Homeಕರ್ನಾಟಕಹಂಸಲೇಖರ ಪರ ಕಾಂಗ್ರೆಸ್‌ ನಾಯಕರಾದ ಜಿ.ಪರಮೇಶ್ವರ, ಟಿ.ಬಿ.ಜಯಚಂದ್ರ, ಕೆ.ಎನ್‌.ರಾಜಣ್ಣ ಪ್ರತಿಭಟನೆ

ಹಂಸಲೇಖರ ಪರ ಕಾಂಗ್ರೆಸ್‌ ನಾಯಕರಾದ ಜಿ.ಪರಮೇಶ್ವರ, ಟಿ.ಬಿ.ಜಯಚಂದ್ರ, ಕೆ.ಎನ್‌.ರಾಜಣ್ಣ ಪ್ರತಿಭಟನೆ

"ಸಂಗೀತ ನಿರ್ದೇಶಕ ಹಂಸಲೇಖ ಅವರು ಯಾವುದೇ ತಪ್ಪು ಮಾಡಿಲ್ಲ" ‌ಎಂದು ಕಾಂಗ್ರೆಸ್ ನಾಯಕರಾದ ಜಿ.ಪರಮೇಶ್ವರ, ಟಿ.ಬಿ.ಜಯಚಂದ್ರ ಹಾಗೂ ಕೆ.ಎನ್‌.ರಾಜಣ್ಣ ಹೇಳಿದ್ದಾರೆ.

- Advertisement -
- Advertisement -

“ಸಂಗೀತ ನಿರ್ದೇಶಕ ಹಂಸಲೇಖ ಅವರು ಯಾವುದೇ ತಪ್ಪು ಮಾಡಿಲ್ಲ” ‌ಎಂದು ಕಾಂಗ್ರೆಸ್ ನಾಯಕರಾದ ಜಿ.ಪರಮೇಶ್ವರ, ಟಿ.ಬಿ.ಜಯಚಂದ್ರ ಹಾಗೂ ಕೆ.ಎನ್‌.ರಾಜಣ್ಣ ಹೇಳಿದ್ದಾರೆ.

ಹಂಸಲೇಖ ಅವರ ವಿರುದ್ಧ ನಡೆಯುತ್ತಿರುವ ವಿಷಾದಕಾರಿ ಬೆಳವಣಿಗೆಗಳನ್ನು ಖಂಡಿಸಿ, ತುಮಕೂರಿನ ‘ದಲಿತ ಅಲ್ಪಸಂಖ್ಯಾತ ಹಿಂದುಳಿದ ಪ್ರಗತಿಪರ ಸಂಘಟನೆಗಳ ಒಕ್ಕೂಟ’ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್‌, ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ ಹಾಗೂ ಕೆ.ಎನ್‌.ರಾಜಣ್ಣ ಹಂಸಲೇಖರ ಪರ ಮಾತನಾಡಿದರು.

ಜಿ.ಪರಮೇಶ್ವರ ಅವರು ಮಾತನಾಡಿ, “ಹಂಸಲೇಖ ಅವರು ಯಾರಿಗಾದರೂ ಅವಮಾನ ಮಾಡಬೇಕೆಂದು ಹೇಳಲಿಲ್ಲ. ಯಾವುದೇ ಜಾತಿಯ ವ್ಯವಸ್ಥೆಗೆ ಅವರು ಅವಮಾನ ಮಾಡಬೇಕು ಎಂದು ಹೇಳಲಿಲ್ಲ. ಸಾಂದರ್ಭಿಕವಾಗಿ ಆಡಿದಂತಹ ಮಾತನ್ನು ಜಾತೀಯ ಹಿನ್ನೆಲೆಯಲ್ಲಿ ಪ್ರಶ್ನೆ ಮಾಡುವಂತಹದ್ದು ತಪ್ಪು. ಈ ಬೆಳವಣಿಗೆಯನ್ನು ನಾನು ಖಂಡಿಸುತ್ತೇನೆ” ಎಂದರು.

“ವಿಧಾನ ಪರಿಷತ್‌‌ ಚುನಾವಣೆಗೆ ಸ್ಪರ್ಧಿಸಿರುವ ನಮ್ಮ ಪಕ್ಷದ ಅಭ್ಯರ್ಥಿ ರಾಜೇಂದ್ರ ಅವರ ನಾಮಪತ್ರ ಸಲ್ಲಿಸಿ ಬರುವಾಗ, ನಮಗೆ ಪ್ರತಿಭಟನೆಯ ದೃಶ್ಯ ಕಂಡಿತು. ತಕ್ಷಣ ನಾವು ಮೂರು ಜನ (ಜಿ.ಪರಮೇಶ್ವರ, ರಾಜಣ್ಣ, ಟಿ.ಬಿ.ಜಯಚಂದ್ರ) ಮಾತನಾಡಿಕೊಂಡು, ನಾವು ಇದರಲ್ಲಿ ಭಾಗಿಯಾಗಬೇಕೆಂದು ಬಂದೆವು” ಎಂದು ಅವರು ತಿಳಿಸಿದರು.

“ಬಹುಸಂಖ್ಯಾತ ಸಮುದಾಯವನ್ನು ಸಾವಿರಾರು ವರ್ಷಗಳಿಂದ ಶೋಷಣೆ ಮಾಡುತ್ತಿರುವಂತಹ ವರ್ಗ ಇಂದು ಮತ್ತೊಂದು ಬಾರಿ ಅಂತಹದ್ದೇ ಪ್ರಯತ್ನ ಮಾಡುತ್ತಿದೆ ಎಂಬುದನ್ನು ನಾವು ಖಂಡಿಸಬೇಕಾಗಿದೆ. ಜಾತೀಯ ವ್ಯವಸ್ಥೆ ನಾವು ಮಾಡಿಕೊಂಡಿರುವಂತಹದ್ದು, ಅಂದರೆ ಮನುಷ್ಯ ಮಾಡಿಕೊಂಡಿರುವಂತಹದ್ದು. ಮನುಷ್ಯ ಮನುಷ್ಯನನ್ನು ಅಸಮಾನತೆಯಿಂದ ಕಾಣಲಾಗುತ್ತಿದೆ, ಶೋಷಣೆ ಮಾಡಲಾಗುತ್ತಿದೆ. ಇಪತ್ತೊಂದನೆ ಶತಮಾನಕ್ಕೆ ಕಾಲಿಟ್ಟಿದ್ದರೂ ಆ ಶೋಷಣೆ ತಪ್ಪಿಲ್ಲ. ಆ ಶೋಷಣೆಯನ್ನು ತಪ್ಪಿಸುವ ಯಾವುದೇ ಸೂಚನೆಗಳೂ ಕಾಣುತ್ತಿಲ್ಲ” ಎಂದು ವಿಷಾದಿಸಿದರು.


ಇದನ್ನೂ ಓದಿರಿ: ಹಂಸಲೇಖ ಪ್ರಕರಣ ಹಿನ್ನೆಲೆ: ಪೇಜಾವರ ಶ್ರೀಗಳ ಹಳೆಯ ವಿಡಿಯೊ ವೈರಲ್‌


ಕೆ.ಎನ್‌.ರಾಜಣ್ಣ ಮಾತನಾಡಿ, “ಹಂಸಲೇಖ ಅವರು ಹೇಳಿರುವಂತಹದರಲ್ಲಿ ಯಾವುದೇ ತಪ್ಪಿಲ್ಲ ಎಂಬುದು ಎಲ್ಲರಿಗೂ ಗೊತ್ತಿದೆ. ಆದರೂ ಜಾತಿಯ ಬಣ್ಣವನ್ನು ಕಟ್ಟಿ, ಈ ಅಸ್ಪೃಶ್ಯತೆಯನ್ನು ಇನ್ನು ಬಹಳಷ್ಟು ವರ್ಷಗಳ ಕಾಲ ಮುಂದುವರಿಸುವ ಪ್ರಯತ್ನ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ರೀತಿಯ ಮಾತುಗಳನ್ನು ಹಂಸಲೇಖ ಅವರ ವಿರುದ್ಧ ಆಡುತ್ತಿದ್ದಾರೆ” ಎಂದು ಆರೋಪಿಸಿದರು.

“ಹಂಸಲೇಖ ಅವರು ದೂರದವರೇನಲ್ಲ. ತುಮಕೂರಿನವರು, ಇದೇ ನಗರದಲ್ಲಿ ಹುಟ್ಟಿ ಬೆಳೆದವರು. ಅವರು ಯಾವತ್ತೂ ಯಾವುದೇ ಸಮಾಜವಾಗಲೀ, ಯಾವುದೇ ಧರ್ಮದ ವಿರುದ್ಧವಾಗಲೀ ಮಾತನಾಡಿದವರಲ್ಲ. ಅವರು ಆಡಿರುವಂತಹ ಮಾತನ್ನು ಇವರು ತಿರುಚಿ ಅಪವಾದವನ್ನು ತರುವಂತಹ ಉನ್ನಾರವನ್ನು ಈ ಮುಂದುವರಿದ ಸಮಾಜಗಳು ಮಾಡುತ್ತಿರುವುದು ಎಲ್ಲರಿಗೂ ಸ್ಪಷ್ಟವಾಗಿದೆ. ನಾವು ಎಲ್ಲರೂ ಇದನ್ನು ಖಂಡಿಸುತ್ತೇವೆ ಎಂಬ ಸಂದೇಶವನ್ನು ಇಡೀ ರಾಜ್ಯಕ್ಕೆ ತಲುಪಿಸುವ ಪ್ರಯತ್ನವನ್ನು ನಾವು ಮಾಡಲು ಹೊರಟಿದ್ದೇವೆ” ಎಂದರು.

ಟಿ.ಬಿ.ಜಯಚಂದ್ರ ಅವರು ಮಾತನಾಡಿ, “ಹಂಸಲೇಖ ಅವರು ಕರ್ನಾಟಕದ ಹೆಮ್ಮೆಯ ಪುತ್ರ. ವಾಸ್ತವಿಕವಾಗಿರುವ, ಮನಸ್ಸಿನಲ್ಲಿರುವ ನೋವನ್ನು ಅವರು ಹೇಳಿದಾಗ ಅವರನ್ನು ಅವಹೇಳನ ಮಾಡುವಂತಹದ್ದು ಸರಿಯಲ್ಲ. ಹಂಸಲೇಖ ಅವರ ಜೊತೆ ನಾವಿದ್ದೇವೆ ಎಂಬುದನ್ನು ತೋರಿಸಲೆಂದು ನಾವಿಲ್ಲಿಗೆ ಬಂದಿದ್ದೇವೆ” ಎಂದು ಸ್ಪಷ್ಟಪಡಿಸಿದರು.

“ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಸಂವಿಧಾನಬದ್ಧವಾಗಿ ಅಸ್ಪೃಶ್ಯತೆಯನ್ನು ನಿವಾರಣೆ ಮಾಡಿದರೂ ನಿಜಸ್ಥಿತಿಯಲ್ಲಿ ಅದು ಸಮಾಜದಲ್ಲಿದೆ. ಇದನ್ನು ಸಹಿಸಲು ಆಗುವುದಿಲ್ಲ, ಸಹಿಸಬಾರದು ಎಂಬ ಹಿನ್ನೆಲೆಯಲ್ಲಿ ಹಂಸಲೇಖ ಅವರು ಹೇಳಿರುವಂತಹ ವಿಚಾರಕ್ಕೆ ನಾವು ಸದಾ ಬೆಂಬಲವಾಗಿ ಇರಬೇಕು. ನಿಮ್ಮ ಹೋರಾಟದೊಂದಿಗೆ ನಾವು ಕೂಡ ಇದ್ದೇವೆ ಎಂಬುದನ್ನು ಘಂಟಾಘೋಷವಾಗಿ ಹೇಳಲು ಸಿದ್ಧವಿದ್ದೇವೆ” ಎಂದರು.

ಮುಖಂಡರಾದ ನಿಕೇತ್‌ ರಾಜ್‌ ಮೌರ್ಯ, ಕೊಟ್ಟ ಶಂಕರ್‌‌, ನರಸಿಂಹಮೂರ್ತಿ ಮರಳೂರು, ವಿರೂಪಾಕ್ಷ ಡಾಗೇರಹಳ್ಳಿ, ರಫೀಕ್‌ ಅಹಮದ್‌ ಹಾಗೂ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.


ಇದನ್ನೂ ಓದಿರಿ: ಇವರ ದೇಶಪ್ರೇಮ ಬ್ಯಾನರ್‌ಗಷ್ಟೇ ಸೀಮಿತ; ಸಂಘಪರಿವಾರದ ಜೊತೆಗಿನ ಆ ದಿನಗಳು…


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...