Homeರಾಜಕೀಯಬೆಳಗಾವಿಯ ಕಾಂಗ್ರೆಸ್ ರಿಯಲ್ ಫೈಟ್ ಇನ್ಮುಂದೆ ಶುರು!

ಬೆಳಗಾವಿಯ ಕಾಂಗ್ರೆಸ್ ರಿಯಲ್ ಫೈಟ್ ಇನ್ಮುಂದೆ ಶುರು!

- Advertisement -
- Advertisement -

ಆಗಸ್ಟ್ 27ರ ರಾತ್ರಿಯಿಂದ ಸೆಪ್ಟೆಂಬರ್ 7ರವರೆಗೆ ಇಡೀ ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದು ಬೆಳಗಾವಿಯ ಪಿಎಲ್‍ಡಿ ಬ್ಯಾಂಕ್ ಚುನಾವಣೆ. ಸಹಕಾರಿ ಕ್ಷೇತ್ರದ ಈ ಚುನಾವಣೆಗೆ ಇಷ್ಟೊಂದು ಮಹತ್ವ ಬರಲು ಪ್ರತಿಷ್ಠಿತರ ನಡುವೆ ನಡೆದ ಜಿದ್ದಾಜಿದ್ದಿನ ಹೋರಾಟ ಕಾರಣವಾಗಿತ್ತು. ಬೆಳಗಾವಿಯ ಸಾಹುಕಾರರು ಎಂದೇ ಖ್ಯಾತಿ ಗಳಿಸಿದ ಜಾರಕಿಹೊಳಿ ಸಹೋದರರಿಗೆ ಸವಾಲ್ ಎಸೆದಿದ್ದು ಮಾತ್ರ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್. ಇದೀಗ ಚುನಾವಣೆ ಮುಗಿದಿದ್ದು ಈ ಕದನ ಕೂಡ ಮುಗಿದಿದೆ ಎಂದುಕೊಂಡರೆ ತಪ್ಪಾಗುತ್ತದೆ. ರಿಯಲ್ ಆಗಿ ಫೈಟ್ ಆರಂಭವಾಗಿರುವುದೇ ಈಗ.
ಹೆಬ್ಬಾಳ್ಕರ್ ಬೆಳೆಸಿದ್ದು ಜಾರಕಿಹೊಳಿ ಸಹೋದರರು…!
ಕಳೆದ 20 ವರ್ಷಗಳಿಂದ ಜಾರಕಿಹೊಳಿ ಸಹೋದರರ ನೆರಳಲ್ಲಿಯೇ ಲಕ್ಷ್ಮೀ ಹೆಬ್ಬಾಳ್ಕರ್ ರಾಜಕೀಯ ಮಾಡಿಕೊಂಡು ಬೆಳೆದಿದ್ದಾರೆ. ಹೆಬ್ಬಾಳ್ಕರ್ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ, ನಂತರ 2013ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ, 2014ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಹಾಗೂ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸ್ಥಾನಮಾನ. ಎಲ್ಲದರ ಹಿಂದೆ ಜಾರಕಿಹೊಳಿ ಸಹೋದರರ ಶ್ರೀರಕ್ಷೆ ಇದ್ದೇ ಇತ್ತು. ಕಳೆದ ಲೋಕಸಭೆ ಚುಣಾವಣೆ ಸಂದರ್ಭದಲ್ಲಿ ಮೋದಿ ಅಲೆಯ ನಡುವೆಯೂ ಗೋಕಾಕ್, ಅರಭಾವಿ ಕ್ಷೇತ್ರದಿಂದ ಜಾರಕಿಹೊಳಿ ಸಹೋದರರು ಅತಿಹೆಚ್ಚು ಮತಗಳನ್ನು ಹೆಬ್ಬಾಳ್ಕರ್‍ಗೆ ಹಾಕಿಸುವ ಮೂಲಕ ಬೆನ್ನೆಲುಬಾಗಿ ನಿಂತಿದ್ದರು. ಅಷ್ಟೇ ಅಲ್ಲ, ಚುನಾವಣೆ ಸಂದರ್ಭಗಳನ್ನೂ ಸೇರಿ ಅನೇಕ ಸಂದರ್ಭದಲ್ಲಿ ಆರ್ಥಿಕವಾಗಿಯೂ ಹೆಬ್ಬಾಳ್ಕರ್‍ಗೆ ಸಹಾಯ ಮಾಡಿದ್ದಾರೆ. ಇತ್ತೀಚಿನ 2018ರ ವಿಧಾನಸಭೆ ಚುನಾವಣೆಯಲ್ಲಿ 50 ಸಾವಿರಕ್ಕೂ ಅಧಿಕ ಮತಗಳಿಂದ ಹೆಬ್ಭಾಳ್ಕರ್ ಗೆಲ್ಲಿಸಲಿಕ್ಕಾಗಿ ಸಚಿವ ರಮೇಶ ಜಾರಕಿಹೊಳಿ, ಉದ್ಯಮಿ ಲಖನ್ ಜಾರಕಿಹೊಳಿ ಪ್ರಚಾರ ನಡೆಸಿದ್ದಕ್ಕೆ ಕ್ಷೇತ್ರದ ಜನತೆ ಸಾಕ್ಷಿಯಾಗಿದ್ದಾರೆ.
ರಮೇಶ ಜಾರಕಿಹೊಳಿ ಹಾಗೂ ಹೆಬ್ಭಾಳ್ಕರ್ ನಡುವೆ ಯಾಕೆ ವೈಮನಸ್ಸು…?
ದಶಕಗಳಿಂದ ಸಚಿವ ರಮೇಶ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಉತ್ತಮ ಬಾಂಧವ್ಯವಿತ್ತು. ‘ಹೆಬ್ಬಾಳ್ಕರ್ ತಂದೆಯ ಅನಾರೋಗ್ಯ, ಸಹೋದರ ಹಾಗೂ ಮಗನ ವಿದ್ಯಾಭ್ಯಾಸಕ್ಕೂ ಸಹಾಯ ಮಾಡಿದ್ದೇನೆ. ಆದರೆ ಇದನ್ನೆಲ್ಲಾ ಈಗ ಹೆಬ್ಬಾಳ್ಕರ್ ಮರೆತುಬಿಟ್ಟಿದ್ದಾರೆ’ ಎಂದು ರಮೇಶ ಜಾರಕಿಹೊಳಿ ಆರೋಪಿಸುತ್ತಿದ್ದಾರೆ. ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಸತೀಶ್ ಜಾರಕಿಹೊಳಿ ಸಚಿವರಾಗಿದ್ದ ವೇಳೆಯಲ್ಲಿ, ರಮೇಶ ಜಾರಕಿಹೊಳಿ ವರಿಷ್ಠರ ಸಂಪರ್ಕ ಸಾಧಿಸಿದ್ದು ಇದೇ ಹೆಬ್ಬಾಳ್ಕರ್ ಮೂಲಕವೇ. ಸತೀಶ ಬದಲಾಗಿ ತಮಗೆ ಸಚಿವ ಸ್ಥಾನ ಪಡೆದುಕೊಳ್ಳುವಲ್ಲಿ ಕೂಡ ಹೆಬ್ಬಾಳ್ಕರ್ ಕೈಜೋಡಿಸಿದ್ದರು. ನಂತರ ಜಿಲ್ಲೆಯ ಎಲ್ಲಾ ಕೆಲಸಗಳಲ್ಲಿಯೂ ರಮೇಶ ಜಾರಕಿಹೊಳಿ ಹಾಗೂ ಹೆಬ್ಬಾಳ್ಕರ್ ಒಟ್ಟಗೂಡಿಯೇ ಮಾಡುತ್ತಿದ್ದರು. ಆದರೆs 2018ರ ವಿಧಾನಸಭೆ ಚುನಾವಣೆ ಬಳಿಕ ರಚನೆಯಾದ ಸಮ್ಮಿಶ್ರ ಸರ್ಕಾರದಲ್ಲಿ ಸತೀಶ ಜಾರಕಿಹೊಳಿ, ರಮೇಶ ಜಾರಕಿಹೊಳಿ ಇಬ್ಬರು ಸಚಿವ ಸ್ಥಾನಕ್ಕೆ ಪೈಪೋಟಿ ನಡೆಸಲು ಆರಂಭಿಸಿದ್ರು. ಈ ವೇಳೆಯಲ್ಲಿ ತನ್ನ ಪರವಾಗಿ ಹೈಕಮಾಂಡ್ ಬಳಿ ಬರುವಂತೆ ಹೆಬ್ಬಾಳ್ಕರ್‍ಗೆ ರಮೇಶ್ ಸೂಚನೆ ನೀಡಿದ್ದರು. ಆದರೆ ಅಷ್ಟರಲ್ಲಾಗಲೇ ಸನ್ನಿವೇಶ ಬದಲಾಗಿತ್ತು. ಇದಕ್ಕೆ ಕ್ಯಾರೆ ಎನ್ನದ ಹೆಬ್ಬಾಳ್ಕರ್ ಲಿಂಗಾಯತ ಮಹಿಳಾ ಕೋಟಾದಲ್ಲಿ ತಾನೇ ಮಂತ್ರಿಗಿರಿಯ ಆಕಾಂಕ್ಷಿ ಎನ್ನುವ ಮೂಲಕ ರಮೇಶ ಜಾರಕಿಹೊಳಿಗೆ ಟಾಂಗ್ ನೀಡಿದ್ದರು. ನಂತರ ಸಿದ್ದರಾಮಯ್ಯ ಪ್ರಭಾವದ ಕಾರಣ ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನ ಸಿಕ್ಕಿತ್ತು. ಇದಾದ ನಂತರ ರಮೇಶ ಜಾರಕಿಹೊಳಿ ಹಾಗೂ ಹೆಬ್ಬಾಳ್ಕರ್ ನಡುವಿನ ಸಂಬಂಧ ದಿನದಿಂದ ದಿನಕ್ಕೆ ಹಳಸಿದೆ. ವರ್ಗಾವಣೆ ವಿಚಾರಗಳಲ್ಲಿ ಇದು ಮತ್ತಷ್ಟು ವಿಕೋಪಕ್ಕೆ ಹೋಗಿದೆ. ಆದರೆ ಈ ಮುಸುಕಿನ ಜಗಳ ಬೀದಿಗೆ ಬರಲು ಕಾಣವಾಗಿದ್ದು ಮಾತ್ರ ಪಿಎಲ್‍ಡಿ ಬ್ಯಾಂಕ್ ಚುನಾವಣೆ.
ಪಿ ಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ ಗೆದ್ದಿದ್ದು ಯಾರು..?
ಜಾರಕಿಹೊಳಿ ಸಹೋದರರು ಮತ್ತು ಹೆಬ್ಬಾಳ್ಕರ್ ನಡುವೆ ಪೈಪೋಟಿಗೆ ಕಾರಣವಾಗಿದ್ದ ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಅಸಲಿಗೆ ಗೆದ್ದಿದ್ದು ಯಾರು? ತೀವ್ರ ಪ್ರತಿಷ್ಠೆ, ಜಿದ್ದಾಜಿದ್ದಿಗೆ ಕಾರಣವಾಗಿದ್ದ ಚುನಾವಣೆಯಲ್ಲಿ ಹೆಬ್ಬಾಳ್ಕರ್ ಗೆದ್ದು ಸೋತಂತಾಗಿದ್ದರೆ, ಜಾರಕಿಹೊಳಿ ಸಹೋದರರು ಸೋತ್ತು ಗೆದ್ದಂತಾಗಿದ್ದಾರೆ. ಹೀಗಾಗಲು ಪ್ರಮುಖ ಕಾರಣ ಶಾಸಕ ಸತೀಶ್ ಜಾರಕಿಹೊಳಿ ನಡೆಸಿದ ಮಾಸ್ಟರ್ ಪ್ಲ್ಯಾನ್. ಮೊದಲು ಸತೀಶ್ ಜಾರಕಿಹೊಳಿ ಬಲಗೈ ಭಂಟನಂತೆ ಇದ್ದ ಬಾಪುಗೌಡ ಪಾಟೀಲ್ ನಂತರ ಸತೀಶಗೆ ಕೈಕೊಟ್ಟು ಹೆಬ್ಬಾಳ್ಕರ್ ಗುಂಪು ಸೇರಿದ್ದರು. ಹೆಬ್ಬಾಳ್ಕರ್ ಗುಂಪಿನಿಂದ ಅಧ್ಯಕ್ಷರಾಗಲು ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿದ್ದರು. ಬಾಪುಗೌಡನ ಮಾತಿನಂತೆಯೆ ಹೆಬ್ಬಾಳ್ಕರ್ ಈ ಚುನಾವಣೆಯನ್ನು ಇಷ್ಟೊಂದು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದರು. ಆದರೇ ಹೆಬ್ಬಾಳ್ಕರ್ ಹಾಗೂ ಜಾರಕಿಹೊಳಿ ಸಂಧಾನದ ವೇಳೆಯಲ್ಲಿ ಸತೀಶ ಜಾರಕಿಹೊಳಿ ಇಟ್ಟ ಮೊದಲ ಬೇಡಿಕೆ ಬಾಪುಗೌಡರನ್ನು ಯಾವುದೇ ಕಾರಣಕ್ಕೂ ಅಧ್ಯಕ್ಷರನ್ನಾಗಿ ಮಾಡಬಾರದು ಅಂತ. ಇದಕ್ಕೆ ಅನಿವಾರ್ಯವಾಗಿ ಹೆಬ್ಬಾಳ್ಕರ್ ಒಪ್ಪಿಗೆ ಸೂಚಿಸಬೇಕಾಗಿ ನಂತರ ಮರಾಠ ಸಮುದಾಯದ 83 ವರ್ಷದ ವಯೋವೃದ್ಧ ಮಹಾದೇವ ಪಾಟೀಲ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಿ, ಜಾರಕಿಹೊಳಿ ಸಹೋದರರು ಸೋಲಿನಲ್ಲೂ ನಗೆ ಬೀರಿದ್ದರು. ಆದರೇ ಹೆಬ್ಬಾಳ್ಕರ್ ಗೆದ್ದು ಸಹ ಲಿಂಗಾಯತ ಸಮುದಾಯ ವ್ಯಕ್ತಿಗೆ ಅಧ್ಯಕ್ಷ ಸ್ಥಾನ ಕೊಡಿಸುವಲ್ಲಿ ವಿಫಲರಾಗಿದ್ದರು.
ಸೈಲೆಂಟ್ ಸತೀಶ್ ಮುಂದಿನ ನಡೆ ನಿಗೂಢ….!
ಇನ್ನೂ ಬೆಳಗಾವಿಯ ಪಿಎಲ್‍ಡಿ ಬ್ಯಾಂಕ್ ಚುನಾವಣೆಯನ್ನು ರಾಜ್ಯದ 6 ಕೋಟಿ ಕನ್ನಡಿಗರು ಮಾಧ್ಯಮಗಳ ಮೂಲಕ ವೀಕ್ಷಣೆ ಮಾಡಿದರು. ಒಂದು ಯಕಶ್ಚಿತ್ ಪಿಎಲ್‍ಡಿ ಬ್ಯಾಂಕ್ ಚುನಾವಣೆಯಿಂದಾಗಿ ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೇ ಕುತ್ತು ಬರಲಿದೆ ಎಂದೇ ಬಿಂಬಿಸಲಾಗಿತ್ತು. ಆದರೇ ಮೈತ್ರಿ ಸರ್ಕಾರದ ನಾಯಕರಿಗೆ ಹೇಗಾದರೂ ತಕ್ಷಣಕ್ಕೆ ಬೆಂಕಿ ಶಮನ ಆಗೋದುಬೇಕಿತ್ತು. ಹಾಗಾಗೀ ವಿವಾದ ಇತ್ಯರ್ಥ ಪಡಿಸಲಾಗಿದೆ. ಆದರೆ ಎಲ್ಲವೂ ಬೂದಿಮುಚ್ಚಿದ ಕೆಂಡದಂತಿದೆ. ಮುಂದೆ ಲೋಕಸಭೆ ಚುನಾವಣೆಯ ವೇಳೆಯಲ್ಲಿ ಸಂಘರ್ಷ ಏರ್ಪಡಲಿದೆ ಎಂದು ಸ್ವತಃ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಇನ್ನೂ ಶಾಸಕ ಸತೀಶ್ ಜಾರಕಿಹೊಳಿ ರಾಜಕಾರಣದಲ್ಲಿ ಎಂದಿಗೂ ಸೋಲು ಒಪ್ಪಿಕೊಳ್ಳದ ವ್ಯಕ್ತಿ. ಯಾವುದನ್ನು ಬಹಿರಂಗವಾಗಿ ಹೇಳಲ್ಲ. ಆದರೇ ಒಳಗೊಳಗೆ ಅನೇಕ ಮಾಸ್ಟರ್ ಪ್ಲ್ಯಾನ್ ಮಾಡುವುದು ಕರಗತವಾಗಿದೆ. ಸತೀಶ್ ಜಾರಕಿಹೊಳಿ ಮುಂದಿನ ನಡೆ ಏನು? ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಣಿಸುವ ನಿಟ್ಟಿನಲ್ಲಿ ಯಾವ ಪ್ಲ್ಯಾನ್ ಮಾಡಲಿದ್ದಾರೆ ಎಂಬುದು ಕಾದು ನೋಡಬೇಕು. ಇನ್ನೂ ಸತೀಶ ಜಾರಕಿಹೊಳಿ ಹಾಗೂ ಬಿಜೆಪಿ ಪ್ರಭಾವಿ ಶಾಸಕ ಉಮೇಶ ಕತ್ತಿ ಒಂದೇ ತಾಲೂಕಿನ ಎರಡು ಕ್ಷೇತ್ರಗಳಲ್ಲಿ ಶಾಸಕರಾಗಿ ಕೆಲಸ ಮಾಡುತ್ತಿದ್ದಾರೆ. ಆದರೇ ಒಮ್ಮೆಯೂ ಇಬ್ಬರ ನಡುವೆ ಪೈಪೋಟಿ ನಡೆದಿಲ್ಲ. ಎಂಥದೇ ಮಹತ್ವದ ವಿಚಾರವಿದ್ದರೂ ಇಬ್ಬರು ಒಟ್ಟಿಗೆ ಮಾತನಾಡಿ ಇತ್ಯರ್ಥ ಪಡಿಸಿಕೊಳ್ಳುತ್ತಾರೆ. ಆದರೇ ತಮ್ಮದೇ ಪಕ್ಷದ ಹೆಬ್ಬಾಳ್ಕರ್ ಜೊತೆ ಜಾರಕಿಹೊಳಿ ಸಹೋದರರಿಗೆ ಇಷ್ಟೋಂದು ವೈರತ್ವ ಯಾಕಾಗಿ? ಜಿಲ್ಲಾ ಕಾಂಗ್ರೆಸ್‍ನ ರಾಜಕೀಯ ಭವಿಷ್ಯದ ಮೇಲೆ ಇದು ಯಾವರೀತಿಯ ಪರಿಣಾಮ ಬೀರಲಿದೆ ಎಂಬುದೇ ಅಸಲಿ ಪ್ರಶ್ನೆ.

ಕೌಜಲಗಿ ಮುಗಿಸಲು ಹೆಬ್ಬಾಳ್ಕರ್ ದಾಳ?
ಅದು ದಶಕಗಳ ಹಿಂದಿನ ಮಾತು ಬೆಳಗಾವಿಯಲ್ಲಿ ಮಾಜಿ ಸಚಿವ ದಿ ವಿ.ಎಸ್ ಂಕೌಜಲಗಿ ದೊಡ್ಡ ಪ್ರಭಾವಿಯಾಗಿದ್ದರು. ಅವರನ್ನು ರಾಜಕೀಯವಾಗಿ ಮುಗಿಸಲು ಸ್ಕೆಚ್ ಹಾಕಿದ್ದು ಸತೀಶ ಜಾರಕಿಹೊಳಿ… ಆಗಲೇ ರಾಜಕೀಯದಲ್ಲಿ ಪ್ರಥಮ ಬಾರಿಗೆ ಸ್ಟ್ರಿಂಗ್ ಆಪರೇಷನ್ ನಡೆದಿತ್ತು. ಇದಕ್ಕೆ ಸತೀಶ ಜಾರಕಿಹೊಳಿ ಬಳಸಿಕೊಂಡಿದ್ದು ಇದೇ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನ ಅನ್ನೋ ಆರೋಪವಿದೆ.
ಈ ಸಿಡಿಯನ್ನು ಹೈಕಮಾಂಡ್ ಅಂಗಳಕ್ಕೆ ತಲುಪಿಸಿ, ನಂತರ ಕೌಜಲಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಡಲಾಗಿತ್ತು. ಆಗಲೇ ಜಾರಕಿಹೊಳಿ ಸಹೋದರರು ಹೆಬ್ಬಾಳ್ಕರ್ ಬಳಸಿಕೊಂಡು ದೊಡ್ಡ ತಂತ್ರ ಮಾಡಿ ಯಶಸ್ಸು ಗಳಿಸಿದ್ದರು. ಅರಬಾವಿ ಕ್ಷೇತ್ರದಿಂದ ಸತತವಾಗಿ ಗೆದ್ದಿದ್ದ ಕೌಜಲಗಿ ವಿರುದ್ಧವಾಗಿ ಸಹೋದರ ಬಾಲಚಂದ್ರ ಜಾರಕಿಹೊಳಿ ಅವರನ್ನು ಕಣಕ್ಕೆ ಇಳಿಸಿ ಸೋಲಿಸಿ ಕೌಜಲಗಿ ಅವರನ್ನು ರಾಜಕೀಯವಾಗಿ ಮುಗಿಸಿ ಹಾಕಿದ್ದರು ಎಂಬುದನ್ನು ಇಂದಿಗೂ ಜನ ಮರೆತಿಲ್ಲ.

 

– ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...