Homeಮುಖಪುಟಜಮ್ಮು ಕಾಶ್ಮೀರದಲ್ಲಿ 370 ನೇ ವಿಧಿ ರದ್ದತಿಯನ್ನು ಶ್ಲಾಘಿಸಿದ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್

ಜಮ್ಮು ಕಾಶ್ಮೀರದಲ್ಲಿ 370 ನೇ ವಿಧಿ ರದ್ದತಿಯನ್ನು ಶ್ಲಾಘಿಸಿದ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್

- Advertisement -
- Advertisement -

ಜಮ್ಮು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಮಾಜಿ ವಿದೇಶಾಂಗ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಶುಕ್ರವಾರ ಶ್ಲಾಘಿಸಿದ್ದು, ಅದನ್ನು ರದ್ದುಗೊಳಿಸಿರುವುದರಿಂದ ಪ್ರದೇಶದಲ್ಲಿ ಸಮೃದ್ಧಿ ಮತ್ತು ಪ್ರಜಾಪ್ರಭುತ್ವದ ಪ್ರಗತಿ ಉಂಟಾಗಿದೆ ಎಂದು ಹೇಳಿದ್ದಾರೆ.

“ಕಾಶ್ಮೀರವು ದೀರ್ಘಕಾಲದವರೆಗೆ ಒಂದು ಪ್ರಮುಖ ಸಮಸ್ಯೆಯನ್ನು ಅನುಭವಿಸುತ್ತಿತ್ತು. ಅದರಲ್ಲಿ ಹೆಚ್ಚಿನವು ಸಂವಿಧಾನದ 370 ಎಂಬ ವಿಧಿಯಿಂದ ಉಂಟಾಗಿತ್ತು. ಈ ವಿಧಿಯಿಂದಾಗಿ ಕಾಶ್ಮೀರ ದೇಶದ ಉಳಿದ ಭಾಗಗಳಿಂದ ಪ್ರತ್ಯೇಕವಾಗಿದೆ ಎಂಬ ಭಾವನೆಯನ್ನು ನೀಡಿತ್ತು. ಆದರೆ 370 ನೇ ವಿಧಿಯನ್ನು ರದ್ದುಗೊಳಿಸಲಾಯಿತು ಮತ್ತು ಅಂತಿಮವಾಗಿ ಅದನ್ನು ಕೊನೆಗೊಳಿಸಲಾಯಿತು” ಎಂದು ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.

ಅವರು ಭಾರತೀಯ ಸರ್ವಪಕ್ಷ ಸಂಸದೀಯ ನಿಯೋಗದ ಭಾಗವಾಗಿ ಇಂಡೋನೇಷ್ಯಾದ ಚಿಂತಕರ ಚಾವಡಿ ಮತ್ತು ಶೈಕ್ಷಣಿಕ ಸದಸ್ಯರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

“ವಿಧಿಯನ್ನು ರದ್ದು ಮಾಡಿದ ನಂತರ ಶೇಕಡಾ 65 ರಷ್ಟು ಭಾಗವಹಿಸುವಿಕೆಯೊಂದಿಗೆ ಚುನಾವಣೆ ನಡೆಯಿತು. ಇಂದು ಕಾಶ್ಮೀರದಲ್ಲಿ ಚುನಾಯಿತ ಸರ್ಕಾರವಿದೆ. ಆದರೆ ಜನರು ಕಾಶ್ಮೀರಕ್ಕೆ ಬಂದಿರುವ ಸಮೃದ್ಧಿಯನ್ನು ರದ್ದುಗೊಳಿಸಲು ಬಯಸುತ್ತಾರೆ. ಇದು ಸರಿಯಲ್ಲ” ಎಂದು ಖುರ್ಷಿದ್ ಹೇಳಿದ್ದಾರೆ.

ಜನತಾದಳ (ಯುನೈಟೆಡ್) ಸಂಸದ ಸಂಜಯ್ ಕುಮಾರ್ ಝಾ ನೇತೃತ್ವದ ನಿಯೋಗವು ಆಪರೇಷನ್ ಸಿಂಧೂರ ಕುರಿತ ಭಾರತದ ರಾಜತಾಂತ್ರಿಕ ಸಂಪರ್ಕದ ಭಾಗವಾಗಿ ಬುಧವಾರ ಜಕಾರ್ತಾ ತಲುಪಿತ್ತು.

ಈ ನಿಯೋಗದಲ್ಲಿ ಅಪರಾಜಿತಾ ಸಾರಂಗಿ (ಬಿಜೆಪಿ), ಅಭಿಷೇಕ್ ಬ್ಯಾನರ್ಜಿ (ಟಿಎಂಸಿ), ಬ್ರಿಜ್ ಲಾಲ್ (ಬಿಜೆಪಿ), ಜಾನ್ ಬ್ರಿಟ್ಟಾಸ್ (ಸಿಪಿಐ-ಎಂ), ಪ್ರಧಾನ್ ಬರುವಾ (ಬಿಜೆಪಿ), ಮತ್ತು ಹೇಮಾಂಗ್ ಜೋಶಿ ಮತ್ತು ಫ್ರಾನ್ಸ್‌ಗೆ ಭಾರತದ ಮಾಜಿ ರಾಯಭಾರಿ ಮತ್ತು ಬಹ್ರೇನ್ ಮೋಹನ್ ಕುಮಾರ್ ಕೂಡ ಇದ್ದಾರೆ.

ಖುರ್ಷಿದ್ ಅವರ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಮುಖ್ತಾರ್ ಅಬ್ಬಾಸ್ ನಖ್ವಿ, ವಿಧಿ ರದ್ದತಿಯ ನಂತರ, ಜಮ್ಮು ಕಾಶ್ಮೀರದ ಜನರು ಪ್ರಗತಿ ಮತ್ತು ರಾಜಕೀಯ ಪ್ರಕ್ರಿಯೆಯ ಭಾಗವಾಗಿದ್ದಾರೆ ಎಂದು ಹೇಳಿದ್ದಾರೆ.

“ತಳಮಟ್ಟ ವಾಸ್ತವವನ್ನು ಅರ್ಥಮಾಡಿಕೊಳ್ಳುವ ಯಾರಾದರೂ ಕಾಂಗ್ರೆಸ್‌ನಂತೆ ಸುಳ್ಳು ಪ್ರಚಾರವನ್ನು ಹರಡುವುದಿಲ್ಲ. 370 ನೇ ವಿಧಿಯನ್ನು ರದ್ದುಪಡಿಸಿದ ನಂತರ, ಜಮ್ಮು ಕಾಶ್ಮೀರದ ಜನರು ಪ್ರಗತಿ, ಸಮೃದ್ಧಿ ಮತ್ತು ರಾಜಕೀಯ ಪ್ರಕ್ರಿಯೆಯಲ್ಲಿ ಪಾಲುದಾರರಾಗಿದ್ದಾರೆ ಎಂಬುದು ನಿಜ. ಹಿಂದೆಂದೂ ಸಂಭವಿಸದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಈಗ ನಡೆದಿವೆ ಎಂದು ನೀವು ನೆನಪಿಸಿಕೊಳ್ಳಬಹುದು. ವಿಧಾನಸಭೆ ಮತ್ತು ಸಂಸತ್ತಿಗೆ ಚುನಾವಣೆಗಳು ಸಹ ನಡೆದಿವೆ. ಇದರೊಂದಿಗೆ, ಪ್ರತ್ಯೇಕತಾವಾದಿಗಳು ಮತ್ತು ಭಯೋತ್ಪಾದಕರ ಪ್ರಾಬಲ್ಯ ಕುಸಿಯಿತು.” ಎಂದು ಹೇಳಿದ್ದಾರೆ.

ಖುರ್ಷಿದ್ ಅವರ ಹೇಳಿಕೆಯನ್ನು ಉಲ್ಲೇಖಿಸಿದ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಮೇಲೆ ವಾಗ್ದಾಳಿ ಮಾಡಿದ್ದಾರೆ. “370 ರ ಬಗ್ಗೆ ತಮ್ಮ ಅಭಿಪ್ರಾಯ ನೀಡಿದ ಕಾರಣಕ್ಕೆ ಕಾಂಗ್ರೆಸ್ ಪಕ್ಷವು ಸಲ್ಮಾನ್ ಖುರ್ಷಿದ್ ಅವರನ್ನು ‘ಸೂಪರ್ ಪ್ರವಕ್ತ’ ಎಂದು ಹೆಸರಿಸದಿರಲಿ ಎಂದು ಆಶಿಸುತ್ತೇವೆ.” ಎಂದು ಹೇಳಿದ್ದಾರೆ.

“370 ನೇ ವಿಧಿ ಹೊರಗಿನವರಿಗೆ ಜಮ್ಮು ಕಾಶ್ಮೀರ ಭಾರತದಿಂದ ಪ್ರತ್ಯೇಕವಾಗಿದೆ ಎಂಬ ಭಾವನೆಯನ್ನು ನೀಡಿತ್ತು. ಆದರೆ ಅದರ ರದ್ದತಿ, ಹೆಚ್ಚಿನ ಮತದಾನ ಮತ್ತು ಚುನಾಯಿತ ಸರ್ಕಾರವು ಅದು ಭಾರತಕ್ಕೆ ಅವಿಭಾಜ್ಯ ಭಾಗವಾಗಿದೆ ಎಂದು ಸಾಬೀತುಪಡಿಸುತ್ತದೆ. 370 ನೇ ವಿಧಿಯನ್ನು ತಮ್ಮ ಕುಟುಂಬದ ತಪ್ಪು ಎಂದು ರಾಹುಲ್ ಗಾಂಧಿ ಒಪ್ಪಿಕೊಳ್ಳುತ್ತಾರೆಯೇ ಮತ್ತು ಸಲ್ಮಾನ್ ಖುರ್ಷಿದ್ ಈಗ ಅದನ್ನು ತೆಗೆದುಹಾಕಿದ್ದಕ್ಕಾಗಿ ಶ್ಲಾಘಿಸಿದ್ದಾರೆ!” ಎಂದು ನಖ್ವಿ ಹೇಳಿದ್ದಾರೆ. ಜಮ್ಮು ಕಾಶ್ಮೀರದಲ್ಲಿ 370

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉತ್ತರ ಪ್ರದೇಶ| ಸರ್ಕಾರಿ ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ಪತ್ನಿಯೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಪತ್ರಕರ್ತ

ಉತ್ತರ ಪ್ರದೇಶ| ಸರ್ಕಾರಿ ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ಪತ್ನಿಯೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಪತ್ರಕರ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...