Homeಕರ್ನಾಟಕಯಡಿಯೂರಪ್ಪ ಅವರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಿ- ಕಾಂಗ್ರೆಸ್ ನಾಯಕ ಎಂ.ಬಿ.ಪಾಟೀಲ್

ಯಡಿಯೂರಪ್ಪ ಅವರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಿ- ಕಾಂಗ್ರೆಸ್ ನಾಯಕ ಎಂ.ಬಿ.ಪಾಟೀಲ್

- Advertisement -
- Advertisement -

ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯಿಸಿದ್ದು, ಬಿ.ಎಸ್. ಯಡಿಯೂರಪ್ಪ ಲಿಂಗಾಯತ ಸಮುದಾಯದ ಧೀಮಂತ ನಾಯಕ ಎಂದು ಬಿಎಸ್‌ವೈ ಪರ ಬ್ಯಾಟ್ ಬೀಸಿದ್ದಾರೆ.

“ಕರ್ನಾಟಕ ಸಿಎಂ ಬದಲಾವಣೆಯಾಗಲಿದ್ದಾರೆ – ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಮಾತು” ಎಂಬ ಆಡಿಯೋ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು ಹೊಸ ಚರ್ಚೆಗಳಿಗೆ ದಾರಿಮಾಡಿಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಎಂ.ಬಿ. ಪಾಟೀಲ್‌ ಅವರ ಪ್ರತಿಕ್ರಿಯೆ ಬಂದಿದೆ.

“ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಲಿಂಗಾಯತ ಸಮುದಾಯದ ಧೀಮಂತ ನಾಯಕರು. ಅವರನ್ನು ಪದಚ್ಯುತಗೊಳಿಸಿದರೆ, ನಿಶ್ಚಿತವಾಗಿಯೂ ಬಿಜೆಪಿ ವರಿಷ್ಠರು ಲಿಂಗಾಯತರ ಅವಕೃಪೆಗೆ ತುತ್ತಾಗುತ್ತಾರೆ. ಯಡಿಯೂರಪ್ಪನವರ ವಯಸ್ಸು ಮತ್ತು ಕೊಡುಗೆಯನ್ನು ಪರಿಗಣಿಸಿ, ಅವರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಬೇಕೆಂಬುದು ನನ್ನ ವೈಯಕ್ತಿಕ ಅನಿಸಿಕೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಹೊಸ ಸಿಎಂ ದೆಹಲಿಯಿಂದ ಬರುತ್ತಾರೆ..: ಆಡಿಯೋ ನನ್ನದಲ್ಲ ಎಂದ ನಳಿನ್ ಕುಮಾರ್ ಕಟೀಲ್

ನಳೀನ್ ಕುಮಾರ್‌ ಕಟೀಲ್ ಅವರು ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿರುವ ವೈರಲ್ ಆಗಿರುವ ಆಡಿಯೋದಲ್ಲಿ ತುಳು ಭಾಷೆಯಲ್ಲಿ “ಯಾರಿಗೆ ಹೇಳೋಕೆ ಹೋಗಬೇಡಿ, ಈಶ್ವರಪ್ಪ ಜಗದೀಶ್ ಶೆಟ್ಟರ್ ಟೀಮ್ ಅನ್ನೆ ತೆಗೆಯುತ್ತೇವೆ. ಎಲ್ಲ ಹೊಸ ಟೀಮ್ ಮಾಡುತ್ತಿದ್ದೇವೆ. ಯಾರಲ್ಲೂ ಹೇಳಲು ಹೋಗಬೇಡಿ, ಈಗ ಸಧ್ಯಕ್ಕೆ ಯಾರಿಗೂ ಕೊಡಬೇಡಿ ಎಂದು ಹೇಳಿದ್ದಾರೆ. ಇಲ್ಲ, ಯಾರಿಗೂ ಹೇಳಬೇಡಿ, ಏನು ತೊಂದರೆ ಇಲ್ಲ, ಹೆದರಬೇಡಿ ನಾವಿದ್ದೇವೆ, ಇನ್ನು ಯಾರಾದರೂ ನಮ್ಮ ಕೈಯಲ್ಲೆ ಎಲ್ಲಾ. ಮೂರು ಹೆಸರು ಉಂಟು, ಅದರಲ್ಲಿ ಯಾವುದಾದರೂ ಆಗುವ ಚಾನ್ಸ್ ಉಂಟು. ಇಲ್ಲ, ಇಲ್ಲಿಯವರನ್ನು ಯಾರನ್ನು ಮಾಡೋದಿಲ್ಲ. ದೆಹಲಿಯಿಂದಲೇ ಮಾಡುತ್ತಾರೆ” ಎಂದು ಹೇಳಲಾಗಿದೆ. ಸಣ್ಣ ದನಿಯಲ್ಲಿ ಮಾತನಾಡಿದ್ದು ನಡು ನಡುವೆ ನಗುವುದು ಕೇಳಿಬಂದಿದೆ.

ಕಾಂಗ್ರೆಸ್ ಕೂಡ ಮುಖ್ಯಮಂತ್ರಿ ಬದಲಾವಣೆ ವಿಚಾರದ ಆಡಿಯೋ ಬಗ್ಗೆ ಟ್ವೀಟ್ ಮಾಡಿದ್ದು, ಇದು ಬಿಜೆಪಿಯ ಮೀರದ್ ಸಾದಿಕ್ ನಳಿನ್ ಕುಮಾರ್‌ ಕಟೀಲ್‌ ಅವರ ಕೃತ್ಯ. ಬಿಜೆಪಿಯನ್ನ ಮುಳುಗಿಸಲು ಬೇರೆ ಯಾರ ಪ್ರಯತ್ನವೂ ಬೇಡ, ಕಟೀಲ್ ಒಬ್ಬರೇ ಸಾಕು ಎಂದಿದ್ದಾರೆ.

” ರಾಜ್ಯ ಬಿಜೆಪಿ ಮತ್ತು ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌ ಅವರೇ, ಬಿ.ಎಸ್.ಯಡಿಯೂರಪ್ಪ ಅವರಿಗೆ ದ್ರೋಹ ಬಗೆಯುತ್ತಿರುವ ನಾಯಕತ್ವ ಬದಲಾವಣೆಯ ಸಂಚುಕೋರ ಎನ್ನುವುದು ಆಡಿಯೋದಿಂದ ಬಯಲಾಗಿದೆ. ಜೊತೆಗೆ ಶೆಟ್ಟರ್, ಈಶ್ವರಪ್ಪರನ್ನೂ ಮಾರ್ಗದರ್ಶಕ ಮಂಡಳಿಗೆ ಕಳಿಸುವ ಹುನ್ನಾರ ನಡೆಸಿದ ಮೀರ್ ಸಾದಿಕ್ ಕಟೀಲ್‌ರ ಹಿಂದೆ ಇರುವುದು ಅ’ಸಂತೋಷಗೊಂಡ ವ್ಯಕ್ತಿ!” ಎಂದು ವ್ಯಂಗ್ಯವಾಡಿದ್ದಾರೆ.

ಇದೇ ಜುಲೈ 26ಕ್ಕೆ ಯಡಿಯೂರಪ್ಪನವರು ಸಿಎಂ ಆಗಿ ಅಧಿಕಾರ ಸ್ವೀಕರಿಸಿ 2 ವರ್ಷ ತುಂಬುತ್ತಿದೆ. ಆ ಸಂದರ್ಭದಲ್ಲಿಯೇ ಅವರು ಪದತ್ಯಾಗ ಮಾಡಲಿದ್ದಾರೆ ಎಂಬ ಚರ್ಚೆಗಳ ನಡುವೆ ಈ ಆಡಿಯೋ ವೈರಲ್ ಆಗಿರುವುದು ಕಾಕತಾಳಿಯವೇ..? ಅಥವಾ ಉದ್ದೇಶ ಪೂರ್ವಕವೇ..? ಈ ಎಲ್ಲಾ ಪ್ರಶ್ನೆಗಳಿಗೆ ಇನ್ನೊಂದು ವಾರದಲ್ಲಿ ಉತ್ತರ ದೊರೆಯಲಿದೆ.


ಇದನ್ನೂ ಓದಿ: ಬಿಜೆಪಿ ಮುಗಿಸಲು ನಳಿನ್ ಕುಮಾರ್ ಕಟೀಲ್ ಒಬ್ಬರೇ ಸಾಕು: ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...