Homeಮುಖಪುಟಮತಗಳ್ಳತನ ವಿರುದ್ಧ ಅಭಿಯಾನ ಆರಂಭಿಸಿದ ಕಾಂಗ್ರೆಸ್: ಡಿಜಿಟಲ್ ಮತದಾರರ ಪಟ್ಟಿ ನೀಡಲು ಆಗ್ರಹ

ಮತಗಳ್ಳತನ ವಿರುದ್ಧ ಅಭಿಯಾನ ಆರಂಭಿಸಿದ ಕಾಂಗ್ರೆಸ್: ಡಿಜಿಟಲ್ ಮತದಾರರ ಪಟ್ಟಿ ನೀಡಲು ಆಗ್ರಹ

- Advertisement -
- Advertisement -

ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಮಾಡಿರುವ 2024ರ ಲೋಕಸಭೆ ಚುನಾವಣೆಯ ‘ಮತಗಳ್ಳತನ’ ಆರೋಪ ದೇಶದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ನಡುವೆ ಅಖಿಲ ಭಾರತ ಕಾಂಗ್ರೆಸ್ ‘ವೋಟ್ ಚೋರಿ’ (ಮತಗಳ್ಳತನ) ಎಂಬ ಹೆಸರಿನಲ್ಲಿ ವೆಬ್‌ ಪೋರ್ಟಲ್ ತೆರೆದಿದೆ. ಈ ಮೂಲಕ ಮತಗಳ್ಳತನದ ವಿರುದ್ದ ಅಭಿಯಾನ ಆರಂಭಿಸಿದೆ.

‘ಮತಗಳ್ಳತನದ ಆಧಾರ’, ‘ಚುನಾವಣಾ ಆಯೋಗದ ಪಾರದರ್ಶಕತೆಗೆ ಆಗ್ರಹ’ ಮತ್ತು ‘ಮತಗಳ್ಳತನದ ಬಗ್ಗೆ ವರದಿ’ ಎಂಬ ಮೂರು ಆಯ್ಕೆಗಳು ವೆಬ್‌ ಪೋರ್ಟಲ್‌ನಲ್ಲಿದ್ದು, ಜನರು ಪೋರ್ಟಲ್‌ಗೆ ಭೇಟಿ ನೀಡಿ ಮತಗಳ್ಳನದ ಆಧಾರಗಳನ್ನು ಪರಿಶೀಲಿಸಿ, ಆ ಬಗ್ಗೆ ವರದಿ ಮಾಡಿ, ಚುನಾವಣಾ ಪಾರದರ್ಶಕತೆಗೆ ಆಯೋಗವನ್ನು ಆಗ್ರಹಿಸಬಹುದು.

ಬಿಜೆಪಿ ಮತ್ತು ಚುನಾವಣಾ ಆಯೋಗ ಪರಸ್ಪರ ಒಪ್ಪಂದ ಮಾಡಿಕೊಂಡು ಕಳೆದ ಲೋಕಸಭೆ ಚುನಾವಣೆಯಲ್ಲಿ “ದೊಡ್ಡ ಕ್ರಿಮಿನಲ್ ವಂಚನೆ” ಎಸಗಿದೆ ಎಂಬ ಆರೋಪವನ್ನು ರಾಹುಲ್ ಗಾಂಧಿಯ ಪುನರುಚ್ಚರಿಸುವ ವೀಡಿಯೊ ಕೂಡ ವೆಬ್‌ ಪೋರ್ಟನಲ್ಲಿದೆ. ವಿಡಿಯೋದಲ್ಲಿ ಕರ್ನಾಟಕದ ಒಂದು ಕ್ಷೇತ್ರದ ವಿಶ್ಲೇಷಣೆಯನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, ಇದು “ಸಂವಿಧಾನದ ವಿರುದ್ಧದ ಅಪರಾಧ” ಎಂದು ಹೇಳಿದ್ದಾರೆ.

ಈ ಪೋರ್ಟಲ್‌ನಲ್ಲಿ ಮತದಾನವು ನಮ್ಮ ಪ್ರಜಾಪ್ರಭುತ್ವದ ಅಡಿಪಾಯವಾಗಿದೆ. ಆದರೆ, ಅದು ‘ಚುನಾವಣಾ ಆಯೋಗದ ಶಾಮೀಲಿನೊಂದಿಗೆ ಬಿಜೆಪಿಯಿಂದ ವ್ಯವಸ್ಥಿತ ದಾಳಿಗೆ ಒಳಗಾಗಿದೆ’ ಎಂಬ ಸಂದೇಶವಿದೆ.

“ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದ ಕೇವಲ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಲೋಕಸಭಾ ಚುನಾವಣೆ ಗೆಲ್ಲಲು ಸಹಾಯಕ ಮಾಡಿದ 1 ಲಕ್ಷಕ್ಕೂ ಹೆಚ್ಚು ನಕಲಿ ಮತದಾರರನ್ನು ನಾವು ಕಂಡುಕೊಂಡಿದ್ದೇವೆ. ಸುಮಾರು 70-100 ಸ್ಥಾನಗಳಲ್ಲಿ ಇದು ಸಂಭವಿಸಿದೆ. ಹಾಗಾದರೆ ಊಹಿಸಿ, ಇದು ಮುಕ್ತ ಚುನಾವಣೆಗಳನ್ನು ನಾಶಪಡಿಸುತ್ತದೆ ಎಂದು ಪೋರ್ಟಲ್‌ನಲ್ಲಿ ಹೇಳಲಾಗಿದೆ.

ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳ ಕುರಿತು ಕಾಂಗ್ರೆಸ್ ಮತ್ತು ಇಂಡಿಯಾ ಒಕ್ಕೂಟದ ಈ ಹಿಂದೆಯೂ ಎಚ್ಚರಿಕೆ ನೀಡಿವೆ. ಈಗ ನಮ್ಮ ಬಳಿ ಪುರಾವೆಗಳಿವೆ. ನಾವು ಈ ಮತಗಳ್ಳತನದ ವಿರುದ್ಧ ನಮ್ಮೆಲ್ಲ ಶಕ್ತಿಯಿಂದ ಹೋರಾಡುತ್ತೇವೆ. ನಮ್ಮ ಪ್ರಜಾಪ್ರಭುತ್ವವನ್ನು ರಕ್ಷಿಸಲು ನಮ್ಮೊಂದಿಗೆ ನೀವು ಕೈಜೋಡಿಸಿ ಎಂದು ಪೋರ್ಟಲ್‌ನಲ್ಲಿ ಮನವಿ ಮಾಡಲಾಗಿದೆ.

ಒಬ್ಬರು ವ್ಯಕ್ತಿ ಪೋರ್ಟಲ್‌ನಲ್ಲಿ ನೋಂದಾಯಿಸಿದ ನಂತರ, ಅವರ ಹೆಸರಿನಲ್ಲಿ ಪ್ರಮಾಣಪತ್ರವನ್ನು ನೀಡಲಾಗುತ್ತದೆ. ಈ ಮೂಲಕ ಅವರು ಮತಗಳ್ಳತನವನ್ನು ವಿರೋಧಿಸುತ್ತಾರೆ ಎಂದು ಹೇಳಲಾಗುತ್ತದೆ.

“ಚುನಾವಣಾ ಆಯೋಗ ಡಿಜಿಟಲ್ ಮತದಾರರ ಪಟ್ಟಿಯನ್ನು ಒದಗಿಸಬೇಕು ಎಂಬ ರಾಹುಲ್ ಗಾಂಧಿಯವರ ಬೇಡಿಕೆಯನ್ನು ನಾನೂ ಬೆಂಬಲಿಸುತ್ತೇನೆ” ಎಂದು ಪ್ರಮಾಣಪತ್ರದಲ್ಲಿ ಹೇಳಲಾಗಿದೆ. ಜನರು ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿಕೊಳ್ಳುವ ಮತ್ತು ಎಸ್‌ಎಂಎಸ್‌ನಲ್ಲಿರುವ ಲಿಂಕ್ ಅನ್ನು ಭರ್ತಿ ಮಾಡುವ ಆಯ್ಕೆಯನ್ನು ಕೂಡ ಪೋರ್ಟಲ್ ನೀಡುತ್ತದೆ.

ಪ್ರಮಾಣಪತ್ರವು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮತ್ತು ಖಜಾಂಚಿ ಅಜಯ್ ಮಾಕನ್ ಅವರ ಸಹಿಗಳನ್ನು ಹೊಂದಿದೆ.

ಹಲವಾರು ಕಾಂಗ್ರೆಸ್ ನಾಯಕರು ಮತ್ತು ಬೆಂಬಲಿಗರು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಮಾಣಪತ್ರಗಳನ್ನು ಹಂಚಿಕೊಂಡಿದ್ದಾರೆ.

ರಾಹುಲ್ ಗಾಂಧಿಯವರ ‘ಮತಗಳ್ಳತನ’ ಆರೋಪವನ್ನು ಕಾಂಗ್ರೆಸ್ ನಾಯಕರು ಪ್ರತಿಧ್ವನಿಸುತ್ತಿದ್ದಂತೆ, ಚುನಾವಣಾ ಆಯೋಗದ ಅಧಿಕಾರಿಗಳು ಶನಿವಾರ ಮತ್ತೊಮ್ಮೆ ರಾಹುಲ್ ಗಾಂಧಿ ತನ್ನ ಆರೋಪವನ್ನು ದೃಢೀಕರಿಸುವ ಘೋಷಣಾ ಪತ್ರಕ್ಕೆ ಸಹಿ ಹಾಕಬೇಕು ಅಥವಾ ಸುಳ್ಳಾರೋಪ ಮಾಡಿದ್ದಕ್ಕಾಗಿ ದೇಶದ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕನಿಷ್ಠ ಮೂರು ರಾಜ್ಯಗಳಲ್ಲಿ ನಡೆದ ಮತ ಕಳ್ಳತನದ ಆರೋಪದ ಕುರಿತು ರಾಹುಲ್ ಗಾಂಧಿ ಮತ್ತು ಚುನಾವಣಾ ಆಯೋಗದ ನಡುವೆ ಜಟಾಪಟಿ ಏರ್ಪಟ್ಟಿದೆ.

334 ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ಕೈಬಿಟ್ಟ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...