Homeರಾಜಕೀಯಬೆಳಗಾವಿಯ ಕಾಂಗ್ರೆಸ್ ರಿಯಲ್ ಫೈಟ್ ಇನ್ಮುಂದೆ ಶುರು!

ಬೆಳಗಾವಿಯ ಕಾಂಗ್ರೆಸ್ ರಿಯಲ್ ಫೈಟ್ ಇನ್ಮುಂದೆ ಶುರು!

- Advertisement -
- Advertisement -

ಆಗಸ್ಟ್ 27ರ ರಾತ್ರಿಯಿಂದ ಸೆಪ್ಟೆಂಬರ್ 7ರವರೆಗೆ ಇಡೀ ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದು ಬೆಳಗಾವಿಯ ಪಿಎಲ್‍ಡಿ ಬ್ಯಾಂಕ್ ಚುನಾವಣೆ. ಸಹಕಾರಿ ಕ್ಷೇತ್ರದ ಈ ಚುನಾವಣೆಗೆ ಇಷ್ಟೊಂದು ಮಹತ್ವ ಬರಲು ಪ್ರತಿಷ್ಠಿತರ ನಡುವೆ ನಡೆದ ಜಿದ್ದಾಜಿದ್ದಿನ ಹೋರಾಟ ಕಾರಣವಾಗಿತ್ತು. ಬೆಳಗಾವಿಯ ಸಾಹುಕಾರರು ಎಂದೇ ಖ್ಯಾತಿ ಗಳಿಸಿದ ಜಾರಕಿಹೊಳಿ ಸಹೋದರರಿಗೆ ಸವಾಲ್ ಎಸೆದಿದ್ದು ಮಾತ್ರ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್. ಇದೀಗ ಚುನಾವಣೆ ಮುಗಿದಿದ್ದು ಈ ಕದನ ಕೂಡ ಮುಗಿದಿದೆ ಎಂದುಕೊಂಡರೆ ತಪ್ಪಾಗುತ್ತದೆ. ರಿಯಲ್ ಆಗಿ ಫೈಟ್ ಆರಂಭವಾಗಿರುವುದೇ ಈಗ.
ಹೆಬ್ಬಾಳ್ಕರ್ ಬೆಳೆಸಿದ್ದು ಜಾರಕಿಹೊಳಿ ಸಹೋದರರು…!
ಕಳೆದ 20 ವರ್ಷಗಳಿಂದ ಜಾರಕಿಹೊಳಿ ಸಹೋದರರ ನೆರಳಲ್ಲಿಯೇ ಲಕ್ಷ್ಮೀ ಹೆಬ್ಬಾಳ್ಕರ್ ರಾಜಕೀಯ ಮಾಡಿಕೊಂಡು ಬೆಳೆದಿದ್ದಾರೆ. ಹೆಬ್ಬಾಳ್ಕರ್ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ, ನಂತರ 2013ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ, 2014ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಹಾಗೂ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸ್ಥಾನಮಾನ. ಎಲ್ಲದರ ಹಿಂದೆ ಜಾರಕಿಹೊಳಿ ಸಹೋದರರ ಶ್ರೀರಕ್ಷೆ ಇದ್ದೇ ಇತ್ತು. ಕಳೆದ ಲೋಕಸಭೆ ಚುಣಾವಣೆ ಸಂದರ್ಭದಲ್ಲಿ ಮೋದಿ ಅಲೆಯ ನಡುವೆಯೂ ಗೋಕಾಕ್, ಅರಭಾವಿ ಕ್ಷೇತ್ರದಿಂದ ಜಾರಕಿಹೊಳಿ ಸಹೋದರರು ಅತಿಹೆಚ್ಚು ಮತಗಳನ್ನು ಹೆಬ್ಬಾಳ್ಕರ್‍ಗೆ ಹಾಕಿಸುವ ಮೂಲಕ ಬೆನ್ನೆಲುಬಾಗಿ ನಿಂತಿದ್ದರು. ಅಷ್ಟೇ ಅಲ್ಲ, ಚುನಾವಣೆ ಸಂದರ್ಭಗಳನ್ನೂ ಸೇರಿ ಅನೇಕ ಸಂದರ್ಭದಲ್ಲಿ ಆರ್ಥಿಕವಾಗಿಯೂ ಹೆಬ್ಬಾಳ್ಕರ್‍ಗೆ ಸಹಾಯ ಮಾಡಿದ್ದಾರೆ. ಇತ್ತೀಚಿನ 2018ರ ವಿಧಾನಸಭೆ ಚುನಾವಣೆಯಲ್ಲಿ 50 ಸಾವಿರಕ್ಕೂ ಅಧಿಕ ಮತಗಳಿಂದ ಹೆಬ್ಭಾಳ್ಕರ್ ಗೆಲ್ಲಿಸಲಿಕ್ಕಾಗಿ ಸಚಿವ ರಮೇಶ ಜಾರಕಿಹೊಳಿ, ಉದ್ಯಮಿ ಲಖನ್ ಜಾರಕಿಹೊಳಿ ಪ್ರಚಾರ ನಡೆಸಿದ್ದಕ್ಕೆ ಕ್ಷೇತ್ರದ ಜನತೆ ಸಾಕ್ಷಿಯಾಗಿದ್ದಾರೆ.
ರಮೇಶ ಜಾರಕಿಹೊಳಿ ಹಾಗೂ ಹೆಬ್ಭಾಳ್ಕರ್ ನಡುವೆ ಯಾಕೆ ವೈಮನಸ್ಸು…?
ದಶಕಗಳಿಂದ ಸಚಿವ ರಮೇಶ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಉತ್ತಮ ಬಾಂಧವ್ಯವಿತ್ತು. ‘ಹೆಬ್ಬಾಳ್ಕರ್ ತಂದೆಯ ಅನಾರೋಗ್ಯ, ಸಹೋದರ ಹಾಗೂ ಮಗನ ವಿದ್ಯಾಭ್ಯಾಸಕ್ಕೂ ಸಹಾಯ ಮಾಡಿದ್ದೇನೆ. ಆದರೆ ಇದನ್ನೆಲ್ಲಾ ಈಗ ಹೆಬ್ಬಾಳ್ಕರ್ ಮರೆತುಬಿಟ್ಟಿದ್ದಾರೆ’ ಎಂದು ರಮೇಶ ಜಾರಕಿಹೊಳಿ ಆರೋಪಿಸುತ್ತಿದ್ದಾರೆ. ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಸತೀಶ್ ಜಾರಕಿಹೊಳಿ ಸಚಿವರಾಗಿದ್ದ ವೇಳೆಯಲ್ಲಿ, ರಮೇಶ ಜಾರಕಿಹೊಳಿ ವರಿಷ್ಠರ ಸಂಪರ್ಕ ಸಾಧಿಸಿದ್ದು ಇದೇ ಹೆಬ್ಬಾಳ್ಕರ್ ಮೂಲಕವೇ. ಸತೀಶ ಬದಲಾಗಿ ತಮಗೆ ಸಚಿವ ಸ್ಥಾನ ಪಡೆದುಕೊಳ್ಳುವಲ್ಲಿ ಕೂಡ ಹೆಬ್ಬಾಳ್ಕರ್ ಕೈಜೋಡಿಸಿದ್ದರು. ನಂತರ ಜಿಲ್ಲೆಯ ಎಲ್ಲಾ ಕೆಲಸಗಳಲ್ಲಿಯೂ ರಮೇಶ ಜಾರಕಿಹೊಳಿ ಹಾಗೂ ಹೆಬ್ಬಾಳ್ಕರ್ ಒಟ್ಟಗೂಡಿಯೇ ಮಾಡುತ್ತಿದ್ದರು. ಆದರೆs 2018ರ ವಿಧಾನಸಭೆ ಚುನಾವಣೆ ಬಳಿಕ ರಚನೆಯಾದ ಸಮ್ಮಿಶ್ರ ಸರ್ಕಾರದಲ್ಲಿ ಸತೀಶ ಜಾರಕಿಹೊಳಿ, ರಮೇಶ ಜಾರಕಿಹೊಳಿ ಇಬ್ಬರು ಸಚಿವ ಸ್ಥಾನಕ್ಕೆ ಪೈಪೋಟಿ ನಡೆಸಲು ಆರಂಭಿಸಿದ್ರು. ಈ ವೇಳೆಯಲ್ಲಿ ತನ್ನ ಪರವಾಗಿ ಹೈಕಮಾಂಡ್ ಬಳಿ ಬರುವಂತೆ ಹೆಬ್ಬಾಳ್ಕರ್‍ಗೆ ರಮೇಶ್ ಸೂಚನೆ ನೀಡಿದ್ದರು. ಆದರೆ ಅಷ್ಟರಲ್ಲಾಗಲೇ ಸನ್ನಿವೇಶ ಬದಲಾಗಿತ್ತು. ಇದಕ್ಕೆ ಕ್ಯಾರೆ ಎನ್ನದ ಹೆಬ್ಬಾಳ್ಕರ್ ಲಿಂಗಾಯತ ಮಹಿಳಾ ಕೋಟಾದಲ್ಲಿ ತಾನೇ ಮಂತ್ರಿಗಿರಿಯ ಆಕಾಂಕ್ಷಿ ಎನ್ನುವ ಮೂಲಕ ರಮೇಶ ಜಾರಕಿಹೊಳಿಗೆ ಟಾಂಗ್ ನೀಡಿದ್ದರು. ನಂತರ ಸಿದ್ದರಾಮಯ್ಯ ಪ್ರಭಾವದ ಕಾರಣ ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನ ಸಿಕ್ಕಿತ್ತು. ಇದಾದ ನಂತರ ರಮೇಶ ಜಾರಕಿಹೊಳಿ ಹಾಗೂ ಹೆಬ್ಬಾಳ್ಕರ್ ನಡುವಿನ ಸಂಬಂಧ ದಿನದಿಂದ ದಿನಕ್ಕೆ ಹಳಸಿದೆ. ವರ್ಗಾವಣೆ ವಿಚಾರಗಳಲ್ಲಿ ಇದು ಮತ್ತಷ್ಟು ವಿಕೋಪಕ್ಕೆ ಹೋಗಿದೆ. ಆದರೆ ಈ ಮುಸುಕಿನ ಜಗಳ ಬೀದಿಗೆ ಬರಲು ಕಾಣವಾಗಿದ್ದು ಮಾತ್ರ ಪಿಎಲ್‍ಡಿ ಬ್ಯಾಂಕ್ ಚುನಾವಣೆ.
ಪಿ ಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ ಗೆದ್ದಿದ್ದು ಯಾರು..?
ಜಾರಕಿಹೊಳಿ ಸಹೋದರರು ಮತ್ತು ಹೆಬ್ಬಾಳ್ಕರ್ ನಡುವೆ ಪೈಪೋಟಿಗೆ ಕಾರಣವಾಗಿದ್ದ ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಅಸಲಿಗೆ ಗೆದ್ದಿದ್ದು ಯಾರು? ತೀವ್ರ ಪ್ರತಿಷ್ಠೆ, ಜಿದ್ದಾಜಿದ್ದಿಗೆ ಕಾರಣವಾಗಿದ್ದ ಚುನಾವಣೆಯಲ್ಲಿ ಹೆಬ್ಬಾಳ್ಕರ್ ಗೆದ್ದು ಸೋತಂತಾಗಿದ್ದರೆ, ಜಾರಕಿಹೊಳಿ ಸಹೋದರರು ಸೋತ್ತು ಗೆದ್ದಂತಾಗಿದ್ದಾರೆ. ಹೀಗಾಗಲು ಪ್ರಮುಖ ಕಾರಣ ಶಾಸಕ ಸತೀಶ್ ಜಾರಕಿಹೊಳಿ ನಡೆಸಿದ ಮಾಸ್ಟರ್ ಪ್ಲ್ಯಾನ್. ಮೊದಲು ಸತೀಶ್ ಜಾರಕಿಹೊಳಿ ಬಲಗೈ ಭಂಟನಂತೆ ಇದ್ದ ಬಾಪುಗೌಡ ಪಾಟೀಲ್ ನಂತರ ಸತೀಶಗೆ ಕೈಕೊಟ್ಟು ಹೆಬ್ಬಾಳ್ಕರ್ ಗುಂಪು ಸೇರಿದ್ದರು. ಹೆಬ್ಬಾಳ್ಕರ್ ಗುಂಪಿನಿಂದ ಅಧ್ಯಕ್ಷರಾಗಲು ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿದ್ದರು. ಬಾಪುಗೌಡನ ಮಾತಿನಂತೆಯೆ ಹೆಬ್ಬಾಳ್ಕರ್ ಈ ಚುನಾವಣೆಯನ್ನು ಇಷ್ಟೊಂದು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದರು. ಆದರೇ ಹೆಬ್ಬಾಳ್ಕರ್ ಹಾಗೂ ಜಾರಕಿಹೊಳಿ ಸಂಧಾನದ ವೇಳೆಯಲ್ಲಿ ಸತೀಶ ಜಾರಕಿಹೊಳಿ ಇಟ್ಟ ಮೊದಲ ಬೇಡಿಕೆ ಬಾಪುಗೌಡರನ್ನು ಯಾವುದೇ ಕಾರಣಕ್ಕೂ ಅಧ್ಯಕ್ಷರನ್ನಾಗಿ ಮಾಡಬಾರದು ಅಂತ. ಇದಕ್ಕೆ ಅನಿವಾರ್ಯವಾಗಿ ಹೆಬ್ಬಾಳ್ಕರ್ ಒಪ್ಪಿಗೆ ಸೂಚಿಸಬೇಕಾಗಿ ನಂತರ ಮರಾಠ ಸಮುದಾಯದ 83 ವರ್ಷದ ವಯೋವೃದ್ಧ ಮಹಾದೇವ ಪಾಟೀಲ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಿ, ಜಾರಕಿಹೊಳಿ ಸಹೋದರರು ಸೋಲಿನಲ್ಲೂ ನಗೆ ಬೀರಿದ್ದರು. ಆದರೇ ಹೆಬ್ಬಾಳ್ಕರ್ ಗೆದ್ದು ಸಹ ಲಿಂಗಾಯತ ಸಮುದಾಯ ವ್ಯಕ್ತಿಗೆ ಅಧ್ಯಕ್ಷ ಸ್ಥಾನ ಕೊಡಿಸುವಲ್ಲಿ ವಿಫಲರಾಗಿದ್ದರು.
ಸೈಲೆಂಟ್ ಸತೀಶ್ ಮುಂದಿನ ನಡೆ ನಿಗೂಢ….!
ಇನ್ನೂ ಬೆಳಗಾವಿಯ ಪಿಎಲ್‍ಡಿ ಬ್ಯಾಂಕ್ ಚುನಾವಣೆಯನ್ನು ರಾಜ್ಯದ 6 ಕೋಟಿ ಕನ್ನಡಿಗರು ಮಾಧ್ಯಮಗಳ ಮೂಲಕ ವೀಕ್ಷಣೆ ಮಾಡಿದರು. ಒಂದು ಯಕಶ್ಚಿತ್ ಪಿಎಲ್‍ಡಿ ಬ್ಯಾಂಕ್ ಚುನಾವಣೆಯಿಂದಾಗಿ ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೇ ಕುತ್ತು ಬರಲಿದೆ ಎಂದೇ ಬಿಂಬಿಸಲಾಗಿತ್ತು. ಆದರೇ ಮೈತ್ರಿ ಸರ್ಕಾರದ ನಾಯಕರಿಗೆ ಹೇಗಾದರೂ ತಕ್ಷಣಕ್ಕೆ ಬೆಂಕಿ ಶಮನ ಆಗೋದುಬೇಕಿತ್ತು. ಹಾಗಾಗೀ ವಿವಾದ ಇತ್ಯರ್ಥ ಪಡಿಸಲಾಗಿದೆ. ಆದರೆ ಎಲ್ಲವೂ ಬೂದಿಮುಚ್ಚಿದ ಕೆಂಡದಂತಿದೆ. ಮುಂದೆ ಲೋಕಸಭೆ ಚುನಾವಣೆಯ ವೇಳೆಯಲ್ಲಿ ಸಂಘರ್ಷ ಏರ್ಪಡಲಿದೆ ಎಂದು ಸ್ವತಃ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಇನ್ನೂ ಶಾಸಕ ಸತೀಶ್ ಜಾರಕಿಹೊಳಿ ರಾಜಕಾರಣದಲ್ಲಿ ಎಂದಿಗೂ ಸೋಲು ಒಪ್ಪಿಕೊಳ್ಳದ ವ್ಯಕ್ತಿ. ಯಾವುದನ್ನು ಬಹಿರಂಗವಾಗಿ ಹೇಳಲ್ಲ. ಆದರೇ ಒಳಗೊಳಗೆ ಅನೇಕ ಮಾಸ್ಟರ್ ಪ್ಲ್ಯಾನ್ ಮಾಡುವುದು ಕರಗತವಾಗಿದೆ. ಸತೀಶ್ ಜಾರಕಿಹೊಳಿ ಮುಂದಿನ ನಡೆ ಏನು? ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಣಿಸುವ ನಿಟ್ಟಿನಲ್ಲಿ ಯಾವ ಪ್ಲ್ಯಾನ್ ಮಾಡಲಿದ್ದಾರೆ ಎಂಬುದು ಕಾದು ನೋಡಬೇಕು. ಇನ್ನೂ ಸತೀಶ ಜಾರಕಿಹೊಳಿ ಹಾಗೂ ಬಿಜೆಪಿ ಪ್ರಭಾವಿ ಶಾಸಕ ಉಮೇಶ ಕತ್ತಿ ಒಂದೇ ತಾಲೂಕಿನ ಎರಡು ಕ್ಷೇತ್ರಗಳಲ್ಲಿ ಶಾಸಕರಾಗಿ ಕೆಲಸ ಮಾಡುತ್ತಿದ್ದಾರೆ. ಆದರೇ ಒಮ್ಮೆಯೂ ಇಬ್ಬರ ನಡುವೆ ಪೈಪೋಟಿ ನಡೆದಿಲ್ಲ. ಎಂಥದೇ ಮಹತ್ವದ ವಿಚಾರವಿದ್ದರೂ ಇಬ್ಬರು ಒಟ್ಟಿಗೆ ಮಾತನಾಡಿ ಇತ್ಯರ್ಥ ಪಡಿಸಿಕೊಳ್ಳುತ್ತಾರೆ. ಆದರೇ ತಮ್ಮದೇ ಪಕ್ಷದ ಹೆಬ್ಬಾಳ್ಕರ್ ಜೊತೆ ಜಾರಕಿಹೊಳಿ ಸಹೋದರರಿಗೆ ಇಷ್ಟೋಂದು ವೈರತ್ವ ಯಾಕಾಗಿ? ಜಿಲ್ಲಾ ಕಾಂಗ್ರೆಸ್‍ನ ರಾಜಕೀಯ ಭವಿಷ್ಯದ ಮೇಲೆ ಇದು ಯಾವರೀತಿಯ ಪರಿಣಾಮ ಬೀರಲಿದೆ ಎಂಬುದೇ ಅಸಲಿ ಪ್ರಶ್ನೆ.

ಕೌಜಲಗಿ ಮುಗಿಸಲು ಹೆಬ್ಬಾಳ್ಕರ್ ದಾಳ?
ಅದು ದಶಕಗಳ ಹಿಂದಿನ ಮಾತು ಬೆಳಗಾವಿಯಲ್ಲಿ ಮಾಜಿ ಸಚಿವ ದಿ ವಿ.ಎಸ್ ಂಕೌಜಲಗಿ ದೊಡ್ಡ ಪ್ರಭಾವಿಯಾಗಿದ್ದರು. ಅವರನ್ನು ರಾಜಕೀಯವಾಗಿ ಮುಗಿಸಲು ಸ್ಕೆಚ್ ಹಾಕಿದ್ದು ಸತೀಶ ಜಾರಕಿಹೊಳಿ… ಆಗಲೇ ರಾಜಕೀಯದಲ್ಲಿ ಪ್ರಥಮ ಬಾರಿಗೆ ಸ್ಟ್ರಿಂಗ್ ಆಪರೇಷನ್ ನಡೆದಿತ್ತು. ಇದಕ್ಕೆ ಸತೀಶ ಜಾರಕಿಹೊಳಿ ಬಳಸಿಕೊಂಡಿದ್ದು ಇದೇ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನ ಅನ್ನೋ ಆರೋಪವಿದೆ.
ಈ ಸಿಡಿಯನ್ನು ಹೈಕಮಾಂಡ್ ಅಂಗಳಕ್ಕೆ ತಲುಪಿಸಿ, ನಂತರ ಕೌಜಲಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಡಲಾಗಿತ್ತು. ಆಗಲೇ ಜಾರಕಿಹೊಳಿ ಸಹೋದರರು ಹೆಬ್ಬಾಳ್ಕರ್ ಬಳಸಿಕೊಂಡು ದೊಡ್ಡ ತಂತ್ರ ಮಾಡಿ ಯಶಸ್ಸು ಗಳಿಸಿದ್ದರು. ಅರಬಾವಿ ಕ್ಷೇತ್ರದಿಂದ ಸತತವಾಗಿ ಗೆದ್ದಿದ್ದ ಕೌಜಲಗಿ ವಿರುದ್ಧವಾಗಿ ಸಹೋದರ ಬಾಲಚಂದ್ರ ಜಾರಕಿಹೊಳಿ ಅವರನ್ನು ಕಣಕ್ಕೆ ಇಳಿಸಿ ಸೋಲಿಸಿ ಕೌಜಲಗಿ ಅವರನ್ನು ರಾಜಕೀಯವಾಗಿ ಮುಗಿಸಿ ಹಾಕಿದ್ದರು ಎಂಬುದನ್ನು ಇಂದಿಗೂ ಜನ ಮರೆತಿಲ್ಲ.

 

– ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...