Homeರಾಜಕೀಯಬೆಳಗಾವಿಯ ಕಾಂಗ್ರೆಸ್ ರಿಯಲ್ ಫೈಟ್ ಇನ್ಮುಂದೆ ಶುರು!

ಬೆಳಗಾವಿಯ ಕಾಂಗ್ರೆಸ್ ರಿಯಲ್ ಫೈಟ್ ಇನ್ಮುಂದೆ ಶುರು!

- Advertisement -
- Advertisement -

ಆಗಸ್ಟ್ 27ರ ರಾತ್ರಿಯಿಂದ ಸೆಪ್ಟೆಂಬರ್ 7ರವರೆಗೆ ಇಡೀ ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದು ಬೆಳಗಾವಿಯ ಪಿಎಲ್‍ಡಿ ಬ್ಯಾಂಕ್ ಚುನಾವಣೆ. ಸಹಕಾರಿ ಕ್ಷೇತ್ರದ ಈ ಚುನಾವಣೆಗೆ ಇಷ್ಟೊಂದು ಮಹತ್ವ ಬರಲು ಪ್ರತಿಷ್ಠಿತರ ನಡುವೆ ನಡೆದ ಜಿದ್ದಾಜಿದ್ದಿನ ಹೋರಾಟ ಕಾರಣವಾಗಿತ್ತು. ಬೆಳಗಾವಿಯ ಸಾಹುಕಾರರು ಎಂದೇ ಖ್ಯಾತಿ ಗಳಿಸಿದ ಜಾರಕಿಹೊಳಿ ಸಹೋದರರಿಗೆ ಸವಾಲ್ ಎಸೆದಿದ್ದು ಮಾತ್ರ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್. ಇದೀಗ ಚುನಾವಣೆ ಮುಗಿದಿದ್ದು ಈ ಕದನ ಕೂಡ ಮುಗಿದಿದೆ ಎಂದುಕೊಂಡರೆ ತಪ್ಪಾಗುತ್ತದೆ. ರಿಯಲ್ ಆಗಿ ಫೈಟ್ ಆರಂಭವಾಗಿರುವುದೇ ಈಗ.
ಹೆಬ್ಬಾಳ್ಕರ್ ಬೆಳೆಸಿದ್ದು ಜಾರಕಿಹೊಳಿ ಸಹೋದರರು…!
ಕಳೆದ 20 ವರ್ಷಗಳಿಂದ ಜಾರಕಿಹೊಳಿ ಸಹೋದರರ ನೆರಳಲ್ಲಿಯೇ ಲಕ್ಷ್ಮೀ ಹೆಬ್ಬಾಳ್ಕರ್ ರಾಜಕೀಯ ಮಾಡಿಕೊಂಡು ಬೆಳೆದಿದ್ದಾರೆ. ಹೆಬ್ಬಾಳ್ಕರ್ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ, ನಂತರ 2013ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ, 2014ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಹಾಗೂ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸ್ಥಾನಮಾನ. ಎಲ್ಲದರ ಹಿಂದೆ ಜಾರಕಿಹೊಳಿ ಸಹೋದರರ ಶ್ರೀರಕ್ಷೆ ಇದ್ದೇ ಇತ್ತು. ಕಳೆದ ಲೋಕಸಭೆ ಚುಣಾವಣೆ ಸಂದರ್ಭದಲ್ಲಿ ಮೋದಿ ಅಲೆಯ ನಡುವೆಯೂ ಗೋಕಾಕ್, ಅರಭಾವಿ ಕ್ಷೇತ್ರದಿಂದ ಜಾರಕಿಹೊಳಿ ಸಹೋದರರು ಅತಿಹೆಚ್ಚು ಮತಗಳನ್ನು ಹೆಬ್ಬಾಳ್ಕರ್‍ಗೆ ಹಾಕಿಸುವ ಮೂಲಕ ಬೆನ್ನೆಲುಬಾಗಿ ನಿಂತಿದ್ದರು. ಅಷ್ಟೇ ಅಲ್ಲ, ಚುನಾವಣೆ ಸಂದರ್ಭಗಳನ್ನೂ ಸೇರಿ ಅನೇಕ ಸಂದರ್ಭದಲ್ಲಿ ಆರ್ಥಿಕವಾಗಿಯೂ ಹೆಬ್ಬಾಳ್ಕರ್‍ಗೆ ಸಹಾಯ ಮಾಡಿದ್ದಾರೆ. ಇತ್ತೀಚಿನ 2018ರ ವಿಧಾನಸಭೆ ಚುನಾವಣೆಯಲ್ಲಿ 50 ಸಾವಿರಕ್ಕೂ ಅಧಿಕ ಮತಗಳಿಂದ ಹೆಬ್ಭಾಳ್ಕರ್ ಗೆಲ್ಲಿಸಲಿಕ್ಕಾಗಿ ಸಚಿವ ರಮೇಶ ಜಾರಕಿಹೊಳಿ, ಉದ್ಯಮಿ ಲಖನ್ ಜಾರಕಿಹೊಳಿ ಪ್ರಚಾರ ನಡೆಸಿದ್ದಕ್ಕೆ ಕ್ಷೇತ್ರದ ಜನತೆ ಸಾಕ್ಷಿಯಾಗಿದ್ದಾರೆ.
ರಮೇಶ ಜಾರಕಿಹೊಳಿ ಹಾಗೂ ಹೆಬ್ಭಾಳ್ಕರ್ ನಡುವೆ ಯಾಕೆ ವೈಮನಸ್ಸು…?
ದಶಕಗಳಿಂದ ಸಚಿವ ರಮೇಶ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಉತ್ತಮ ಬಾಂಧವ್ಯವಿತ್ತು. ‘ಹೆಬ್ಬಾಳ್ಕರ್ ತಂದೆಯ ಅನಾರೋಗ್ಯ, ಸಹೋದರ ಹಾಗೂ ಮಗನ ವಿದ್ಯಾಭ್ಯಾಸಕ್ಕೂ ಸಹಾಯ ಮಾಡಿದ್ದೇನೆ. ಆದರೆ ಇದನ್ನೆಲ್ಲಾ ಈಗ ಹೆಬ್ಬಾಳ್ಕರ್ ಮರೆತುಬಿಟ್ಟಿದ್ದಾರೆ’ ಎಂದು ರಮೇಶ ಜಾರಕಿಹೊಳಿ ಆರೋಪಿಸುತ್ತಿದ್ದಾರೆ. ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಸತೀಶ್ ಜಾರಕಿಹೊಳಿ ಸಚಿವರಾಗಿದ್ದ ವೇಳೆಯಲ್ಲಿ, ರಮೇಶ ಜಾರಕಿಹೊಳಿ ವರಿಷ್ಠರ ಸಂಪರ್ಕ ಸಾಧಿಸಿದ್ದು ಇದೇ ಹೆಬ್ಬಾಳ್ಕರ್ ಮೂಲಕವೇ. ಸತೀಶ ಬದಲಾಗಿ ತಮಗೆ ಸಚಿವ ಸ್ಥಾನ ಪಡೆದುಕೊಳ್ಳುವಲ್ಲಿ ಕೂಡ ಹೆಬ್ಬಾಳ್ಕರ್ ಕೈಜೋಡಿಸಿದ್ದರು. ನಂತರ ಜಿಲ್ಲೆಯ ಎಲ್ಲಾ ಕೆಲಸಗಳಲ್ಲಿಯೂ ರಮೇಶ ಜಾರಕಿಹೊಳಿ ಹಾಗೂ ಹೆಬ್ಬಾಳ್ಕರ್ ಒಟ್ಟಗೂಡಿಯೇ ಮಾಡುತ್ತಿದ್ದರು. ಆದರೆs 2018ರ ವಿಧಾನಸಭೆ ಚುನಾವಣೆ ಬಳಿಕ ರಚನೆಯಾದ ಸಮ್ಮಿಶ್ರ ಸರ್ಕಾರದಲ್ಲಿ ಸತೀಶ ಜಾರಕಿಹೊಳಿ, ರಮೇಶ ಜಾರಕಿಹೊಳಿ ಇಬ್ಬರು ಸಚಿವ ಸ್ಥಾನಕ್ಕೆ ಪೈಪೋಟಿ ನಡೆಸಲು ಆರಂಭಿಸಿದ್ರು. ಈ ವೇಳೆಯಲ್ಲಿ ತನ್ನ ಪರವಾಗಿ ಹೈಕಮಾಂಡ್ ಬಳಿ ಬರುವಂತೆ ಹೆಬ್ಬಾಳ್ಕರ್‍ಗೆ ರಮೇಶ್ ಸೂಚನೆ ನೀಡಿದ್ದರು. ಆದರೆ ಅಷ್ಟರಲ್ಲಾಗಲೇ ಸನ್ನಿವೇಶ ಬದಲಾಗಿತ್ತು. ಇದಕ್ಕೆ ಕ್ಯಾರೆ ಎನ್ನದ ಹೆಬ್ಬಾಳ್ಕರ್ ಲಿಂಗಾಯತ ಮಹಿಳಾ ಕೋಟಾದಲ್ಲಿ ತಾನೇ ಮಂತ್ರಿಗಿರಿಯ ಆಕಾಂಕ್ಷಿ ಎನ್ನುವ ಮೂಲಕ ರಮೇಶ ಜಾರಕಿಹೊಳಿಗೆ ಟಾಂಗ್ ನೀಡಿದ್ದರು. ನಂತರ ಸಿದ್ದರಾಮಯ್ಯ ಪ್ರಭಾವದ ಕಾರಣ ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನ ಸಿಕ್ಕಿತ್ತು. ಇದಾದ ನಂತರ ರಮೇಶ ಜಾರಕಿಹೊಳಿ ಹಾಗೂ ಹೆಬ್ಬಾಳ್ಕರ್ ನಡುವಿನ ಸಂಬಂಧ ದಿನದಿಂದ ದಿನಕ್ಕೆ ಹಳಸಿದೆ. ವರ್ಗಾವಣೆ ವಿಚಾರಗಳಲ್ಲಿ ಇದು ಮತ್ತಷ್ಟು ವಿಕೋಪಕ್ಕೆ ಹೋಗಿದೆ. ಆದರೆ ಈ ಮುಸುಕಿನ ಜಗಳ ಬೀದಿಗೆ ಬರಲು ಕಾಣವಾಗಿದ್ದು ಮಾತ್ರ ಪಿಎಲ್‍ಡಿ ಬ್ಯಾಂಕ್ ಚುನಾವಣೆ.
ಪಿ ಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ ಗೆದ್ದಿದ್ದು ಯಾರು..?
ಜಾರಕಿಹೊಳಿ ಸಹೋದರರು ಮತ್ತು ಹೆಬ್ಬಾಳ್ಕರ್ ನಡುವೆ ಪೈಪೋಟಿಗೆ ಕಾರಣವಾಗಿದ್ದ ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಅಸಲಿಗೆ ಗೆದ್ದಿದ್ದು ಯಾರು? ತೀವ್ರ ಪ್ರತಿಷ್ಠೆ, ಜಿದ್ದಾಜಿದ್ದಿಗೆ ಕಾರಣವಾಗಿದ್ದ ಚುನಾವಣೆಯಲ್ಲಿ ಹೆಬ್ಬಾಳ್ಕರ್ ಗೆದ್ದು ಸೋತಂತಾಗಿದ್ದರೆ, ಜಾರಕಿಹೊಳಿ ಸಹೋದರರು ಸೋತ್ತು ಗೆದ್ದಂತಾಗಿದ್ದಾರೆ. ಹೀಗಾಗಲು ಪ್ರಮುಖ ಕಾರಣ ಶಾಸಕ ಸತೀಶ್ ಜಾರಕಿಹೊಳಿ ನಡೆಸಿದ ಮಾಸ್ಟರ್ ಪ್ಲ್ಯಾನ್. ಮೊದಲು ಸತೀಶ್ ಜಾರಕಿಹೊಳಿ ಬಲಗೈ ಭಂಟನಂತೆ ಇದ್ದ ಬಾಪುಗೌಡ ಪಾಟೀಲ್ ನಂತರ ಸತೀಶಗೆ ಕೈಕೊಟ್ಟು ಹೆಬ್ಬಾಳ್ಕರ್ ಗುಂಪು ಸೇರಿದ್ದರು. ಹೆಬ್ಬಾಳ್ಕರ್ ಗುಂಪಿನಿಂದ ಅಧ್ಯಕ್ಷರಾಗಲು ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿದ್ದರು. ಬಾಪುಗೌಡನ ಮಾತಿನಂತೆಯೆ ಹೆಬ್ಬಾಳ್ಕರ್ ಈ ಚುನಾವಣೆಯನ್ನು ಇಷ್ಟೊಂದು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದರು. ಆದರೇ ಹೆಬ್ಬಾಳ್ಕರ್ ಹಾಗೂ ಜಾರಕಿಹೊಳಿ ಸಂಧಾನದ ವೇಳೆಯಲ್ಲಿ ಸತೀಶ ಜಾರಕಿಹೊಳಿ ಇಟ್ಟ ಮೊದಲ ಬೇಡಿಕೆ ಬಾಪುಗೌಡರನ್ನು ಯಾವುದೇ ಕಾರಣಕ್ಕೂ ಅಧ್ಯಕ್ಷರನ್ನಾಗಿ ಮಾಡಬಾರದು ಅಂತ. ಇದಕ್ಕೆ ಅನಿವಾರ್ಯವಾಗಿ ಹೆಬ್ಬಾಳ್ಕರ್ ಒಪ್ಪಿಗೆ ಸೂಚಿಸಬೇಕಾಗಿ ನಂತರ ಮರಾಠ ಸಮುದಾಯದ 83 ವರ್ಷದ ವಯೋವೃದ್ಧ ಮಹಾದೇವ ಪಾಟೀಲ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಿ, ಜಾರಕಿಹೊಳಿ ಸಹೋದರರು ಸೋಲಿನಲ್ಲೂ ನಗೆ ಬೀರಿದ್ದರು. ಆದರೇ ಹೆಬ್ಬಾಳ್ಕರ್ ಗೆದ್ದು ಸಹ ಲಿಂಗಾಯತ ಸಮುದಾಯ ವ್ಯಕ್ತಿಗೆ ಅಧ್ಯಕ್ಷ ಸ್ಥಾನ ಕೊಡಿಸುವಲ್ಲಿ ವಿಫಲರಾಗಿದ್ದರು.
ಸೈಲೆಂಟ್ ಸತೀಶ್ ಮುಂದಿನ ನಡೆ ನಿಗೂಢ….!
ಇನ್ನೂ ಬೆಳಗಾವಿಯ ಪಿಎಲ್‍ಡಿ ಬ್ಯಾಂಕ್ ಚುನಾವಣೆಯನ್ನು ರಾಜ್ಯದ 6 ಕೋಟಿ ಕನ್ನಡಿಗರು ಮಾಧ್ಯಮಗಳ ಮೂಲಕ ವೀಕ್ಷಣೆ ಮಾಡಿದರು. ಒಂದು ಯಕಶ್ಚಿತ್ ಪಿಎಲ್‍ಡಿ ಬ್ಯಾಂಕ್ ಚುನಾವಣೆಯಿಂದಾಗಿ ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೇ ಕುತ್ತು ಬರಲಿದೆ ಎಂದೇ ಬಿಂಬಿಸಲಾಗಿತ್ತು. ಆದರೇ ಮೈತ್ರಿ ಸರ್ಕಾರದ ನಾಯಕರಿಗೆ ಹೇಗಾದರೂ ತಕ್ಷಣಕ್ಕೆ ಬೆಂಕಿ ಶಮನ ಆಗೋದುಬೇಕಿತ್ತು. ಹಾಗಾಗೀ ವಿವಾದ ಇತ್ಯರ್ಥ ಪಡಿಸಲಾಗಿದೆ. ಆದರೆ ಎಲ್ಲವೂ ಬೂದಿಮುಚ್ಚಿದ ಕೆಂಡದಂತಿದೆ. ಮುಂದೆ ಲೋಕಸಭೆ ಚುನಾವಣೆಯ ವೇಳೆಯಲ್ಲಿ ಸಂಘರ್ಷ ಏರ್ಪಡಲಿದೆ ಎಂದು ಸ್ವತಃ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಇನ್ನೂ ಶಾಸಕ ಸತೀಶ್ ಜಾರಕಿಹೊಳಿ ರಾಜಕಾರಣದಲ್ಲಿ ಎಂದಿಗೂ ಸೋಲು ಒಪ್ಪಿಕೊಳ್ಳದ ವ್ಯಕ್ತಿ. ಯಾವುದನ್ನು ಬಹಿರಂಗವಾಗಿ ಹೇಳಲ್ಲ. ಆದರೇ ಒಳಗೊಳಗೆ ಅನೇಕ ಮಾಸ್ಟರ್ ಪ್ಲ್ಯಾನ್ ಮಾಡುವುದು ಕರಗತವಾಗಿದೆ. ಸತೀಶ್ ಜಾರಕಿಹೊಳಿ ಮುಂದಿನ ನಡೆ ಏನು? ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಣಿಸುವ ನಿಟ್ಟಿನಲ್ಲಿ ಯಾವ ಪ್ಲ್ಯಾನ್ ಮಾಡಲಿದ್ದಾರೆ ಎಂಬುದು ಕಾದು ನೋಡಬೇಕು. ಇನ್ನೂ ಸತೀಶ ಜಾರಕಿಹೊಳಿ ಹಾಗೂ ಬಿಜೆಪಿ ಪ್ರಭಾವಿ ಶಾಸಕ ಉಮೇಶ ಕತ್ತಿ ಒಂದೇ ತಾಲೂಕಿನ ಎರಡು ಕ್ಷೇತ್ರಗಳಲ್ಲಿ ಶಾಸಕರಾಗಿ ಕೆಲಸ ಮಾಡುತ್ತಿದ್ದಾರೆ. ಆದರೇ ಒಮ್ಮೆಯೂ ಇಬ್ಬರ ನಡುವೆ ಪೈಪೋಟಿ ನಡೆದಿಲ್ಲ. ಎಂಥದೇ ಮಹತ್ವದ ವಿಚಾರವಿದ್ದರೂ ಇಬ್ಬರು ಒಟ್ಟಿಗೆ ಮಾತನಾಡಿ ಇತ್ಯರ್ಥ ಪಡಿಸಿಕೊಳ್ಳುತ್ತಾರೆ. ಆದರೇ ತಮ್ಮದೇ ಪಕ್ಷದ ಹೆಬ್ಬಾಳ್ಕರ್ ಜೊತೆ ಜಾರಕಿಹೊಳಿ ಸಹೋದರರಿಗೆ ಇಷ್ಟೋಂದು ವೈರತ್ವ ಯಾಕಾಗಿ? ಜಿಲ್ಲಾ ಕಾಂಗ್ರೆಸ್‍ನ ರಾಜಕೀಯ ಭವಿಷ್ಯದ ಮೇಲೆ ಇದು ಯಾವರೀತಿಯ ಪರಿಣಾಮ ಬೀರಲಿದೆ ಎಂಬುದೇ ಅಸಲಿ ಪ್ರಶ್ನೆ.

ಕೌಜಲಗಿ ಮುಗಿಸಲು ಹೆಬ್ಬಾಳ್ಕರ್ ದಾಳ?
ಅದು ದಶಕಗಳ ಹಿಂದಿನ ಮಾತು ಬೆಳಗಾವಿಯಲ್ಲಿ ಮಾಜಿ ಸಚಿವ ದಿ ವಿ.ಎಸ್ ಂಕೌಜಲಗಿ ದೊಡ್ಡ ಪ್ರಭಾವಿಯಾಗಿದ್ದರು. ಅವರನ್ನು ರಾಜಕೀಯವಾಗಿ ಮುಗಿಸಲು ಸ್ಕೆಚ್ ಹಾಕಿದ್ದು ಸತೀಶ ಜಾರಕಿಹೊಳಿ… ಆಗಲೇ ರಾಜಕೀಯದಲ್ಲಿ ಪ್ರಥಮ ಬಾರಿಗೆ ಸ್ಟ್ರಿಂಗ್ ಆಪರೇಷನ್ ನಡೆದಿತ್ತು. ಇದಕ್ಕೆ ಸತೀಶ ಜಾರಕಿಹೊಳಿ ಬಳಸಿಕೊಂಡಿದ್ದು ಇದೇ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನ ಅನ್ನೋ ಆರೋಪವಿದೆ.
ಈ ಸಿಡಿಯನ್ನು ಹೈಕಮಾಂಡ್ ಅಂಗಳಕ್ಕೆ ತಲುಪಿಸಿ, ನಂತರ ಕೌಜಲಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಡಲಾಗಿತ್ತು. ಆಗಲೇ ಜಾರಕಿಹೊಳಿ ಸಹೋದರರು ಹೆಬ್ಬಾಳ್ಕರ್ ಬಳಸಿಕೊಂಡು ದೊಡ್ಡ ತಂತ್ರ ಮಾಡಿ ಯಶಸ್ಸು ಗಳಿಸಿದ್ದರು. ಅರಬಾವಿ ಕ್ಷೇತ್ರದಿಂದ ಸತತವಾಗಿ ಗೆದ್ದಿದ್ದ ಕೌಜಲಗಿ ವಿರುದ್ಧವಾಗಿ ಸಹೋದರ ಬಾಲಚಂದ್ರ ಜಾರಕಿಹೊಳಿ ಅವರನ್ನು ಕಣಕ್ಕೆ ಇಳಿಸಿ ಸೋಲಿಸಿ ಕೌಜಲಗಿ ಅವರನ್ನು ರಾಜಕೀಯವಾಗಿ ಮುಗಿಸಿ ಹಾಕಿದ್ದರು ಎಂಬುದನ್ನು ಇಂದಿಗೂ ಜನ ಮರೆತಿಲ್ಲ.

 

– ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....