HomeUncategorizedಬಿಜೆಪಿ ನಾಯಕನ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ ಬಹುಮಾನ ಘೋಷಿಸಿದ ಕಾಂಗ್ರೆಸ್ ನಾಯಕಿ

ಬಿಜೆಪಿ ನಾಯಕನ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ ಬಹುಮಾನ ಘೋಷಿಸಿದ ಕಾಂಗ್ರೆಸ್ ನಾಯಕಿ

- Advertisement -
- Advertisement -

ಬಿಲ್ಲವರು ಆರಾಧಿಸುವ ತುಳುನಾಡಿನ ಅವಳಿ ದೈವವಾದ ಕೋಟಿ-ಚೆನ್ನಯರ ಬಗ್ಗೆ ಹಾಗೂ ಬಿಲ್ಲವ ಮುಖಂಡ, ಕಾಂಗ್ರೆಸ್‌ನ ಹಿರಿಯ ನಾಯಕ ಜನಾರ್ದನ ಪೂಜಾರಿ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಬಿಜೆಪಿ ನಾಯಕ ಜಗದೀಶ್ ಅಧಿಕಾರಿ ಮುಖಕ್ಕೆ ಮಸಿ ಬಳಿದರೆ 1 ಲಕ್ಷ ರೂ ನೀಡುವುದಾಗಿ ಮಂಗಳೂರು ಮಹಾನಾಗರ ಪಾಲಿಕೆ ಮಾಜಿ ಸದಸ್ಯೆ ಪ್ರತಿಭಾ ಕುಳಾಯಿ ಘೋಷಿಸಿದ್ದಾರೆ.

ದಕ್ಷಿನ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕಿಯಾಗಿರುವ ಪ್ರತಿಭಾ ಕುಲಾಲ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಈ ಘೋಷಣೆಯನ್ನು ಮಾಡಿದ್ದಾರೆ. ತಮ್ಮ ವಿಡಿಯೋದಲ್ಲಿ ಅವರು, “ಸಂಘಟನೆಗಾಗಿ ಸಾಯುತ್ತೀರಿ, ಬಿಜೆಪಿಗಾಗಿ ನಾಯಕರಿಗಾಗಿ ಜೈಲು ಸೇರುತ್ತೀರಿ. ಆದರೆ ನಿಮ್ಮನ್ನು ಬಿಡಿಸಿಕೊಂಡು ಬರಲು ಯಾರೂ ಮುಂದೆ ಬರುತ್ತಿಲ್ಲ. ಇದನ್ನು ಪ್ರಶ್ನಿಸುವ ತಾಕತ್ತೂ ನಮ್ಮ ಯುವಕರಿಗಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ’ಸಿಖ್ಖರನ್ನು ದಾರಿ ತಪ್ಪಿಸಲಾಗುತ್ತಿದೆ’-ರಾಜ್ಯಸಭೆಯಲ್ಲಿ ಕೃಷಿ ಕಾನೂನನ್ನು ಮತ್ತೆ ಸಮರ್ಥಿಸಿದ ಮೋದಿ

ಮುಂದಿನ ಮೂರು ದಿನದ ಒಳಗಾಗಿ ಬಿಜೆಪಿ ನಾಯಕ ಜಗದೀಶ್ ಅಧಿಕಾರಿ ಬಿಲ್ಲವರ ಆರಾಧನ ಸ್ಥಳವಾದ ಗರಡಿಗೆ ಕ್ಷಮೆ ಕೇಳಬೇಕು ಎಂದಿರುವ ಪ್ರತಿಭಾ, “ಇಲ್ಲದಿದ್ದಲ್ಲಿ ಬಿಲ್ಲವ ಸಮುದಾಯದ ಯಾರಾದರೂ ಪ್ರಥಮವಾಗಿ ಅವರ ಮುಖಕ್ಕೆ ಮಸಿ ಬಳಿಯಿರಿ. ಅವರಿಗೆ ಒಂದು ಲಕ್ಷ ರೂ. ನಗದು ಬಹುಮಾನ ನೀಡುತ್ತೇನೆ” ಎಂದು ಹೇಳಿದ್ದಾರೆ.

“ಜಗದೀಶ್ ಅಧಿಕಾರಿಯನ್ನು ಬಿಜೆಪಿ ಪಕ್ಷದಿಂದ ತಕ್ಷಣವೆ ಉಚ್ಚಾಟನೆ ಮಾಡಬೇಕು. ಅವರು ಜನಾರ್ಧನ ಪೂಜಾರಿ ಕಾಲಿಗೆ ಬಿದ್ದು ಕ್ಷಮೆ ಕೇಳಬೇಕು. ಇಲ್ಲದಿದ್ದರೆ 60% ದಷ್ಟಿರುವ ಬಿಲ್ಲವರು ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಉತ್ತರ ನೀಡಲಿದ್ದಾರೆ” ಎಂದು ಅವರು ಎಚ್ಚರಿಸಿದ್ದಾರೆ.

ಪ್ರತಿಭಾ ಅವರ ವಿಡಿಯೋ ಇದೀಗ ವೈರಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಪರವಿರೋಧ ಚರ್ಚೆಗಳು ನಡೆಯುತ್ತಿದೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ಬಿಜೆಪಿ ವಿರುದ್ದ ಜನಾಂದೋಲನ: UAPA ಅಡಿಯಲ್ಲಿ ಹೋರಾಟಗಾರರ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಸಕ್ಕರೆ ಮಟ್ಟ ಹೆಚ್ಚಿಸಿಕೊಳ್ಳಲು ಮಾವಿನಹಣ್ಣು, ಸಿಹಿತಿಂಡಿ ಸೇವಿಸುತ್ತಿರುವ ಕೇಜ್ರಿವಾಲ್..; ಇಡಿ ಆರೋಪ

0
ಮಧುಮೇಹಿಯಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ವೈದ್ಯಕೀಯ ಜಾಮೀನು ಪಡೆಯಲು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸಲು ಪ್ರತಿದಿನ ಮಾವಿನಹಣ್ಣು, ಆಲೂ ಪುರಿ ಮತ್ತು ಸಿಹಿತಿಂಡಿಗಳನ್ನು ಸೇವಿಸುತ್ತಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಗುರುವಾರ...