Homeಕರ್ನಾಟಕಕಾಂಗ್ರೆಸ್ ನಾಯಕ ಆರ್‌.ಧ್ರುವನಾರಾಯಣ್ ನಿಧನ

ಕಾಂಗ್ರೆಸ್ ನಾಯಕ ಆರ್‌.ಧ್ರುವನಾರಾಯಣ್ ನಿಧನ

- Advertisement -
- Advertisement -

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ, ಮಾಜಿ ಸಂಸದ, ಮಾಜಿ ಶಾಸಕ ಆರ್‌.ಧ್ರುವ ನಾರಾಯಣ ಅವರು ಶನಿವಾರ ಮೃತಪಟ್ಟಿದ್ದಾರೆ.

ಧುವ ನಾರಾಯಣ ಅವರು ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಎದೆ ನೋವು ಕಾಣಿಸಿಕೊಂಡಿದೆ ಎಂದು ಶನಿವಾರ ಬೆಳಿಗ್ಗೆ 6.30ಕ್ಕೆ ಚಾಲಕನಿಗೆ ಕರೆ ಮಾಡಿದ್ದರು. ಚಾಲಕ 6.40ಕ್ಕೆ ಬಂದು ಕರೆದುಕೊಂಡು ಹೋಗಿದ್ದರು. ಅವರಿಗೆ ರಕ್ತವಾಂತಿ ಆಗಿತ್ತು, ಮೈಸೂರಿನ ಡಿಆರ್‌ಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಂಜನಗೂಡು ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆಂದೇ ಹೇಳಲಾಗುತ್ತಿತ್ತು.

ಚಾಮರಾಜನಗರ ಲೋಕಸಭೆಯನ್ನು ಪ್ರತಿನಿಧಿಸಿ ಎರಡು ಭಾರಿ ಸಂಸದರಾಗಿದ್ದ ಅವರು ಅತ್ಯುತ್ತಮ ಲೋಕಸಭಾ ಸದಸ್ಯರಾಗಿ ಗುರುತಿಸಿಕೊಂಡಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ವಿ.ಶ್ರೀನಿವಾಸ ಪ್ರಸಾದ್ ಅವರ ವಿರುದ್ಧ ಸೋತಿದ್ದರು.

2004ರಲ್ಲಿ ಸಂತೇಮರಹಳ್ಳಿ ವಿಧಾನ ಸಭಾ ಕ್ಷೇತ್ರ ಹಾಗೂ 2008ರಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳಿಂದ ಸತತ ಎರಡು ಬಾರಿ ಶಾಸಕರಾಗಿ ಜಯ ಗಳಿಸಿದ್ದರು. 1999ರಲ್ಲಿ ಸಂತೇಮರಹಳ್ಳಿ ಕ್ಷೇತ್ರದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಎ.ಆರ್. ಕೃಷ್ಣಮೂರ್ತಿ ಅವರ ಎದುರು ಪರಾಜಿತರಾದರು. ಆದರೆ ಇದೇ ಕೃಷ್ಣಮೂರ್ತಿ ಅವರನ್ನು 2004ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 1 ಮತದಿಂದ ಧ್ರುವನಾರಾಯಣ್ ಸೋಲಿಸಿದ್ದರು.

2009 ಹಾಗೂ 2014ರ ಲೋಕಸಭಾ ಚುನಾವಣೆಯಲ್ಲಿ ಕೂಡ ಕೃಷ್ಣಮೂರ್ತಿ ಅವರನ್ನು ಸೋಲಿಸಿ ಸಂಸದರಾಗಿದ್ದರು. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಕೃಷಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿದ್ದರು. ಚಾಮರಾಜನಗರ ಜಿಲ್ಲೆಯ ರಾಜಕಾರಣದಲ್ಲಿ ಸಹೃದಯಿ, ಮೆಲು ಮಾತಿನ ರಾಜಕಾರಣಿ ಗುರುತಿಸಿದ್ದರು.

ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಇಬ್ಬರಿಗೂ ಆತ್ಮೀಯರಾಗಿದ್ದ ಧ್ರುವನಾರಾಯಣ ಪಕ್ಷವನ್ನು ಸಂಘಟಿಸುವಲ್ಲಿ ಸಕ್ರಿಯರಾಗಿದ್ದರು.

ಧ್ರುವ ನಾರಾಯಣ್ ನಿಧನಕ್ಕೆ ಸಂತಾಪ ಸೂಚಿಸಿರುವ ಸಿದ್ದರಾಮಯ್ಯನವರು, “ನನ್ನ ಆತ್ಮೀಯರಾದ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಾಜಿ ಸಂಸದ ಆರ್.ನಾರಾಯಣ್ ಅವರ ಹಠಾತ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಅವರ ಕುಟುಂಬ ಮತ್ತು ಪ್ರೀತಿಪಾತ್ರರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ‌ಕೋರುತ್ತೇನೆ” ಎಂದು ತಿಳಿಸಿದ್ದಾರೆ.

“ರಾಜಕೀಯ ನಾಯಕ ಮತ್ತು ಸಂಸದೀಯ ಪಟುವಾಗಿ ತನ್ನ ಶ್ರಮ, ಪ್ರಬುದ್ದತೆ ಮತ್ತು ಬದ್ಧತೆಯಿಂದ ಅತ್ಯುನ್ನತ ಸ್ಥಾನಕ್ಕೇರುವ ಎಲ್ಲ ಲಕ್ಷಣಗಳನ್ನು ಹೊಂದಿದ್ದ ಧ್ರುವನಾರಾಯಣ್ ಅವರ ಬದುಕು ಅರ್ಧ ದಾರಿಯಲ್ಲಿಯೇ ಕೊನೆಗೊಂಡದ್ದು ನಾಡಿಗೆ ಮತ್ತು ಜನತೆಗೆ ತುಂಬಲಾರದ ನಷ್ಟ. ಅವರ ಸಾಧನೆಯ ಬದುಕು ಶಾಶ್ವತವಾಗಿ ನಮ್ಮ ನೆನಪಲ್ಲಿರುತ್ತದೆ” ಎಂದಿದ್ದಾರೆ.

ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ಸಂತಾಪ ಸೂಚಿಸಿದ್ದು, “ನಗುಮುಖ ನಮ್ಮ ಸ್ನೇಹಿತ, ನಮ್ಮ ನಾಯಕ ಮತ್ತು ಕಾಂಗ್ರೆಸ್‌ನ ಅತ್ಯಂತ ಸಮರ್ಪಿತ ಕಾಲಾಳು ಆರ್‌.ಧ್ರುನಾರಾಯಣ್ ಅವರ ನಿಧನದಿಂದಾಗಿರುವ ನಷ್ಟವನ್ನು ಪದಗಳಿಂದ ವಿವರಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ...

ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: 'ಬಾಲೆನ್' ಎಂದು ಪ್ರೀತಿಯಿಂದ ಕರೆಯಲ್ಪಡುವ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹಿಮಾಲಯನ್ ರಾಷ್ಟ್ರದಲ್ಲಿ ಉನ್ನತ ಕಾರ್ಯಕಾರಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗಿ ಬಾಲೆನ್...

ಶಿವನ ಅವತಾರ ಎಂದು ಹೇಳಿಕೊಳ್ಳುತ್ತಿದ್ದ ಋುಷಿಕೇಶ್ ವೈದ್ಯ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ: ಎಫ್‌ಐಆರ್ ನಂತರ ದೇವಮಾನವ ಪರಾರಿ

ವಸಾಯಿ: ಶಿವನ ಅವತಾರ ಎಂದು ಹೇಳಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಋಷಿಕೇಶ್ ವೈದ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ವಸಾಯಿ-ವಿರಾರ್ ಪ್ರದೇಶ...

ಜ್ಯೋತಿಷಿ ಅಶೋಕ್ ಖರತ್ ಲೈಂಗಿಕ ದೌರ್ಜನ್ಯ; ಸಂತ್ರಸ್ತರ ವಿಡಿಯೋ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ದೇವೇಂದ್ರ ಫಡ್ನವೀಸ್

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ...

ಕ್ಷಿಪಣಿಗಳ ಮೇಲೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಧನ್ಯವಾದ ಸಂದೇಶ ಬರೆದ ಇರಾನ್

ಯುನೈಟೆಡ್ ಸ್ಟೇಟ್ಸ್-ಇಸ್ರೇಲ್ ವಿರುದ್ಧದ ಯುದ್ಧದ ಮಧ್ಯೆ ಇರಾನ್‌ನೊಂದಿಗೆ ಒಗ್ಗಟ್ಟನ್ನು ತೋರಿಸಿದ ರಾಷ್ಟ್ರಗಳಿಗೆ ಇರಾನ್‌ ತನ್ನ ಕ್ಷಿಪಣಿಗಳು ಕೃತಜ್ಞತಾ ಸಂದೇಶ ಬರೆದಿದೆ. ಕ್ಷಿಪಣಿಗಳ ಮೇಲೆ ಬರೆಯಲಾದ ಸಂದೇಶಗಲ್ಲಿ "ಭಾರತದ ಜನರಿಗೆ ಧನ್ಯವಾದಗಳು" ಎಂದು ಕಂಡುಬಂದಿದೆ. ಜೊತೆಗೆ,...

ಬಿಜೆಪಿಗೆ ಉಳಿದೆಲ್ಲಾ ಪಕ್ಷಗಳಿಗಿಂತ 10 ಪಟ್ಟು ಹೆಚ್ಚು ದೇಣಿಗೆ: ವರದಿ

2024–25ರ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ( ಬಿಜೆಪಿ ) ಇತರ ಎಲ್ಲಾ ರಾಷ್ಟ್ರೀಯ ಪಕ್ಷಗಳು ಒಟ್ಟು ಸೇರಿಸಿ ಪಡೆದ ದೇಣಿಗೆಗಿಂತ ಸುಮಾರು ಹತ್ತು ಪಟ್ಟು ಹೆಚ್ಚು ದೇಣಿಗೆ ಪಡೆದಿದೆ...

ವಿಶಾಖಪಟ್ಟಣ| ಕುಡಿದ ಮತ್ತಿನಲ್ಲಿ ಎಪಿಎಸ್‌ಆರ್‌ಟಿಸಿ ಬಸ್‌ ಅಪಹರಿಸಿದ ವ್ಯಕ್ತಿ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಎಪಿಎಸ್‌ಆರ್‌ಟಿಸಿ ಬಸ್ಸನ್ನು ಅಪಹರಿಸಿ ಸುಮಾರು ಒಂದು ಕಿಲೋಮೀಟರ್ ಅಜಾಗರೂಕತೆಯಿಂದ ಚಲಾಯಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆಘಾತಕಾರಿ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಪ್ರತ್ಯಕ್ಷ್ಯದರ್ಶಿಗಳ ಪ್ರಕಾರ, ಮಾರ್ಚ್ 26 ರ ಗುರುವಾರ ಬಸ್...

ಕರ್ನಾಟಕ ವಿಧಾನಸಭೆಯಲ್ಲಿ ಐಪಿಎಲ್ ಟಿಕೆಟ್ ವಿವಾದ; ಶಾಸಕರನ್ನು ಟೀಕಿಸಿದ ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ವಾಗ್ದಾಳಿ

ಶಾಸಕರಿಗೆ ಐಪಿಎಲ್ 2026 ಟಿಕೆಟ್ ಹಂಚಿಕೆ ವಿವಾದದ ನಡುವೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿದ್ದಾರೆ  ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ವಿಐಪಿ ಟಿಕೆಟ್‌ಗಳಿಗೆ...

ವಿಚಾರಣೆಯ ನಂತರವೂ 8 ಲಕ್ಷ ಮತದಾರರ ಹೆಸರು ಅಳಿಸಲಾಗಿದೆ; ಬಂಗಾಳದಲ್ಲಿ ಎನ್.ಆರ್.ಸಿ ಇಲ್ಲ: ಮಮತಾ ಬ್ಯಾನರ್ಜಿ

ಮೊದಲ ಪೂರಕ ಮತದಾರರ ಪಟ್ಟಿ ಪ್ರಕಟವಾದ ನಂತರ ಎಂಟು ಲಕ್ಷ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದು ರಾಜ್ಯದಲ್ಲಿ ಚುನಾವಣಾ ಪಾರದರ್ಶಕತೆಯ ಬಗ್ಗೆ ಗಂಭೀರ...

ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಜಾಗತಿಕ ತೈಲ ಬೆಲೆಗಳ ಏರಿಕೆಯ ಪರಿಣಾಮವನ್ನು ತಗ್ಗಿಸುವ ಪ್ರಯತ್ನದಲ್ಲಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 10 ರೂ.ಗಳಷ್ಟು ಕಡಿಮೆ ಮಾಡಿದೆ, ಇದರಿಂದಾಗಿ ಪೆಟ್ರೋಲ್‌ಗೆ 3 ರೂ.ಗಳಷ್ಟು...