Homeರಾಜಕೀಯಬೆಳಗಾವಿಯ ಕಾಂಗ್ರೆಸ್ ರಿಯಲ್ ಫೈಟ್ ಇನ್ಮುಂದೆ ಶುರು!

ಬೆಳಗಾವಿಯ ಕಾಂಗ್ರೆಸ್ ರಿಯಲ್ ಫೈಟ್ ಇನ್ಮುಂದೆ ಶುರು!

- Advertisement -
- Advertisement -

ಆಗಸ್ಟ್ 27ರ ರಾತ್ರಿಯಿಂದ ಸೆಪ್ಟೆಂಬರ್ 7ರವರೆಗೆ ಇಡೀ ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದು ಬೆಳಗಾವಿಯ ಪಿಎಲ್‍ಡಿ ಬ್ಯಾಂಕ್ ಚುನಾವಣೆ. ಸಹಕಾರಿ ಕ್ಷೇತ್ರದ ಈ ಚುನಾವಣೆಗೆ ಇಷ್ಟೊಂದು ಮಹತ್ವ ಬರಲು ಪ್ರತಿಷ್ಠಿತರ ನಡುವೆ ನಡೆದ ಜಿದ್ದಾಜಿದ್ದಿನ ಹೋರಾಟ ಕಾರಣವಾಗಿತ್ತು. ಬೆಳಗಾವಿಯ ಸಾಹುಕಾರರು ಎಂದೇ ಖ್ಯಾತಿ ಗಳಿಸಿದ ಜಾರಕಿಹೊಳಿ ಸಹೋದರರಿಗೆ ಸವಾಲ್ ಎಸೆದಿದ್ದು ಮಾತ್ರ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್. ಇದೀಗ ಚುನಾವಣೆ ಮುಗಿದಿದ್ದು ಈ ಕದನ ಕೂಡ ಮುಗಿದಿದೆ ಎಂದುಕೊಂಡರೆ ತಪ್ಪಾಗುತ್ತದೆ. ರಿಯಲ್ ಆಗಿ ಫೈಟ್ ಆರಂಭವಾಗಿರುವುದೇ ಈಗ.
ಹೆಬ್ಬಾಳ್ಕರ್ ಬೆಳೆಸಿದ್ದು ಜಾರಕಿಹೊಳಿ ಸಹೋದರರು…!
ಕಳೆದ 20 ವರ್ಷಗಳಿಂದ ಜಾರಕಿಹೊಳಿ ಸಹೋದರರ ನೆರಳಲ್ಲಿಯೇ ಲಕ್ಷ್ಮೀ ಹೆಬ್ಬಾಳ್ಕರ್ ರಾಜಕೀಯ ಮಾಡಿಕೊಂಡು ಬೆಳೆದಿದ್ದಾರೆ. ಹೆಬ್ಬಾಳ್ಕರ್ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ, ನಂತರ 2013ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ, 2014ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಹಾಗೂ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸ್ಥಾನಮಾನ. ಎಲ್ಲದರ ಹಿಂದೆ ಜಾರಕಿಹೊಳಿ ಸಹೋದರರ ಶ್ರೀರಕ್ಷೆ ಇದ್ದೇ ಇತ್ತು. ಕಳೆದ ಲೋಕಸಭೆ ಚುಣಾವಣೆ ಸಂದರ್ಭದಲ್ಲಿ ಮೋದಿ ಅಲೆಯ ನಡುವೆಯೂ ಗೋಕಾಕ್, ಅರಭಾವಿ ಕ್ಷೇತ್ರದಿಂದ ಜಾರಕಿಹೊಳಿ ಸಹೋದರರು ಅತಿಹೆಚ್ಚು ಮತಗಳನ್ನು ಹೆಬ್ಬಾಳ್ಕರ್‍ಗೆ ಹಾಕಿಸುವ ಮೂಲಕ ಬೆನ್ನೆಲುಬಾಗಿ ನಿಂತಿದ್ದರು. ಅಷ್ಟೇ ಅಲ್ಲ, ಚುನಾವಣೆ ಸಂದರ್ಭಗಳನ್ನೂ ಸೇರಿ ಅನೇಕ ಸಂದರ್ಭದಲ್ಲಿ ಆರ್ಥಿಕವಾಗಿಯೂ ಹೆಬ್ಬಾಳ್ಕರ್‍ಗೆ ಸಹಾಯ ಮಾಡಿದ್ದಾರೆ. ಇತ್ತೀಚಿನ 2018ರ ವಿಧಾನಸಭೆ ಚುನಾವಣೆಯಲ್ಲಿ 50 ಸಾವಿರಕ್ಕೂ ಅಧಿಕ ಮತಗಳಿಂದ ಹೆಬ್ಭಾಳ್ಕರ್ ಗೆಲ್ಲಿಸಲಿಕ್ಕಾಗಿ ಸಚಿವ ರಮೇಶ ಜಾರಕಿಹೊಳಿ, ಉದ್ಯಮಿ ಲಖನ್ ಜಾರಕಿಹೊಳಿ ಪ್ರಚಾರ ನಡೆಸಿದ್ದಕ್ಕೆ ಕ್ಷೇತ್ರದ ಜನತೆ ಸಾಕ್ಷಿಯಾಗಿದ್ದಾರೆ.
ರಮೇಶ ಜಾರಕಿಹೊಳಿ ಹಾಗೂ ಹೆಬ್ಭಾಳ್ಕರ್ ನಡುವೆ ಯಾಕೆ ವೈಮನಸ್ಸು…?
ದಶಕಗಳಿಂದ ಸಚಿವ ರಮೇಶ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಉತ್ತಮ ಬಾಂಧವ್ಯವಿತ್ತು. ‘ಹೆಬ್ಬಾಳ್ಕರ್ ತಂದೆಯ ಅನಾರೋಗ್ಯ, ಸಹೋದರ ಹಾಗೂ ಮಗನ ವಿದ್ಯಾಭ್ಯಾಸಕ್ಕೂ ಸಹಾಯ ಮಾಡಿದ್ದೇನೆ. ಆದರೆ ಇದನ್ನೆಲ್ಲಾ ಈಗ ಹೆಬ್ಬಾಳ್ಕರ್ ಮರೆತುಬಿಟ್ಟಿದ್ದಾರೆ’ ಎಂದು ರಮೇಶ ಜಾರಕಿಹೊಳಿ ಆರೋಪಿಸುತ್ತಿದ್ದಾರೆ. ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಸತೀಶ್ ಜಾರಕಿಹೊಳಿ ಸಚಿವರಾಗಿದ್ದ ವೇಳೆಯಲ್ಲಿ, ರಮೇಶ ಜಾರಕಿಹೊಳಿ ವರಿಷ್ಠರ ಸಂಪರ್ಕ ಸಾಧಿಸಿದ್ದು ಇದೇ ಹೆಬ್ಬಾಳ್ಕರ್ ಮೂಲಕವೇ. ಸತೀಶ ಬದಲಾಗಿ ತಮಗೆ ಸಚಿವ ಸ್ಥಾನ ಪಡೆದುಕೊಳ್ಳುವಲ್ಲಿ ಕೂಡ ಹೆಬ್ಬಾಳ್ಕರ್ ಕೈಜೋಡಿಸಿದ್ದರು. ನಂತರ ಜಿಲ್ಲೆಯ ಎಲ್ಲಾ ಕೆಲಸಗಳಲ್ಲಿಯೂ ರಮೇಶ ಜಾರಕಿಹೊಳಿ ಹಾಗೂ ಹೆಬ್ಬಾಳ್ಕರ್ ಒಟ್ಟಗೂಡಿಯೇ ಮಾಡುತ್ತಿದ್ದರು. ಆದರೆs 2018ರ ವಿಧಾನಸಭೆ ಚುನಾವಣೆ ಬಳಿಕ ರಚನೆಯಾದ ಸಮ್ಮಿಶ್ರ ಸರ್ಕಾರದಲ್ಲಿ ಸತೀಶ ಜಾರಕಿಹೊಳಿ, ರಮೇಶ ಜಾರಕಿಹೊಳಿ ಇಬ್ಬರು ಸಚಿವ ಸ್ಥಾನಕ್ಕೆ ಪೈಪೋಟಿ ನಡೆಸಲು ಆರಂಭಿಸಿದ್ರು. ಈ ವೇಳೆಯಲ್ಲಿ ತನ್ನ ಪರವಾಗಿ ಹೈಕಮಾಂಡ್ ಬಳಿ ಬರುವಂತೆ ಹೆಬ್ಬಾಳ್ಕರ್‍ಗೆ ರಮೇಶ್ ಸೂಚನೆ ನೀಡಿದ್ದರು. ಆದರೆ ಅಷ್ಟರಲ್ಲಾಗಲೇ ಸನ್ನಿವೇಶ ಬದಲಾಗಿತ್ತು. ಇದಕ್ಕೆ ಕ್ಯಾರೆ ಎನ್ನದ ಹೆಬ್ಬಾಳ್ಕರ್ ಲಿಂಗಾಯತ ಮಹಿಳಾ ಕೋಟಾದಲ್ಲಿ ತಾನೇ ಮಂತ್ರಿಗಿರಿಯ ಆಕಾಂಕ್ಷಿ ಎನ್ನುವ ಮೂಲಕ ರಮೇಶ ಜಾರಕಿಹೊಳಿಗೆ ಟಾಂಗ್ ನೀಡಿದ್ದರು. ನಂತರ ಸಿದ್ದರಾಮಯ್ಯ ಪ್ರಭಾವದ ಕಾರಣ ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನ ಸಿಕ್ಕಿತ್ತು. ಇದಾದ ನಂತರ ರಮೇಶ ಜಾರಕಿಹೊಳಿ ಹಾಗೂ ಹೆಬ್ಬಾಳ್ಕರ್ ನಡುವಿನ ಸಂಬಂಧ ದಿನದಿಂದ ದಿನಕ್ಕೆ ಹಳಸಿದೆ. ವರ್ಗಾವಣೆ ವಿಚಾರಗಳಲ್ಲಿ ಇದು ಮತ್ತಷ್ಟು ವಿಕೋಪಕ್ಕೆ ಹೋಗಿದೆ. ಆದರೆ ಈ ಮುಸುಕಿನ ಜಗಳ ಬೀದಿಗೆ ಬರಲು ಕಾಣವಾಗಿದ್ದು ಮಾತ್ರ ಪಿಎಲ್‍ಡಿ ಬ್ಯಾಂಕ್ ಚುನಾವಣೆ.
ಪಿ ಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ ಗೆದ್ದಿದ್ದು ಯಾರು..?
ಜಾರಕಿಹೊಳಿ ಸಹೋದರರು ಮತ್ತು ಹೆಬ್ಬಾಳ್ಕರ್ ನಡುವೆ ಪೈಪೋಟಿಗೆ ಕಾರಣವಾಗಿದ್ದ ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಅಸಲಿಗೆ ಗೆದ್ದಿದ್ದು ಯಾರು? ತೀವ್ರ ಪ್ರತಿಷ್ಠೆ, ಜಿದ್ದಾಜಿದ್ದಿಗೆ ಕಾರಣವಾಗಿದ್ದ ಚುನಾವಣೆಯಲ್ಲಿ ಹೆಬ್ಬಾಳ್ಕರ್ ಗೆದ್ದು ಸೋತಂತಾಗಿದ್ದರೆ, ಜಾರಕಿಹೊಳಿ ಸಹೋದರರು ಸೋತ್ತು ಗೆದ್ದಂತಾಗಿದ್ದಾರೆ. ಹೀಗಾಗಲು ಪ್ರಮುಖ ಕಾರಣ ಶಾಸಕ ಸತೀಶ್ ಜಾರಕಿಹೊಳಿ ನಡೆಸಿದ ಮಾಸ್ಟರ್ ಪ್ಲ್ಯಾನ್. ಮೊದಲು ಸತೀಶ್ ಜಾರಕಿಹೊಳಿ ಬಲಗೈ ಭಂಟನಂತೆ ಇದ್ದ ಬಾಪುಗೌಡ ಪಾಟೀಲ್ ನಂತರ ಸತೀಶಗೆ ಕೈಕೊಟ್ಟು ಹೆಬ್ಬಾಳ್ಕರ್ ಗುಂಪು ಸೇರಿದ್ದರು. ಹೆಬ್ಬಾಳ್ಕರ್ ಗುಂಪಿನಿಂದ ಅಧ್ಯಕ್ಷರಾಗಲು ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿದ್ದರು. ಬಾಪುಗೌಡನ ಮಾತಿನಂತೆಯೆ ಹೆಬ್ಬಾಳ್ಕರ್ ಈ ಚುನಾವಣೆಯನ್ನು ಇಷ್ಟೊಂದು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದರು. ಆದರೇ ಹೆಬ್ಬಾಳ್ಕರ್ ಹಾಗೂ ಜಾರಕಿಹೊಳಿ ಸಂಧಾನದ ವೇಳೆಯಲ್ಲಿ ಸತೀಶ ಜಾರಕಿಹೊಳಿ ಇಟ್ಟ ಮೊದಲ ಬೇಡಿಕೆ ಬಾಪುಗೌಡರನ್ನು ಯಾವುದೇ ಕಾರಣಕ್ಕೂ ಅಧ್ಯಕ್ಷರನ್ನಾಗಿ ಮಾಡಬಾರದು ಅಂತ. ಇದಕ್ಕೆ ಅನಿವಾರ್ಯವಾಗಿ ಹೆಬ್ಬಾಳ್ಕರ್ ಒಪ್ಪಿಗೆ ಸೂಚಿಸಬೇಕಾಗಿ ನಂತರ ಮರಾಠ ಸಮುದಾಯದ 83 ವರ್ಷದ ವಯೋವೃದ್ಧ ಮಹಾದೇವ ಪಾಟೀಲ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಿ, ಜಾರಕಿಹೊಳಿ ಸಹೋದರರು ಸೋಲಿನಲ್ಲೂ ನಗೆ ಬೀರಿದ್ದರು. ಆದರೇ ಹೆಬ್ಬಾಳ್ಕರ್ ಗೆದ್ದು ಸಹ ಲಿಂಗಾಯತ ಸಮುದಾಯ ವ್ಯಕ್ತಿಗೆ ಅಧ್ಯಕ್ಷ ಸ್ಥಾನ ಕೊಡಿಸುವಲ್ಲಿ ವಿಫಲರಾಗಿದ್ದರು.
ಸೈಲೆಂಟ್ ಸತೀಶ್ ಮುಂದಿನ ನಡೆ ನಿಗೂಢ….!
ಇನ್ನೂ ಬೆಳಗಾವಿಯ ಪಿಎಲ್‍ಡಿ ಬ್ಯಾಂಕ್ ಚುನಾವಣೆಯನ್ನು ರಾಜ್ಯದ 6 ಕೋಟಿ ಕನ್ನಡಿಗರು ಮಾಧ್ಯಮಗಳ ಮೂಲಕ ವೀಕ್ಷಣೆ ಮಾಡಿದರು. ಒಂದು ಯಕಶ್ಚಿತ್ ಪಿಎಲ್‍ಡಿ ಬ್ಯಾಂಕ್ ಚುನಾವಣೆಯಿಂದಾಗಿ ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೇ ಕುತ್ತು ಬರಲಿದೆ ಎಂದೇ ಬಿಂಬಿಸಲಾಗಿತ್ತು. ಆದರೇ ಮೈತ್ರಿ ಸರ್ಕಾರದ ನಾಯಕರಿಗೆ ಹೇಗಾದರೂ ತಕ್ಷಣಕ್ಕೆ ಬೆಂಕಿ ಶಮನ ಆಗೋದುಬೇಕಿತ್ತು. ಹಾಗಾಗೀ ವಿವಾದ ಇತ್ಯರ್ಥ ಪಡಿಸಲಾಗಿದೆ. ಆದರೆ ಎಲ್ಲವೂ ಬೂದಿಮುಚ್ಚಿದ ಕೆಂಡದಂತಿದೆ. ಮುಂದೆ ಲೋಕಸಭೆ ಚುನಾವಣೆಯ ವೇಳೆಯಲ್ಲಿ ಸಂಘರ್ಷ ಏರ್ಪಡಲಿದೆ ಎಂದು ಸ್ವತಃ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಇನ್ನೂ ಶಾಸಕ ಸತೀಶ್ ಜಾರಕಿಹೊಳಿ ರಾಜಕಾರಣದಲ್ಲಿ ಎಂದಿಗೂ ಸೋಲು ಒಪ್ಪಿಕೊಳ್ಳದ ವ್ಯಕ್ತಿ. ಯಾವುದನ್ನು ಬಹಿರಂಗವಾಗಿ ಹೇಳಲ್ಲ. ಆದರೇ ಒಳಗೊಳಗೆ ಅನೇಕ ಮಾಸ್ಟರ್ ಪ್ಲ್ಯಾನ್ ಮಾಡುವುದು ಕರಗತವಾಗಿದೆ. ಸತೀಶ್ ಜಾರಕಿಹೊಳಿ ಮುಂದಿನ ನಡೆ ಏನು? ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಣಿಸುವ ನಿಟ್ಟಿನಲ್ಲಿ ಯಾವ ಪ್ಲ್ಯಾನ್ ಮಾಡಲಿದ್ದಾರೆ ಎಂಬುದು ಕಾದು ನೋಡಬೇಕು. ಇನ್ನೂ ಸತೀಶ ಜಾರಕಿಹೊಳಿ ಹಾಗೂ ಬಿಜೆಪಿ ಪ್ರಭಾವಿ ಶಾಸಕ ಉಮೇಶ ಕತ್ತಿ ಒಂದೇ ತಾಲೂಕಿನ ಎರಡು ಕ್ಷೇತ್ರಗಳಲ್ಲಿ ಶಾಸಕರಾಗಿ ಕೆಲಸ ಮಾಡುತ್ತಿದ್ದಾರೆ. ಆದರೇ ಒಮ್ಮೆಯೂ ಇಬ್ಬರ ನಡುವೆ ಪೈಪೋಟಿ ನಡೆದಿಲ್ಲ. ಎಂಥದೇ ಮಹತ್ವದ ವಿಚಾರವಿದ್ದರೂ ಇಬ್ಬರು ಒಟ್ಟಿಗೆ ಮಾತನಾಡಿ ಇತ್ಯರ್ಥ ಪಡಿಸಿಕೊಳ್ಳುತ್ತಾರೆ. ಆದರೇ ತಮ್ಮದೇ ಪಕ್ಷದ ಹೆಬ್ಬಾಳ್ಕರ್ ಜೊತೆ ಜಾರಕಿಹೊಳಿ ಸಹೋದರರಿಗೆ ಇಷ್ಟೋಂದು ವೈರತ್ವ ಯಾಕಾಗಿ? ಜಿಲ್ಲಾ ಕಾಂಗ್ರೆಸ್‍ನ ರಾಜಕೀಯ ಭವಿಷ್ಯದ ಮೇಲೆ ಇದು ಯಾವರೀತಿಯ ಪರಿಣಾಮ ಬೀರಲಿದೆ ಎಂಬುದೇ ಅಸಲಿ ಪ್ರಶ್ನೆ.

ಕೌಜಲಗಿ ಮುಗಿಸಲು ಹೆಬ್ಬಾಳ್ಕರ್ ದಾಳ?
ಅದು ದಶಕಗಳ ಹಿಂದಿನ ಮಾತು ಬೆಳಗಾವಿಯಲ್ಲಿ ಮಾಜಿ ಸಚಿವ ದಿ ವಿ.ಎಸ್ ಂಕೌಜಲಗಿ ದೊಡ್ಡ ಪ್ರಭಾವಿಯಾಗಿದ್ದರು. ಅವರನ್ನು ರಾಜಕೀಯವಾಗಿ ಮುಗಿಸಲು ಸ್ಕೆಚ್ ಹಾಕಿದ್ದು ಸತೀಶ ಜಾರಕಿಹೊಳಿ… ಆಗಲೇ ರಾಜಕೀಯದಲ್ಲಿ ಪ್ರಥಮ ಬಾರಿಗೆ ಸ್ಟ್ರಿಂಗ್ ಆಪರೇಷನ್ ನಡೆದಿತ್ತು. ಇದಕ್ಕೆ ಸತೀಶ ಜಾರಕಿಹೊಳಿ ಬಳಸಿಕೊಂಡಿದ್ದು ಇದೇ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನ ಅನ್ನೋ ಆರೋಪವಿದೆ.
ಈ ಸಿಡಿಯನ್ನು ಹೈಕಮಾಂಡ್ ಅಂಗಳಕ್ಕೆ ತಲುಪಿಸಿ, ನಂತರ ಕೌಜಲಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಡಲಾಗಿತ್ತು. ಆಗಲೇ ಜಾರಕಿಹೊಳಿ ಸಹೋದರರು ಹೆಬ್ಬಾಳ್ಕರ್ ಬಳಸಿಕೊಂಡು ದೊಡ್ಡ ತಂತ್ರ ಮಾಡಿ ಯಶಸ್ಸು ಗಳಿಸಿದ್ದರು. ಅರಬಾವಿ ಕ್ಷೇತ್ರದಿಂದ ಸತತವಾಗಿ ಗೆದ್ದಿದ್ದ ಕೌಜಲಗಿ ವಿರುದ್ಧವಾಗಿ ಸಹೋದರ ಬಾಲಚಂದ್ರ ಜಾರಕಿಹೊಳಿ ಅವರನ್ನು ಕಣಕ್ಕೆ ಇಳಿಸಿ ಸೋಲಿಸಿ ಕೌಜಲಗಿ ಅವರನ್ನು ರಾಜಕೀಯವಾಗಿ ಮುಗಿಸಿ ಹಾಕಿದ್ದರು ಎಂಬುದನ್ನು ಇಂದಿಗೂ ಜನ ಮರೆತಿಲ್ಲ.

 

– ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...