Homeಮುಖಪುಟಮತಗಳ್ಳತನ ವಿರುದ್ಧ ಅಭಿಯಾನ ಆರಂಭಿಸಿದ ಕಾಂಗ್ರೆಸ್: ಡಿಜಿಟಲ್ ಮತದಾರರ ಪಟ್ಟಿ ನೀಡಲು ಆಗ್ರಹ

ಮತಗಳ್ಳತನ ವಿರುದ್ಧ ಅಭಿಯಾನ ಆರಂಭಿಸಿದ ಕಾಂಗ್ರೆಸ್: ಡಿಜಿಟಲ್ ಮತದಾರರ ಪಟ್ಟಿ ನೀಡಲು ಆಗ್ರಹ

- Advertisement -
- Advertisement -

ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಮಾಡಿರುವ 2024ರ ಲೋಕಸಭೆ ಚುನಾವಣೆಯ ‘ಮತಗಳ್ಳತನ’ ಆರೋಪ ದೇಶದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ನಡುವೆ ಅಖಿಲ ಭಾರತ ಕಾಂಗ್ರೆಸ್ ‘ವೋಟ್ ಚೋರಿ’ (ಮತಗಳ್ಳತನ) ಎಂಬ ಹೆಸರಿನಲ್ಲಿ ವೆಬ್‌ ಪೋರ್ಟಲ್ ತೆರೆದಿದೆ. ಈ ಮೂಲಕ ಮತಗಳ್ಳತನದ ವಿರುದ್ದ ಅಭಿಯಾನ ಆರಂಭಿಸಿದೆ.

‘ಮತಗಳ್ಳತನದ ಆಧಾರ’, ‘ಚುನಾವಣಾ ಆಯೋಗದ ಪಾರದರ್ಶಕತೆಗೆ ಆಗ್ರಹ’ ಮತ್ತು ‘ಮತಗಳ್ಳತನದ ಬಗ್ಗೆ ವರದಿ’ ಎಂಬ ಮೂರು ಆಯ್ಕೆಗಳು ವೆಬ್‌ ಪೋರ್ಟಲ್‌ನಲ್ಲಿದ್ದು, ಜನರು ಪೋರ್ಟಲ್‌ಗೆ ಭೇಟಿ ನೀಡಿ ಮತಗಳ್ಳನದ ಆಧಾರಗಳನ್ನು ಪರಿಶೀಲಿಸಿ, ಆ ಬಗ್ಗೆ ವರದಿ ಮಾಡಿ, ಚುನಾವಣಾ ಪಾರದರ್ಶಕತೆಗೆ ಆಯೋಗವನ್ನು ಆಗ್ರಹಿಸಬಹುದು.

ಬಿಜೆಪಿ ಮತ್ತು ಚುನಾವಣಾ ಆಯೋಗ ಪರಸ್ಪರ ಒಪ್ಪಂದ ಮಾಡಿಕೊಂಡು ಕಳೆದ ಲೋಕಸಭೆ ಚುನಾವಣೆಯಲ್ಲಿ “ದೊಡ್ಡ ಕ್ರಿಮಿನಲ್ ವಂಚನೆ” ಎಸಗಿದೆ ಎಂಬ ಆರೋಪವನ್ನು ರಾಹುಲ್ ಗಾಂಧಿಯ ಪುನರುಚ್ಚರಿಸುವ ವೀಡಿಯೊ ಕೂಡ ವೆಬ್‌ ಪೋರ್ಟನಲ್ಲಿದೆ. ವಿಡಿಯೋದಲ್ಲಿ ಕರ್ನಾಟಕದ ಒಂದು ಕ್ಷೇತ್ರದ ವಿಶ್ಲೇಷಣೆಯನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, ಇದು “ಸಂವಿಧಾನದ ವಿರುದ್ಧದ ಅಪರಾಧ” ಎಂದು ಹೇಳಿದ್ದಾರೆ.

ಈ ಪೋರ್ಟಲ್‌ನಲ್ಲಿ ಮತದಾನವು ನಮ್ಮ ಪ್ರಜಾಪ್ರಭುತ್ವದ ಅಡಿಪಾಯವಾಗಿದೆ. ಆದರೆ, ಅದು ‘ಚುನಾವಣಾ ಆಯೋಗದ ಶಾಮೀಲಿನೊಂದಿಗೆ ಬಿಜೆಪಿಯಿಂದ ವ್ಯವಸ್ಥಿತ ದಾಳಿಗೆ ಒಳಗಾಗಿದೆ’ ಎಂಬ ಸಂದೇಶವಿದೆ.

“ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದ ಕೇವಲ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಲೋಕಸಭಾ ಚುನಾವಣೆ ಗೆಲ್ಲಲು ಸಹಾಯಕ ಮಾಡಿದ 1 ಲಕ್ಷಕ್ಕೂ ಹೆಚ್ಚು ನಕಲಿ ಮತದಾರರನ್ನು ನಾವು ಕಂಡುಕೊಂಡಿದ್ದೇವೆ. ಸುಮಾರು 70-100 ಸ್ಥಾನಗಳಲ್ಲಿ ಇದು ಸಂಭವಿಸಿದೆ. ಹಾಗಾದರೆ ಊಹಿಸಿ, ಇದು ಮುಕ್ತ ಚುನಾವಣೆಗಳನ್ನು ನಾಶಪಡಿಸುತ್ತದೆ ಎಂದು ಪೋರ್ಟಲ್‌ನಲ್ಲಿ ಹೇಳಲಾಗಿದೆ.

ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳ ಕುರಿತು ಕಾಂಗ್ರೆಸ್ ಮತ್ತು ಇಂಡಿಯಾ ಒಕ್ಕೂಟದ ಈ ಹಿಂದೆಯೂ ಎಚ್ಚರಿಕೆ ನೀಡಿವೆ. ಈಗ ನಮ್ಮ ಬಳಿ ಪುರಾವೆಗಳಿವೆ. ನಾವು ಈ ಮತಗಳ್ಳತನದ ವಿರುದ್ಧ ನಮ್ಮೆಲ್ಲ ಶಕ್ತಿಯಿಂದ ಹೋರಾಡುತ್ತೇವೆ. ನಮ್ಮ ಪ್ರಜಾಪ್ರಭುತ್ವವನ್ನು ರಕ್ಷಿಸಲು ನಮ್ಮೊಂದಿಗೆ ನೀವು ಕೈಜೋಡಿಸಿ ಎಂದು ಪೋರ್ಟಲ್‌ನಲ್ಲಿ ಮನವಿ ಮಾಡಲಾಗಿದೆ.

ಒಬ್ಬರು ವ್ಯಕ್ತಿ ಪೋರ್ಟಲ್‌ನಲ್ಲಿ ನೋಂದಾಯಿಸಿದ ನಂತರ, ಅವರ ಹೆಸರಿನಲ್ಲಿ ಪ್ರಮಾಣಪತ್ರವನ್ನು ನೀಡಲಾಗುತ್ತದೆ. ಈ ಮೂಲಕ ಅವರು ಮತಗಳ್ಳತನವನ್ನು ವಿರೋಧಿಸುತ್ತಾರೆ ಎಂದು ಹೇಳಲಾಗುತ್ತದೆ.

“ಚುನಾವಣಾ ಆಯೋಗ ಡಿಜಿಟಲ್ ಮತದಾರರ ಪಟ್ಟಿಯನ್ನು ಒದಗಿಸಬೇಕು ಎಂಬ ರಾಹುಲ್ ಗಾಂಧಿಯವರ ಬೇಡಿಕೆಯನ್ನು ನಾನೂ ಬೆಂಬಲಿಸುತ್ತೇನೆ” ಎಂದು ಪ್ರಮಾಣಪತ್ರದಲ್ಲಿ ಹೇಳಲಾಗಿದೆ. ಜನರು ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿಕೊಳ್ಳುವ ಮತ್ತು ಎಸ್‌ಎಂಎಸ್‌ನಲ್ಲಿರುವ ಲಿಂಕ್ ಅನ್ನು ಭರ್ತಿ ಮಾಡುವ ಆಯ್ಕೆಯನ್ನು ಕೂಡ ಪೋರ್ಟಲ್ ನೀಡುತ್ತದೆ.

ಪ್ರಮಾಣಪತ್ರವು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮತ್ತು ಖಜಾಂಚಿ ಅಜಯ್ ಮಾಕನ್ ಅವರ ಸಹಿಗಳನ್ನು ಹೊಂದಿದೆ.

ಹಲವಾರು ಕಾಂಗ್ರೆಸ್ ನಾಯಕರು ಮತ್ತು ಬೆಂಬಲಿಗರು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಮಾಣಪತ್ರಗಳನ್ನು ಹಂಚಿಕೊಂಡಿದ್ದಾರೆ.

ರಾಹುಲ್ ಗಾಂಧಿಯವರ ‘ಮತಗಳ್ಳತನ’ ಆರೋಪವನ್ನು ಕಾಂಗ್ರೆಸ್ ನಾಯಕರು ಪ್ರತಿಧ್ವನಿಸುತ್ತಿದ್ದಂತೆ, ಚುನಾವಣಾ ಆಯೋಗದ ಅಧಿಕಾರಿಗಳು ಶನಿವಾರ ಮತ್ತೊಮ್ಮೆ ರಾಹುಲ್ ಗಾಂಧಿ ತನ್ನ ಆರೋಪವನ್ನು ದೃಢೀಕರಿಸುವ ಘೋಷಣಾ ಪತ್ರಕ್ಕೆ ಸಹಿ ಹಾಕಬೇಕು ಅಥವಾ ಸುಳ್ಳಾರೋಪ ಮಾಡಿದ್ದಕ್ಕಾಗಿ ದೇಶದ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕನಿಷ್ಠ ಮೂರು ರಾಜ್ಯಗಳಲ್ಲಿ ನಡೆದ ಮತ ಕಳ್ಳತನದ ಆರೋಪದ ಕುರಿತು ರಾಹುಲ್ ಗಾಂಧಿ ಮತ್ತು ಚುನಾವಣಾ ಆಯೋಗದ ನಡುವೆ ಜಟಾಪಟಿ ಏರ್ಪಟ್ಟಿದೆ.

334 ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ಕೈಬಿಟ್ಟ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...