Homeಕರ್ನಾಟಕಕಾಂಗ್ರೆಸ್ ನಾಯಕ ಆರ್‌.ಧ್ರುವನಾರಾಯಣ್ ನಿಧನ

ಕಾಂಗ್ರೆಸ್ ನಾಯಕ ಆರ್‌.ಧ್ರುವನಾರಾಯಣ್ ನಿಧನ

- Advertisement -
- Advertisement -

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ, ಮಾಜಿ ಸಂಸದ, ಮಾಜಿ ಶಾಸಕ ಆರ್‌.ಧ್ರುವ ನಾರಾಯಣ ಅವರು ಶನಿವಾರ ಮೃತಪಟ್ಟಿದ್ದಾರೆ.

ಧುವ ನಾರಾಯಣ ಅವರು ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಎದೆ ನೋವು ಕಾಣಿಸಿಕೊಂಡಿದೆ ಎಂದು ಶನಿವಾರ ಬೆಳಿಗ್ಗೆ 6.30ಕ್ಕೆ ಚಾಲಕನಿಗೆ ಕರೆ ಮಾಡಿದ್ದರು. ಚಾಲಕ 6.40ಕ್ಕೆ ಬಂದು ಕರೆದುಕೊಂಡು ಹೋಗಿದ್ದರು. ಅವರಿಗೆ ರಕ್ತವಾಂತಿ ಆಗಿತ್ತು, ಮೈಸೂರಿನ ಡಿಆರ್‌ಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಂಜನಗೂಡು ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆಂದೇ ಹೇಳಲಾಗುತ್ತಿತ್ತು.

ಚಾಮರಾಜನಗರ ಲೋಕಸಭೆಯನ್ನು ಪ್ರತಿನಿಧಿಸಿ ಎರಡು ಭಾರಿ ಸಂಸದರಾಗಿದ್ದ ಅವರು ಅತ್ಯುತ್ತಮ ಲೋಕಸಭಾ ಸದಸ್ಯರಾಗಿ ಗುರುತಿಸಿಕೊಂಡಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ವಿ.ಶ್ರೀನಿವಾಸ ಪ್ರಸಾದ್ ಅವರ ವಿರುದ್ಧ ಸೋತಿದ್ದರು.

2004ರಲ್ಲಿ ಸಂತೇಮರಹಳ್ಳಿ ವಿಧಾನ ಸಭಾ ಕ್ಷೇತ್ರ ಹಾಗೂ 2008ರಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳಿಂದ ಸತತ ಎರಡು ಬಾರಿ ಶಾಸಕರಾಗಿ ಜಯ ಗಳಿಸಿದ್ದರು. 1999ರಲ್ಲಿ ಸಂತೇಮರಹಳ್ಳಿ ಕ್ಷೇತ್ರದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಎ.ಆರ್. ಕೃಷ್ಣಮೂರ್ತಿ ಅವರ ಎದುರು ಪರಾಜಿತರಾದರು. ಆದರೆ ಇದೇ ಕೃಷ್ಣಮೂರ್ತಿ ಅವರನ್ನು 2004ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 1 ಮತದಿಂದ ಧ್ರುವನಾರಾಯಣ್ ಸೋಲಿಸಿದ್ದರು.

2009 ಹಾಗೂ 2014ರ ಲೋಕಸಭಾ ಚುನಾವಣೆಯಲ್ಲಿ ಕೂಡ ಕೃಷ್ಣಮೂರ್ತಿ ಅವರನ್ನು ಸೋಲಿಸಿ ಸಂಸದರಾಗಿದ್ದರು. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಕೃಷಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿದ್ದರು. ಚಾಮರಾಜನಗರ ಜಿಲ್ಲೆಯ ರಾಜಕಾರಣದಲ್ಲಿ ಸಹೃದಯಿ, ಮೆಲು ಮಾತಿನ ರಾಜಕಾರಣಿ ಗುರುತಿಸಿದ್ದರು.

ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಇಬ್ಬರಿಗೂ ಆತ್ಮೀಯರಾಗಿದ್ದ ಧ್ರುವನಾರಾಯಣ ಪಕ್ಷವನ್ನು ಸಂಘಟಿಸುವಲ್ಲಿ ಸಕ್ರಿಯರಾಗಿದ್ದರು.

ಧ್ರುವ ನಾರಾಯಣ್ ನಿಧನಕ್ಕೆ ಸಂತಾಪ ಸೂಚಿಸಿರುವ ಸಿದ್ದರಾಮಯ್ಯನವರು, “ನನ್ನ ಆತ್ಮೀಯರಾದ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಾಜಿ ಸಂಸದ ಆರ್.ನಾರಾಯಣ್ ಅವರ ಹಠಾತ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಅವರ ಕುಟುಂಬ ಮತ್ತು ಪ್ರೀತಿಪಾತ್ರರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ‌ಕೋರುತ್ತೇನೆ” ಎಂದು ತಿಳಿಸಿದ್ದಾರೆ.

“ರಾಜಕೀಯ ನಾಯಕ ಮತ್ತು ಸಂಸದೀಯ ಪಟುವಾಗಿ ತನ್ನ ಶ್ರಮ, ಪ್ರಬುದ್ದತೆ ಮತ್ತು ಬದ್ಧತೆಯಿಂದ ಅತ್ಯುನ್ನತ ಸ್ಥಾನಕ್ಕೇರುವ ಎಲ್ಲ ಲಕ್ಷಣಗಳನ್ನು ಹೊಂದಿದ್ದ ಧ್ರುವನಾರಾಯಣ್ ಅವರ ಬದುಕು ಅರ್ಧ ದಾರಿಯಲ್ಲಿಯೇ ಕೊನೆಗೊಂಡದ್ದು ನಾಡಿಗೆ ಮತ್ತು ಜನತೆಗೆ ತುಂಬಲಾರದ ನಷ್ಟ. ಅವರ ಸಾಧನೆಯ ಬದುಕು ಶಾಶ್ವತವಾಗಿ ನಮ್ಮ ನೆನಪಲ್ಲಿರುತ್ತದೆ” ಎಂದಿದ್ದಾರೆ.

ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ಸಂತಾಪ ಸೂಚಿಸಿದ್ದು, “ನಗುಮುಖ ನಮ್ಮ ಸ್ನೇಹಿತ, ನಮ್ಮ ನಾಯಕ ಮತ್ತು ಕಾಂಗ್ರೆಸ್‌ನ ಅತ್ಯಂತ ಸಮರ್ಪಿತ ಕಾಲಾಳು ಆರ್‌.ಧ್ರುನಾರಾಯಣ್ ಅವರ ನಿಧನದಿಂದಾಗಿರುವ ನಷ್ಟವನ್ನು ಪದಗಳಿಂದ ವಿವರಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...