Homeಕರ್ನಾಟಕಯಡಿಯೂರಪ್ಪ ಅವರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಿ- ಕಾಂಗ್ರೆಸ್ ನಾಯಕ ಎಂ.ಬಿ.ಪಾಟೀಲ್

ಯಡಿಯೂರಪ್ಪ ಅವರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಿ- ಕಾಂಗ್ರೆಸ್ ನಾಯಕ ಎಂ.ಬಿ.ಪಾಟೀಲ್

- Advertisement -
- Advertisement -

ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯಿಸಿದ್ದು, ಬಿ.ಎಸ್. ಯಡಿಯೂರಪ್ಪ ಲಿಂಗಾಯತ ಸಮುದಾಯದ ಧೀಮಂತ ನಾಯಕ ಎಂದು ಬಿಎಸ್‌ವೈ ಪರ ಬ್ಯಾಟ್ ಬೀಸಿದ್ದಾರೆ.

“ಕರ್ನಾಟಕ ಸಿಎಂ ಬದಲಾವಣೆಯಾಗಲಿದ್ದಾರೆ – ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಮಾತು” ಎಂಬ ಆಡಿಯೋ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು ಹೊಸ ಚರ್ಚೆಗಳಿಗೆ ದಾರಿಮಾಡಿಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಎಂ.ಬಿ. ಪಾಟೀಲ್‌ ಅವರ ಪ್ರತಿಕ್ರಿಯೆ ಬಂದಿದೆ.

“ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಲಿಂಗಾಯತ ಸಮುದಾಯದ ಧೀಮಂತ ನಾಯಕರು. ಅವರನ್ನು ಪದಚ್ಯುತಗೊಳಿಸಿದರೆ, ನಿಶ್ಚಿತವಾಗಿಯೂ ಬಿಜೆಪಿ ವರಿಷ್ಠರು ಲಿಂಗಾಯತರ ಅವಕೃಪೆಗೆ ತುತ್ತಾಗುತ್ತಾರೆ. ಯಡಿಯೂರಪ್ಪನವರ ವಯಸ್ಸು ಮತ್ತು ಕೊಡುಗೆಯನ್ನು ಪರಿಗಣಿಸಿ, ಅವರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಬೇಕೆಂಬುದು ನನ್ನ ವೈಯಕ್ತಿಕ ಅನಿಸಿಕೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಹೊಸ ಸಿಎಂ ದೆಹಲಿಯಿಂದ ಬರುತ್ತಾರೆ..: ಆಡಿಯೋ ನನ್ನದಲ್ಲ ಎಂದ ನಳಿನ್ ಕುಮಾರ್ ಕಟೀಲ್

ನಳೀನ್ ಕುಮಾರ್‌ ಕಟೀಲ್ ಅವರು ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿರುವ ವೈರಲ್ ಆಗಿರುವ ಆಡಿಯೋದಲ್ಲಿ ತುಳು ಭಾಷೆಯಲ್ಲಿ “ಯಾರಿಗೆ ಹೇಳೋಕೆ ಹೋಗಬೇಡಿ, ಈಶ್ವರಪ್ಪ ಜಗದೀಶ್ ಶೆಟ್ಟರ್ ಟೀಮ್ ಅನ್ನೆ ತೆಗೆಯುತ್ತೇವೆ. ಎಲ್ಲ ಹೊಸ ಟೀಮ್ ಮಾಡುತ್ತಿದ್ದೇವೆ. ಯಾರಲ್ಲೂ ಹೇಳಲು ಹೋಗಬೇಡಿ, ಈಗ ಸಧ್ಯಕ್ಕೆ ಯಾರಿಗೂ ಕೊಡಬೇಡಿ ಎಂದು ಹೇಳಿದ್ದಾರೆ. ಇಲ್ಲ, ಯಾರಿಗೂ ಹೇಳಬೇಡಿ, ಏನು ತೊಂದರೆ ಇಲ್ಲ, ಹೆದರಬೇಡಿ ನಾವಿದ್ದೇವೆ, ಇನ್ನು ಯಾರಾದರೂ ನಮ್ಮ ಕೈಯಲ್ಲೆ ಎಲ್ಲಾ. ಮೂರು ಹೆಸರು ಉಂಟು, ಅದರಲ್ಲಿ ಯಾವುದಾದರೂ ಆಗುವ ಚಾನ್ಸ್ ಉಂಟು. ಇಲ್ಲ, ಇಲ್ಲಿಯವರನ್ನು ಯಾರನ್ನು ಮಾಡೋದಿಲ್ಲ. ದೆಹಲಿಯಿಂದಲೇ ಮಾಡುತ್ತಾರೆ” ಎಂದು ಹೇಳಲಾಗಿದೆ. ಸಣ್ಣ ದನಿಯಲ್ಲಿ ಮಾತನಾಡಿದ್ದು ನಡು ನಡುವೆ ನಗುವುದು ಕೇಳಿಬಂದಿದೆ.

ಕಾಂಗ್ರೆಸ್ ಕೂಡ ಮುಖ್ಯಮಂತ್ರಿ ಬದಲಾವಣೆ ವಿಚಾರದ ಆಡಿಯೋ ಬಗ್ಗೆ ಟ್ವೀಟ್ ಮಾಡಿದ್ದು, ಇದು ಬಿಜೆಪಿಯ ಮೀರದ್ ಸಾದಿಕ್ ನಳಿನ್ ಕುಮಾರ್‌ ಕಟೀಲ್‌ ಅವರ ಕೃತ್ಯ. ಬಿಜೆಪಿಯನ್ನ ಮುಳುಗಿಸಲು ಬೇರೆ ಯಾರ ಪ್ರಯತ್ನವೂ ಬೇಡ, ಕಟೀಲ್ ಒಬ್ಬರೇ ಸಾಕು ಎಂದಿದ್ದಾರೆ.

” ರಾಜ್ಯ ಬಿಜೆಪಿ ಮತ್ತು ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌ ಅವರೇ, ಬಿ.ಎಸ್.ಯಡಿಯೂರಪ್ಪ ಅವರಿಗೆ ದ್ರೋಹ ಬಗೆಯುತ್ತಿರುವ ನಾಯಕತ್ವ ಬದಲಾವಣೆಯ ಸಂಚುಕೋರ ಎನ್ನುವುದು ಆಡಿಯೋದಿಂದ ಬಯಲಾಗಿದೆ. ಜೊತೆಗೆ ಶೆಟ್ಟರ್, ಈಶ್ವರಪ್ಪರನ್ನೂ ಮಾರ್ಗದರ್ಶಕ ಮಂಡಳಿಗೆ ಕಳಿಸುವ ಹುನ್ನಾರ ನಡೆಸಿದ ಮೀರ್ ಸಾದಿಕ್ ಕಟೀಲ್‌ರ ಹಿಂದೆ ಇರುವುದು ಅ’ಸಂತೋಷಗೊಂಡ ವ್ಯಕ್ತಿ!” ಎಂದು ವ್ಯಂಗ್ಯವಾಡಿದ್ದಾರೆ.

ಇದೇ ಜುಲೈ 26ಕ್ಕೆ ಯಡಿಯೂರಪ್ಪನವರು ಸಿಎಂ ಆಗಿ ಅಧಿಕಾರ ಸ್ವೀಕರಿಸಿ 2 ವರ್ಷ ತುಂಬುತ್ತಿದೆ. ಆ ಸಂದರ್ಭದಲ್ಲಿಯೇ ಅವರು ಪದತ್ಯಾಗ ಮಾಡಲಿದ್ದಾರೆ ಎಂಬ ಚರ್ಚೆಗಳ ನಡುವೆ ಈ ಆಡಿಯೋ ವೈರಲ್ ಆಗಿರುವುದು ಕಾಕತಾಳಿಯವೇ..? ಅಥವಾ ಉದ್ದೇಶ ಪೂರ್ವಕವೇ..? ಈ ಎಲ್ಲಾ ಪ್ರಶ್ನೆಗಳಿಗೆ ಇನ್ನೊಂದು ವಾರದಲ್ಲಿ ಉತ್ತರ ದೊರೆಯಲಿದೆ.


ಇದನ್ನೂ ಓದಿ: ಬಿಜೆಪಿ ಮುಗಿಸಲು ನಳಿನ್ ಕುಮಾರ್ ಕಟೀಲ್ ಒಬ್ಬರೇ ಸಾಕು: ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...