Homeಮುಖಪುಟಮತಗಳ್ಳತನ ವಿರುದ್ಧ ಅಭಿಯಾನ ಆರಂಭಿಸಿದ ಕಾಂಗ್ರೆಸ್: ಡಿಜಿಟಲ್ ಮತದಾರರ ಪಟ್ಟಿ ನೀಡಲು ಆಗ್ರಹ

ಮತಗಳ್ಳತನ ವಿರುದ್ಧ ಅಭಿಯಾನ ಆರಂಭಿಸಿದ ಕಾಂಗ್ರೆಸ್: ಡಿಜಿಟಲ್ ಮತದಾರರ ಪಟ್ಟಿ ನೀಡಲು ಆಗ್ರಹ

- Advertisement -
- Advertisement -

ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಮಾಡಿರುವ 2024ರ ಲೋಕಸಭೆ ಚುನಾವಣೆಯ ‘ಮತಗಳ್ಳತನ’ ಆರೋಪ ದೇಶದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ನಡುವೆ ಅಖಿಲ ಭಾರತ ಕಾಂಗ್ರೆಸ್ ‘ವೋಟ್ ಚೋರಿ’ (ಮತಗಳ್ಳತನ) ಎಂಬ ಹೆಸರಿನಲ್ಲಿ ವೆಬ್‌ ಪೋರ್ಟಲ್ ತೆರೆದಿದೆ. ಈ ಮೂಲಕ ಮತಗಳ್ಳತನದ ವಿರುದ್ದ ಅಭಿಯಾನ ಆರಂಭಿಸಿದೆ.

‘ಮತಗಳ್ಳತನದ ಆಧಾರ’, ‘ಚುನಾವಣಾ ಆಯೋಗದ ಪಾರದರ್ಶಕತೆಗೆ ಆಗ್ರಹ’ ಮತ್ತು ‘ಮತಗಳ್ಳತನದ ಬಗ್ಗೆ ವರದಿ’ ಎಂಬ ಮೂರು ಆಯ್ಕೆಗಳು ವೆಬ್‌ ಪೋರ್ಟಲ್‌ನಲ್ಲಿದ್ದು, ಜನರು ಪೋರ್ಟಲ್‌ಗೆ ಭೇಟಿ ನೀಡಿ ಮತಗಳ್ಳನದ ಆಧಾರಗಳನ್ನು ಪರಿಶೀಲಿಸಿ, ಆ ಬಗ್ಗೆ ವರದಿ ಮಾಡಿ, ಚುನಾವಣಾ ಪಾರದರ್ಶಕತೆಗೆ ಆಯೋಗವನ್ನು ಆಗ್ರಹಿಸಬಹುದು.

ಬಿಜೆಪಿ ಮತ್ತು ಚುನಾವಣಾ ಆಯೋಗ ಪರಸ್ಪರ ಒಪ್ಪಂದ ಮಾಡಿಕೊಂಡು ಕಳೆದ ಲೋಕಸಭೆ ಚುನಾವಣೆಯಲ್ಲಿ “ದೊಡ್ಡ ಕ್ರಿಮಿನಲ್ ವಂಚನೆ” ಎಸಗಿದೆ ಎಂಬ ಆರೋಪವನ್ನು ರಾಹುಲ್ ಗಾಂಧಿಯ ಪುನರುಚ್ಚರಿಸುವ ವೀಡಿಯೊ ಕೂಡ ವೆಬ್‌ ಪೋರ್ಟನಲ್ಲಿದೆ. ವಿಡಿಯೋದಲ್ಲಿ ಕರ್ನಾಟಕದ ಒಂದು ಕ್ಷೇತ್ರದ ವಿಶ್ಲೇಷಣೆಯನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, ಇದು “ಸಂವಿಧಾನದ ವಿರುದ್ಧದ ಅಪರಾಧ” ಎಂದು ಹೇಳಿದ್ದಾರೆ.

ಈ ಪೋರ್ಟಲ್‌ನಲ್ಲಿ ಮತದಾನವು ನಮ್ಮ ಪ್ರಜಾಪ್ರಭುತ್ವದ ಅಡಿಪಾಯವಾಗಿದೆ. ಆದರೆ, ಅದು ‘ಚುನಾವಣಾ ಆಯೋಗದ ಶಾಮೀಲಿನೊಂದಿಗೆ ಬಿಜೆಪಿಯಿಂದ ವ್ಯವಸ್ಥಿತ ದಾಳಿಗೆ ಒಳಗಾಗಿದೆ’ ಎಂಬ ಸಂದೇಶವಿದೆ.

“ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದ ಕೇವಲ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಲೋಕಸಭಾ ಚುನಾವಣೆ ಗೆಲ್ಲಲು ಸಹಾಯಕ ಮಾಡಿದ 1 ಲಕ್ಷಕ್ಕೂ ಹೆಚ್ಚು ನಕಲಿ ಮತದಾರರನ್ನು ನಾವು ಕಂಡುಕೊಂಡಿದ್ದೇವೆ. ಸುಮಾರು 70-100 ಸ್ಥಾನಗಳಲ್ಲಿ ಇದು ಸಂಭವಿಸಿದೆ. ಹಾಗಾದರೆ ಊಹಿಸಿ, ಇದು ಮುಕ್ತ ಚುನಾವಣೆಗಳನ್ನು ನಾಶಪಡಿಸುತ್ತದೆ ಎಂದು ಪೋರ್ಟಲ್‌ನಲ್ಲಿ ಹೇಳಲಾಗಿದೆ.

ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳ ಕುರಿತು ಕಾಂಗ್ರೆಸ್ ಮತ್ತು ಇಂಡಿಯಾ ಒಕ್ಕೂಟದ ಈ ಹಿಂದೆಯೂ ಎಚ್ಚರಿಕೆ ನೀಡಿವೆ. ಈಗ ನಮ್ಮ ಬಳಿ ಪುರಾವೆಗಳಿವೆ. ನಾವು ಈ ಮತಗಳ್ಳತನದ ವಿರುದ್ಧ ನಮ್ಮೆಲ್ಲ ಶಕ್ತಿಯಿಂದ ಹೋರಾಡುತ್ತೇವೆ. ನಮ್ಮ ಪ್ರಜಾಪ್ರಭುತ್ವವನ್ನು ರಕ್ಷಿಸಲು ನಮ್ಮೊಂದಿಗೆ ನೀವು ಕೈಜೋಡಿಸಿ ಎಂದು ಪೋರ್ಟಲ್‌ನಲ್ಲಿ ಮನವಿ ಮಾಡಲಾಗಿದೆ.

ಒಬ್ಬರು ವ್ಯಕ್ತಿ ಪೋರ್ಟಲ್‌ನಲ್ಲಿ ನೋಂದಾಯಿಸಿದ ನಂತರ, ಅವರ ಹೆಸರಿನಲ್ಲಿ ಪ್ರಮಾಣಪತ್ರವನ್ನು ನೀಡಲಾಗುತ್ತದೆ. ಈ ಮೂಲಕ ಅವರು ಮತಗಳ್ಳತನವನ್ನು ವಿರೋಧಿಸುತ್ತಾರೆ ಎಂದು ಹೇಳಲಾಗುತ್ತದೆ.

“ಚುನಾವಣಾ ಆಯೋಗ ಡಿಜಿಟಲ್ ಮತದಾರರ ಪಟ್ಟಿಯನ್ನು ಒದಗಿಸಬೇಕು ಎಂಬ ರಾಹುಲ್ ಗಾಂಧಿಯವರ ಬೇಡಿಕೆಯನ್ನು ನಾನೂ ಬೆಂಬಲಿಸುತ್ತೇನೆ” ಎಂದು ಪ್ರಮಾಣಪತ್ರದಲ್ಲಿ ಹೇಳಲಾಗಿದೆ. ಜನರು ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿಕೊಳ್ಳುವ ಮತ್ತು ಎಸ್‌ಎಂಎಸ್‌ನಲ್ಲಿರುವ ಲಿಂಕ್ ಅನ್ನು ಭರ್ತಿ ಮಾಡುವ ಆಯ್ಕೆಯನ್ನು ಕೂಡ ಪೋರ್ಟಲ್ ನೀಡುತ್ತದೆ.

ಪ್ರಮಾಣಪತ್ರವು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮತ್ತು ಖಜಾಂಚಿ ಅಜಯ್ ಮಾಕನ್ ಅವರ ಸಹಿಗಳನ್ನು ಹೊಂದಿದೆ.

ಹಲವಾರು ಕಾಂಗ್ರೆಸ್ ನಾಯಕರು ಮತ್ತು ಬೆಂಬಲಿಗರು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಮಾಣಪತ್ರಗಳನ್ನು ಹಂಚಿಕೊಂಡಿದ್ದಾರೆ.

ರಾಹುಲ್ ಗಾಂಧಿಯವರ ‘ಮತಗಳ್ಳತನ’ ಆರೋಪವನ್ನು ಕಾಂಗ್ರೆಸ್ ನಾಯಕರು ಪ್ರತಿಧ್ವನಿಸುತ್ತಿದ್ದಂತೆ, ಚುನಾವಣಾ ಆಯೋಗದ ಅಧಿಕಾರಿಗಳು ಶನಿವಾರ ಮತ್ತೊಮ್ಮೆ ರಾಹುಲ್ ಗಾಂಧಿ ತನ್ನ ಆರೋಪವನ್ನು ದೃಢೀಕರಿಸುವ ಘೋಷಣಾ ಪತ್ರಕ್ಕೆ ಸಹಿ ಹಾಕಬೇಕು ಅಥವಾ ಸುಳ್ಳಾರೋಪ ಮಾಡಿದ್ದಕ್ಕಾಗಿ ದೇಶದ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕನಿಷ್ಠ ಮೂರು ರಾಜ್ಯಗಳಲ್ಲಿ ನಡೆದ ಮತ ಕಳ್ಳತನದ ಆರೋಪದ ಕುರಿತು ರಾಹುಲ್ ಗಾಂಧಿ ಮತ್ತು ಚುನಾವಣಾ ಆಯೋಗದ ನಡುವೆ ಜಟಾಪಟಿ ಏರ್ಪಟ್ಟಿದೆ.

334 ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ಕೈಬಿಟ್ಟ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...