Homeಮುಖಪುಟಮತಗಳ್ಳತನ ವಿರುದ್ಧ ಅಭಿಯಾನ ಆರಂಭಿಸಿದ ಕಾಂಗ್ರೆಸ್: ಡಿಜಿಟಲ್ ಮತದಾರರ ಪಟ್ಟಿ ನೀಡಲು ಆಗ್ರಹ

ಮತಗಳ್ಳತನ ವಿರುದ್ಧ ಅಭಿಯಾನ ಆರಂಭಿಸಿದ ಕಾಂಗ್ರೆಸ್: ಡಿಜಿಟಲ್ ಮತದಾರರ ಪಟ್ಟಿ ನೀಡಲು ಆಗ್ರಹ

- Advertisement -
- Advertisement -

ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಮಾಡಿರುವ 2024ರ ಲೋಕಸಭೆ ಚುನಾವಣೆಯ ‘ಮತಗಳ್ಳತನ’ ಆರೋಪ ದೇಶದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ನಡುವೆ ಅಖಿಲ ಭಾರತ ಕಾಂಗ್ರೆಸ್ ‘ವೋಟ್ ಚೋರಿ’ (ಮತಗಳ್ಳತನ) ಎಂಬ ಹೆಸರಿನಲ್ಲಿ ವೆಬ್‌ ಪೋರ್ಟಲ್ ತೆರೆದಿದೆ. ಈ ಮೂಲಕ ಮತಗಳ್ಳತನದ ವಿರುದ್ದ ಅಭಿಯಾನ ಆರಂಭಿಸಿದೆ.

‘ಮತಗಳ್ಳತನದ ಆಧಾರ’, ‘ಚುನಾವಣಾ ಆಯೋಗದ ಪಾರದರ್ಶಕತೆಗೆ ಆಗ್ರಹ’ ಮತ್ತು ‘ಮತಗಳ್ಳತನದ ಬಗ್ಗೆ ವರದಿ’ ಎಂಬ ಮೂರು ಆಯ್ಕೆಗಳು ವೆಬ್‌ ಪೋರ್ಟಲ್‌ನಲ್ಲಿದ್ದು, ಜನರು ಪೋರ್ಟಲ್‌ಗೆ ಭೇಟಿ ನೀಡಿ ಮತಗಳ್ಳನದ ಆಧಾರಗಳನ್ನು ಪರಿಶೀಲಿಸಿ, ಆ ಬಗ್ಗೆ ವರದಿ ಮಾಡಿ, ಚುನಾವಣಾ ಪಾರದರ್ಶಕತೆಗೆ ಆಯೋಗವನ್ನು ಆಗ್ರಹಿಸಬಹುದು.

ಬಿಜೆಪಿ ಮತ್ತು ಚುನಾವಣಾ ಆಯೋಗ ಪರಸ್ಪರ ಒಪ್ಪಂದ ಮಾಡಿಕೊಂಡು ಕಳೆದ ಲೋಕಸಭೆ ಚುನಾವಣೆಯಲ್ಲಿ “ದೊಡ್ಡ ಕ್ರಿಮಿನಲ್ ವಂಚನೆ” ಎಸಗಿದೆ ಎಂಬ ಆರೋಪವನ್ನು ರಾಹುಲ್ ಗಾಂಧಿಯ ಪುನರುಚ್ಚರಿಸುವ ವೀಡಿಯೊ ಕೂಡ ವೆಬ್‌ ಪೋರ್ಟನಲ್ಲಿದೆ. ವಿಡಿಯೋದಲ್ಲಿ ಕರ್ನಾಟಕದ ಒಂದು ಕ್ಷೇತ್ರದ ವಿಶ್ಲೇಷಣೆಯನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, ಇದು “ಸಂವಿಧಾನದ ವಿರುದ್ಧದ ಅಪರಾಧ” ಎಂದು ಹೇಳಿದ್ದಾರೆ.

ಈ ಪೋರ್ಟಲ್‌ನಲ್ಲಿ ಮತದಾನವು ನಮ್ಮ ಪ್ರಜಾಪ್ರಭುತ್ವದ ಅಡಿಪಾಯವಾಗಿದೆ. ಆದರೆ, ಅದು ‘ಚುನಾವಣಾ ಆಯೋಗದ ಶಾಮೀಲಿನೊಂದಿಗೆ ಬಿಜೆಪಿಯಿಂದ ವ್ಯವಸ್ಥಿತ ದಾಳಿಗೆ ಒಳಗಾಗಿದೆ’ ಎಂಬ ಸಂದೇಶವಿದೆ.

“ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದ ಕೇವಲ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಲೋಕಸಭಾ ಚುನಾವಣೆ ಗೆಲ್ಲಲು ಸಹಾಯಕ ಮಾಡಿದ 1 ಲಕ್ಷಕ್ಕೂ ಹೆಚ್ಚು ನಕಲಿ ಮತದಾರರನ್ನು ನಾವು ಕಂಡುಕೊಂಡಿದ್ದೇವೆ. ಸುಮಾರು 70-100 ಸ್ಥಾನಗಳಲ್ಲಿ ಇದು ಸಂಭವಿಸಿದೆ. ಹಾಗಾದರೆ ಊಹಿಸಿ, ಇದು ಮುಕ್ತ ಚುನಾವಣೆಗಳನ್ನು ನಾಶಪಡಿಸುತ್ತದೆ ಎಂದು ಪೋರ್ಟಲ್‌ನಲ್ಲಿ ಹೇಳಲಾಗಿದೆ.

ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳ ಕುರಿತು ಕಾಂಗ್ರೆಸ್ ಮತ್ತು ಇಂಡಿಯಾ ಒಕ್ಕೂಟದ ಈ ಹಿಂದೆಯೂ ಎಚ್ಚರಿಕೆ ನೀಡಿವೆ. ಈಗ ನಮ್ಮ ಬಳಿ ಪುರಾವೆಗಳಿವೆ. ನಾವು ಈ ಮತಗಳ್ಳತನದ ವಿರುದ್ಧ ನಮ್ಮೆಲ್ಲ ಶಕ್ತಿಯಿಂದ ಹೋರಾಡುತ್ತೇವೆ. ನಮ್ಮ ಪ್ರಜಾಪ್ರಭುತ್ವವನ್ನು ರಕ್ಷಿಸಲು ನಮ್ಮೊಂದಿಗೆ ನೀವು ಕೈಜೋಡಿಸಿ ಎಂದು ಪೋರ್ಟಲ್‌ನಲ್ಲಿ ಮನವಿ ಮಾಡಲಾಗಿದೆ.

ಒಬ್ಬರು ವ್ಯಕ್ತಿ ಪೋರ್ಟಲ್‌ನಲ್ಲಿ ನೋಂದಾಯಿಸಿದ ನಂತರ, ಅವರ ಹೆಸರಿನಲ್ಲಿ ಪ್ರಮಾಣಪತ್ರವನ್ನು ನೀಡಲಾಗುತ್ತದೆ. ಈ ಮೂಲಕ ಅವರು ಮತಗಳ್ಳತನವನ್ನು ವಿರೋಧಿಸುತ್ತಾರೆ ಎಂದು ಹೇಳಲಾಗುತ್ತದೆ.

“ಚುನಾವಣಾ ಆಯೋಗ ಡಿಜಿಟಲ್ ಮತದಾರರ ಪಟ್ಟಿಯನ್ನು ಒದಗಿಸಬೇಕು ಎಂಬ ರಾಹುಲ್ ಗಾಂಧಿಯವರ ಬೇಡಿಕೆಯನ್ನು ನಾನೂ ಬೆಂಬಲಿಸುತ್ತೇನೆ” ಎಂದು ಪ್ರಮಾಣಪತ್ರದಲ್ಲಿ ಹೇಳಲಾಗಿದೆ. ಜನರು ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿಕೊಳ್ಳುವ ಮತ್ತು ಎಸ್‌ಎಂಎಸ್‌ನಲ್ಲಿರುವ ಲಿಂಕ್ ಅನ್ನು ಭರ್ತಿ ಮಾಡುವ ಆಯ್ಕೆಯನ್ನು ಕೂಡ ಪೋರ್ಟಲ್ ನೀಡುತ್ತದೆ.

ಪ್ರಮಾಣಪತ್ರವು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮತ್ತು ಖಜಾಂಚಿ ಅಜಯ್ ಮಾಕನ್ ಅವರ ಸಹಿಗಳನ್ನು ಹೊಂದಿದೆ.

ಹಲವಾರು ಕಾಂಗ್ರೆಸ್ ನಾಯಕರು ಮತ್ತು ಬೆಂಬಲಿಗರು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಮಾಣಪತ್ರಗಳನ್ನು ಹಂಚಿಕೊಂಡಿದ್ದಾರೆ.

ರಾಹುಲ್ ಗಾಂಧಿಯವರ ‘ಮತಗಳ್ಳತನ’ ಆರೋಪವನ್ನು ಕಾಂಗ್ರೆಸ್ ನಾಯಕರು ಪ್ರತಿಧ್ವನಿಸುತ್ತಿದ್ದಂತೆ, ಚುನಾವಣಾ ಆಯೋಗದ ಅಧಿಕಾರಿಗಳು ಶನಿವಾರ ಮತ್ತೊಮ್ಮೆ ರಾಹುಲ್ ಗಾಂಧಿ ತನ್ನ ಆರೋಪವನ್ನು ದೃಢೀಕರಿಸುವ ಘೋಷಣಾ ಪತ್ರಕ್ಕೆ ಸಹಿ ಹಾಕಬೇಕು ಅಥವಾ ಸುಳ್ಳಾರೋಪ ಮಾಡಿದ್ದಕ್ಕಾಗಿ ದೇಶದ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕನಿಷ್ಠ ಮೂರು ರಾಜ್ಯಗಳಲ್ಲಿ ನಡೆದ ಮತ ಕಳ್ಳತನದ ಆರೋಪದ ಕುರಿತು ರಾಹುಲ್ ಗಾಂಧಿ ಮತ್ತು ಚುನಾವಣಾ ಆಯೋಗದ ನಡುವೆ ಜಟಾಪಟಿ ಏರ್ಪಟ್ಟಿದೆ.

334 ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ಕೈಬಿಟ್ಟ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...