Homeಮುಖಪುಟರಾಹುಲ್ ಗಾಂಧಿ ಕುರಿತ ಪೋಸ್ಟರ್: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಅಮಿತ್ ಮಾಳವಿಯಾ ವಿರುದ್ಧ ಕೋರ್ಟ್...

ರಾಹುಲ್ ಗಾಂಧಿ ಕುರಿತ ಪೋಸ್ಟರ್: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಅಮಿತ್ ಮಾಳವಿಯಾ ವಿರುದ್ಧ ಕೋರ್ಟ್ ಮೊರೆ

- Advertisement -
- Advertisement -

ರಾಹುಲ್ ಗಾಂಧಿಯನ್ನು ‘ನವಯುಗದ ರಾವಣ’ ಎಂದು ತೋರಿಸುವ ಭಾರತೀಯ ಜನತಾ ಪಕ್ಷದ ಸಾಮಾಜಿಕ ಜಾಲತಾಣದ ಪೋಸ್ಟ್‌ಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪಕ್ಷದ ಐಟಿ ಸೆಲ್ ಉಸ್ತುವಾರಿ ಅಮಿತ್ ಮಾಳವಿಯಾ ವಿರುದ್ಧ ಪ್ರಕರಣ ದಾಖಲಿಸುವಂತೆ ಕಾಂಗ್ರೆಸ್ ನಾಯಕರೊಬ್ಬರು ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಕಾಂಗ್ರೆಸ್‌ನ ರಾಜಸ್ಥಾನ ಘಟಕದ ಪ್ರಧಾನ ಕಾರ್ಯದರ್ಶಿ ಜಸ್ವಂತ್ ಗುರ್ಜರ್ ಅವರು ಜೈಪುರ ಮೆಟ್ರೋಪಾಲಿಟನ್ ಕೋರ್ಟ್-11 ರಲ್ಲಿ ಅರ್ಜಿ ಸಲ್ಲಿಸಿದ್ದು, ಅರ್ಜಿಯಲ್ಲಿ ಬಿಜೆಪಿ ನಾಯಕರ ವಿರುದ್ಧ ಐಪಿಸಿ ಸೆಕ್ಷನ್ 499 (ಇನ್ನೊಬ್ಬ ವ್ಯಕ್ತಿಯ ವಿರುದ್ಧ ಸುಳ್ಳು ಆರೋಪ), 500 (ಮಾನನಷ್ಟ), 504 (ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಮನವಿ ಮಾಡಿದ್ದಾರೆ. ಅಕ್ಟೋಬರ್ 9 ರಂದು ಅರ್ಜಿಯ ಕುರಿತು ವಿಚಾರಣೆ ನಡೆಯಲಿದೆ.

ಪೋಸ್ಟರ್‌ನಲ್ಲಿ ರಾಹುಲ್ ಗಾಂಧಿ ರಾವಣನ ರೂಪದಲ್ಲಿರುವ ಚಿತ್ರವನ್ನು ಶೇರ್ ಮಾಡಿದ ಬಿಜೆಪಿ, ರಾಹುಲ್‌ ಗಾಂಧಿಗೆ ಹೊಸ ಯುಗದ ರಾವಣ ಎಂದು ಬರೆದುಕೊಂಡಿದೆ. ಅವರು ಧರ್ಮ ವಿರೋಧಿ ಮತ್ತು ರಾಮ ವಿರೋಧಿ. ಭಾರತವನ್ನು ನಾಶ ಮಾಡುವುದು ಇವರ ಗುರಿಯಾಗಿದೆ ಎಂದು ಬರೆಯಲಾಗಿದೆ.

ಭಾರತೀಯ ಜನತಾ ಪಕ್ಷದ ಅಧಿಕೃತ ಖಾತೆ ಎಕ್ಸ್‌ನಲ್ಲಿ ಹಾಕಲಾದ ಪೋಸ್ಟರ್‌ನಲ್ಲಿ ರಾಹುಲ್ ಗಾಂಧಿಯನ್ನು ರಾವಣನಂತೆ ಚಿತ್ರೀಕರಿಸಿದ ಫೋಟೋ ವಿವಾದವನ್ನು ಹುಟ್ಟುಹಾಕಿದೆ. ಇದನ್ನು ಸ್ವೀಕಾರಾರ್ಹವಲ್ಲ ಮತ್ತು ಅಪಾಯಕಾರಿ ಎಂದು ಕಾಂಗ್ರೆಸ್ ಹೇಳಿದೆ.

ಆರೋಪಿಗಳು ಉದ್ದೇಶಪೂರ್ವಕವಾಗಿ ಪೋಸ್ಟ್‌ನ್ನು ಹಂಚಿಕೊಂಡಿದ್ದಾರೆ ಮತ್ತು ಆರೋಪಿಗಳ ಉದ್ದೇಶವು ಕಾಂಗ್ರೆಸ್ ಮತ್ತು ಅದಕ್ಕೆ ಸಂಬಂಧಿಸಿದ ಜನರಿಗೆ ಅವಮಾನಿಸುವುದು ಮತ್ತು ಹಾನಿ ಮಾಡುವುದು ಮತ್ತು ರಾಜಕೀಯ ಲಾಭ ಗಳಿಸುವುದು ಎಂದು ಆರೋಪಿಸಲಾಗಿದೆ.

ಬಿಜೆಪಿ ನಾಯಕರು ಉದ್ದೇಶಪೂರ್ವಕವಾಗಿ ರಾಹುಲ್‌ ಗಾಂಧಿಯನ್ನು ರಾಮ ವಿರೋಧಿ ಮತ್ತು ಧರ್ಮ ವಿರೋಧಿ ಎಂದು ಬಿಂಬಿಸಿ ಅವರ ವಿರುದ್ಧ ಜನರನ್ನು ಪ್ರಚೋದಿಸುತ್ತಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಈ ಪೋಸ್ಟರ್ ವಿರುದ್ಧ ಕಾಂಗ್ರೆಸ್ ಪಕ್ಷ ದೇಶಾದ್ಯಂತ ಹಲವು ಕಡೆ ಪ್ರತಿಭಟನೆ ನಡೆಸಿದೆ. ಪೋಸ್ಟರ್‌ನಲ್ಲಿ ರಾವನನಂತೆ ರಾಹುಲ್‌ ಗಾಂಧಿಗೆ ಹಲವಾರು ತಲೆಗಳನ್ನು ಜೋಡಿಸಿರುವುದು ಕಂಡು ಬಂದಿದೆ.

ಇದನ್ನು ಓದಿ: 2010ರಿಂದ 16 ಪತ್ರಕರ್ತರ ಮೇಲೆ ಕಠೋರ UAPA ಕಾಯ್ದೆಯಡಿ ಕೇಸ್ ದಾಖಲು: ಹೆಚ್ಚಿನವರು ಮುಸ್ಲಿಂ ಸಮುದಾಯದವರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...