Homeರಾಜಕೀಯಬೆಳಗಾವಿಯ ಕಾಂಗ್ರೆಸ್ ರಿಯಲ್ ಫೈಟ್ ಇನ್ಮುಂದೆ ಶುರು!

ಬೆಳಗಾವಿಯ ಕಾಂಗ್ರೆಸ್ ರಿಯಲ್ ಫೈಟ್ ಇನ್ಮುಂದೆ ಶುರು!

- Advertisement -
- Advertisement -

ಆಗಸ್ಟ್ 27ರ ರಾತ್ರಿಯಿಂದ ಸೆಪ್ಟೆಂಬರ್ 7ರವರೆಗೆ ಇಡೀ ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದು ಬೆಳಗಾವಿಯ ಪಿಎಲ್‍ಡಿ ಬ್ಯಾಂಕ್ ಚುನಾವಣೆ. ಸಹಕಾರಿ ಕ್ಷೇತ್ರದ ಈ ಚುನಾವಣೆಗೆ ಇಷ್ಟೊಂದು ಮಹತ್ವ ಬರಲು ಪ್ರತಿಷ್ಠಿತರ ನಡುವೆ ನಡೆದ ಜಿದ್ದಾಜಿದ್ದಿನ ಹೋರಾಟ ಕಾರಣವಾಗಿತ್ತು. ಬೆಳಗಾವಿಯ ಸಾಹುಕಾರರು ಎಂದೇ ಖ್ಯಾತಿ ಗಳಿಸಿದ ಜಾರಕಿಹೊಳಿ ಸಹೋದರರಿಗೆ ಸವಾಲ್ ಎಸೆದಿದ್ದು ಮಾತ್ರ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್. ಇದೀಗ ಚುನಾವಣೆ ಮುಗಿದಿದ್ದು ಈ ಕದನ ಕೂಡ ಮುಗಿದಿದೆ ಎಂದುಕೊಂಡರೆ ತಪ್ಪಾಗುತ್ತದೆ. ರಿಯಲ್ ಆಗಿ ಫೈಟ್ ಆರಂಭವಾಗಿರುವುದೇ ಈಗ.
ಹೆಬ್ಬಾಳ್ಕರ್ ಬೆಳೆಸಿದ್ದು ಜಾರಕಿಹೊಳಿ ಸಹೋದರರು…!
ಕಳೆದ 20 ವರ್ಷಗಳಿಂದ ಜಾರಕಿಹೊಳಿ ಸಹೋದರರ ನೆರಳಲ್ಲಿಯೇ ಲಕ್ಷ್ಮೀ ಹೆಬ್ಬಾಳ್ಕರ್ ರಾಜಕೀಯ ಮಾಡಿಕೊಂಡು ಬೆಳೆದಿದ್ದಾರೆ. ಹೆಬ್ಬಾಳ್ಕರ್ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ, ನಂತರ 2013ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ, 2014ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಹಾಗೂ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸ್ಥಾನಮಾನ. ಎಲ್ಲದರ ಹಿಂದೆ ಜಾರಕಿಹೊಳಿ ಸಹೋದರರ ಶ್ರೀರಕ್ಷೆ ಇದ್ದೇ ಇತ್ತು. ಕಳೆದ ಲೋಕಸಭೆ ಚುಣಾವಣೆ ಸಂದರ್ಭದಲ್ಲಿ ಮೋದಿ ಅಲೆಯ ನಡುವೆಯೂ ಗೋಕಾಕ್, ಅರಭಾವಿ ಕ್ಷೇತ್ರದಿಂದ ಜಾರಕಿಹೊಳಿ ಸಹೋದರರು ಅತಿಹೆಚ್ಚು ಮತಗಳನ್ನು ಹೆಬ್ಬಾಳ್ಕರ್‍ಗೆ ಹಾಕಿಸುವ ಮೂಲಕ ಬೆನ್ನೆಲುಬಾಗಿ ನಿಂತಿದ್ದರು. ಅಷ್ಟೇ ಅಲ್ಲ, ಚುನಾವಣೆ ಸಂದರ್ಭಗಳನ್ನೂ ಸೇರಿ ಅನೇಕ ಸಂದರ್ಭದಲ್ಲಿ ಆರ್ಥಿಕವಾಗಿಯೂ ಹೆಬ್ಬಾಳ್ಕರ್‍ಗೆ ಸಹಾಯ ಮಾಡಿದ್ದಾರೆ. ಇತ್ತೀಚಿನ 2018ರ ವಿಧಾನಸಭೆ ಚುನಾವಣೆಯಲ್ಲಿ 50 ಸಾವಿರಕ್ಕೂ ಅಧಿಕ ಮತಗಳಿಂದ ಹೆಬ್ಭಾಳ್ಕರ್ ಗೆಲ್ಲಿಸಲಿಕ್ಕಾಗಿ ಸಚಿವ ರಮೇಶ ಜಾರಕಿಹೊಳಿ, ಉದ್ಯಮಿ ಲಖನ್ ಜಾರಕಿಹೊಳಿ ಪ್ರಚಾರ ನಡೆಸಿದ್ದಕ್ಕೆ ಕ್ಷೇತ್ರದ ಜನತೆ ಸಾಕ್ಷಿಯಾಗಿದ್ದಾರೆ.
ರಮೇಶ ಜಾರಕಿಹೊಳಿ ಹಾಗೂ ಹೆಬ್ಭಾಳ್ಕರ್ ನಡುವೆ ಯಾಕೆ ವೈಮನಸ್ಸು…?
ದಶಕಗಳಿಂದ ಸಚಿವ ರಮೇಶ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಉತ್ತಮ ಬಾಂಧವ್ಯವಿತ್ತು. ‘ಹೆಬ್ಬಾಳ್ಕರ್ ತಂದೆಯ ಅನಾರೋಗ್ಯ, ಸಹೋದರ ಹಾಗೂ ಮಗನ ವಿದ್ಯಾಭ್ಯಾಸಕ್ಕೂ ಸಹಾಯ ಮಾಡಿದ್ದೇನೆ. ಆದರೆ ಇದನ್ನೆಲ್ಲಾ ಈಗ ಹೆಬ್ಬಾಳ್ಕರ್ ಮರೆತುಬಿಟ್ಟಿದ್ದಾರೆ’ ಎಂದು ರಮೇಶ ಜಾರಕಿಹೊಳಿ ಆರೋಪಿಸುತ್ತಿದ್ದಾರೆ. ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಸತೀಶ್ ಜಾರಕಿಹೊಳಿ ಸಚಿವರಾಗಿದ್ದ ವೇಳೆಯಲ್ಲಿ, ರಮೇಶ ಜಾರಕಿಹೊಳಿ ವರಿಷ್ಠರ ಸಂಪರ್ಕ ಸಾಧಿಸಿದ್ದು ಇದೇ ಹೆಬ್ಬಾಳ್ಕರ್ ಮೂಲಕವೇ. ಸತೀಶ ಬದಲಾಗಿ ತಮಗೆ ಸಚಿವ ಸ್ಥಾನ ಪಡೆದುಕೊಳ್ಳುವಲ್ಲಿ ಕೂಡ ಹೆಬ್ಬಾಳ್ಕರ್ ಕೈಜೋಡಿಸಿದ್ದರು. ನಂತರ ಜಿಲ್ಲೆಯ ಎಲ್ಲಾ ಕೆಲಸಗಳಲ್ಲಿಯೂ ರಮೇಶ ಜಾರಕಿಹೊಳಿ ಹಾಗೂ ಹೆಬ್ಬಾಳ್ಕರ್ ಒಟ್ಟಗೂಡಿಯೇ ಮಾಡುತ್ತಿದ್ದರು. ಆದರೆs 2018ರ ವಿಧಾನಸಭೆ ಚುನಾವಣೆ ಬಳಿಕ ರಚನೆಯಾದ ಸಮ್ಮಿಶ್ರ ಸರ್ಕಾರದಲ್ಲಿ ಸತೀಶ ಜಾರಕಿಹೊಳಿ, ರಮೇಶ ಜಾರಕಿಹೊಳಿ ಇಬ್ಬರು ಸಚಿವ ಸ್ಥಾನಕ್ಕೆ ಪೈಪೋಟಿ ನಡೆಸಲು ಆರಂಭಿಸಿದ್ರು. ಈ ವೇಳೆಯಲ್ಲಿ ತನ್ನ ಪರವಾಗಿ ಹೈಕಮಾಂಡ್ ಬಳಿ ಬರುವಂತೆ ಹೆಬ್ಬಾಳ್ಕರ್‍ಗೆ ರಮೇಶ್ ಸೂಚನೆ ನೀಡಿದ್ದರು. ಆದರೆ ಅಷ್ಟರಲ್ಲಾಗಲೇ ಸನ್ನಿವೇಶ ಬದಲಾಗಿತ್ತು. ಇದಕ್ಕೆ ಕ್ಯಾರೆ ಎನ್ನದ ಹೆಬ್ಬಾಳ್ಕರ್ ಲಿಂಗಾಯತ ಮಹಿಳಾ ಕೋಟಾದಲ್ಲಿ ತಾನೇ ಮಂತ್ರಿಗಿರಿಯ ಆಕಾಂಕ್ಷಿ ಎನ್ನುವ ಮೂಲಕ ರಮೇಶ ಜಾರಕಿಹೊಳಿಗೆ ಟಾಂಗ್ ನೀಡಿದ್ದರು. ನಂತರ ಸಿದ್ದರಾಮಯ್ಯ ಪ್ರಭಾವದ ಕಾರಣ ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನ ಸಿಕ್ಕಿತ್ತು. ಇದಾದ ನಂತರ ರಮೇಶ ಜಾರಕಿಹೊಳಿ ಹಾಗೂ ಹೆಬ್ಬಾಳ್ಕರ್ ನಡುವಿನ ಸಂಬಂಧ ದಿನದಿಂದ ದಿನಕ್ಕೆ ಹಳಸಿದೆ. ವರ್ಗಾವಣೆ ವಿಚಾರಗಳಲ್ಲಿ ಇದು ಮತ್ತಷ್ಟು ವಿಕೋಪಕ್ಕೆ ಹೋಗಿದೆ. ಆದರೆ ಈ ಮುಸುಕಿನ ಜಗಳ ಬೀದಿಗೆ ಬರಲು ಕಾಣವಾಗಿದ್ದು ಮಾತ್ರ ಪಿಎಲ್‍ಡಿ ಬ್ಯಾಂಕ್ ಚುನಾವಣೆ.
ಪಿ ಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ ಗೆದ್ದಿದ್ದು ಯಾರು..?
ಜಾರಕಿಹೊಳಿ ಸಹೋದರರು ಮತ್ತು ಹೆಬ್ಬಾಳ್ಕರ್ ನಡುವೆ ಪೈಪೋಟಿಗೆ ಕಾರಣವಾಗಿದ್ದ ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಅಸಲಿಗೆ ಗೆದ್ದಿದ್ದು ಯಾರು? ತೀವ್ರ ಪ್ರತಿಷ್ಠೆ, ಜಿದ್ದಾಜಿದ್ದಿಗೆ ಕಾರಣವಾಗಿದ್ದ ಚುನಾವಣೆಯಲ್ಲಿ ಹೆಬ್ಬಾಳ್ಕರ್ ಗೆದ್ದು ಸೋತಂತಾಗಿದ್ದರೆ, ಜಾರಕಿಹೊಳಿ ಸಹೋದರರು ಸೋತ್ತು ಗೆದ್ದಂತಾಗಿದ್ದಾರೆ. ಹೀಗಾಗಲು ಪ್ರಮುಖ ಕಾರಣ ಶಾಸಕ ಸತೀಶ್ ಜಾರಕಿಹೊಳಿ ನಡೆಸಿದ ಮಾಸ್ಟರ್ ಪ್ಲ್ಯಾನ್. ಮೊದಲು ಸತೀಶ್ ಜಾರಕಿಹೊಳಿ ಬಲಗೈ ಭಂಟನಂತೆ ಇದ್ದ ಬಾಪುಗೌಡ ಪಾಟೀಲ್ ನಂತರ ಸತೀಶಗೆ ಕೈಕೊಟ್ಟು ಹೆಬ್ಬಾಳ್ಕರ್ ಗುಂಪು ಸೇರಿದ್ದರು. ಹೆಬ್ಬಾಳ್ಕರ್ ಗುಂಪಿನಿಂದ ಅಧ್ಯಕ್ಷರಾಗಲು ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿದ್ದರು. ಬಾಪುಗೌಡನ ಮಾತಿನಂತೆಯೆ ಹೆಬ್ಬಾಳ್ಕರ್ ಈ ಚುನಾವಣೆಯನ್ನು ಇಷ್ಟೊಂದು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದರು. ಆದರೇ ಹೆಬ್ಬಾಳ್ಕರ್ ಹಾಗೂ ಜಾರಕಿಹೊಳಿ ಸಂಧಾನದ ವೇಳೆಯಲ್ಲಿ ಸತೀಶ ಜಾರಕಿಹೊಳಿ ಇಟ್ಟ ಮೊದಲ ಬೇಡಿಕೆ ಬಾಪುಗೌಡರನ್ನು ಯಾವುದೇ ಕಾರಣಕ್ಕೂ ಅಧ್ಯಕ್ಷರನ್ನಾಗಿ ಮಾಡಬಾರದು ಅಂತ. ಇದಕ್ಕೆ ಅನಿವಾರ್ಯವಾಗಿ ಹೆಬ್ಬಾಳ್ಕರ್ ಒಪ್ಪಿಗೆ ಸೂಚಿಸಬೇಕಾಗಿ ನಂತರ ಮರಾಠ ಸಮುದಾಯದ 83 ವರ್ಷದ ವಯೋವೃದ್ಧ ಮಹಾದೇವ ಪಾಟೀಲ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಿ, ಜಾರಕಿಹೊಳಿ ಸಹೋದರರು ಸೋಲಿನಲ್ಲೂ ನಗೆ ಬೀರಿದ್ದರು. ಆದರೇ ಹೆಬ್ಬಾಳ್ಕರ್ ಗೆದ್ದು ಸಹ ಲಿಂಗಾಯತ ಸಮುದಾಯ ವ್ಯಕ್ತಿಗೆ ಅಧ್ಯಕ್ಷ ಸ್ಥಾನ ಕೊಡಿಸುವಲ್ಲಿ ವಿಫಲರಾಗಿದ್ದರು.
ಸೈಲೆಂಟ್ ಸತೀಶ್ ಮುಂದಿನ ನಡೆ ನಿಗೂಢ….!
ಇನ್ನೂ ಬೆಳಗಾವಿಯ ಪಿಎಲ್‍ಡಿ ಬ್ಯಾಂಕ್ ಚುನಾವಣೆಯನ್ನು ರಾಜ್ಯದ 6 ಕೋಟಿ ಕನ್ನಡಿಗರು ಮಾಧ್ಯಮಗಳ ಮೂಲಕ ವೀಕ್ಷಣೆ ಮಾಡಿದರು. ಒಂದು ಯಕಶ್ಚಿತ್ ಪಿಎಲ್‍ಡಿ ಬ್ಯಾಂಕ್ ಚುನಾವಣೆಯಿಂದಾಗಿ ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೇ ಕುತ್ತು ಬರಲಿದೆ ಎಂದೇ ಬಿಂಬಿಸಲಾಗಿತ್ತು. ಆದರೇ ಮೈತ್ರಿ ಸರ್ಕಾರದ ನಾಯಕರಿಗೆ ಹೇಗಾದರೂ ತಕ್ಷಣಕ್ಕೆ ಬೆಂಕಿ ಶಮನ ಆಗೋದುಬೇಕಿತ್ತು. ಹಾಗಾಗೀ ವಿವಾದ ಇತ್ಯರ್ಥ ಪಡಿಸಲಾಗಿದೆ. ಆದರೆ ಎಲ್ಲವೂ ಬೂದಿಮುಚ್ಚಿದ ಕೆಂಡದಂತಿದೆ. ಮುಂದೆ ಲೋಕಸಭೆ ಚುನಾವಣೆಯ ವೇಳೆಯಲ್ಲಿ ಸಂಘರ್ಷ ಏರ್ಪಡಲಿದೆ ಎಂದು ಸ್ವತಃ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಇನ್ನೂ ಶಾಸಕ ಸತೀಶ್ ಜಾರಕಿಹೊಳಿ ರಾಜಕಾರಣದಲ್ಲಿ ಎಂದಿಗೂ ಸೋಲು ಒಪ್ಪಿಕೊಳ್ಳದ ವ್ಯಕ್ತಿ. ಯಾವುದನ್ನು ಬಹಿರಂಗವಾಗಿ ಹೇಳಲ್ಲ. ಆದರೇ ಒಳಗೊಳಗೆ ಅನೇಕ ಮಾಸ್ಟರ್ ಪ್ಲ್ಯಾನ್ ಮಾಡುವುದು ಕರಗತವಾಗಿದೆ. ಸತೀಶ್ ಜಾರಕಿಹೊಳಿ ಮುಂದಿನ ನಡೆ ಏನು? ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಣಿಸುವ ನಿಟ್ಟಿನಲ್ಲಿ ಯಾವ ಪ್ಲ್ಯಾನ್ ಮಾಡಲಿದ್ದಾರೆ ಎಂಬುದು ಕಾದು ನೋಡಬೇಕು. ಇನ್ನೂ ಸತೀಶ ಜಾರಕಿಹೊಳಿ ಹಾಗೂ ಬಿಜೆಪಿ ಪ್ರಭಾವಿ ಶಾಸಕ ಉಮೇಶ ಕತ್ತಿ ಒಂದೇ ತಾಲೂಕಿನ ಎರಡು ಕ್ಷೇತ್ರಗಳಲ್ಲಿ ಶಾಸಕರಾಗಿ ಕೆಲಸ ಮಾಡುತ್ತಿದ್ದಾರೆ. ಆದರೇ ಒಮ್ಮೆಯೂ ಇಬ್ಬರ ನಡುವೆ ಪೈಪೋಟಿ ನಡೆದಿಲ್ಲ. ಎಂಥದೇ ಮಹತ್ವದ ವಿಚಾರವಿದ್ದರೂ ಇಬ್ಬರು ಒಟ್ಟಿಗೆ ಮಾತನಾಡಿ ಇತ್ಯರ್ಥ ಪಡಿಸಿಕೊಳ್ಳುತ್ತಾರೆ. ಆದರೇ ತಮ್ಮದೇ ಪಕ್ಷದ ಹೆಬ್ಬಾಳ್ಕರ್ ಜೊತೆ ಜಾರಕಿಹೊಳಿ ಸಹೋದರರಿಗೆ ಇಷ್ಟೋಂದು ವೈರತ್ವ ಯಾಕಾಗಿ? ಜಿಲ್ಲಾ ಕಾಂಗ್ರೆಸ್‍ನ ರಾಜಕೀಯ ಭವಿಷ್ಯದ ಮೇಲೆ ಇದು ಯಾವರೀತಿಯ ಪರಿಣಾಮ ಬೀರಲಿದೆ ಎಂಬುದೇ ಅಸಲಿ ಪ್ರಶ್ನೆ.

ಕೌಜಲಗಿ ಮುಗಿಸಲು ಹೆಬ್ಬಾಳ್ಕರ್ ದಾಳ?
ಅದು ದಶಕಗಳ ಹಿಂದಿನ ಮಾತು ಬೆಳಗಾವಿಯಲ್ಲಿ ಮಾಜಿ ಸಚಿವ ದಿ ವಿ.ಎಸ್ ಂಕೌಜಲಗಿ ದೊಡ್ಡ ಪ್ರಭಾವಿಯಾಗಿದ್ದರು. ಅವರನ್ನು ರಾಜಕೀಯವಾಗಿ ಮುಗಿಸಲು ಸ್ಕೆಚ್ ಹಾಕಿದ್ದು ಸತೀಶ ಜಾರಕಿಹೊಳಿ… ಆಗಲೇ ರಾಜಕೀಯದಲ್ಲಿ ಪ್ರಥಮ ಬಾರಿಗೆ ಸ್ಟ್ರಿಂಗ್ ಆಪರೇಷನ್ ನಡೆದಿತ್ತು. ಇದಕ್ಕೆ ಸತೀಶ ಜಾರಕಿಹೊಳಿ ಬಳಸಿಕೊಂಡಿದ್ದು ಇದೇ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನ ಅನ್ನೋ ಆರೋಪವಿದೆ.
ಈ ಸಿಡಿಯನ್ನು ಹೈಕಮಾಂಡ್ ಅಂಗಳಕ್ಕೆ ತಲುಪಿಸಿ, ನಂತರ ಕೌಜಲಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಡಲಾಗಿತ್ತು. ಆಗಲೇ ಜಾರಕಿಹೊಳಿ ಸಹೋದರರು ಹೆಬ್ಬಾಳ್ಕರ್ ಬಳಸಿಕೊಂಡು ದೊಡ್ಡ ತಂತ್ರ ಮಾಡಿ ಯಶಸ್ಸು ಗಳಿಸಿದ್ದರು. ಅರಬಾವಿ ಕ್ಷೇತ್ರದಿಂದ ಸತತವಾಗಿ ಗೆದ್ದಿದ್ದ ಕೌಜಲಗಿ ವಿರುದ್ಧವಾಗಿ ಸಹೋದರ ಬಾಲಚಂದ್ರ ಜಾರಕಿಹೊಳಿ ಅವರನ್ನು ಕಣಕ್ಕೆ ಇಳಿಸಿ ಸೋಲಿಸಿ ಕೌಜಲಗಿ ಅವರನ್ನು ರಾಜಕೀಯವಾಗಿ ಮುಗಿಸಿ ಹಾಕಿದ್ದರು ಎಂಬುದನ್ನು ಇಂದಿಗೂ ಜನ ಮರೆತಿಲ್ಲ.

 

– ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...