ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಕೊಟ್ಟಿರುವುದಕ್ಕೆ ನನ್ನ ಅಭ್ಯಂತರವಿಲ್ಲ ಆದರೆ ಆದರೆ ಕನಕಪುರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ರದ್ದುಮಾಡಿರುವುದಕ್ಕೆ ಆಕ್ಷೇಪವಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮಾಜಿ ಸಚಿವ, ಕಾಂಗ್ರೆಸ್ ಮುಕಂಡ ಡಿ.ಕೆ. ಶಿವಕುಮಾರ್ ಪತ್ರ ಬರೆದಿದ್ದಾರೆ.
ಕನಕಪುರದ ಮೆಡಿಕಲ್ ಕಾಲೇಜು ವಾಪಸ್ಸು ಪಡೆದ ಹಿನ್ನೆಲೆಯಲ್ಲಿ ಈ ಪತ್ರ ಬರೆದಿರುವ ಅವರು ಕೂಡಲೇ ಕನಕಪುರಕ್ಕೆ ಮೆಡಿಕಲ್ ಕಾಲೇಜು ಮಂಜೂರು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಪತ್ರದಲ್ಲಿ ಭೂಮಿಪೂಜೆ ಮಾಡುವುದಕ್ಕೆ ಸಮಯಕೊಡುವಂತೆ ಮನವಿ ಮಾಡಿರುವ ಅವರು ಒಂದು ವೇಳೆ ಕಾಲೇಜು ನೀಡದಿದ್ದರೆ ನನ್ನದೇ ಹಾದಿಯಲ್ಲಿ ಗಂಭೀರ ಹೋರಾಟಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ದ್ವೇಷದ ರಾಜಕಾರಣ ಎಂದಿಗೂ ಸಲ್ಲ. ಹಾಗಾಗಿ ಆದಷ್ಟು ಬೇಗ ಕನಕಪುರಕ್ಕೆ ಮೆಡಿಕಲ್ ಕಾಲೇಜು ಮರಳಿ ಕೊಡಿ. ಈ ವಿಷಯ ಮುಂದುವರಿಯಲು ನೀವು ಅವಕಾಶ ಕೊಡುವುದಿಲ್ಲ ಎಂದು ನಂಬಿದ್ದೇನೆ. ಇಲ್ಲದಿದ್ದಲ್ಲಿ ನನ್ನ ಹಾದಿ ನಾನು ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಕೆಯ ಅಂಶ ಡಿ.ಕೆ ಶಿವಕುಮರ್ ಪತ್ರದಲ್ಲಿದೆ.