Homeರಾಜಕೀಯಬೆಳಗಾವಿಯ ಕಾಂಗ್ರೆಸ್ ರಿಯಲ್ ಫೈಟ್ ಇನ್ಮುಂದೆ ಶುರು!

ಬೆಳಗಾವಿಯ ಕಾಂಗ್ರೆಸ್ ರಿಯಲ್ ಫೈಟ್ ಇನ್ಮುಂದೆ ಶುರು!

- Advertisement -
- Advertisement -

ಆಗಸ್ಟ್ 27ರ ರಾತ್ರಿಯಿಂದ ಸೆಪ್ಟೆಂಬರ್ 7ರವರೆಗೆ ಇಡೀ ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದು ಬೆಳಗಾವಿಯ ಪಿಎಲ್‍ಡಿ ಬ್ಯಾಂಕ್ ಚುನಾವಣೆ. ಸಹಕಾರಿ ಕ್ಷೇತ್ರದ ಈ ಚುನಾವಣೆಗೆ ಇಷ್ಟೊಂದು ಮಹತ್ವ ಬರಲು ಪ್ರತಿಷ್ಠಿತರ ನಡುವೆ ನಡೆದ ಜಿದ್ದಾಜಿದ್ದಿನ ಹೋರಾಟ ಕಾರಣವಾಗಿತ್ತು. ಬೆಳಗಾವಿಯ ಸಾಹುಕಾರರು ಎಂದೇ ಖ್ಯಾತಿ ಗಳಿಸಿದ ಜಾರಕಿಹೊಳಿ ಸಹೋದರರಿಗೆ ಸವಾಲ್ ಎಸೆದಿದ್ದು ಮಾತ್ರ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್. ಇದೀಗ ಚುನಾವಣೆ ಮುಗಿದಿದ್ದು ಈ ಕದನ ಕೂಡ ಮುಗಿದಿದೆ ಎಂದುಕೊಂಡರೆ ತಪ್ಪಾಗುತ್ತದೆ. ರಿಯಲ್ ಆಗಿ ಫೈಟ್ ಆರಂಭವಾಗಿರುವುದೇ ಈಗ.
ಹೆಬ್ಬಾಳ್ಕರ್ ಬೆಳೆಸಿದ್ದು ಜಾರಕಿಹೊಳಿ ಸಹೋದರರು…!
ಕಳೆದ 20 ವರ್ಷಗಳಿಂದ ಜಾರಕಿಹೊಳಿ ಸಹೋದರರ ನೆರಳಲ್ಲಿಯೇ ಲಕ್ಷ್ಮೀ ಹೆಬ್ಬಾಳ್ಕರ್ ರಾಜಕೀಯ ಮಾಡಿಕೊಂಡು ಬೆಳೆದಿದ್ದಾರೆ. ಹೆಬ್ಬಾಳ್ಕರ್ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ, ನಂತರ 2013ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ, 2014ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಹಾಗೂ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸ್ಥಾನಮಾನ. ಎಲ್ಲದರ ಹಿಂದೆ ಜಾರಕಿಹೊಳಿ ಸಹೋದರರ ಶ್ರೀರಕ್ಷೆ ಇದ್ದೇ ಇತ್ತು. ಕಳೆದ ಲೋಕಸಭೆ ಚುಣಾವಣೆ ಸಂದರ್ಭದಲ್ಲಿ ಮೋದಿ ಅಲೆಯ ನಡುವೆಯೂ ಗೋಕಾಕ್, ಅರಭಾವಿ ಕ್ಷೇತ್ರದಿಂದ ಜಾರಕಿಹೊಳಿ ಸಹೋದರರು ಅತಿಹೆಚ್ಚು ಮತಗಳನ್ನು ಹೆಬ್ಬಾಳ್ಕರ್‍ಗೆ ಹಾಕಿಸುವ ಮೂಲಕ ಬೆನ್ನೆಲುಬಾಗಿ ನಿಂತಿದ್ದರು. ಅಷ್ಟೇ ಅಲ್ಲ, ಚುನಾವಣೆ ಸಂದರ್ಭಗಳನ್ನೂ ಸೇರಿ ಅನೇಕ ಸಂದರ್ಭದಲ್ಲಿ ಆರ್ಥಿಕವಾಗಿಯೂ ಹೆಬ್ಬಾಳ್ಕರ್‍ಗೆ ಸಹಾಯ ಮಾಡಿದ್ದಾರೆ. ಇತ್ತೀಚಿನ 2018ರ ವಿಧಾನಸಭೆ ಚುನಾವಣೆಯಲ್ಲಿ 50 ಸಾವಿರಕ್ಕೂ ಅಧಿಕ ಮತಗಳಿಂದ ಹೆಬ್ಭಾಳ್ಕರ್ ಗೆಲ್ಲಿಸಲಿಕ್ಕಾಗಿ ಸಚಿವ ರಮೇಶ ಜಾರಕಿಹೊಳಿ, ಉದ್ಯಮಿ ಲಖನ್ ಜಾರಕಿಹೊಳಿ ಪ್ರಚಾರ ನಡೆಸಿದ್ದಕ್ಕೆ ಕ್ಷೇತ್ರದ ಜನತೆ ಸಾಕ್ಷಿಯಾಗಿದ್ದಾರೆ.
ರಮೇಶ ಜಾರಕಿಹೊಳಿ ಹಾಗೂ ಹೆಬ್ಭಾಳ್ಕರ್ ನಡುವೆ ಯಾಕೆ ವೈಮನಸ್ಸು…?
ದಶಕಗಳಿಂದ ಸಚಿವ ರಮೇಶ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಉತ್ತಮ ಬಾಂಧವ್ಯವಿತ್ತು. ‘ಹೆಬ್ಬಾಳ್ಕರ್ ತಂದೆಯ ಅನಾರೋಗ್ಯ, ಸಹೋದರ ಹಾಗೂ ಮಗನ ವಿದ್ಯಾಭ್ಯಾಸಕ್ಕೂ ಸಹಾಯ ಮಾಡಿದ್ದೇನೆ. ಆದರೆ ಇದನ್ನೆಲ್ಲಾ ಈಗ ಹೆಬ್ಬಾಳ್ಕರ್ ಮರೆತುಬಿಟ್ಟಿದ್ದಾರೆ’ ಎಂದು ರಮೇಶ ಜಾರಕಿಹೊಳಿ ಆರೋಪಿಸುತ್ತಿದ್ದಾರೆ. ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಸತೀಶ್ ಜಾರಕಿಹೊಳಿ ಸಚಿವರಾಗಿದ್ದ ವೇಳೆಯಲ್ಲಿ, ರಮೇಶ ಜಾರಕಿಹೊಳಿ ವರಿಷ್ಠರ ಸಂಪರ್ಕ ಸಾಧಿಸಿದ್ದು ಇದೇ ಹೆಬ್ಬಾಳ್ಕರ್ ಮೂಲಕವೇ. ಸತೀಶ ಬದಲಾಗಿ ತಮಗೆ ಸಚಿವ ಸ್ಥಾನ ಪಡೆದುಕೊಳ್ಳುವಲ್ಲಿ ಕೂಡ ಹೆಬ್ಬಾಳ್ಕರ್ ಕೈಜೋಡಿಸಿದ್ದರು. ನಂತರ ಜಿಲ್ಲೆಯ ಎಲ್ಲಾ ಕೆಲಸಗಳಲ್ಲಿಯೂ ರಮೇಶ ಜಾರಕಿಹೊಳಿ ಹಾಗೂ ಹೆಬ್ಬಾಳ್ಕರ್ ಒಟ್ಟಗೂಡಿಯೇ ಮಾಡುತ್ತಿದ್ದರು. ಆದರೆs 2018ರ ವಿಧಾನಸಭೆ ಚುನಾವಣೆ ಬಳಿಕ ರಚನೆಯಾದ ಸಮ್ಮಿಶ್ರ ಸರ್ಕಾರದಲ್ಲಿ ಸತೀಶ ಜಾರಕಿಹೊಳಿ, ರಮೇಶ ಜಾರಕಿಹೊಳಿ ಇಬ್ಬರು ಸಚಿವ ಸ್ಥಾನಕ್ಕೆ ಪೈಪೋಟಿ ನಡೆಸಲು ಆರಂಭಿಸಿದ್ರು. ಈ ವೇಳೆಯಲ್ಲಿ ತನ್ನ ಪರವಾಗಿ ಹೈಕಮಾಂಡ್ ಬಳಿ ಬರುವಂತೆ ಹೆಬ್ಬಾಳ್ಕರ್‍ಗೆ ರಮೇಶ್ ಸೂಚನೆ ನೀಡಿದ್ದರು. ಆದರೆ ಅಷ್ಟರಲ್ಲಾಗಲೇ ಸನ್ನಿವೇಶ ಬದಲಾಗಿತ್ತು. ಇದಕ್ಕೆ ಕ್ಯಾರೆ ಎನ್ನದ ಹೆಬ್ಬಾಳ್ಕರ್ ಲಿಂಗಾಯತ ಮಹಿಳಾ ಕೋಟಾದಲ್ಲಿ ತಾನೇ ಮಂತ್ರಿಗಿರಿಯ ಆಕಾಂಕ್ಷಿ ಎನ್ನುವ ಮೂಲಕ ರಮೇಶ ಜಾರಕಿಹೊಳಿಗೆ ಟಾಂಗ್ ನೀಡಿದ್ದರು. ನಂತರ ಸಿದ್ದರಾಮಯ್ಯ ಪ್ರಭಾವದ ಕಾರಣ ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನ ಸಿಕ್ಕಿತ್ತು. ಇದಾದ ನಂತರ ರಮೇಶ ಜಾರಕಿಹೊಳಿ ಹಾಗೂ ಹೆಬ್ಬಾಳ್ಕರ್ ನಡುವಿನ ಸಂಬಂಧ ದಿನದಿಂದ ದಿನಕ್ಕೆ ಹಳಸಿದೆ. ವರ್ಗಾವಣೆ ವಿಚಾರಗಳಲ್ಲಿ ಇದು ಮತ್ತಷ್ಟು ವಿಕೋಪಕ್ಕೆ ಹೋಗಿದೆ. ಆದರೆ ಈ ಮುಸುಕಿನ ಜಗಳ ಬೀದಿಗೆ ಬರಲು ಕಾಣವಾಗಿದ್ದು ಮಾತ್ರ ಪಿಎಲ್‍ಡಿ ಬ್ಯಾಂಕ್ ಚುನಾವಣೆ.
ಪಿ ಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ ಗೆದ್ದಿದ್ದು ಯಾರು..?
ಜಾರಕಿಹೊಳಿ ಸಹೋದರರು ಮತ್ತು ಹೆಬ್ಬಾಳ್ಕರ್ ನಡುವೆ ಪೈಪೋಟಿಗೆ ಕಾರಣವಾಗಿದ್ದ ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಅಸಲಿಗೆ ಗೆದ್ದಿದ್ದು ಯಾರು? ತೀವ್ರ ಪ್ರತಿಷ್ಠೆ, ಜಿದ್ದಾಜಿದ್ದಿಗೆ ಕಾರಣವಾಗಿದ್ದ ಚುನಾವಣೆಯಲ್ಲಿ ಹೆಬ್ಬಾಳ್ಕರ್ ಗೆದ್ದು ಸೋತಂತಾಗಿದ್ದರೆ, ಜಾರಕಿಹೊಳಿ ಸಹೋದರರು ಸೋತ್ತು ಗೆದ್ದಂತಾಗಿದ್ದಾರೆ. ಹೀಗಾಗಲು ಪ್ರಮುಖ ಕಾರಣ ಶಾಸಕ ಸತೀಶ್ ಜಾರಕಿಹೊಳಿ ನಡೆಸಿದ ಮಾಸ್ಟರ್ ಪ್ಲ್ಯಾನ್. ಮೊದಲು ಸತೀಶ್ ಜಾರಕಿಹೊಳಿ ಬಲಗೈ ಭಂಟನಂತೆ ಇದ್ದ ಬಾಪುಗೌಡ ಪಾಟೀಲ್ ನಂತರ ಸತೀಶಗೆ ಕೈಕೊಟ್ಟು ಹೆಬ್ಬಾಳ್ಕರ್ ಗುಂಪು ಸೇರಿದ್ದರು. ಹೆಬ್ಬಾಳ್ಕರ್ ಗುಂಪಿನಿಂದ ಅಧ್ಯಕ್ಷರಾಗಲು ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿದ್ದರು. ಬಾಪುಗೌಡನ ಮಾತಿನಂತೆಯೆ ಹೆಬ್ಬಾಳ್ಕರ್ ಈ ಚುನಾವಣೆಯನ್ನು ಇಷ್ಟೊಂದು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದರು. ಆದರೇ ಹೆಬ್ಬಾಳ್ಕರ್ ಹಾಗೂ ಜಾರಕಿಹೊಳಿ ಸಂಧಾನದ ವೇಳೆಯಲ್ಲಿ ಸತೀಶ ಜಾರಕಿಹೊಳಿ ಇಟ್ಟ ಮೊದಲ ಬೇಡಿಕೆ ಬಾಪುಗೌಡರನ್ನು ಯಾವುದೇ ಕಾರಣಕ್ಕೂ ಅಧ್ಯಕ್ಷರನ್ನಾಗಿ ಮಾಡಬಾರದು ಅಂತ. ಇದಕ್ಕೆ ಅನಿವಾರ್ಯವಾಗಿ ಹೆಬ್ಬಾಳ್ಕರ್ ಒಪ್ಪಿಗೆ ಸೂಚಿಸಬೇಕಾಗಿ ನಂತರ ಮರಾಠ ಸಮುದಾಯದ 83 ವರ್ಷದ ವಯೋವೃದ್ಧ ಮಹಾದೇವ ಪಾಟೀಲ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಿ, ಜಾರಕಿಹೊಳಿ ಸಹೋದರರು ಸೋಲಿನಲ್ಲೂ ನಗೆ ಬೀರಿದ್ದರು. ಆದರೇ ಹೆಬ್ಬಾಳ್ಕರ್ ಗೆದ್ದು ಸಹ ಲಿಂಗಾಯತ ಸಮುದಾಯ ವ್ಯಕ್ತಿಗೆ ಅಧ್ಯಕ್ಷ ಸ್ಥಾನ ಕೊಡಿಸುವಲ್ಲಿ ವಿಫಲರಾಗಿದ್ದರು.
ಸೈಲೆಂಟ್ ಸತೀಶ್ ಮುಂದಿನ ನಡೆ ನಿಗೂಢ….!
ಇನ್ನೂ ಬೆಳಗಾವಿಯ ಪಿಎಲ್‍ಡಿ ಬ್ಯಾಂಕ್ ಚುನಾವಣೆಯನ್ನು ರಾಜ್ಯದ 6 ಕೋಟಿ ಕನ್ನಡಿಗರು ಮಾಧ್ಯಮಗಳ ಮೂಲಕ ವೀಕ್ಷಣೆ ಮಾಡಿದರು. ಒಂದು ಯಕಶ್ಚಿತ್ ಪಿಎಲ್‍ಡಿ ಬ್ಯಾಂಕ್ ಚುನಾವಣೆಯಿಂದಾಗಿ ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೇ ಕುತ್ತು ಬರಲಿದೆ ಎಂದೇ ಬಿಂಬಿಸಲಾಗಿತ್ತು. ಆದರೇ ಮೈತ್ರಿ ಸರ್ಕಾರದ ನಾಯಕರಿಗೆ ಹೇಗಾದರೂ ತಕ್ಷಣಕ್ಕೆ ಬೆಂಕಿ ಶಮನ ಆಗೋದುಬೇಕಿತ್ತು. ಹಾಗಾಗೀ ವಿವಾದ ಇತ್ಯರ್ಥ ಪಡಿಸಲಾಗಿದೆ. ಆದರೆ ಎಲ್ಲವೂ ಬೂದಿಮುಚ್ಚಿದ ಕೆಂಡದಂತಿದೆ. ಮುಂದೆ ಲೋಕಸಭೆ ಚುನಾವಣೆಯ ವೇಳೆಯಲ್ಲಿ ಸಂಘರ್ಷ ಏರ್ಪಡಲಿದೆ ಎಂದು ಸ್ವತಃ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಇನ್ನೂ ಶಾಸಕ ಸತೀಶ್ ಜಾರಕಿಹೊಳಿ ರಾಜಕಾರಣದಲ್ಲಿ ಎಂದಿಗೂ ಸೋಲು ಒಪ್ಪಿಕೊಳ್ಳದ ವ್ಯಕ್ತಿ. ಯಾವುದನ್ನು ಬಹಿರಂಗವಾಗಿ ಹೇಳಲ್ಲ. ಆದರೇ ಒಳಗೊಳಗೆ ಅನೇಕ ಮಾಸ್ಟರ್ ಪ್ಲ್ಯಾನ್ ಮಾಡುವುದು ಕರಗತವಾಗಿದೆ. ಸತೀಶ್ ಜಾರಕಿಹೊಳಿ ಮುಂದಿನ ನಡೆ ಏನು? ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಣಿಸುವ ನಿಟ್ಟಿನಲ್ಲಿ ಯಾವ ಪ್ಲ್ಯಾನ್ ಮಾಡಲಿದ್ದಾರೆ ಎಂಬುದು ಕಾದು ನೋಡಬೇಕು. ಇನ್ನೂ ಸತೀಶ ಜಾರಕಿಹೊಳಿ ಹಾಗೂ ಬಿಜೆಪಿ ಪ್ರಭಾವಿ ಶಾಸಕ ಉಮೇಶ ಕತ್ತಿ ಒಂದೇ ತಾಲೂಕಿನ ಎರಡು ಕ್ಷೇತ್ರಗಳಲ್ಲಿ ಶಾಸಕರಾಗಿ ಕೆಲಸ ಮಾಡುತ್ತಿದ್ದಾರೆ. ಆದರೇ ಒಮ್ಮೆಯೂ ಇಬ್ಬರ ನಡುವೆ ಪೈಪೋಟಿ ನಡೆದಿಲ್ಲ. ಎಂಥದೇ ಮಹತ್ವದ ವಿಚಾರವಿದ್ದರೂ ಇಬ್ಬರು ಒಟ್ಟಿಗೆ ಮಾತನಾಡಿ ಇತ್ಯರ್ಥ ಪಡಿಸಿಕೊಳ್ಳುತ್ತಾರೆ. ಆದರೇ ತಮ್ಮದೇ ಪಕ್ಷದ ಹೆಬ್ಬಾಳ್ಕರ್ ಜೊತೆ ಜಾರಕಿಹೊಳಿ ಸಹೋದರರಿಗೆ ಇಷ್ಟೋಂದು ವೈರತ್ವ ಯಾಕಾಗಿ? ಜಿಲ್ಲಾ ಕಾಂಗ್ರೆಸ್‍ನ ರಾಜಕೀಯ ಭವಿಷ್ಯದ ಮೇಲೆ ಇದು ಯಾವರೀತಿಯ ಪರಿಣಾಮ ಬೀರಲಿದೆ ಎಂಬುದೇ ಅಸಲಿ ಪ್ರಶ್ನೆ.

ಕೌಜಲಗಿ ಮುಗಿಸಲು ಹೆಬ್ಬಾಳ್ಕರ್ ದಾಳ?
ಅದು ದಶಕಗಳ ಹಿಂದಿನ ಮಾತು ಬೆಳಗಾವಿಯಲ್ಲಿ ಮಾಜಿ ಸಚಿವ ದಿ ವಿ.ಎಸ್ ಂಕೌಜಲಗಿ ದೊಡ್ಡ ಪ್ರಭಾವಿಯಾಗಿದ್ದರು. ಅವರನ್ನು ರಾಜಕೀಯವಾಗಿ ಮುಗಿಸಲು ಸ್ಕೆಚ್ ಹಾಕಿದ್ದು ಸತೀಶ ಜಾರಕಿಹೊಳಿ… ಆಗಲೇ ರಾಜಕೀಯದಲ್ಲಿ ಪ್ರಥಮ ಬಾರಿಗೆ ಸ್ಟ್ರಿಂಗ್ ಆಪರೇಷನ್ ನಡೆದಿತ್ತು. ಇದಕ್ಕೆ ಸತೀಶ ಜಾರಕಿಹೊಳಿ ಬಳಸಿಕೊಂಡಿದ್ದು ಇದೇ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನ ಅನ್ನೋ ಆರೋಪವಿದೆ.
ಈ ಸಿಡಿಯನ್ನು ಹೈಕಮಾಂಡ್ ಅಂಗಳಕ್ಕೆ ತಲುಪಿಸಿ, ನಂತರ ಕೌಜಲಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಡಲಾಗಿತ್ತು. ಆಗಲೇ ಜಾರಕಿಹೊಳಿ ಸಹೋದರರು ಹೆಬ್ಬಾಳ್ಕರ್ ಬಳಸಿಕೊಂಡು ದೊಡ್ಡ ತಂತ್ರ ಮಾಡಿ ಯಶಸ್ಸು ಗಳಿಸಿದ್ದರು. ಅರಬಾವಿ ಕ್ಷೇತ್ರದಿಂದ ಸತತವಾಗಿ ಗೆದ್ದಿದ್ದ ಕೌಜಲಗಿ ವಿರುದ್ಧವಾಗಿ ಸಹೋದರ ಬಾಲಚಂದ್ರ ಜಾರಕಿಹೊಳಿ ಅವರನ್ನು ಕಣಕ್ಕೆ ಇಳಿಸಿ ಸೋಲಿಸಿ ಕೌಜಲಗಿ ಅವರನ್ನು ರಾಜಕೀಯವಾಗಿ ಮುಗಿಸಿ ಹಾಕಿದ್ದರು ಎಂಬುದನ್ನು ಇಂದಿಗೂ ಜನ ಮರೆತಿಲ್ಲ.

 

– ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...