ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದ ನಂತರ ನಡೆದ ಮೊದಲ ಕ್ಯಾಬಿನೇಟ್‌ನಲ್ಲಿಯೇ ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಜಾರಿಗೆ ಕ್ರಮ ಜರುಗಿಸಿದೆ.

‘ವೋಟ್ ಫಾರ್‌ ಓಪಿಎಸ್‌’ (ಒಪಿಎಸ್ ಜಾರಿಗೊಳಿಸಿದವರಿಗೆ ವೋಟ್) ಎಂದು ಅಭಿಯಾನ ಮಾಡಿದ್ದ ಸರ್ಕಾರಿ ನೌಕರರು, ‘ಎನ್‌ಪಿಎಸ್’ (ನೂತನ ಪಿಂಚಣಿ ಯೋಜನೆ) ರದ್ದುಗೊಳಿಸುವಂತೆ ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಆದರೆ ಸರ್ಕಾರ ಯಾವುದೇ ಕ್ರಮ ಜರುಗಿಸದ ಕಾರಣ ದೊಡ್ಡ ಮಟ್ಟದಲ್ಲಿ ನೌಕರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ, ಅದರ ಗೆಲುವಿಗೂ ಕಾರಣವಾಗಿದ್ದರು.

ಕರ್ನಾಟಕದಲ್ಲಿಯೂ ‘ಓಟ್‌ ಫಾರ್‌ ಒಪಿಎಸ್’ ಅಭಿಯಾನವನ್ನು ಕೈಗೊಂಡಿರುವ ಸರ್ಕಾರಿ ನೌಕರರು, ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಜಾರಿಯಾಗುತ್ತಿರುವ ಒಪಿಎಸ್‌ನತ್ತ ಬೊಟ್ಟು ಮಾಡುತ್ತಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರವೂ ಇದೇ ರೀತಿಯ ಕ್ರಮ ಜರುಗಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿರಿ: NPS ಅಥವಾ OPS? ನವ ಉದಾರವಾದಿ ’ಹೊಸ ಪಿಂಚಣಿ ಯೋಜನೆ’ಯಲ್ಲಿ ನಿಜಕ್ಕೂ ಲಾಭವಿದೆಯೇ?

ಒಪಿಎಸ್‌ ಜಾರಿಗೊಳಿಸುವ ನಿರ್ಧಾರ ಪ್ರಕಟಿಸಿದ ಬಳಿಕ ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿ ಸುಖವಿಂದರ್‌ ಸಿಂಗ್ ಸುಖು ಮಾತನಾಡಿ, “ಈ ವಿಷಯಕ್ಕೆ ಸಂಬಂಧಿಸಿದಂತೆ ಆಳವಾಗಿ ಅಧ್ಯಯನ ಮಾಡಲಾಗಿದೆ. ಹಣಕಾಸು ಇಲಾಖೆಗಳ ಅಧಿಕಾರಿಗಳು ಒಪಿಎಸ್ ಮರುಸ್ಥಾಪನೆಗೆ ಸಂಬಂಧಿಸಿದಂತೆ ಹಣವನ್ನು ಎತ್ತಿಟ್ಟಿದ್ದಾರೆ. ಸಮಸ್ಯೆಯನ್ನು ಇತ್ಯರ್ಥಗೊಳಿಸಲಾಗಿದೆ. ಪ್ರಸ್ತುತ ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ಅಡಿಯಲ್ಲಿ ಇರುವ ಎಲ್ಲಾ ನೌಕರರು ಒಪಿಎಸ್‌ ವ್ಯಾಪ್ತಿಗೆ ಒಳಪಡುತ್ತಾರೆ. ಉದ್ಯೋಗಿಗಳೊಂದಿಗೆ ಸಮಾಲೋಚಿಸಿ ಕ್ರಮಗಳನ್ನು ರೂಪಿಸಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

“ನಾವು ಹಳೆಯ ಪಿಂಚಣಿ ಯೋಜನೆಯನ್ನು ವೋಟ್‌ಗಾಗಿ ಮರುಸ್ಥಾಪಿಸುತ್ತಿಲ್ಲ. ಸಾಮಾಜಿಕ ಭದ್ರತೆಯನ್ನು ನೀಡಲು ಮತ್ತು ಹಿಮಾಚಲದ ಅಭಿವೃದ್ಧಿಯ ಇತಿಹಾಸವನ್ನು ಬರೆದ ಉದ್ಯೋಗಿಗಳ ಆತ್ಮಗೌರವವನ್ನು ಕಾಪಾಡಲು ಈ ಕ್ರಮ ಜರುಗಿಸಿದ್ದೇವೆ” ಎಂದು ಹಿಮಾಚಲ ಪ್ರದೇಶ ಸಚಿವಾಲಯದಲ್ಲಿ ನೌಕರರನ್ನು ಉದ್ದೇಶಿಸಿ ಮುಖ್ಯಮಂತ್ರಿ ಸುಖು ಮಾತನಾಡಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಒಪಿಎಸ್‌ ಪ್ರಮುಖ ಚುನಾವಣಾ ವಿಷಯವಾಗಿತ್ತು. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಗೆದ್ದರೆ ಒಪಿಎಸ್‌ ಮರುಸ್ಥಾಪಿಸುವುದಾಗಿ ಭರವಸೆ ನೀಡಲಾಗಿತ್ತು.

ಹಿಮಾಚಲ ಪ್ರದೇಶ ಸರ್ಕಾರ ಮಹತ್ತರವಾದ ನಿರ್ಧಾರವನ್ನು ಕೈಗೊಂಡ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್.ದಯಾನಂದ್ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿದರು. “ಬೇರೆ ಬೇರೆ ರಾಜ್ಯಗಳಲ್ಲಿ ಒಪಿಎಸ್‌ ಮರುಸ್ಥಾಪಿಸುತ್ತಿರುವುದರಿಂದ ನಮ್ಮ ಹೋರಾಟಕ್ಕೆ ಹೆಚ್ಚಿನ ಬಲ ಬಂದಿದೆ. ಇಲ್ಲಿನ ಸರ್ಕಾರಕ್ಕೆ ನಿರಂತರ ಆಗ್ರಹ ಮಾಡಲಾಗುತ್ತಿದೆ. ಮುಖ್ಯಮಂತ್ರಿಯವರೊಂದಿಗೆ ಮಾತನಾಡಲು ನಿಯೋಗವನ್ನು ಕರೆಸಿಕೊಳ್ಳಲಾಗುತ್ತದೆ ಎಂದು ಸಚಿವ ಸುಧಾಕರ್‌ ಹೇಳಿದ್ದರು. ಆದರೆ ಈವರೆಗೂ ಮಾತುಕತೆಯ ಪ್ರಕ್ರಿಯೆ ಆರಂಭವಾಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

“ಯಾವುದೇ ಪಕ್ಷದ ಪರವಾಗಿ ನಾವು ನಿಂತಿಲ್ಲ. ಒಪಿಎಸ್‌ ಜಾರಿಗೊಳಿಸಿದವರಿಗೆ ನಮ್ಮ ಬೆಂಬಲ ಎಂಬುದು ನಮ್ಮ ಏಕೈಕ ಅಜೆಂಡಾವಾಗಿದೆ. ಸರ್ಕಾರಕ್ಕೆ ಇನ್ನೂ ಸಮಯಾವಕಾಶವಿದೆ. ಸರ್ಕಾರ ಯಾವುದೇ ಪ್ರತಿಕ್ರಿಯೆಯನ್ನು ನೀಡದಿದ್ದರೆ, ನಮ್ಮ ಬೇಡಿಕೆಗೆ ಸ್ಪಂದಿಸುವ ಯಾವುದೇ ಪಕ್ಷಕ್ಕಾದರೂ ನಾವು ಮತ ಚಲಾಯಿಸುತ್ತೇವೆ” ಎಂದು ಪುನರುಚ್ಚರಿಸಿದರು.

ಇದನ್ನೂ ಓದಿರಿ: ಏನಿದು ಎನ್‌ಪಿಎಸ್‌, ಒಪಿಎಸ್? ಲಕ್ಷಾಂತರ ನೌಕರರ ಆತಂಕವೇನು?

“ಬಿಜೆಪಿ ನೇತೃತ್ವದ ಸರ್ಕಾರ ಕೂಡ ನೌಕರರ ಪರ ಕಾಳಜಿಯನ್ನು ಹೊಂದಿದೆ ಎಂದು ನಾವು ಭಾವಿಸಿದ್ದೇವೆ. ಮಾನವೀಯ ನೆಲೆಗಟ್ಟಿನಲ್ಲಿ ನಮ್ಮ ಆಗ್ರಹವನ್ನು ಪರಿಗಣಿಸಬೇಕು. ಬಜೆಟ್‌ ಅಧಿವೇಶನದಲ್ಲಿ ಸರ್ಕಾರ ಒಂದು ನಿರ್ಧಾರಕ್ಕೆ ಬರುತ್ತದೆ ಎಂಬ ನಂಬಿಕೆ ಇದೆ. ಅದನ್ನು ಹುಸಿಗೊಳಿಸಿದರೆ ಪರಿಣಾಮ ಎದುರಿಸುತ್ತದೆ” ಎಂದು ಎಚ್ಚರಿಸಿದರು.

“ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನಡೆಯುತ್ತಿದ್ದ ಒಪಿಎಸ್ ಜಾರಿಗಾಗಿ ಹೋರಾಟ ಈಗ ತಾಲ್ಲೂಕು ಕೇಂದ್ರಗಳಿಗೆ ವರ್ಗಾವಣೆಗೊಂಡಿದೆ. ತಹಸೀಲ್ದಾರ್‌, ಡಿಸಿ ಕಚೇರಿಗಳ ಎದುರಿಗೆ ಹೋರಾಟ ಮಾಡುತ್ತಿದ್ದೇವೆ, ಮನವಿಗಳನ್ನು ಸಲ್ಲಿಸುತ್ತಿದ್ದೇವೆ. ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಪಕ್ಷಕ್ಕೂ ಮನವಿಯನ್ನು ಸಲ್ಲಿಸಿ, ತಮ್ಮ ಪ್ರಣಾಳಿಕೆಯಲ್ಲಿ ಒಪಿಎಸ್ ಜಾರಿಯ ಭರವಸೆ ನೀಡಬೇಕೆಂದು ಕೋರುತ್ತಿದ್ದೇವೆ. ಬಜೆಟ್‌ ಅಧಿವೇಶನದಲ್ಲಿ ಒಪಿಎಸ್‌ ಹೋರಾಟವನ್ನು ಪರಿಗಣಿಸದಿದ್ದರೆ ನಮ್ಮ ಹೋರಾಟ ತಾಲ್ಲೂಕು ಕೇಂದ್ರದಿಂದ ರಾಜ್ಯ ಮಟ್ಟಕ್ಕೆ ಮತ್ತೆ ವಿಸ್ತರಣೆಯಾಗಲಿದೆ” ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...